Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಏಕಾಗ್ರತೆ-ಜ್ಞಾಪಕಶಕ್ತಿ ಹೆಚ್ಚಿಸುವ ಆಕ್ಯುಪ್ರೆಷರ್ ಚಿಕಿತ್ಸೆ
ಆಕ್ಯುಪ್ರೆಷರ್ ಚಿಕಿತ್ಸೆ ಇಂದು ವಿಶ್ವದೆಲ್ಲೆಡೆ ಪ್ರಸಿದ್ಧಿಯನ್ನು ಪಡೆದುಕೊಂಡು ದೇಹದಲ್ಲಿನ ಕೆಲವೊಂದು ನೋವುಗಳನ್ನು ನಿವಾರಣೆ ಮಾಡಲು ಹಾಗೂ ರೋಗಗಳನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ.
ದೇಹದಲ್ಲಿನ ಒಂದು ಭಾಗವನ್ನು ಕೇಂದ್ರವಾಗಿರಿಸಿಕೊಂಡು ಅದರ ಮೇಲೆ ಒತ್ತಡ ಹಾಕಿದಾಗ ರಕ್ತ ಪರಿಚಲನೆ ಸರಾಗವಾಗಿ, ನೋವು ನಿವಾರಣೆಯಾಗುತ್ತದೆ. ಅದರಲ್ಲೂ ಆಕ್ಯುಪಂಕ್ಚರ್ನಲ್ಲಿ ಸೂಜಿಗಳನ್ನು ಬಳಸಿಕೊಂಡು ಚಿಕಿತ್ಸೆ ನೀಡಲಾಗುತ್ತದೆ. ಆದರೆ ಆಕ್ಯುಪ್ರೆಷರ್ನಲ್ಲಿ ಕೈಬೆರಳಿನಲ್ಲೇ ಒತ್ತಡ ಹಾಕಿ ಚಿಕಿತ್ಸೆ ಮಾಡಲಾಗುವುದು.

ಆಕ್ಯುಪಂಕ್ಚರ್ಗೆ ಹೋಲಿಸಿದರೆ ಆಕ್ಯುಪ್ರೆಷರ್ನಲ್ಲಿ ನೋವು ತುಂಬಾ ಕಡಿಮೆ. ಈ ಚಿಕಿತ್ಸೆಯು ಮಾನವ ದೇಹವು ತನಗೆ ತಾನೇ ಚಿಕಿತ್ಸೆ ಮಾಡಿಕೊಳ್ಳಬಲ್ಲದು ಎನ್ನುವುದನ್ನು ತಿಳಿಸಿಕೊಡುತ್ತದೆ. ದೇಹವು ಯಾವುದೇ ಔಷಧಿ ಅಥವಾ ಮದ್ದಿನ ನೆರವಿಲ್ಲದೆ ಸುಧಾರಿಸಿಕೊಳ್ಳಬಲ್ಲದು. ಇದು ಶತಮಾನಗಳಿಂದ ಪಾಲಿಸಿಕೊಂಡು ಬಂದಿರುವಂತಹ ಚಿಕಿತ್ಸಾ ಪದ್ಧತಿಯಾಗಿದೆ. ಏಕಾಗ್ರತೆಯನ್ನು ಹೆಚ್ಚಿಸಲು 20 ಮಾರ್ಗಗಳು
ಇದರಿಂದ ದೇಹಕ್ಕೆ ಯಾವುದೇ ಅಡ್ಡಪರಿಣಾಮಗಳು ಉಂಟಾಗುವುದಿಲ್ಲ. ಈ ಲೇಖನದಲ್ಲಿ ಎರಡು ಆಕ್ಯುಪ್ರೆಷರ್ ಬಿಂದುಗಳನ್ನು ತಿಳಿಸಿಕೊಡಲಾಗುವುದು. ಇದರಿಂದ ನಿಮ್ಮ ಏಕಾಗ್ರತೆ ಹಾಗೂ ನೆನಪಿನ ಶಕ್ತಿ ಹೆಚ್ಚಾಗುವುದು. ಒತ್ತಡ ಹಾಕಬೇಕಾದ ಬಿಂದುಗಳು ಎಲ್ಲಿದೆ ಎಂದು ತಿಳಿದುಕೊಳ್ಳಲು ಮುಂದಕ್ಕೆ ಓದಿ ಮತ್ತು ನಿಮ್ಮ ಚಿಕಿತ್ಸೆ ಮಾಡಿಕೊಳ್ಳಿ.
ದೊಡ್ಡ ಗಮನದ ಬಿಂದು
ದೊಡ್ಡ ಗಮನ ಬಿಂದು ಹೆಬ್ಬೆರಳು ಮತ್ತು ಎರಡನೇ ಬೆರಳನ್ನು ಸಂಧಿಸುವ ಎಲುಬು ಜೋಡಿಸಲ್ಪಟ್ಟಿರುವ ಸ್ಥಳ. ಈ ಸ್ಥಳದಲ್ಲಿ ನಿಮ್ಮ ಬೆರಳನ್ನಿಟ್ಟು 3-4 ನಿಮಿಷ ಒತ್ತಡ ಹಾಕಬೇಕು. ಇದರ ಬಳಿಕ ಬೆರಳನ್ನು ತೆಗೆಯಿರಿ.
ದಿನದಲ್ಲಿ ಮೂರರಿಂದ ನಾಲ್ಕು ಸಲ ಹೀಗೆ ಮಾಡಿ. ನಿಯಮಿತವಾಗಿ ಇದನ್ನು ಮಾಡುವುದರಿಂದ ನಿಮ್ಮ ಏಕಾಗ್ರತೆ ಮತ್ತು ಯಾವುದೇ ವಿಷಯವನ್ನು ತಿಳಿದುಕೊಳ್ಳುವ ಸಾಮರ್ಥ್ಯ ಹೆಚ್ಚಾಗುವುದು. ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವ 18 ಅದ್ಭುತ ಆಹಾರಗಳು
ಸೂರ್ಯನ ಬಿಂದು
ನಿಮ್ಮ ಹುಬ್ಬಿನಿಂದ ಕೆಲವೇ ಇಂಚಿನ ದೂರದಲ್ಲಿ ಈ ಎರಡನೇ ಬಿಂದುವನ್ನು ನೀವು ಗುರುತಿಸಬಹುದು. ಎರಡನೇ ಬಿಂದುವಿನ ಮೇಲೆ 3 ನಿಮಿಷಗಳ ಕಾಲ ಒತ್ತಡ ಹಾಕಿ. ಈ ಪ್ರಕ್ರಿಯೆಯನ್ನು ದಿನದಲ್ಲಿ ನಾಲ್ಕರಿಂದ ಐದು ಸಲ ಮಾಡಿ.
ಇದರಿಂದ ನಿಮ್ಮ ಏಕಾಗ್ರತೆ ಹೆಚ್ಚಾಗುವುದು ಮಾತ್ರವಲ್ಲದೆ, ಮನಸ್ಸು ಹಾಗೂ ದೇಹವನ್ನು ಒತ್ತಡದಿಂದ ಮುಕ್ತವಾಗಿಸುತ್ತದೆ.
ಸೂಚನೆ: ಕ್ರಮಬದ್ಧವಾಗಿ ಮತ್ತು ನಿಯಮಿತವಾಗಿ ಮಾಡಿದರೆ ನಿಮಗೆ ಕೆಲವೇ ದಿನಗಳಲ್ಲಿ ಇದರ ಫಲಿತಾಂಶ ಕಂಡುಬರುತ್ತದೆ. ಜ್ಞಾಪಕ ಶಕ್ತಿ ಹೆಚ್ಚಿಸಿಕೊಳ್ಳಲು, ಇದೋ ಇಲ್ಲಿದೆ ಸರಳ ಟ್ರಿಕ್ಸ್...
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


