Latest Updates
-
ನೀಟ್ ಪರೀಕ್ಷೆಯ ಆತಂಕವೇ? ಈ 6 ನಿಮಿಷದ ವ್ಯಾಯಾಮ ನಿಮ್ಮ ಒತ್ತಡವನ್ನು ಮರೆಸುತ್ತದೆ! -
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ!
ಮಳೆಗಾಲದಲ್ಲಿ ಕಾಯಿಲೆ ಬೀಳದಿರಲು ಇವುಗಳನ್ನು ಪಾಲಿಸಿ
ಮಾನ್ಸೂನ್ ತಿಂಗಳಿನಲ್ಲಿ ಶೀತ, ನೆಗಡಿಯಂತಹ ಕಾಯಿಲೆಗಳು ಸರ್ವೇ ಸಾಮಾನ್ಯ. ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆಗೆ ನಮ್ಮ ದೇಹ ಹೊಂದಿಕೊಂಡಿರುವುದಿಲ್ಲ ಆದ್ದರಿಂದ ಕಾಯಿಲೆ ಬೀಳುತ್ತೇವೆ.
ತೇವವಾದ ವಾತಾವರಣ ಸೂಕ್ಷ್ಮಾಣು ಜೀವಿಗಳನ್ನು ಚಟುವಟಿಕೆಯಿಂದ ಇರುವಂತೆ ಮಾಡುತ್ತವೆ. ಆದ್ದರಿಂದ ಮಳೆಗಾಲದಲ್ಲಿ ಸ್ವಲ್ಪ ಮುಂಜಾಗ್ರತೆಯಿಂದ ಇರುವುದು ಒಳ್ಳೆಯದು. ಇಲ್ಲಿ ನಾವು ಕೆಲ ಟಿಪ್ಸ್ ನೀಡಿದ್ದೇವೆ. ಇವುಗಳನ್ನು ಪಾಲಿಸಿದರೆ ಮಳೆಗಾಲದಲ್ಲಿ ಹೆಚ್ಚಾಗಿ ಕಾಡುವ ಶೀತ, ಕೆಮ್ಮು, ಜ್ವರ ಈ ರೀತಿಯ ಸಾಮಾನ್ಯ ಕಾಯಿಲೆಗಳನ್ನು ದೂರವಿಡಬಹುದು:

ಮಳೆಯಲ್ಲಿ ಒದ್ದೆಯಾಗಬೇಡಿ
ಮೂವಿಯಲ್ಲಿ ಮಳೆಯಲ್ಲಿ ಒದ್ದೆಯಾಗುವುದನ್ನು ನೋಡಿ ಅದರಂತ ನೀವೂ ಮಾಡಬೇಡಿ. ಮಳೆ ನೆನೆಯುವುದು ಖುಷಿಕೊಟ್ಟರೂ ಕೆಲವರಿಗೆ ಮಳೆ ನೆನೆದರೆ ಒಂದು ವಾರ ಕಾಯಿಲೆ ಬೀಳುವವರು. ಆದ್ದರಿಂದ ಮಳೆ ನೆನಯುವ ಆಸೆ ಇದ್ದರೆ ನಿಮ್ಮ ದೇಹ ಸ್ಥಿತಿಯ ಬಗ್ಗೆ ಯೋಚಿಸಿ, ನಂತರ ನಿರ್ಧಾರ ಕೈಗೊಳ್ಳಿ.

ಕುದಿಸಿದ ನೀರು ಕುಡಿಯಿರಿ
ಮಳೆಗಾಲದಲ್ಲಿ ಸಾಕಷ್ಟು ಕಾಯಿಲೆಗಳು ನೀರಿನ ಮುಖಾಂತರ ಬರುತ್ತದೆ. ಆದ್ದರಿಂದ ಕುದಿಸಿದ ನೀರನ್ನು ಮಾತ್ರ ಕುಡಿಯಿರಿ.

ಶುದ್ಧತೆ ಬಗ್ಗೆ ಗಮನವಿರಲಿ
ಪ್ರತೀಬಾರಿ ಮಳೆಯಲ್ಲಿ ಹೊರಗಡೆ ಹೋಗಿ ಬಂದ ಮುಖ, ಕೈ, ಕಾಲು ತೊಳೆಯಲು ಮರೆಯಬೇಡಿ. ಈ ರೀತಿ ಮಾಡುವುದರಿಂದ ರೋಗಾಣುಗಳು ನಿಮ್ಮ ಮೇಲೆ ದಾಳಿ ಮಾಡುವುದನ್ನು ತಡೆಯಬಹುದು. ಅದರಲ್ಲೂ ಬಿಸಿ ನೀರು ಮಳೆ ಕೈ, ಕಾಲು ತೊಳೆಯುವುದು ಒಳ್ಳೆಯದು.

ಸೂಪ್, ಕಷಾಯ
ಈ ಸಮಯದಲ್ಲಿ ಸೂಪ್, ಕಷಾಯ ಇವುಗಳನ್ನು ಮಾಡಿ ಕುಡಿಯುವುದು ಒಳ್ಳೆಯದು. ಇವುಗಳು ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಹಾಗೂ ಇವುಗಳು ರೋಗಾಣುಗಳ ವಿರುದ್ಧ ಹೋರಾಡಿ, ಕಾಯಿಲೆ ಬೀಳುವುದನ್ನು ತಡೆಗಟ್ಟುತ್ತದೆ.

ಮಳೆಯಲ್ಲಿ ನೆನೆದರೆ ಸ್ನಾನ ಮಾಡಿ
ಮಳೆಯಲ್ಲಿ ನೆನೆದರೆ ಮನೆಗೆ ಬಂದ ತಕ್ಷಣ ಬಿಸಿ ನೀರಿನಲ್ಲಿ ಸ್ನಾನ ಮಾಡಿ. ಇದರಿಂದ ಕಾಯಿಲೆ ಬೀಳುವುದನ್ನು ತಡೆಯಬಹುದು. ಇದರಿಂದ ದೇಹದ ಉಷ್ಣತೆ ಸಮಸ್ಥಿತಿಗೆ ಬಂದು ಶೀತ ಉಂಟಾಗುವುದನ್ನು ತಡೆಯಬಹುದು.

ಸರಿಯಾದ ಸಮಯಕ್ಕೆ ನಿದ್ದೆ ಮಾಡಿ
ಮಳೆಗಾಲದಲ್ಲಿ ನಿದ್ದೆ ಬೇಗನೆ ಬಳಿ ಸುಳಿಯುವುದು, ಟಿವಿ ನೋಡುತ್ತಾ, ಟ್ಯಾಪ್ ಟಾಪ್ ಮುಂದೆ ಕೂರುತ್ತಾ ಸುಂದರ ನಿದ್ದೆ ಹಾಳು ಮಾಡಿ, ಆರೊಗ್ಯ ಹಾಳು ಮಾಡ್ಕೋಬೇಡಿ.

ವ್ಯಾಯಾಮ
ಮಳೆಗಾಲ ಅಂತ ವ್ಯಾಯಾಮಕ್ಕೆ ಬ್ರೇಕ್ ಹಾಕಬೇಡಿ, ಮನೆಯಲ್ಲಿ ವ್ಯಾಯಾಮ ಮಾಡಿ, ಸಮತೂಕವನ್ನು ಕಾಪಾಡಿಕೊಳ್ಳಿ.

ಆಹಾರಗಳು
ಪೋಷಕಾಂಶವಿರುವ ಆಹಾರಗಳನ್ನು ತಿನ್ನಿ. ಅದರಲ್ಲೂ ದೇಹ ಉಷ್ಣತೆ ಹೆಚ್ಚಿಸುವ ಆಹಾರ ತಿನ್ನಿ. ಶುಂಠಿ, ಕರಿ ಮೆಣಸಿನ ಪುಡಿ ಇವೆಲ್ಲಾ ನಿಮ್ಮ ಆಹಾರದಲ್ಲಿ ಇರಲಿ.



Click it and Unblock the Notifications