Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗ್ಯಾಸ್ಟ್ರಿಕ್ ಸಮಸ್ಯೆ ಇದೆಯಾ? ನೈಸರ್ಗಿಕ ಪರಿಹಾರ ಇಲ್ಲಿದೆ
ಕೆಲವೊಂದು ಆಂತರಿಕ ಮತ್ತು ಬಾಹ್ಯ ಕಾರಣಗಳಿಂದಾಗಿ ಜಠರದ ಲೋಳೆಯ ಆಂತರಿಕ ಒಳಪದರಕ್ಕೆ ಅಡಚಣೆಯಾದಾಗ ಹೊಟ್ಟೆಯ ಸಮಸ್ಯೆಗಳು ಉಂಟಾಗುತ್ತದೆ. ಇದರಿಂದ ಹೊಟ್ಟೆಯಲ್ಲಿ ಅತಿಯಾದ ಮತ್ತು ಅನಿಯಂತ್ರಿತ ಆಮ್ಲವು ಬಿಡುಗಡೆಯಾಗುತ್ತದೆ.
ಜಠರದ ಲೋಳೆ ನಿರ್ಮಾಣ ಮಾಡುವಂತಹ ಹೈಡ್ರೋಕ್ಲೋರಿಕ್ ಆಮ್ಲವು ಮಾನವ ದೇಹಕ್ಕೆ ಹಾನಿಕಾರಕ. ಇದರಿಂದ ಯಾವುದೇ ಮಟ್ಟದ ಗ್ಯಾಸ್ಟ್ರಿಕ್ ಸಮಸ್ಯೆಗೆ ಪರಿಣಾಮಕಾರಿ ಚಿಕಿತ್ಸೆ ನೀಡುವುದು ಅತ್ಯಗತ್ಯ.
ಕೊಲೆಸ್ಟ್ರಾಲ್ ನಿಯಂತ್ರಿಸಲು ಕೆಲವೊಂದು ಸಲಹೆಗಳು

ಗ್ಯಾಸ್ಟ್ರಿಕ್ ಸಮಸ್ಯೆಗೆ ಚಿಕಿತ್ಸೆ:
ಗ್ಯಾಸ್ಟ್ರಿಕ್ ಸಮಸ್ಯೆಯನ್ನು ತಡೆಯಲು ಕೆಲವೊಂದು ಸರಳ, ಪ್ರಮುಖ ಅಭ್ಯಾಸಗಳನ್ನು ಪಾಲಿಸಿಕೊಂಡು ಹೋಗಬೇಕು. ಅವುಗಳೆಂದರೆ ನಿಯಂತ್ರಿತ ಆಹಾರ ವೇಳಾಪಟ್ಟಿ, ಸರಿಯಾಗಿ ಆಹಾರವನ್ನು ಜಗಿದು ನಿಧಾನವಾಗಿ ಊಟ ಮಾಡುವುದು, ಪದೇ ಪದೇ ಊಟ ಮಾಡುವುದು ಆದರೆ ಸಣ್ಣ ಪ್ರಮಾಣದಲ್ಲಿ, ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಮತ್ತು ನಾರಿನಾಂಶ ಹೆಚ್ಚಿರುವ ಆಹಾರ ಸೇವನೆ. ಸರಿಯಾಗಿ ಚೇತರಿಕೆ ಮತ್ತು ಉಪಶಮನಕ್ಕಾಗಿ ತುಂಬಾ ಖಾರದ ಪದಾರ್ಥ, ಕಾಫಿ, ಸ್ಟ್ರಾಂಗ್ ಟೀ, ಮಾಂಸ, ಕೇಕ್, ಆಲ್ಕೋಹಾಲ್ ಮತ್ತು ಹುಳಿ ಆಹಾರ ಸೇವನೆ ಕಡೆಗಣಿಸಬೇಕೆಂದು ವೈದ್ಯರು ಸಲೆಹ ಮಾಡುತ್ತಾರೆ.
ಗ್ಯಾಸ್ಟ್ರಿಕ್ ಸಮಸ್ಯೆಗೆ ಕಾರಣಗಳು:
ಈ ಸಮಸ್ಯೆ ಹಲವಾರು ಕಾರಣಗಳಿಂದ ಬರಬಹುದು. ಇದರಲ್ಲಿ ಸಾಮಾನ್ಯ ಕಾರಣವೆಂದರೆ ದೈಹಿಕ ಮತ್ತು ಮಾನಸಿಕ ಒತ್ತಡ. ಆಘಾತ ಅಥವಾ ಒತ್ತಡವು ಜಠರದ ಲೋಳೆಯ ಹುಣ್ಣಿಗೆ ಕಾರಣವಾಗಬಹುದು. ಕೆಲವೊಂದು ಕಾರಣ ಜಠರದ ಒಳಪದರದ ತೀವ್ರ ಉರಿಯೂತ ಉಂಟಾಗಬಹುದು. ಇದಕ್ಕೆ ಕಾರಣವೆಂದರೆ ಆ್ಯಸಿಡಿಟಿ ಉಂಟುಮಾಡುವ ಆಹಾರ ಸೇವನೆ, ಡ್ರಗ್ಸ್, ಧೂಮಪಾನ ಮತ್ತು ಆಲ್ಕೋಹಾಲ್. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆಉರಿ, ಆ್ಯಸಿಡಿಟಿ, ಅಜೀರ್ಣ ಮತ್ತು ಹೊಟ್ಟೆ ಉಬ್ಬರ ಉಂಟಾಗಬಹುದು. ಗಡ್ಡೆಗಳು, ಕಿಡ್ನಿಯಲ್ಲಿ ಕಲ್ಲು, ಮಲಬದ್ಧತೆ, ಆಹಾರ ವಿಷವಾಗುವುದು, ಬ್ಯಾಕ್ಟೀರಿಯಾ ಸೋಂಕು, ಅಲ್ಸರ್ ಮತ್ತು ಪ್ಯಾಂಕ್ರಿಯಾಟಿಟಿಸ್ ಹೊಟ್ಟೆಯ ಸಮಸ್ಯೆಗೆ ಕಾರಣವಾಬಹುದು.
ನಿಂಬೆಹಣ್ಣು ಬಳಕೆ:
ಒಂದು ಲೋಟ ನೀರಿನಲ್ಲಿ ನಿಂಬೆರಸ ಹಿಂಡಿ ಮತ್ತು ಅರ್ಧ ಚಮಚ ಅಡುಗೆ ಸೋಡಾ ಹಾಕಿ. ಇದನ್ನು ಸರಿಯಾಗಿ ಅಲುಗಾಡಿಸಿ ಅಡುಗೆ ಸೋಡಾ ಸರಿಯಾಗಿ ಮಿಶ್ರವಾಗಲಿ. ಇದು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಉಪಶಮನ ನೀಡುತ್ತದೆ. ಇದನ್ನು ಬೆಳಗ್ಗಿನ ಅವಧಿಯಲ್ಲಿ ಸೇವಿಸಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯ ನೋವಿನಿಂದ ಉಪಶಮನ ಪಡೆಯಿರಿ.
ಹೃದಯ ತೊಂದರೆಯ ಸಾಮಾನ್ಯ ಮುನ್ಸೂಚನೆಗಳು
ಹರ್ಬಲ್ ಟೀ:
ಹರ್ಬಲ್ ಟೀಯ ಮಿಶ್ರಣವು ಜೀರ್ಣ ಕ್ರಿಯೆಯ ವೇಗ ನೀಡಿ ಅದನ್ನು ಪರಿಣಾಮಕಾರಿಯಾಗಿ ಹೆಚ್ಚಿಸುತ್ತದೆ. ಇದನ್ನು ಸಾಮಾನ್ಯವಾಗಿ ಕ್ಯಾಮೊಮೈಲ್, ರಾಸ್ಪ್ಬೆರಿ, ಬ್ಲ್ಯಾಕ್ ಬೆರಿ ಮತ್ತು ಪುದೀನಾದಿಂದ ತಯಾರಿಸಲಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications