Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಅರಿಶಿನ ಸೇರಿಸಿದ ಬಿಸಿ ಹಾಲು-ಆಯಸ್ಸು ನೂರು!
ಇಂದಿನ ಆಧುನಿಕ ಜಗತ್ತು ಎಷ್ಟೇ ಮುಂದುವರಿದಿದ್ದರೂ ವೈದ್ಯ ಲೋಕ ಅಚ್ಚರಿಯ ಸಂಶೋಧನೆಗಳನ್ನು ಮಾಡುತ್ತಾ ಸಾಧನೆಯನ್ನು ನಡೆಸುತ್ತಿದ್ದರೂ ಹಳ್ಳಿ ಮದ್ದೇ ಕೆಲವೊಂದು ರೋಗಗಳಿಗೆ ಥಟ್ಟನೆಯ ಪರಿಣಾಮವನ್ನು ನೀಡುತ್ತವೆ. ಅದಕ್ಕೇ ತಾನೇ ಕೆಲವೊಂದು ವೈದ್ಯಕೀಯ ಚಿಕಿತ್ಸೆಗಳಲ್ಲಿ ಇಂದಿಗೂ ಹಳ್ಳಿಮದ್ದನ್ನು ಬಳಸಿ ಪರಿಹಾರಗಳನ್ನು ಕಂಡುಕೊಳ್ಳುತ್ತಿದ್ದಾರೆ. ವೈದ್ಯ ಲೋಕಕ್ಕೆ ಸವಾಲಾಗಿದ್ದ ಎಷ್ಟೋ ಸಮಸ್ಯೆಗಳನ್ನು ಹಳ್ಳಿಮದ್ದು ಗುಣಪಡಿಸಿದೆ.
ಹೌದು, ಹಿಂದಿನ ಕಾಲದಲ್ಲಿ ಶೀತ, ನೆಗಡಿ, ಜ್ವರ, ಹೊಟ್ಟೆನೋವು, ಮಹಿಳೆಯರಿಗೆ ಮಾಸಿಕ ದಿನಗಳಲ್ಲಿ ಕಾಡುವ ಕೆಳಹೊಟ್ಟೆನೋವು ಮೊದಲಾದ ಎಲ್ಲಾ ಸಾಮಾನ್ಯ ತೊಂದರೆಗಳಿಗೆ ಅಜ್ಜಿ ನೀಡುವ ಔಷಧಿ ಒಂದೇ-ಅದೇ ಅರಿಶಿನ ಸೇರಿಸಿದ ಬಿಸಿ ಹಾಲು. ಹಾಲು ಮತ್ತು ಅರಿಶಿನ ಎರಡೂ ಉತ್ತಮವಾದ ಪ್ರತಿಜೀವಕ (antibiotic) ಗಳಾಗಿವೆ. ಇವೆರಡರ ಜೋಡಿ ವಿವಿಧ ತೊಂದರೆಗಳನ್ನು ಯಶಸ್ವಿಯಾಗಿ ನಿವಾರಿಸುವುದು ಮಾತ್ರವಲ್ಲ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲೂ ನೆರವಾಗುತ್ತವೆ. ದೇಹದಲ್ಲಿ ಹೇಗೋ ಪ್ರವೇಶ ಪಡೆದಿರುವ ಅತಿ ಸೂಕ್ಷ್ಮ ಕ್ರಿಮಿಗಳನ್ನೂ ಆಹಾರದ ಮೂಲಕ ಹೊಟ್ಟೆ ಸೇರಿರುವ ವಿಷಕಾರಿ ವಸ್ತುಗಳನ್ನೂ ಹೊರಹಾಕಲು ಸಹಕರಿಸುತ್ತವೆ. ಬನ್ನಿ ಈ ಅದ್ಭುತ ನೈಸರ್ಗಿಕ ಪೇಯದ ಹೆಚ್ಚಿನ ಉಪಯೋಗಗಳನ್ನು ನೋಡೋಣ...

ಉಸಿರಾಟದ ಸಮಸ್ಯೆಗಳನ್ನು ನೀಗಿಸುತ್ತದೆ
ಉಸಿರಾಟದ ಸಮಸ್ಯೆಗಳನ್ನು ನಿವಾರಿಸುವ ಶಕ್ತಿಯನ್ನು ಈ ಪೇಯ ಹೊಂದಿದ್ದು ಬ್ಯಾಕ್ಟೀರಿಯಾ ಮತ್ತು ವೈರಸ್ ಉಂಟುಮಾಡುವ ಕೆಲವೊಂದು ಸೋಂಕುಗಳನ್ನು ನಿವಾರಿಸುತ್ತದೆ. ಜೀರ್ಣಶಕ್ತಿಯ ಅಸಮಾನತೆಯನ್ನು ಇದು ಹೋಗಲಾಡಿಸುತ್ತದೆ.

ರಕ್ತ ಶುದ್ಧತೆ
ಅರಿಶಿನ ಹಾಲು, ಆಯುರ್ವೇದ ಸಂಪ್ರದಾಯದಲ್ಲಿ ಅತ್ಯುತ್ತಮ ರಕ್ತ ಶುದ್ಧೀರಣ/ ಕ್ಲಿನ್ಸರ್ ಎಂದು ಪರಿಗಣಿಸಲಾಗುತ್ತದೆ. ಇದು ದೇಹದಲ್ಲಿ ರಕ್ತ ಪರಿಚಲನೆಯ ಪುನಶ್ಚೇತನಗೊಳಿಸಲು ಮತ್ತು ವರ್ಧಿಸಲು ಸಹಾಯ ಮಾಡಬಹುದು. ಇದು ದುಗ್ಧನಾಳ ವ್ಯವಸ್ಥೆ ಮತ್ತು ಎಲ್ಲಾ ರಕ್ತನಾಳಗಳು ಶುದ್ಧೀಕರಿಸಲು ಕೂಡ ಅತ್ಯವಶ್ಯಕ.

ಮೂಳೆಗಳ ದೃಢತೆಗೆ
ಅರಿಶಿನ ಹಾಲು, ಮೂಳೆಗಳು ಆರೋಗ್ಯಕರ ಮತ್ತು ಬಲವಾಗಿ ಇರಿಸಿಕೊಳ್ಳಲು ಸಹಾಯ ಮಾಡುವ ಕ್ಯಾಲ್ಸಿಯಂನ ಒಂದು ಉತ್ತಮ ಮೂಲವಾಗಿದೆ. ಭಾರತದ ಕ್ರಿಕೆಟ್ ದಂತಕಥೆಯಾದ ಸಚಿನ್ ತೆಂಡೂಲ್ಕರ್, ಉತ್ತಮ ಮೂಳೆ ಆರೋಗ್ಯಕ್ಕೆ ಅರಿಶಿನ ಹಾಲನ್ನೇ ದಿನವೂ ಕುಡಿಯುತ್ತಾರೆ. ಅರಿಶಿನ ಹಾಲು ಮೂಳೆ ಸವೆತ ಮತ್ತು ಸಂಧಿವಾತ ಕಡಿಮೆ ಮಾಡುತ್ತದೆ.

ಶೀತ ಮತ್ತು ಕೆಮ್ಮಿಗೆ ಉಪಚಾರ
ಅರಿಶಿನ ಹಾಲು ವೈರಸ್ ವಿರೋಧಿ ಮತ್ತು ಬ್ಯಾಕ್ಟೀರಿಯ ನಿರೋಧಕ ಗುಣಗಳನ್ನು ಹೊಂದಿರುವ ಕಾರಣ, ಕೆಮ್ಮು ಮತ್ತು ಶೀತಕ್ಕೆ ಒಂದು ಉತ್ತಮ ಪರಿಹಾರ ಎಂದು ಪರಿಗಣಿಸಲಾಗಿದೆ. ಇದು ನೋಯುತ್ತಿರುವ ಗಂಟಲು, ಕೆಮ್ಮು ಮತ್ತು ಶೀತಕ್ಕೆ ತ್ವರಿತ ಪರಿಹಾರ ನೀಡುತ್ತದೆ.

ಸುಖ ನಿದ್ರೆಗಾಗಿ
ನಿದ್ರೆಯ ಸಮಸ್ಯೆ ನಿಮ್ಮನ್ನು ಕಾಡುತ್ತಿದೆ ಎಂದಾದಲ್ಲಿ ಮಲಗುವ ಮುನ್ನ ಅರಶಿನ ಬೆರೆಸಿದ ಹಾಲನ್ನು ಸೇವಿಸಿರಿ. ನಿಮಗೆ ಬೇಗ ನಿದ್ರೆ ಬರುತ್ತದೆ.

ಸಂಧಿವಾತ
ಅರಿಶಿನ ಹಾಲು, ಸಂಧಿವಾತವನ್ನು ಹೋಗಲಾಡಿಸಲು ಮತ್ತು ಸಂಧಿವಾತಕ್ಕೆ ಕಾರಣವಾದ ಊತವನ್ನು ನಿವಾರಿಸಲು ಸಹಾಯಮಾಡುತ್ತದೆ. ಕೀಲು ಮತ್ತು ಸ್ನಾಯುಗಳಲ್ಲಿನ ನೋವುಗಳನ್ನೂ ಸಹ ನಿವಾರಿಸುವಲ್ಲಿ ಸಹಕಾರಿಯಾಗಿದೆ.

ಅರಿಶಿನದ ಹಾಲು ತಯಾರಿಸುವ ಬಗೆ
ಸುಲಭ ವಿಧಾನ: ಒಂದು ಲೋಟ ಹಸುವಿನ ಹಾಲಿಗೆ ಸುಮಾರು ಅರ್ಧ ಚಮಚದಿಂದ ಒಂದು ಚಮಚದಷ್ಟು ಅರಿಶಿನ ಪುಡಿ ಹಾಕಿ ಕುದಿಯಲು ಪ್ರಾರಂಭವಾದ ಬಳಿಕ ಇಳಿಸಿ ತಣಿಯಲು ಬಿಡಿ. ರುಚಿಗಾಗಿ ಕೊಂಚ ಜೇನನ್ನೂ ಸೇರಿಸಬಹುದು. ಸಾಂಪ್ರಾದಾಯಿಕ ವಿಧಾನ: ಹಸಿಯಾಗಿರುವ ಅರಿಶಿನದ ಕೊಂಬಿನ ಸುಮಾರು ಒಂದು ಇಂಚಿನಷ್ಟು ತುಂಡನ್ನು ಜಜ್ಜಿ ಕುದಿಯುತ್ತಿರುವ ಹಾಲಿನಲ್ಲಿ ಸೇರಿಸಿ. ಈಗ ಉರಿಯನ್ನು ಅತಿಚಿಕ್ಕದಾಗಿ ಮಾಡಿ ಮುಚ್ಚಳ ಮುಚ್ಚದೇ ಸುಮಾರು ಹದಿನೈದು ನಿಮಿಷ ಕುದಿಸಿ. ಬಳಿಕ ಅರಿಶಿನದ ತುಂಡನ್ನು ಸೋಸಿ ತೆಗೆಯಿರಿ. ಈ ಹಾಲನ್ನು ತಣಿದ ಬಳಿಕವೇ ಕುಡಿಯಿರಿ. ಈ ಹಾಲನ್ನು ಮತ್ತೆ ಬಿಸಿ ಮಾಡಬಾರದು.



Click it and Unblock the Notifications