Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಮಳೆಗಾಲದಲ್ಲಿ ಕಾಯಿಲೆ ಬೀಳದಿರಲು ಇವುಗಳನ್ನು ಪಾಲಿಸಿ
ಮಾನ್ಸೂನ್ ತಿಂಗಳಿನಲ್ಲಿ ಶೀತ, ನೆಗಡಿಯಂತಹ ಕಾಯಿಲೆಗಳು ಸರ್ವೇ ಸಾಮಾನ್ಯ. ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆಗೆ ನಮ್ಮ ದೇಹ ಹೊಂದಿಕೊಂಡಿರುವುದಿಲ್ಲ ಆದ್ದರಿಂದ ಕಾಯಿಲೆ ಬೀಳುತ್ತೇವೆ.
ತೇವವಾದ ವಾತಾವರಣ ಸೂಕ್ಷ್ಮಾಣು ಜೀವಿಗಳನ್ನು ಚಟುವಟಿಕೆಯಿಂದ ಇರುವಂತೆ ಮಾಡುತ್ತವೆ. ಆದ್ದರಿಂದ ಮಳೆಗಾಲದಲ್ಲಿ ಸ್ವಲ್ಪ ಮುಂಜಾಗ್ರತೆಯಿಂದ ಇರುವುದು ಒಳ್ಳೆಯದು. ಇಲ್ಲಿ ನಾವು ಕೆಲ ಟಿಪ್ಸ್ ನೀಡಿದ್ದೇವೆ. ಇವುಗಳನ್ನು ಪಾಲಿಸಿದರೆ ಮಳೆಗಾಲದಲ್ಲಿ ಹೆಚ್ಚಾಗಿ ಕಾಡುವ ಶೀತ, ಕೆಮ್ಮು, ಜ್ವರ ಈ ರೀತಿಯ ಸಾಮಾನ್ಯ ಕಾಯಿಲೆಗಳನ್ನು ದೂರವಿಡಬಹುದು:

ಮಳೆಯಲ್ಲಿ ಒದ್ದೆಯಾಗಬೇಡಿ
ಮೂವಿಯಲ್ಲಿ ಮಳೆಯಲ್ಲಿ ಒದ್ದೆಯಾಗುವುದನ್ನು ನೋಡಿ ಅದರಂತ ನೀವೂ ಮಾಡಬೇಡಿ. ಮಳೆ ನೆನೆಯುವುದು ಖುಷಿಕೊಟ್ಟರೂ ಕೆಲವರಿಗೆ ಮಳೆ ನೆನೆದರೆ ಒಂದು ವಾರ ಕಾಯಿಲೆ ಬೀಳುವವರು. ಆದ್ದರಿಂದ ಮಳೆ ನೆನಯುವ ಆಸೆ ಇದ್ದರೆ ನಿಮ್ಮ ದೇಹ ಸ್ಥಿತಿಯ ಬಗ್ಗೆ ಯೋಚಿಸಿ, ನಂತರ ನಿರ್ಧಾರ ಕೈಗೊಳ್ಳಿ.

ಕುದಿಸಿದ ನೀರು ಕುಡಿಯಿರಿ
ಮಳೆಗಾಲದಲ್ಲಿ ಸಾಕಷ್ಟು ಕಾಯಿಲೆಗಳು ನೀರಿನ ಮುಖಾಂತರ ಬರುತ್ತದೆ. ಆದ್ದರಿಂದ ಕುದಿಸಿದ ನೀರನ್ನು ಮಾತ್ರ ಕುಡಿಯಿರಿ.

ಶುದ್ಧತೆ ಬಗ್ಗೆ ಗಮನವಿರಲಿ
ಪ್ರತೀಬಾರಿ ಮಳೆಯಲ್ಲಿ ಹೊರಗಡೆ ಹೋಗಿ ಬಂದ ಮುಖ, ಕೈ, ಕಾಲು ತೊಳೆಯಲು ಮರೆಯಬೇಡಿ. ಈ ರೀತಿ ಮಾಡುವುದರಿಂದ ರೋಗಾಣುಗಳು ನಿಮ್ಮ ಮೇಲೆ ದಾಳಿ ಮಾಡುವುದನ್ನು ತಡೆಯಬಹುದು. ಅದರಲ್ಲೂ ಬಿಸಿ ನೀರು ಮಳೆ ಕೈ, ಕಾಲು ತೊಳೆಯುವುದು ಒಳ್ಳೆಯದು.

ಸೂಪ್, ಕಷಾಯ
ಈ ಸಮಯದಲ್ಲಿ ಸೂಪ್, ಕಷಾಯ ಇವುಗಳನ್ನು ಮಾಡಿ ಕುಡಿಯುವುದು ಒಳ್ಳೆಯದು. ಇವುಗಳು ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಹಾಗೂ ಇವುಗಳು ರೋಗಾಣುಗಳ ವಿರುದ್ಧ ಹೋರಾಡಿ, ಕಾಯಿಲೆ ಬೀಳುವುದನ್ನು ತಡೆಗಟ್ಟುತ್ತದೆ.

ಮಳೆಯಲ್ಲಿ ನೆನೆದರೆ ಸ್ನಾನ ಮಾಡಿ
ಮಳೆಯಲ್ಲಿ ನೆನೆದರೆ ಮನೆಗೆ ಬಂದ ತಕ್ಷಣ ಬಿಸಿ ನೀರಿನಲ್ಲಿ ಸ್ನಾನ ಮಾಡಿ. ಇದರಿಂದ ಕಾಯಿಲೆ ಬೀಳುವುದನ್ನು ತಡೆಯಬಹುದು. ಇದರಿಂದ ದೇಹದ ಉಷ್ಣತೆ ಸಮಸ್ಥಿತಿಗೆ ಬಂದು ಶೀತ ಉಂಟಾಗುವುದನ್ನು ತಡೆಯಬಹುದು.

ಸರಿಯಾದ ಸಮಯಕ್ಕೆ ನಿದ್ದೆ ಮಾಡಿ
ಮಳೆಗಾಲದಲ್ಲಿ ನಿದ್ದೆ ಬೇಗನೆ ಬಳಿ ಸುಳಿಯುವುದು, ಟಿವಿ ನೋಡುತ್ತಾ, ಟ್ಯಾಪ್ ಟಾಪ್ ಮುಂದೆ ಕೂರುತ್ತಾ ಸುಂದರ ನಿದ್ದೆ ಹಾಳು ಮಾಡಿ, ಆರೊಗ್ಯ ಹಾಳು ಮಾಡ್ಕೋಬೇಡಿ.

ವ್ಯಾಯಾಮ
ಮಳೆಗಾಲ ಅಂತ ವ್ಯಾಯಾಮಕ್ಕೆ ಬ್ರೇಕ್ ಹಾಕಬೇಡಿ, ಮನೆಯಲ್ಲಿ ವ್ಯಾಯಾಮ ಮಾಡಿ, ಸಮತೂಕವನ್ನು ಕಾಪಾಡಿಕೊಳ್ಳಿ.

ಆಹಾರಗಳು
ಪೋಷಕಾಂಶವಿರುವ ಆಹಾರಗಳನ್ನು ತಿನ್ನಿ. ಅದರಲ್ಲೂ ದೇಹ ಉಷ್ಣತೆ ಹೆಚ್ಚಿಸುವ ಆಹಾರ ತಿನ್ನಿ. ಶುಂಠಿ, ಕರಿ ಮೆಣಸಿನ ಪುಡಿ ಇವೆಲ್ಲಾ ನಿಮ್ಮ ಆಹಾರದಲ್ಲಿ ಇರಲಿ.



Click it and Unblock the Notifications
