Latest Updates
-
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ!
ಮನೆ ಮದ್ದು: ಕರಿಬೇವು ಎಂಬ ಆರೋಗ್ಯ ಸಂಜೀವಿನಿ...
ಸಿಹಿ ಕಹಿಯನ್ನು ಸಮನಾಗಿ ಸ್ವೀಕರಿಸುವ ಮೂಲಕ ಯುಗಾದಿಯನ್ನು ಸ್ವಾಗತಿಸುವ ನಮಗೆ ಕಹಿಯ ರೂಪದಲ್ಲಿ ಕರಿಬೇವಿನ ಎಲೆ ಅತಿ ಪವಿತ್ರವಾಗಿದೆ. ಕರಿಬೇವು ಅಪ್ಪಟ ಭಾರತದ ಮೂಲದ್ದೆಂದು ಹಲವು ಪುರಾಣಗಳಲ್ಲಿ ಪ್ರಸ್ತಾಪಿಸಲಾಗಿದೆ. ಆ ಕಾಲದಿಂದಲೂ ಕರಿಬೇವು ನಮ್ಮ ಪೂರ್ವಜರ ಅಡುಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಇಂದಿಗೂ ನಮ್ಮ ಅಡುಗೆಗಳಲ್ಲಿ 'ಒಗ್ಗರಣೆ' ಯಿಂದ ಮುಗಿಯದ ಅಡುಗೆಗೆ ರುಚಿಯೇ ಇರುವುದಿಲ್ಲ.

ಕರಿಬೇವು ಸೊಪ್ಪು ಮೂಲತಃ ಒಂದು ಗಿಡಮೂಲಿಕೆ, ಇದು ತನ್ನ ಜೀರ್ಣ ಕ್ರಿಯೆಯನ್ನು ಸುಧಾರಿಸುವ ಸಾಮರ್ಥ್ಯಕ್ಕೆ ಹೆಸರುವಾಸಿ. ಅಯುರ್ವೇದದ ಪ್ರಕಾರ ಕಡಿಪತ್ತಾ ಎಂದು ಕರೆಯಲ್ಪಡುವ ಇದನ್ನು ದೇಹದಲ್ಲಿರುವ ಟಾಕ್ಸಿಕ್ ಅಂಶಗಳನ್ನು ಹೊರ ಹಾಕಲು ಬಳಸಲಾಗುತ್ತದೆ. ಜೊತೆಗೆ ಇದು ನಿಮ್ಮ ದೇಹದಲ್ಲಿರುವ ಪಿತ್ತವನ್ನು ಕಡಿಮೆ ಮಾಡಲು ಸಹಕರಿಸುತ್ತದೆ. ಬನ್ನಿ ಇದರ ಇನ್ನಷ್ಟು ಪ್ರಯೋಜನಗಳ ಬಗ್ಗೆ ತಿಳಿಯೋಣ... ಕರಿಬೇವಿನ ಸೊಪ್ಪಿನಿ೦ದ ಏನೆಲ್ಲಾ ಪ್ರಯೋಜನಗಳಿವೆ ನೋಡಿ?
ಅಜೀರ್ಣ ಸಮಸ್ಯೆಯಿದ್ದರೆ
1-2 ಟೀ ಚಮಚದಷ್ಟು ಎಲೆಯ ರಸವನ್ನು, 1ಟೀ ಚಮಚ ಲಿಂಬೆಬೆರಸವನ್ನು ಮತ್ತು ಸಕ್ಕರೆಯನ್ನು ಬೆರೆಸಿ ಸೇವಿಸುವುದರಿಂದ ಅಜೀರ್ಣ, ಅತಿಯಾಗಿ ಜಿಡ್ಡು ಪದಾರ್ಥ ಸೇವನೆಯಿಂದುಂಟಾದ ತೊಂದರೆಗಳನ್ನು ನಿವಾರಿಸಬಹುದು.
ಕಿಡ್ನಿಯ ಕಲ್ಲಿನ ಸಮಸ್ಯೆಗೆ
ಕರಿಬೇವಿನ ಎಲೆಗಳನ್ನು ಮಿಕ್ಸಿಯಲ್ಲಿ ಗೊಟಾಯಿಸಿ ಮಾಡಿದ ಜ್ಯೂಸ್ ಕುಡಿಯುವ ಮೂಲಕ ಉತ್ತಮ ಪರಿಹಾರ ದೊರಕುತ್ತದೆ.
ವಾಂತಿಯ ತೊಂದರೆಯಿದ್ದರೆ
ಸಾಮಾನ್ಯವಾಗಿ ಕೆಲವರಿಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ, ಅಥವಾ ಬೆಳಗಿನ ಜಾವ ಎದ್ದಾಕ್ಷಣ ವಾಕರಿಕೆ, ಅಥವಾ ವಾಂತಿಯ ತೊಂದರೆ ಕಂಡುಬರುತ್ತದೆ. ಇಂತಹ ಸಮಸ್ಯೆ ಎದುರಿಸುವವರು ಪ್ರತಿ ದಿನ ಕರಿಬೇವಿನ ಎಲೆಗಳನ್ನು ಅರೆದು ತಯಾರಿಸಿದ ಮಿಶ್ರಣವನ್ನು ನೀರಿನಲ್ಲಿ ಸೇರಿಸಿ ಕುಡಿದರೆ ಉತ್ತಮ ಪರಿಣಾಮ ದೊರಕುತ್ತದೆ
ಮಜ್ಜಿಗೆ ಜೊತೆ ಜಜ್ಜಿದ ಕರಿಬೇವು ಸೊಪ್ಪು
ಪ್ರತಿದಿನ 2-3 ಬಾರಿ ಸೇವಿಸಿದರೆ, ಆರೋಗ್ಯಕ್ಕೆ ಉತ್ತಮ. ಒಂದು ವೇಳೆ ನಿಮ್ಮ ಕುಟುಂಬದ ಸದಸ್ಯರಿಗೆ ಕರಿಬೇವು ಸೊಪ್ಪು ಇಷ್ಟವಾಗದಿದ್ದಲ್ಲಿ, ನೀವು ಕರಿಬೇವನ್ನು ರುಬ್ಬಿ, ಕರಿ ಮತ್ತು ಚಟ್ನಿಯಲ್ಲಿ ಬೆರೆಸಬಹುದು.
ಸ್ಥೂಲಕಾಯ ಸಮಸ್ಯೆಯಿದ್ದರೆ
ಬೊಜ್ಜು ಕರಗಿಸಲು ಪ್ರತಿ ಮುಂಜಾನೆ 8-10 ತಾಜಾ ಎಲೆಗಳನ್ನು ಅಗಿದು ಸೇವಿಸಿದರೆ ಒಳ್ಳೆಯದು.ಇದರಿಂದ ಮಧುಮೇಹ ರೋಗವನ್ನು ತಡೆಗಟ್ಟಬಹುದು.
ಕೂದಲಿನ ಆರೈಕೆಗೆ ಕರಿಬೇವು
ಒ೦ದು ಲೋಟದಷ್ಟು ಮೊಸರನ್ನು ತೆಗೆದುಕೊ೦ಡು ಅದಕ್ಕೆ ಕರಿಬೇವಿನ ಎಲೆಗಳನ್ನು ಜಜ್ಜಿ ಚೆನ್ನಾಗಿ ಮಿಶ್ರಗೊಳಿಸಿ, ನಿಮ್ಮ ನೆತ್ತಿಗೆ ಈ ಮಿಶ್ರಣದಿ೦ದ ಮಾಲೀಸು ಮಾಡಿಕೊಂದರೆ, ಕೂದಲು ಆರೋಗ್ಯದಿಂದ ಕೂಡಿರುತ್ತದೆ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


