Just In
- 1 hr ago ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- 1 hr ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 4 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 4 hrs ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
Don't Miss
- News Rain Alert: ಮಳೆ.. ಮಳೆ.. ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಗ್ಯಾರಂಟಿ!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಳೆಹಣ್ಣಿನ ಸಿಪ್ಪೆಯ ಪವರ್ಗೆ 'ತಲೆನೋವು' ಮಂಗಮಾಯ!
ಪ್ರತೀ ಸಲ ತಲೆನೋವು ಕಾಣಿಸಿಕೊಂಡಾಗ ಮಾತ್ರೆ ತೆಗೆದುಕೊಳ್ಳುವುದು ದೇಹಕ್ಕೆ ಒಳ್ಳೆಯದಲ್ಲ. ತಲೆನೋವು ಬಂದಾಗ ಮನೆಮದ್ದನ್ನು ಬಳಸಿದರೆ ಯಾವುದೇ ಅಡ್ಡಪರಿಣಾಮಗಳಿಲ್ಲ. ತಲೆನೋವನ್ನು ನಿವಾರಣೆಗೆ ಬಾಳೆಹಣ್ಣಿನ ಸಿಪ್ಪೆಯ ಔಷಧಿಯನ್ನು ಬಳಸಬಹುದು.
ದೈನಂದಿನ ಚಟುವಟಿಕೆಗಳು ಸರಾಗವಾಗಿ ಸಾಗಬೇಕಾದರೆ ದೇಹದ ಪ್ರತಿಯೊಂದು ಅಂಗಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕಾಗಿದೆ. ದೇಹದ ಯಾವುದೇ ಅಂಗದಲ್ಲಿ ನೋವು ಕಾಣಿಸಿಕೊಂಡರೆ ಕೆಲಸ ಮಾಡಲು ಆಸಕ್ತಿಯೇ ಇರುವುದಿಲ್ಲ. ಅದರಲ್ಲೂ ತಲೆನೋವು ಕಾಣಿಸಿಕೊಂಡರೆ ಊಟತಿಂಡಿ ಏನೂ ಬೇಡ ಎನ್ನುವಂತೆ ಆಗುತ್ತದೆ. ತಲೆನೋವು ಕಾಣಿಸಿಕೊಂಡಾಗ ತಕ್ಷಣಗೆ ಹೋಗಿ ಮೆಡಿಕಲ್ ನಿಂದ ಮಾತ್ರೆ ತಂದು ನುಂಗುತ್ತೇವೆ. ಬಾಳೆಹಣ್ಣಿನ ಸಿಪ್ಪೆಯ ಚಮತ್ಕಾರಿಕ ಪ್ರಯೋಜನ ಅರಿಯಿರಿ!
ಆದರೆ ಪ್ರತೀ ಸಲ ತಲೆನೋವು ಕಾಣಿಸಿಕೊಂಡಾಗ ಮಾತ್ರೆ ತೆಗೆದುಕೊಳ್ಳುವುದು ದೇಹಕ್ಕೆ ಒಳ್ಳೆಯದಲ್ಲ. ಇದಕ್ಕಾಗಿ ತಲೆನೋವು ಬಂದಾಗ ಮನೆಮದ್ದನ್ನು ಬಳಸಿದರೆ ಅದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಉಂಟಾಗಲ್ಲ. ತಲೆನೋವನ್ನು ನಿವಾರಣೆ ಮಾಡಬೇಕಾದರೆ ಬಾಳೆಹಣ್ಣಿನ ಸಿಪ್ಪೆಯ ಔಷಧಿಯನ್ನು ಬಳಸಬಹುದು. ಇದನ್ನು ಯಾವ ರೀತಿ ಬಳಸಿದರೆ ತಲೆನೋವು ನಿವಾರಣೆ ಆಗಬಹುದು ಎಂದು ಈ ಲೇಖನದ ಮೂಲಕ ತಿಳಿಯಿರಿ. ತಲೆನೋವು ಓಡಿಸುವ ಮನೆ ಮದ್ದು: ಪ್ರಯತ್ನಿಸಿ ನೋಡಿ
ಬೇಕಾಗುವ ಸಾಮಗ್ರಿಗಳು
*ಒಂದು ಬಾಳೆಹಣ್ಣಿನ ಸಿಪ್ಪೆ
*ನೀಲಗಿರಿ ಎಣ್ಣೆ- ಕೆಲವು ಹನಿ
ಬೇಕಾಗುವ ಸಾಮಗ್ರಿಗಳು
ತಲೆನೋವನ್ನು ನಿವಾರಣೆ ಮಾಡಲು ಈ ಮನೆಮದ್ದು ಹೇಳಿಮಾಡಿಸಿದಂತಿದೆ. ಒತ್ತಡ, ನಿಶ್ಯಕ್ತಿ ಮತ್ತು ಸೈನಸ್ ನಿಂದ ಬರುವಂತಹ ತಲೆನೋವಿಗೆ ಇದು ರಾಮಬಾಣ. ಈ ಮದ್ದಿನಿಂದ ತಲೆನೋವು ನಿವಾರಣೆ ಆಗದೆ ಇದ್ದಾಗ ವೈದ್ಯರನ್ನು ಭೇಟಿಯಾಗಿ ಸಲಹೆ ಪಡೆಯಿರಿ. ಯಾಕೆಂದರೆ ಇದು ಬೇರೆ ಯಾವುದೋ ಆರೋಗ್ಯ ಸಮಸ್ಯೆಯ ಲಕ್ಷಣವಾಗಿರಬಹುದು.
ಬಾಳೆಹಣ್ಣಿನ ಸಿಪ್ಪೆ
ಬಾಳೆಹಣ್ಣಿನ ಸಿಪ್ಪೆಯಲ್ಲಿ ನೈಸರ್ಗಿಕವಾಗಿ ತಂಪು ಪ್ರಭಾವ ಬೀರುವಂತಹ ಗುಣಗಳು ಇವೆ. ಇದರಲ್ಲಿ ಪೊಟಾಶಿಯಂ ಅಂಶವು ಅಡಗಿರುವುದರಿಂದ ತಲೆಯ ಭಾಗದಲ್ಲಿ ಉಂಟಾಗಿರುವಂತಹ ಉರಿಯೂತವನ್ನು ಶಮನ ಮಾಡುತ್ತದೆ. ಇದರಿಂದ ತಲೆನೋವು ಕಡಿಮೆಯಾಗುವುದು.
ನೀಲಗಿರಿ ಎಣ್ಣೆ
ನೀಲಗಿರಿ ಎಣ್ಣೆಯಲ್ಲಿ ಕೂಡ ಉರಿಯೂತ ಶಮನಕಾರಿ ಗುಣಗಳು ಇರುವುದರಿಂದ ಇದು ನೋವನ್ನು ನಿವಾರಿಸಿ ನರಗಳನ್ನು ಶಮನಗೊಳಿಸುತ್ತದೆ.
ಈ ಮನೆಮದ್ದನ್ನು ಬಳಸುವ ವಿಧಾನ
ಹಣೆಯ ಭಾಗಕ್ಕೆ ಕೆಲವು ಹನಿ ನೀಲಗಿರಿ ಎಣ್ಣೆಯನ್ನು ಹಚ್ಚಿಕೊಳ್ಳಿ. ಈ ಭಾಗಕ್ಕೆ ಬಾಳೆಹಣ್ಣಿನ ಸಿಪ್ಪೆಯನ್ನು ಇಡಿ.
ಈ ಮನೆಮದ್ದನ್ನು ಬಳಸುವ ವಿಧಾನ
ಬಾಳೆಹಣ್ಣಿನ ಸಿಪ್ಪೆಯ ಒಳಭಾಗವು ಹಣೆಗೆ ತಾಗುತ್ತಿರಬೇಕು. 20-30 ನಿಮಿಷ ಕಾಲ ಹಾಗೆ ಬಿಡಿ.
ಈ ಮನೆಮದ್ದನ್ನು ಬಳಸುವ ವಿಧಾನ
ಮಲಗಿಕೊಂಡು ನಿಧಾನವಾಗಿ 30 ನಿಮಿಷ ಕಾಲ ಉಸಿರಾಡಿ. ಈ ಮನೆಮದ್ದನ್ನು ಪ್ರಯತ್ನಿಸಿ ನೋಡಿ ಅದರ ಫಲಿತಾಂಶ ಹೇಗಿತ್ತು ಎಂದು ನಮಗೆ ತಿಳಿಸಿ.