Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಹುಷಾರಿಲ್ಲದಿದ್ದಾಗ ತಿನ್ನಬಾರದ ಆಹಾರಗಳು
ಶೀತದ ಕಾಲವೆಂದರೆ ಎಲ್ಲ ಕಡೆ ನೆಗಡಿ, ಕೆಮ್ಮು ಸಾಮಾನ್ಯ. ಹಬ್ಬದ ಸಿಹಿತಿನಿಸುಗಳನ್ನು ಹಂಚುವಂತೆ ನಾವಿದನ್ನು ಎಲ್ಲರಿಗೂ ಹಂಚುತ್ತಿರುತ್ತೇವೆ. ಬೆಳ್ಳುಳ್ಳಿ, ಶುಂಠಿಯಂತಹ ವಸ್ತುಗಳ ಬಳಕೆ ಶೀತಕ್ಕೆ ರಾಮಬಾಣವಿದ್ದಂತೆ ಆದರೂ ಶೀತವಾದಾಗ, ಹುಷಾರಿಲ್ಲದಾಗ ನಾವು ಯಾವ ಆಹಾರಗಳನ್ನು ಬಳಸಬಾರದು ಎಂದು ತಿಳಿದುಕೊಳ್ಳುವುದು ಒಳ್ಳೆಯದು.
ಇಂತಹ ಆಹಾರಗಳ ಬದಲಾಗಿ ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಆಹಾರ ಸೇವಿಸುವುದರಿಂದ ರೋಗದಿಂದ ಬೇಗ ಗುಣಮುಖರಾಗಬಹದು ಮತ್ತು ಶೀತ ಹೆಚ್ಚಾಗುವುದನ್ನು ತಡೆಯಬಹುದು.

1. ಸಿಹಿತಿಂಡಿಗಳು
ನಿಮಗೆ ಹುಷಾರಿಲ್ಲ ಅನ್ನಿಸಿದಾಗ ನೀವು ಕ್ಯಾಂಡಿಗಳಿಂದ ದೂರ ಉಳಿಯುವುದು ಉತ್ತಮ. ಸಿಹಿತಿಂಡಿಗಳಲ್ಲಿ ಕೊಬ್ಬಿನಂಶವಿರುತ್ತದೆ. ಇವು ಜೀರ್ಣಾಂಗಗಳ ಮೇಲೆ ಒತ್ತಡವುಂಟುಮಾಡುತ್ತದೆ. ಕೆಲವೊಮ್ಮೆ ಇಂತಹ ಸಿಹಿತಿಂಡಿಗಳೇ ನಿಮ್ಮ ಅನಾರೋಗ್ಯಕ್ಕೆ ಕಾರಣವಾಗಬಹುದು!

2. ಸಂಸ್ಕರಿಸಲಾದ ಮಾಂಸ
ಈ ಬಗೆಯ ಮಾಂಸಗಳಲ್ಲಿ ಸಕ್ಕರೆ ಅಥವ ಉಪ್ಪು ಸೇರಿರುತ್ತದೆ. ಇದಕ್ಕೆ ಉತ್ತಮ ಉದಾಹರಣೆಯೆಂದರೆ ಉಪ್ಪೂರಿಸಿ ಒಣಗಿಸಿದ ಹಂದಿಮಾಂಸ. ಸಂಸ್ಕರಿಸಲಾದ ಮಾಂಸದಲ್ಲಿ ನೈಟ್ರೇಟ್ ಗ ನೈಟ್ರೈಟ್ಸ್ ಆಗಿ ಪರಿವರ್ತಿತವಾಗುತ್ತದೆ. ಇದು ಕ್ಯಾನ್ಸರ್ಗೆ ಕಾರಣವಾಗಬಹುದು. ಆರೋಗ್ಯ ಸರಿಯಿಲ್ಲದಿದ್ದಾಗ ನಮ್ಮ ರೋಗ ನಿರೋಧಕ ಶಕ್ತಿಯ ಮೇಲೆ ಈ ನೈಟ್ರೈಟ್ಸ್ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

3. ಕಿತ್ತಳೆಹಣ್ಣಿನ ರಸ
ಯಾವಾಗಲೂ ಕಿತ್ತಳೆ ಹಣ್ಣಿನ ರಸವನ್ನು ಆರೋಗ್ಯಕ್ಕೆ ಒಳ್ಳೆಯದು ಎಂದೇ ಹೇಳಲಾಗುತ್ತದೆ. ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ, ಫೈಬರ್ ಮತ್ತು ಮೈಕ್ರೋನ್ಯೂಟ್ರಿಯೆಂಟ್ಸ್ ಇರುತ್ತದೆ. ಇತ್ತೀಚಿನ ಸಂಶೋಧನೆಗಳ ಪ್ರಕಾರ ಕಿತ್ತಳೆಯ ರಸವನ್ನು ಹಿಂಡಿದಾಗ ಅದರಲ್ಲಿ ಸೋಡಾದಲ್ಲಿರುವಷ್ಟೇ ಸಕ್ಕರೆ ಇರುತ್ತದೆ ಎಂದು ತಿಳಿದು ಬಂದಿದೆ. ಅನಾರೋಗ್ಯದ ಸಮಯದಲ್ಲಿ ಸಕ್ಕರೆ ಕೂಡ ಒಳ್ಳೆಯದಲ್ಲ. ಈ ಸಮಯದಲ್ಲಿ ಆ್ಯಸಿಡ್ ಗಳು ಹೊಟ್ಟೆಯನ್ನು ಹಾಳುಮಾಡುತ್ತದೆ.

4. ಕಾಳುಗಳು
ನೀವು ಹುಷಾರಿಲ್ಲದೆ ಮಲಗಿರುವಾಗ ಎಲ್ಲ ತರಹದ ಕಾಳುಗಳಿಂದ ದೂರವಿರುವುದು ಒಳ್ಳೆಯದು. ಅದರಲ್ಲೂ ಕಡಲೆಬೀಜ ಶೀತವಾದಾಗ ಹೆಚ್ಚಿನ ಮ್ಯೂಕಸ್ ಉತ್ಪಾದನೆ ಮಾಡಿ ತೊಂದರೆ ಉಂಟುಮಾಡುತ್ತದೆ. ಕಾಳುಗಳು ಮಲಬದ್ಧತೆಗೂ ಕಾರಣವಾಗುತ್ತವೆ.

5. ಕೆಂಪುಮಾಂಸ
ಕಾಳುಗಳಂತೆ ಕೆಂಪುಮಾಂಸ ಕೂಡ ಅನಾರೋಗ್ಯದ ಸಮಯದಲ್ಲಿ ಹಾನಿಕಾರಕ. ನೀವು ಶೀತವಾದಾಗ ಬರ್ಗರ್ ಜೊತೆ ಇದನ್ನು ತಿಂದಿರಾದರೆ ಎದೆಗೂಡಿನಲ್ಲಿ ಮತ್ತು ಮೂಗಿನಲ್ಲಿ ಹೆಚ್ಚಿನ ದ್ರವ ಶೇಖರಣೆಯಾಗಿ ತೊಂದರೆಯಾಗುತ್ತದೆ. ಮಾಂಸದಲ್ಲಿರುವ ಕೊಬ್ಬಿನಂಶ ಅನಾರೋಗ್ಯದ ಸಮಯದಲ್ಲಿ ಜೀರ್ಣಾಂಗದ ಮೇಲೆ ಒತ್ತಡ ಹೆಚ್ಚಿಸಿ ತೊಂದರೆ ಉಂಟುಮಾಡುತ್ತದೆ. ಅನಾರೋಗ್ಯ ಸಮಯದಲ್ಲಿ ದೇಹ ಒತ್ತಡದಲ್ಲಿರುತ್ತದೆ. ಇಂತಹ ಆಹಾರದ ಸೇವನೆಯಿಂದ ಇನ್ನಷ್ಟು ಪರಿಸ್ಥಿತಿ ಹದಗೆಡುತ್ತದೆ.

6. ಆಲ್ಕೊಹಾಲ್
ಆಲ್ಕೋಹಾಲ್ ನೀವು ತೆಗೆದುಕೊಳ್ಳುವ ಎಲ್ಲ ಔಷಧಿಗಳ ಮೇಲೂ ಪ್ರಭಾವಬೀರಿ ಅವುಗಳನ್ನು ನಿಸ್ತೇಜ ಮಾಡಿಬಿಡುತ್ತದೆ. ಹೆಚ್ಚಿನ ಆಲ್ಕೋಹಾಲ್ ಸೇವನೆಯಿಂದ ಆ್ಯಸಿಡ್ ಉತ್ಪತ್ತಿ ಹೆಚ್ಚುತ್ತದೆ ಇದು ಹೊಟ್ಟೆಯ ಮೇಲೆ ಕೆಟ್ಟಪರಿಣಾಮವುಂಟುಮಾಡುತ್ತದೆ.

7. ಕೆಫೈನ್
ಕೆಫೈನ್ ಕೂಡ ಅನಾರೋಗ್ಯದ ಸಮಯದಲ್ಲಿ ಹಾನಿಕಾರಿ. ಸೋಡ, ಕಾಫಿ ಮತ್ತು ಚಾಕೊಲೇಟ್ನ ಮಿತವಾದ ಸೇವನೆ ಯಾವಾಗಲೂ ಆರೋಗ್ಯಕ್ಕೆ ಒಳ್ಳೆಯದು. ಕೆಫೈನ್ ಹೆಚ್ಚಿರುವ ಆಹಾರ ಮತ್ತು ಪಾನೀಯಗಳೆಲ್ಲವೂ ಯಾವಾಗಲೂ ಸಕ್ಕರೆಯ ಅಂಶ ಹೆಚ್ಚಿರುತ್ತದೆ. ಆದ್ದರಿಂದ ಇವುಗಳಿಗೆ ಟಾ ಟಾ ಹೇಳುವುದು ಒಳ್ಳೆಯದು!

8 ಮಸಾಲೆ ಆಹಾರಗಳು
ಹುಷಾರಿಲ್ಲದ ಸಮಯದಲ್ಲಿ ಮಸಾಲೆಭರಿತ ಆಹಾರದಿಂದ ದೂರವಿರಿ. ನಾಲಗೆ ಕೆಟ್ಟಿದೆ ಸ್ವಲ್ಪ ರುಚಿಯಾಗಿರುತ್ತದೆ ಎಂದು ಮಸಾಲೆ ಆಹಾರ ತಿನ್ನುವ ಎಂದು ಯೋಚನೆ ಕೂಡ ಮಾಡಬೇಡಿ. ನೆಗಡಿಯಾಗಿ ಮೂಗು ಸೋರುತ್ತಿರುವಾಗ ಗ್ಯಾಸ್ ನಿಂದ ತೊಂದರೆಯಾಗಿ ಹೊಟ್ಟೆಕೆಟ್ಟು ಇನ್ನಷ್ಟು ತೊಂದರೆ ಅನುಭವಿಸಬೇಕಾಗುತ್ತದೆ.

9. ಹಸಿ ಆಹಾರಗಳು
ಹಸಿ ತರಕಾರಿಗಳು ಆರೋಗ್ಯಕ್ಕೆ ಒಳ್ಳೆಯದು. ಆದರೂ ಅನಾರೋಗ್ಯದಿಂದ ಮಲಗಿ ಚೇತರಿಸಿಕೊಳ್ಳುತ್ತಿರುವಾಗ ಬೇಯಿಸಿದ ಆಹಾರ ತಿನ್ನುವುದು ಒಳ್ಳೆಯದು. ಹಸಿಯಾಗಿ ತಿಂದಾಗ ಅನಾರೋಗ್ಯದ ಸಮಯದಲ್ಲಿ ಬ್ಯಾಕ್ಟೀರಿಯಾ ಸೋಂಕು ಹೆಚ್ಚಾಗುವ ಸಂಭವವಿರುತ್ತದೆ.

10. ಹಾಲಿನ ಉತ್ಪನ್ನಗಳು
ಹಾಲಿನ ಉತ್ಪನ್ನಗಳಲ್ಲಿ ಕೊಬ್ಬಿನಂಶ ಹೆಚ್ಚಿರುತ್ತದೆ. ಇವು ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಕೆಲವರಿಗೆ ಹಾಲಿನಿಂದ ಅಲರ್ಜಿ ಕೂಡ ಆಗಬಹುದು.



Click it and Unblock the Notifications