Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಈ ಅಪಾಯಕಾರಿ ಮರೆವಿನ ಕಾಯಿಲೆ ತಡೆಗಟ್ಟಿ
ಇವತ್ತು ವಿಶ್ವ ಅಲ್ಜೈಮರ್ಸ್ ದಿನ. ಮರೆವು ಎನ್ನುವುದು ನಮಗೆಲ್ಲಾ ಇದ್ದೇ ಇರುತ್ತದೆ. ಎಷ್ಟೋ ಬಾರಿ ನಮ್ಮ ಅಲಕ್ಷ್ಯಯಿಂದ ಕೆಲವೊಂದು ವಿಷಯಗಳನ್ನು, ವಸ್ತುಗಳನ್ನು ಮರೆತಿರುತ್ತೇವೆ . ಅದನ್ನು ಕಾಯಿಲೆ ಎನ್ನಲು ಸಾಧ್ಯವಿಲ್ಲ. ಆದರೆ ಮರೆವಿನ ಕಾಯಿಲೆ ಅಥವಾ ಅಲ್ಜೈಮರ್ಸ್ ಇದೆಯೆಲ್ಲಾ ಅದು ಮಾತ್ರ ತುಂಬಾ ಅಪಾಯಕಾರಿಯಾದದು. ಈ ಕಾಯಿಲೆ ಹೆಚ್ಚಾಗಿ ವಯಸ್ಸಾದವರಲ್ಲಿ ಕಂಡು ಬರುತ್ತದೆ. ಈ ಕಾಯಿಲೆ ಕಾಣಿಸಿದರೆ ಅದಕ್ಕೆ ಪರಿಹಾರ ಕಷ್ಟ.
ಅನುವಂಶೀಯತೆ, ಜೀವನ ಶೈಲಿ, ವಯಸ್ಸು ಅಲ್ಜೈಮರ್ಸ್ ಕಾಯಿಲೆ ಅನೇಕ ಕಾರಣಗಳಿಂದ ಬರಬಹುದು. ಬುದ್ಧಿಶಕ್ತಿಯನ್ನು ಹರಿತಗೊಳಿಸುವ ಜೀವನ ಶೈಲಿ ಪಾಲಿಸಿದರೆ ಈ ಕಾಯಿಲೆ ಬರದಂತೆ ತಡೆಯಬಹುದು. ಈ ಕಾಯಿಲೆ ಬಗ್ಗೆ ಜಾಗ್ರತೆ ಮೂಡಿಸುವ ಸಲುವಾಗಿ ಸೆ. 21ರಂದು ವಿಶ್ವ ಅಲ್ಜೈಮರ್ಸ್ ದಿನವನ್ನು ಆಚರಿಸಲಾಗುವುದು.
ಈ ಮರೆವು ಕಾಯಿಲೆ ಬಂದರೆ ಜೀವನ ಕಷ್ಟವಾಗುವುದು. ಯಾವ ವಿಷಯವೂ ನೆನಪಿನಲ್ಲಿರುವುದಿಲ್ಲ. ಕೈ ತೊಳೆಯುವುದು, ಹಲ್ಲುಜ್ಜುವುದು ಈ ರೀತಿಯ ನಿತ್ಯಕರ್ಮಗಳನ್ನು ಮಾಡಲು ಕೂಡ ಮರೆತು ಹೋಗುತ್ತಾರೆ. ಈ ಕಾಯಿಲೆಯ ಪ್ರಮುಖ ಲಕ್ಷಣಗಳು ನೋಡಿ ಇಂತಿವೆ.

1. ದಿನದಿಂದ ದಿನಕ್ಕೆ ಮರೆವು ಹೆಚ್ಚಾಗುವುದು. ಇಟ್ಟ ವಸ್ತುಗಳು ತಕ್ಷಣ ನೆನೆಪಿಗೆ ಬರದಿರುವುದು, ಎಲ್ಲಿಗೋ ಹೊರಟಿರುತ್ತೇವೆ, ಆದರೆ ಮಧ್ಯ ದಾರಿಯವರೆಗೆ ಬಂದ ಮೇಲೆ ಎಲ್ಲಿಗೆ ಹೋಗಬೇಕೆನ್ನುವುದು ಮರೆತು ಹೋಗುವುದು.
2. ದಿನನಿತ್ಯದ ಕೆಲಸಗಳನ್ನು ಮಾಡಲು ಸಾಧ್ಯವಾಗದಿರುವುದು. ತುಂಬಾ ಪರಿಚಿತರ ಹೆಸರು ಮೆರೆತು ಹೋಗುವುದು. ಗೊತ್ತಿರುವ ಕೆಲಸವನ್ನು ಮರೆಯುವುದು, ದಿನಾ ಓಡಾಡುವ ರೋಡ್ ನಲ್ಲಿ ಕೆಲವೊಮ್ಮೆ ದಾರಿ ಮರೆತು ಹೋಗುವುದು, ಡ್ರೈವಿಂಗ್ ಮಾಡುವಾಗ ಅದೇ ರಸ್ತೆಯಲ್ಲಿ ಅನೇಕ ಬಾರಿ ಹೋಗಿದ್ದರೂ ಕೂಡ ಆ ರಸ್ತೆಯಲ್ಲಿ ಚಾಲನೆ ಮಾಡುವಾಗ ಚಾಲನೆ ತಪ್ಪುವುದು, ದಿನಾ ಆಡುತ್ತಿರುವ ಆಟದ ನಿಯಮಗಳು ಮರೆತು ಹೋಗುವುದು.
3. ಈ ಕಾಯಿಲೆಯಿಂದ ದೃಷ್ಟಿ ಸಮಸ್ಯೆ ಕಂಡು ಬರುವುದು. ಓದಲು ಅಥವಾ ದೂರದಲ್ಲಿರುವ ವಸ್ತುಗಳನ್ನು ಗುರುತಿಸಲು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ರೂಮಿನಲ್ಲಿರುವ ಕನ್ನಡಿಯಲ್ಲಿ ತಮ್ಮದೇ ಪ್ರತಿಬಿಂಬ ನೋಡಿ ಬೇರೆ ಯಾರೋ ಇದ್ದಾರೆ ಎಂದು ಭಾವಿಸುವುದು ಇವೆಲ್ಲಾ ಈ ಕಾಯಿಲೆಯ ಲಕ್ಷಣವಾಗಿದೆ.
4. ಈ ರೀತಿ ಕಾಯಿಲೆ ಬಂದವರು ಮಾತನಾಡುತ್ತಿರುವಾಗಲೇ ತಕ್ಷಣ ಮಾತು ನಿಲ್ಲಿಸುತ್ತಾರೆ, ನಂತರ ಮಾತನ್ನು ಹೇಗೆ ಮುಂದುವರೆಸಬೇಕೆಂದು ಮರೆತು ಹೋಗಿ ತಲೆಯಲ್ಲಿ ಏನೂ ಹೊಳೆಯದೆ ಖಾಲಿ ಆದಂತೆ ಅನಿಸುತ್ತದೆ.
5. ಈ ರೀತಿ ಕಾಯಿಲೆ ಬಂದರೆ ಯಾವುದೇ ವಿಷಯದಲ್ಲಿ ಉತ್ತಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವಿರುವುದಿಲ್ಲ. ಏಕೆಂದರೆ ಆಲೋಚನೆ ಶಕ್ತಿ ಕಡಿಮೆಯಾಗಿ ಮರೆವು ಜಾಸ್ತಿ ಆಗುತ್ತದೆ.
6. ಈ ರೀತಿ ಕಾಯಿಲೆ ಉಂಟಾದರೆ ನಿಧಾನಕ್ಕೆ ತಮ್ಮ ಹವ್ಯಾಸ, ಸಾಮಾಜಿಕ ಚಟುವಟಿಕೆಗಳನ್ನು ನಿಲ್ಲಿಸುತ್ತಾರೆ. ಏಕೆಂದರೆ ಅವರಿಗೆ ತಮ್ಮ ಹವ್ಯಾಸದ ಬಗ್ಗೆ ನೆನಪು ಇರುವುದಿಲ್ಲ.
7. ಈ ಕಾಯಿಲೆ ಬಂದರೆ ಮನಸ್ಸಿನಲ್ಲಿ ಗೊಂದಲ, ಸಂಶಯ, ಖಿನ್ನತೆ ಕಾಣಿಸಿಕೊಳ್ಳುತ್ತದೆ. ಮನೆಯವರ ಜೊತೆಗೆ, ಕೆಲಸದ ಜಾಗದಲ್ಲಿ, ಸ್ನೇಹಿತರ ಜೊತೆ ಬೆರೆಯಲು ಇಷ್ಟಪಡುವುದಿಲ್ಲ. ಅಲ್ಲದೆ ಮನಸ್ಸಿನಲ್ಲಿ ಅಭದ್ರತೆ ಭಾವನೆ ಉಂಟಾಗುತ್ತದೆ. ಈ ರೀತಿಯ ಕಾಯಿಲೆಯನ್ನು ಮೊದಲನೇ ಹಂತದಲ್ಲಿ ಗುರುತಿಸಿದರೆ, ವೈದ್ಯರನ್ನು ಕಂಡು ಚಿಕಿತ್ಸೆಯನ್ನು ಪಡೆದು, ಮಿದುಳಿನ ಸಾಮರ್ಥ್ಯ ಹೆಚ್ಚಿಸುವ ಅಭ್ಯಾಸಗಳನ್ನು ಮಾಡಿದರೆ ನೆನಪಿನ ಶಕ್ತಿಯನ್ನು ಉಳಿಸಿಕೊಳ್ಳಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications