Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಉರಿಬಿಸಿಲಿನ ದಾಹವನ್ನು ತಣಿಸುವ ಟಾಪ್ ಹಣ್ಣುಗಳು
ಬೇಸಿಗೆಯಲ್ಲಿ ನಾವು ಬಹುತೇಕ ಮಂದಿ ಗಿರಿಧಾಮಗಳು, ಬೀಚ್ಗಳು, ಪೂಲ್ ಪಕ್ಕದ ಸ್ಥಳಗಳು ಮುಂತಾದ ಕಡೆಗಳಲ್ಲಿ ಇರಲು ಬಯಸುತ್ತೇವೆ. ಯಾವಾಗ ಉಷ್ಣಾಂಶವು ತನ್ನ ವಿರಾಟ್ ವಿಶ್ವರೂಪ ದರ್ಶನವನ್ನು ನಮ್ಮ ಮುಂದೆ ತೋರಿಸುತ್ತದೋ, ಆಗ ನಮ್ಮ ದೇಹದಲ್ಲಿ ನಿರ್ಜಲೀಕರಣ ಸಮಸ್ಯೆ ತಲೆದೋರುತ್ತದೆ. ಇದನ್ನು ನಿವಾರಿಸಲು ನಾವು ನೀರಿನಂಶ ಇರುವ ಆಹಾರ ಪದಾರ್ಥಗಳನ್ನೆ ಹೆಚ್ಚಾಗಿ ಸೇವಿಸುತ್ತೇವೆ.
ನಿರ್ಜಲೀಕರಣ ಅಥವಾ ಡಿಹೈಡ್ರೇಷನ್ ಸಮಸ್ಯೆಯು ಮೂತ್ರಪಿಂಡಗಳಲ್ಲಿ ಕಲ್ಲುಗಳನ್ನು ಉಂಟು ಮಾಡುವ ಮೂಲ ಸಮಸ್ಯೆಗಳಲ್ಲಿ ಒಂದಾಗಿದೆ. ಆದ್ದರಿಂದ ಉರಿಯುವ ಸೂರ್ಯನ ಕೆಳಗೆ ಓಡಾಡುವಾಗ ನಾವು ನಿರ್ಜಲೀಕರಣ ಸಮಸ್ಯೆಗೆ ತುತ್ತಾಗದಂತೆ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕು. ನಮ್ಮ ದೇಹಕ್ಕೆ ಅಗತ್ಯವಾದ ಖನಿಜಾಂಶ, ವಿಟಮಿನ್ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಅದಕ್ಕಾಗಿಯೇ ಬೇಸಿಗೆಯಲ್ಲಿ ಈ ಅಂಶಗಳನ್ನು ಒದಗಿಸುವ ಆಹಾರ ಪದಾರ್ಥಗಳನ್ನು ನಾವು ಸೇವಿಸುತ್ತೇವೆ. ಬನ್ನಿ ನಿಮಗಾಗಿ ನಾವು ಇಂದು ಬೇಸಿಗೆಯಲ್ಲಿ ಸೇವಿಸಬಹುದಾದ ಟಾಪ್ ಆಹಾರಗಳು ಯಾವುವು ಎಂದು ತಿಳಿಸಿಕೊಡಲಿದ್ದೇವೆ.

ಕಲ್ಲಂಗಡಿ
ಇದು ಬೇಸಿಗೆಯಲ್ಲಿ ಸೇವಿಸಲು ಇರುವ ಅತ್ಯುತ್ತಮ ಆಹಾರಗಳ ಪೈಕಿ ಮೊದಲನೆಯದು. ಇದು ನಿಮ್ಮ ದೇಹಕ್ಕೆ ಅಗತ್ಯವಾದ ನೀರಿನಂಶವನ್ನು ಒದಗಿಸುತ್ತದೆ. ಅಧಿಕ ನೀರಿನ ಅಂಶವಿರುವ ಕಲ್ಲಂಗಡಿಯನ್ನು ನೀವು ಸೇವಿಸಿದರೆ, ನಿಮ್ಮ ದೇಹಕ್ಕೆ ಅಗತ್ಯ ನೀರಿನಂಶದ ಜೊತೆಗೆ ಆಹ್ಲಾದಕತೆಯು ಸಹ ಸಿಗುತ್ತದೆ. ಆಹಾ...! ಕ್ಯಾಬೇಜ್ ಜ್ಯೂಸ್ನ ಪ್ರಯೋಜನಗಳು ಒ೦ದೇ, ಎರಡೇ..?
ಸ್ಟ್ರಾಬೆರ್ರಿ
ಸ್ಟ್ರಾಬೆರ್ರಿಯು ನಿಮ್ಮ ದೇಹಕ್ಕೆ ಹೆಚ್ಚಿನ ನೀರಿನಂಶವನ್ನು ಒದಗಿಸುತ್ತದೆ ಮತ್ತು ಇದರಲ್ಲಿರುವ ಆಂಟಿ ಆಕ್ಸಿಡೆಂಟ್ಗಳು ನಿಮ್ಮ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಸಹ ಒದಗಿಸುತ್ತದೆ. ಇದು ನಿಮಗೆ ಉಷ್ಣಾಂಶವನ್ನು ತಡೆಯುವ ಶಕ್ತಿಯನ್ನು ಒದಗಿಸುವ ಜೊತೆಗೆ, ನಿಮ್ಮ ತ್ವಚೆಗೆ ನೀರಿನಂಶ ಕಡಿಮೆಯಾಗದಂತೆ ನೋಡಿಕೊಳ್ಳುತ್ತದೆ.
ಪೀಚ್ಗಳು
ಪೀಚ್ಗಳು ಮೃದುವಾದ ಮತ್ತು ಸಿಹಿಯಾದ ನೀರಿನಂಶವಿರುವ ಸಿಹಿ ಹಣ್ಣುಗಳಾಗಿದ್ದು, ಇದರಲ್ಲಿ ವಿಟಮಿನ್ ಎ ಮತ್ತು ಪೊಟಾಶಿಯಂ ಅಧಿಕ ಪ್ರಮಾಣದಲ್ಲಿರುತ್ತದೆ. ಇದು ಬೇಸಿಗೆಯಲ್ಲಿ ಸೇವಿಸಬಹುದಾದ ಅತ್ಯುತ್ತಮ ಆಹಾರ ಪದಾರ್ಥಗಳ ಪೈಕಿ ಒಂದಾಗಿದೆ. ಇದು ನಿರ್ಜಲೀಕರಣವನ್ನು ತಡೆಯುತ್ತದೆ ಮತ್ತು ತ್ವಚೆಯ ಬಣ್ಣವನ್ನು ಹೆಚ್ಚಿಸುತ್ತದೆ.
ಅನಾನಸ್
ಈ ಋತುವಿನಲ್ಲಿ ನಮಗೆ ದೊರೆಯುವ ಹಣ್ಣುಗಳಲ್ಲಿ ಅನಾನಸ್ ಸಹ ಒಂದು. ಇದರಲ್ಲಿ ವಿಟಮಿನ್ಗಳು, ಆಂಟಿ ಆಕ್ಸಿಡೆಂಟ್ಗಳು ಮತ್ತು ಉಪಯೋಗಕಾರಿ ಕಿಣ್ವಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇವುಗಳು ನಿಮ್ಮ ದೇಹದಲ್ಲಿ ಉರಿಯೂತಗಳು ಬರದಂತೆ ತಡೆಯುತ್ತವೆ. ಈ ರಸದಿಂದ ಕೂಡಿದ, ರುಚಿಕರವಾದ ಹಣ್ಣು ನಿಮ್ಮ ದೇಹದಲ್ಲಿ ನೀರಿನಂಶವನ್ನು ಕಾಪಾಡಲು ಖಂಡಿತ ನೆರವಾಗುತ್ತದೆ. ಬೇಸಿಗೆಯ ಕಾಲದಲ್ಲಿ ದೇಹವನ್ನು ತಂಪಾಗಿಸುವ ಹಣ್ಣುಗಳು
ಕಿತ್ತಳೆ
ಕಿತ್ತಳೆಯಲ್ಲಿ ಪೊಟಾಶಿಯಂ ಅಧಿಕ ಪ್ರಮಾಣದಲ್ಲಿರುತ್ತದೆ. ಇದು ನಿಮ್ಮ ದೇಹವನ್ನು ಉಳುಕುಗಳಿಂದ ರಕ್ಷಿಸುತ್ತದೆ. ಇದರಲ್ಲಿ ಸುಮಾರು 80% ನೀರಿನಂಶವಿರುತ್ತದೆ. ಇದು ಖಂಡಿತ ನಿಮ್ಮ ದೇಹಕ್ಕೆ ನೀರಿನಂಶವನ್ನು ಒದಗಿಸುತ್ತದೆ. ಬೇಸಿಗೆಯಲ್ಲಿ ವರ್ಕ್ಔಟ್ ಮಾಡುವಾಗ ಇದನ್ನು ಸೇವಿಸುವುದರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications