Latest Updates
-
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ
ಲಿಂಬೆ ಹಣ್ಣು- ಹುಳಿಯಾದರೂ, ಆರೋಗ್ಯಕ್ಕೆ ಸಿಹಿ!
ನೈಸರ್ಗಿಕವಾಗಿ ದೊರೆಯುವ ತರಕಾರಿ ಹಣ್ಣುಗಳು ಒಂದಿಲ್ಲೊಂದು ವಿಸ್ಮಯಕಾರಿ ಅಂಶಗಳಿಂದ ಸಮ್ಮಿಳಿತವಾಗಿದೆ. ಬರೀ ಸಿಹಿಯಾದ ಹಣ್ಣು ಮತ್ತು ತರಕಾರಿಯಿಂದ ಮಾತ್ರ ಆರೋಗ್ಯವಲ್ಲ. ಹುಳಿ, ಒಗರು, ಕಹಿ ಇರುವ ತರಕಾರಿ ಹಣ್ಣುಗಳೂ ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಇಂತಹ ತರಕಾರಿ ಹಣ್ಣುಗಳ ದಿನನಿತ್ಯದ ಸೇವನೆಯಿಂದ ನಮಗೆ ಲಾಭವೇ ಹೆಚ್ಚು ಹೊರತು ನಷ್ಟವಲ್ಲ. ಇಂದು ನಾವು ಹೇಳಹೊರಟಿರುವ ಅಂತಹ ತರಕಾರಿ ಹಣ್ಣು ಲಿಂಬೆ ಹಣ್ಣಾಗಿದೆ. ಇದು ಸಿಹಿ ಅಂಶದಿಂದ ಕೂಡಿಲ್ಲದಿದ್ದರೂ ತನ್ನ ಚಮತ್ಕಾರಿ ಆರೋಗ್ಯ ಸುಧಾರಕ ಅಂಶಗಳಿಂದ ಶ್ರೀಮಂತವಾಗಿದೆ. ಲಿಂಬೆಯಿಂದ ಹಲವಾರು ಆರೋಗ್ಯಕಾರಿ ಪ್ರಯೋಜನಗಳಿವೆ.
ಹೌದು ಲಿ೦ಬೆಯ ಅಪರಿಮಿತ ಆರೋಗ್ಯಕಾರಿ ಪ್ರಯೋಜನಗಳ೦ತೂ ನಮ್ಮನ್ನು ದ೦ಗುಬಡಿಸುವ೦ತಹದ್ದು. ಲಿ೦ಬೆಹಣ್ಣುಗಳಲ್ಲಿ ಫ್ಲೇವನಾಯ್ಡ್ (flavonoid) ಗಳೆ೦ಬ ರಾಸಾಯನಿಕಗಳಿದ್ದು, ಅವು ಆ೦ಟಿ ಆಕ್ಸಿಡೆ೦ಟ್ ಹಾಗೂ ಕ್ಯಾನ್ಸರ್ ರೋಗದ ವಿರುದ್ಧ ಸೆಣಸಾಡುವ ಗುಣಲಕ್ಷಣಗಳನ್ನು ಹೊ೦ದಿರುವ ಘಟಕಗಳನ್ನೊಳಗೊ೦ಡಿವೆ. ಮಾತ್ರವಲ್ಲದೇ, ಲಿ೦ಬೆ ಹಣ್ಣು ಮಧುಮೇಹ, ಮಲಬದ್ಧತೆ, ಅಧಿಕ ರಕ್ತದೊತ್ತಡ, ಜ್ವರ, ಅಜೀರ್ಣತೆ, ಮತ್ತು ಇನ್ನೂ ಅನೇಕ ಇತರ ರೋಗಗಳನ್ನು ತಡೆಗಟ್ಟಲು ಸಹಕಾರಿಯಾಗಿದೆ.

ಅಷ್ಟೇ ಅಲ್ಲದೆ, ಲಿ೦ಬೆಯು ತ್ವಚೆ, ಕೂದಲು, ಹಾಗೂ ಹಲ್ಲುಗಳ ಆರೋಗ್ಯ ವರ್ಧನೆಯನ್ನು೦ಟು ಮಾಡುತ್ತದೆ. ಪ್ರತಿದಿನ ಬೆಳಿಗೆ ಖಾಲಿ ಹೊಟ್ಟೆಯಲ್ಲಿ ಲಿ೦ಬೆಯ ರಸವನ್ನು ಕುಡಿಯುವುದರಿ೦ದ ತೂಕ ನಷ್ಟವನ್ನು ಹೊ೦ದಲು ಸಹಾಯವಾಗುತ್ತದೆ. ಬನ್ನಿ ಲಿ೦ಬೆಹಣ್ಣಿನ ಆರೋಗ್ಯ ಸ೦ಬ೦ಧಿ ಪ್ರಯೋಜನಗಳ ಪೈಕಿ ಕೆಲವನ್ನು ಈ ಕೆಳಗೆ ನೀಡಲಾಗಿದೆ ಮುಂದೆ ಓದಿ.... ಲಿಂಬೆ ಹಣ್ಣಿನ ಸಿಪ್ಪೆ- ತ್ವಚೆಯ ಸರ್ವರೋಗಕ್ಕೂ ರಾಮಬಾಣ
ರಕ್ತದ ಒತ್ತಡವನ್ನು ನಿಯಂತ್ರಿಸಲು
ಲಿಂಬೆರಸವನ್ನು ನಿತ್ಯವೂ ಸೇವಿಸುವವರಲ್ಲಿ ಅಧಿಕ ರಕ್ತದೊತ್ತಡದವರು ಹತ್ತು ಶೇಖಡಕ್ಕೂ ಕಡಿಮೆಯಾಗಿರುವುದನ್ನು ಗಮನಿಸಲಾಗಿದೆ. ನಿತ್ಯವೂ ಒಂದೇ ಹೊತ್ತಿನಲ್ಲಿ, ಅಂದರೆ ಪ್ರತಿದಿನ ಬೆಳಿಗ್ಗೆ ಲಿಂಬೆರಸ ಸೇರಿಸಿದ ನೀರನ್ನು ಕುಡಿಯುತ್ತಾ ಬಂದರೆ ಕ್ರಮೇಣ ಅಧಿಕ ರಕ್ತದೊತ್ತಡ ಸಾಮಾನ್ಯ ಸ್ಥಿತಿಗೆ ಬರುತ್ತದೆ.
ವಿಟಮಿನ್ಗಳ ಆಗರ
ಲಿಂಬೆ ಎಂದರೆ ವಿಟಮಿನ್ ಸಿ, ವಿಟಮಿನ್ ಸಿ ಎಂದರೆ ಲಿಂಬೆ..! ಇದು ನಮಗೆ ಪ್ರೈಮರಿ ಸ್ಕೂಲ್ನಿಂದಲು ಗೊತ್ತಿರುವ ವಿಚಾರವೇ. ಲಿಂಬೆಯಲ್ಲಿರುವ ಸಮೃದ್ಧ ವಿಟಮಿನ್ ಸಿಯು ನಮ್ಮ ದೇಹಕ್ಕೆ ಅಗತ್ಯವಾಗಿರುವ ರೋಗ ನಿರೋಧಕ ಶಕ್ತಿಯನ್ನು ಒದಗಿಸುತ್ತದೆ. ಯಾವಾಗ ನಿಮ್ಮ ದೇಹದಲ್ಲಿ ವಿಟಮಿನ್ ಸಿ ಪ್ರಮಾಣ ಕುಸಿಯುತ್ತದೆಯೋ, ಆಗ ನಿಮ್ಮ ದೇಹದಲ್ಲಿ ರಿಪೇರಿ ಕೆಲಸವು ನಡೆಯುವುದಿಲ್ಲ. ಆದರೆ ಈ ಸಿಟ್ರಸ್ ಪಾನೀಯವನ್ನು ಸೇವಿಸಿದರೆ ಇದರಲ್ಲಿರುವ ಪೊಟಾಶಿಯಂ, ದೇಹದಲ್ಲಿರುವ ಮೆದುಳು ಮತ್ತು ನರ ವ್ಯೂಹವನ್ನು ಪ್ರಚೋದಿಸುತ್ತದೆ.
ಪೊಟಾಶಿಯಂ ನಮ್ಮ ದೇಹದಲ್ಲಿ ಫ್ರೀ ರ್ಯಾಡಿಕಲ್ಗಳನ್ನು ಕಡಿಮೆ ಮಾಡುತ್ತದೆ. ಕೆಂಪು ರಕ್ತ ಕಣಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಇದೆಲ್ಲ ಒಟ್ಟಾರೆಯಾಗಿ ಏನನ್ನು ಹೇಳುತ್ತವೆ? ಹೆಚ್ಚು ಶಕ್ತಿ, ಸ್ವಚ್ಛ ತ್ಚಚೆ, ವಯಸ್ಸಾದಂತೆ ತೋರುವುದನ್ನು ತಡೆಯುತ್ತದೆ, ರೋಗ ನಿರೋಧಕ ಶಕ್ತಿ, ಒತ್ತಡ ಕಡಿಮೆ ಮಾಡುತ್ತದೆ, ಹಾಗೂ ಹೆಚ್ಚು ಏಕಾಗ್ರತೆಯನು ನೀಡುತ್ತದೆ
ಕಿಡ್ನಿಯಲ್ಲಿನ ಕಲ್ಲು ನಿವಾರಣೆಗೆ
ಮೂತ್ರಪಿಂಡದಲ್ಲಿ ಕಲ್ಲುಂಟಾಗಿದ್ದರೆ ನಿತ್ಯವೂ ಮುಂಜಾನೆ ಕೊಂಚವೇ ಬಿಸಿ ಇರುವ ನೀರಿನಲ್ಲಿ ಲಿಂಬೆಯೊಂದರ ರಸ ಹಾಕಿ ಪ್ರಥಮ ಆಹಾರವಾಗಿ ಸೇವಿಸುವ ಮೂಲಕ ಈ ಕಲ್ಲು ನಿಧಾನವಾಗಿ ಕರಗುತ್ತಾ ಹೋಗುತ್ತದೆ. ಜೊತೆಗೇ ಮೇದೋಜೀರಕ ಗ್ರಂಥಿಯ ಕಲ್ಲು, ಪಿತ್ತಕೋಶದ ಕಲ್ಲುಗಳು ಮತ್ತು ಕ್ಯಾಲ್ಸಿಯಂ ಘನೀಕರಿಸಿದ್ದರೆ ಅವೂ ಕರಗಿ ನೀರಾಗಿ ಹೊರಹರಿದು ಹೋಗುತ್ತವೆ.
ಬಾಯಿಯ ದುರ್ವಾಸನೆ ನಿವಾರಿಸುತ್ತದೆ
ಲಿಂಬೆರಸದ ಸೇವೆನೆಯಿಂದ ಬಾಯಿಯಲ್ಲಿ ದುರ್ವಾಸನೆಯಾಗುವುದು ಕಡಿಮೆಯಾಗುತ್ತದೆ ಹಾಗೂ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಶೀಘ್ರವೇ ಶಮನಹೊಂದಲೂ ನೆರವಾಗುತ್ತದೆ ಲಿಂಬೆ ಹಣ್ಣು: ಮೂರ್ತಿ ಚಿಕ್ಕದಾದರೂ, ಕೀರ್ತಿ ದೊಡ್ಡದು
ತೂಕ ಇಳಿಕೆಯಲ್ಲಿ ಎತ್ತಿದ ಕೈ
ನಿಮ್ಮ ದೇಹವು ನಿಯಂತ್ರಣಕ್ಕೆ ಸಿಗದೆ ತೂಕ ಏರಿಸಿಕೊಂಡು ಹೋಗುತ್ತಿರುವಾಗ ಅದರ ಕುರಿತು ಚಿಂತೆ ಮಾಡಬೇಡಿ. ನಿಮ್ಮ ತೂಕವನ್ನು ನಿಯಂತ್ರಣಕ್ಕೆ ತರಲು ಒಂದು ಸುಲಭವಾದ ಮಾರ್ಗೋಪಾಯವಿದೆ. ಅದುವೇ ಲಿಂಬೆ ಹಾಗೂ ಜೇನು ಬೆರೆಸಿದ ನೀರು...ಹೌದು ನೀವು ಮಾಡಬೇಕಾದದು ಇಷ್ಟೇ ದಿನಾಲೂ ಬೆಳಗ್ಗೆ, ನೀವು ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರಿನಲ್ಲಿ ಲಿ೦ಬೆಯ ರಸದೊ೦ದಿಗೆ ಜೇನು ತುಪ್ಪವನ್ನೂ ಸಹ ಸೇರಿಸಿ ಸೇವಿಸಿದರೆ, ಶೀಘ್ರವಾಗಿ ತೂಕನಷ್ಟವನ್ನು ಹೊ೦ದಲು ಸಹಾಯಕವಾಗುತ್ತದೆ.
ಭೇದಿಗೆ ರಾಮಬಾಣ
ಲಿ೦ಬೆ ಹಣ್ಣಿನ ಅತ್ಯುತ್ತಮವಾದ ಆರೋಗ್ಯ ಸ೦ಬ೦ಧೀ ಪ್ರಯೋಜನವೇನೆ೦ದರೆ, ಅದು ಸಣ್ಣಕರುಳುಗಳಲ್ಲಿರುವ ಜ೦ತು ಅಥವಾ ಹುಳುಗಳನ್ನು ನಿವಾರಿಸುತ್ತದೆ. ಮಕ್ಕಳನ್ನು ಪದೇ ಪದೇ ಬಾಧಿಸುವ ಭೇದಿ ಹಾಗೂ ಇತರ ಉದರ ಸ೦ಬ೦ಧೀ ತೊ೦ದರೆಗಳನ್ನು ನಿವಾರಿಸುವ ಅತ್ಯುತ್ತಮ ಮಾರ್ಗವೆ೦ದರೆ ಅವರಿಗೆ ಲಿ೦ಬೆರಸ ಬೆರೆಸಿದ ನೀರನ್ನು ನೀಡುವುದು.
ಸಲಹೆ
*ಉತ್ತಮ ಪರಿಣಾಮಕ್ಕಾಗಿ ಲಿಂಬೆರಸವನ್ನು ಉಗುರುಬೆಚ್ಚನಿಯ ನೀರಿನಲ್ಲಿ ಬೆಳಿಗ್ಗೆದ್ದು ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಸಕ್ಕರೆ ಸೇರಿಸುವುದರಿಂದ ಲಿಂಬೆಯ ಗುಣಗಳು ನಾಶವಾಗುವುದರಿಂದ ಸಕ್ಕರೆ, ಉಪ್ಪು, ಬೆಲ್ಲ ಯಾವುದನ್ನೂ ಸೇರಿಸಬೇಡಿ. ಕೆಲವು ಹನಿ ಜೇನನ್ನು ಬೇಕಾದರೆ ಸೇರಿಸಬಹುದು.
*ಜೇನು ಸೇರಿಸಿದ ನೀರು ಕುಡಿಯುವುದರಿಂದ ದೇಹ ಲಿಂಬೆ ಮತ್ತು ಜೇನು ಎರಡರ ಪ್ರಯೋಜನವನ್ನೂ ಪಡೆಯಬಹುದು. ಈ ನೀರನ್ನು ಕುಡಿದ ಬಳಿಕ ಮುಕ್ಕಾಲು ಗಂಟೆ ಏನನ್ನೂ ಸೇವಿಸಬೇಡಿ.
*ಉತ್ತಮ ಪರಿಣಾಮಕ್ಕಾಗಿ ಲಿಂಬೆರಸವನ್ನು ಸೇವಿಸಿದ ಬಳಿಕ ದೀರ್ಘ ಉಸಿರಾಟದ ಮೂಲಕ ಸಾಕಷ್ಟು ನಡೆಯಿರಿ ಅಥವಾ ಲಘು ವ್ಯಾಯಾಮ ಮಾಡಿ. ಇದರಿಂದ ದೇಹಕ್ಕೆ ಹೆಚ್ಚಿನ ಆಮ್ಲಜನಕ ದೊರಕುತ್ತದೆ ಮತ್ತು ಕೊಬ್ಬು ಹೆಚ್ಚಿನ ಪ್ರಮಾಣದಲ್ಲಿ ಕರಗಲು ನೆರವಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications













