Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಎಲೆಮರೆ ಕಾಯಿ ಲಿಂಬೆ: ಅದೇನು ಮಾಯೆ, ಅದೇನು ಜಾದೂ!
ತೂಕ ಇಳಿಸಲು ಆಯುರ್ವೇದ ಸಲಹೆ ಮಾಡುವ ಸುಲಭ ವಿಧಾನವೆಂದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಲಿಂಬೆರಸ ಸೇರಿಸಿದ ಉಗುರುಬೆಚ್ಚನೆಯ ನೀರು ಸೇವಿಸುವುದು. ಲಿಂಬೆರಸದ ಸೇವನೆ ಕೇವಲ ತೂಕ ಇಳಿಸಲಿಕ್ಕಷ್ಟೇ ಮೀಸಲಾಗಿಲ್ಲ. ಬದಲಿಗೆ ದೇಹದಲ್ಲಿದ್ದ ವಿಷಕಾರಿ ವಸ್ತುಗಳನ್ನು ಹೊರದಬ್ಬಲೂ, ದೇಹಕ್ಕೆಹೆಚ್ಚಿನ ತ್ರಾಣ ನೀಡಲೂ, ಮಲಬದ್ಧತೆ ನಿವಾರಿಸಲೂ ನೆರವಾಗುತ್ತದೆ.
ದೇಹದಲ್ಲಿ ಉಳಿದುಕೊಂಡಿದ್ದ ಕಲ್ಮಶಗಳನ್ನು ಶೀಘ್ರವಾಗಿ ಹೊರಹಾಕಲು ಲಿಂಬೆರಸ ಉತ್ತಮವಾಗಿದೆ. ಪರಿಣಾಮವಾಗಿ ದೇಹದ ತೂಕ ಶೀಘ್ರವಾಗಿ ಕಡಿಮೆಯಾಗುತ್ತಾ ಹೋಗುತ್ತದೆ. ತೂಕ ಇಳಿಸುವ ನಿಟ್ಟಿನಲ್ಲಿ ಲಿಂಬೆರಸ ಸೇರಿಸಿದ ನೀರು ಕುಡಿಯುವುದರ ಮಹತ್ವಗಳು:
ಲಿಂಬೆರಸದ ಸೇವನೆಯಿಂದ ಜಠರದಲ್ಲಿ ಜೀರ್ಣಕ್ರಿಯೆ ಶೀಘ್ರಗೊಳ್ಳುತ್ತದೆ
ಜಠರದಲ್ಲಿ ಕರಗಿದ ಆಹಾರ ಬೇಗನೇ ಕರುಳುಗಳತ್ತ ಸಾಗುತ್ತದೆ ಮತ್ತು ಶೀಘ್ರವೇ ತ್ಯಾಜ್ಯಗಳು ವಿಸರ್ಜಿಸಲು ನೆರವಾಗುತ್ತದೆ. ಈ ಕಾರಣದಿಂದ ಹೊಟ್ಟೆ ಮತ್ತು ಇತರ ಜೀರ್ಣಾಂಗಗಳಲ್ಲಿ ವ್ಯರ್ಥವಾದ ಆಹಾರ ಉಳಿದು ತೂಕ ಹೆಚ್ಚಿಸುವುದನ್ನು ತಡೆಯುತ್ತದೆ. ಜೊತೆಗೇ ಅತಿಸಾರ ಅಥವಾ ಮಲಬದ್ಧತೆಯುಂಟಾಗುವುದರಿಂದ ರಕ್ಷಣೆ ನೀಡುತ್ತದೆ. ಲಿಂಬೆ ಹಣ್ಣಿನ 16 ಅದ್ಭುತ ಆರೋಗ್ಯ ಸೂತ್ರಗಳು

ಹಸಿವನ್ನು ತಗ್ಗಿಸುತ್ತದೆ
ತೂಕ ಏರಲು ಪ್ರಮುಖ ಕಾರಣ ಸೇವಿಸುವ ಆಹಾರದ ಪ್ರಮಾಣದಲ್ಲಿ ನಿಯಂತ್ರಣವಿಲ್ಲದೇ ಇರುವುದು. ಇದೊಂದು ಗೀಳಾಗಿದ್ದು ಹೊಟ್ಟೆಯಿಂದ ಮೆದುಳಿಗೆ ಹೊರಡುವ ಸಂಕೇತಗಳು ಪ್ರಮುಖ ಕಾರಣವಾಗಿವೆ.
ಲಿಂಬೆರಸದ ಸೇವನೆಯಿಂದ ಈ ಸಂಕೇತಗಳು ದುರ್ಬಲಗೊಳ್ಳುವುದರಿಂದ ಹಸಿವಿನ ಸಂದೇಶ ಪದೇ ಪದೇ ಹೋಗುವುದು ಕಡಿಮೆಯಾಗುತ್ತದೆ. ಅಂದರೆ ಪರೋಕ್ಷವಾಗಿ ಹಸಿವು ಕಡಿಮೆಯಾಗುತ್ತದೆ. ಕಡಿಮೆಯಾದ ಹಸಿವಿನ ಕಾರಣ ಅತಿಯಾಗಿ ತಿನ್ನುವುದು ತಪ್ಪಿದಂತಾಗಿ ತೂಕ ಇಳಿಯಲು ನೆರವಾಗುತ್ತದೆ.
ಶೀತ ನೆಗಡಿ ಕೆಮ್ಮಿನಿಂದ ರಕ್ಷಣೆ ನೀಡುತ್ತದೆ
ಲಿಂಬೆರಸದಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಸಿ ದೇಹದ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ನೆರವಾಗುತ್ತದೆ. ಪರಿಣಾಮವಾಗಿ ಶೀತ, ನೆಗಡಿ, ಕೆಮ್ಮು, ಜ್ವರ, ಎದೆಯ ಸೋಂಕುಗಳು ಮೊದಲಾದ ತೊಂದರೆಗಳಿಂದ ಮುಕ್ತಿ ದೊರಕುತ್ತದೆ.
ಚರ್ಮ ನೆರಿಗೆ ಬೀಳುವುದನ್ನು ತಡೆಯುತ್ತದೆ
ಚರ್ಮ ನೆರಿಗೆ ಬೀಳಲು ವಿಟಮಿನ್ ಸಿ ಕೊರತೆ ಕಾರಣವಾಗಿದೆ. ಲಿಂಬೆರಸದಲ್ಲಿರುವ ವಿಟಮಿನ್ ಸಿ ಕಾರಣದಿಂದಾಗಿ ಚರ್ಮ ಉತ್ತಮ ಪೋಷಣೆ ಪಡೆದು ನೆರಿಗೆಯಿಂದ ದೂರವಿರುತ್ತದೆ.
ಮುಲ್ತಾನಿ ಮಿಟ್ಟಿ (ಒಂದು ಬಗೆಯ ಜೇಡಿಮಣ್ಣು)
ಸಮಪ್ರಮಾಣದಲ್ಲಿ ಸೇರಿಸಿ ಮಿಶ್ರಣ ತಯಾರಿಸಿ ರಾತ್ರಿ ಮಲಗುವ ಮುನ್ನ ಮುಖಕ್ಕೆ ಹಚ್ಚಿಕೊಳ್ಳಿ. ಉರಿ ಎನಿಸಿದರೆ ಲಿಂಬೆಯ ಪ್ರಮಾಣ ತಗ್ಗಿಸಿ. ಬೆಳಿಗ್ಗೆ ತಣ್ಣೀರಿನಿಂದ ತೊಳೆದುಕೊಳ್ಳಿ, ಸೋಪು ತಾಗಿಸಬೇಡಿ. ಮುಖದಲ್ಲಿ ಗಾಯದ ಅಥವಾ ಹಳೆಯ ಮೊಡವೆಯ ಕಲೆಗಳಿದ್ದರೆ ಲಿಂಬೆರಸವನ್ನು ನೇರವಾಗಿ ಹತ್ತಿ ಉಪಯೋಗಿಸಿ ಹಚ್ಚಿಕೊಳ್ಳಿ. ನಿತ್ಯದ ಲಿಂಬೆರಸದ ಸೇವನೆಯಿಂದ ಚರ್ಮಕ್ಕೆ ಒಳಗಿನಿಂದ ಉತ್ತಮ ಪೋಷಣೆ ದೊರಕುವುದರಿಂದ ಚರ್ಮದ ಕಾಂತಿ ಹೆಚ್ಚುತ್ತದೆ.
ಮೆದುಳು ಮತ್ತು ನರಗಳ ಕ್ಷಮತೆಯನ್ನು ಹೆಚ್ಚಿಸುತ್ತದೆ
ಲಿಂಬೆರಸದಲ್ಲಿರುವ ಪೊಟ್ಯಾಶಿಯಂ ಮೆದುಳಿನ ಮತ್ತು ಮೆದುಳು ಬಳ್ಳಿಯ ಕಾರ್ಯವಿಧಾನಗಳನ್ನು ಚುರುಕುಗೊಳಿಸುವುದರಿಂದ ದೈನಂದಿನ ಚಟುವಟಿಕೆಗಳಲ್ಲಿ ಬದಲಾವಣೆ ಕಂಡುಬರುತ್ತದೆ. ಜೊತೆಗೇ ಪೊಟ್ಯಾಶಿಯಂ ರಕ್ತದೊತ್ತಡವನ್ನು ಸುಸ್ಥಿತಿಯಲ್ಲಿಡಲೂ ನೆರವಾಗುತ್ತದೆ.
ವಿಶೇಷ ಸೂಚನೆ
ಉತ್ತಮ ಪರಿಣಾಮಕ್ಕಾಗಿ ಲಿಂಬೆರಸವನ್ನು ಉಗುರುಬೆಚ್ಚನಿಯ ನೀರಿನಲ್ಲಿ ಬೆಳಿಗ್ಗೆದ್ದು ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಸಕ್ಕರೆ ಸೇರಿಸುವುದರಿಂದ ಲಿಂಬೆಯ ಗುಣಗಳು ನಾಶವಾಗುವುದರಿಂದ ಸಕ್ಕರೆ, ಉಪ್ಪು, ಬೆಲ್ಲ ಯಾವುದನ್ನೂ ಸೇರಿಸಬೇಡಿ. ಕೆಲವು ಹನಿ ಜೇನನ್ನು ಬೇಕಾದರೆ ಸೇರಿಸಬಹುದು. ಜೇನು ಸೇರಿಸಿದ ನೀರು ಕುಡಿಯುವುದರಿಂದ ದೇಹ ಲಿಂಬೆ ಮತ್ತು ಜೇನು ಎರಡರ ಪ್ರಯೋಜನವನ್ನೂ ಪಡೆಯಬಹುದು.
ಈ ನೀರನ್ನು ಕುಡಿದ ಬಳಿಕ ಮುಕ್ಕಾಲು ಗಂಟೆ ಏನನ್ನೂ ಸೇವಿಸಬೇಡಿ. ಉತ್ತಮ ಪರಿಣಾಮಕ್ಕಾಗಿ ಲಿಂಬೆರಸವನ್ನು ಸೇವಿಸಿದ ಬಳಿಕ ದೀರ್ಘ ಉಸಿರಾಟದ ಮೂಲಕ ಸಾಕಷ್ಟು ನಡೆಯಿರಿ ಅಥವಾ ಲಘು ವ್ಯಾಯಾಮ ಮಾಡಿ. ಇದರಿಂದ ದೇಹಕ್ಕೆ ಹೆಚ್ಚಿನ ಆಮ್ಲಜನಕ ದೊರಕುತ್ತದೆ ಮತ್ತು ಕೊಬ್ಬು ಹೆಚ್ಚಿನ ಪ್ರಮಾಣದಲ್ಲಿ ಕರಗಲು ನೆರವಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications












