Latest Updates
-
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್!
ಮನೆ ಮದ್ದು: ಕರಿಬೇವು ಎಂಬ ಆರೋಗ್ಯ ಸಂಜೀವಿನಿ...
ಸಿಹಿ ಕಹಿಯನ್ನು ಸಮನಾಗಿ ಸ್ವೀಕರಿಸುವ ಮೂಲಕ ಯುಗಾದಿಯನ್ನು ಸ್ವಾಗತಿಸುವ ನಮಗೆ ಕಹಿಯ ರೂಪದಲ್ಲಿ ಕರಿಬೇವಿನ ಎಲೆ ಅತಿ ಪವಿತ್ರವಾಗಿದೆ. ಕರಿಬೇವು ಅಪ್ಪಟ ಭಾರತದ ಮೂಲದ್ದೆಂದು ಹಲವು ಪುರಾಣಗಳಲ್ಲಿ ಪ್ರಸ್ತಾಪಿಸಲಾಗಿದೆ. ಆ ಕಾಲದಿಂದಲೂ ಕರಿಬೇವು ನಮ್ಮ ಪೂರ್ವಜರ ಅಡುಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಇಂದಿಗೂ ನಮ್ಮ ಅಡುಗೆಗಳಲ್ಲಿ 'ಒಗ್ಗರಣೆ' ಯಿಂದ ಮುಗಿಯದ ಅಡುಗೆಗೆ ರುಚಿಯೇ ಇರುವುದಿಲ್ಲ.

ಕರಿಬೇವು ಸೊಪ್ಪು ಮೂಲತಃ ಒಂದು ಗಿಡಮೂಲಿಕೆ, ಇದು ತನ್ನ ಜೀರ್ಣ ಕ್ರಿಯೆಯನ್ನು ಸುಧಾರಿಸುವ ಸಾಮರ್ಥ್ಯಕ್ಕೆ ಹೆಸರುವಾಸಿ. ಅಯುರ್ವೇದದ ಪ್ರಕಾರ ಕಡಿಪತ್ತಾ ಎಂದು ಕರೆಯಲ್ಪಡುವ ಇದನ್ನು ದೇಹದಲ್ಲಿರುವ ಟಾಕ್ಸಿಕ್ ಅಂಶಗಳನ್ನು ಹೊರ ಹಾಕಲು ಬಳಸಲಾಗುತ್ತದೆ. ಜೊತೆಗೆ ಇದು ನಿಮ್ಮ ದೇಹದಲ್ಲಿರುವ ಪಿತ್ತವನ್ನು ಕಡಿಮೆ ಮಾಡಲು ಸಹಕರಿಸುತ್ತದೆ. ಬನ್ನಿ ಇದರ ಇನ್ನಷ್ಟು ಪ್ರಯೋಜನಗಳ ಬಗ್ಗೆ ತಿಳಿಯೋಣ... ಕರಿಬೇವಿನ ಸೊಪ್ಪಿನಿ೦ದ ಏನೆಲ್ಲಾ ಪ್ರಯೋಜನಗಳಿವೆ ನೋಡಿ?
ಅಜೀರ್ಣ ಸಮಸ್ಯೆಯಿದ್ದರೆ
1-2 ಟೀ ಚಮಚದಷ್ಟು ಎಲೆಯ ರಸವನ್ನು, 1ಟೀ ಚಮಚ ಲಿಂಬೆಬೆರಸವನ್ನು ಮತ್ತು ಸಕ್ಕರೆಯನ್ನು ಬೆರೆಸಿ ಸೇವಿಸುವುದರಿಂದ ಅಜೀರ್ಣ, ಅತಿಯಾಗಿ ಜಿಡ್ಡು ಪದಾರ್ಥ ಸೇವನೆಯಿಂದುಂಟಾದ ತೊಂದರೆಗಳನ್ನು ನಿವಾರಿಸಬಹುದು.
ಕಿಡ್ನಿಯ ಕಲ್ಲಿನ ಸಮಸ್ಯೆಗೆ
ಕರಿಬೇವಿನ ಎಲೆಗಳನ್ನು ಮಿಕ್ಸಿಯಲ್ಲಿ ಗೊಟಾಯಿಸಿ ಮಾಡಿದ ಜ್ಯೂಸ್ ಕುಡಿಯುವ ಮೂಲಕ ಉತ್ತಮ ಪರಿಹಾರ ದೊರಕುತ್ತದೆ.
ವಾಂತಿಯ ತೊಂದರೆಯಿದ್ದರೆ
ಸಾಮಾನ್ಯವಾಗಿ ಕೆಲವರಿಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ, ಅಥವಾ ಬೆಳಗಿನ ಜಾವ ಎದ್ದಾಕ್ಷಣ ವಾಕರಿಕೆ, ಅಥವಾ ವಾಂತಿಯ ತೊಂದರೆ ಕಂಡುಬರುತ್ತದೆ. ಇಂತಹ ಸಮಸ್ಯೆ ಎದುರಿಸುವವರು ಪ್ರತಿ ದಿನ ಕರಿಬೇವಿನ ಎಲೆಗಳನ್ನು ಅರೆದು ತಯಾರಿಸಿದ ಮಿಶ್ರಣವನ್ನು ನೀರಿನಲ್ಲಿ ಸೇರಿಸಿ ಕುಡಿದರೆ ಉತ್ತಮ ಪರಿಣಾಮ ದೊರಕುತ್ತದೆ
ಮಜ್ಜಿಗೆ ಜೊತೆ ಜಜ್ಜಿದ ಕರಿಬೇವು ಸೊಪ್ಪು
ಪ್ರತಿದಿನ 2-3 ಬಾರಿ ಸೇವಿಸಿದರೆ, ಆರೋಗ್ಯಕ್ಕೆ ಉತ್ತಮ. ಒಂದು ವೇಳೆ ನಿಮ್ಮ ಕುಟುಂಬದ ಸದಸ್ಯರಿಗೆ ಕರಿಬೇವು ಸೊಪ್ಪು ಇಷ್ಟವಾಗದಿದ್ದಲ್ಲಿ, ನೀವು ಕರಿಬೇವನ್ನು ರುಬ್ಬಿ, ಕರಿ ಮತ್ತು ಚಟ್ನಿಯಲ್ಲಿ ಬೆರೆಸಬಹುದು.
ಸ್ಥೂಲಕಾಯ ಸಮಸ್ಯೆಯಿದ್ದರೆ
ಬೊಜ್ಜು ಕರಗಿಸಲು ಪ್ರತಿ ಮುಂಜಾನೆ 8-10 ತಾಜಾ ಎಲೆಗಳನ್ನು ಅಗಿದು ಸೇವಿಸಿದರೆ ಒಳ್ಳೆಯದು.ಇದರಿಂದ ಮಧುಮೇಹ ರೋಗವನ್ನು ತಡೆಗಟ್ಟಬಹುದು.
ಕೂದಲಿನ ಆರೈಕೆಗೆ ಕರಿಬೇವು
ಒ೦ದು ಲೋಟದಷ್ಟು ಮೊಸರನ್ನು ತೆಗೆದುಕೊ೦ಡು ಅದಕ್ಕೆ ಕರಿಬೇವಿನ ಎಲೆಗಳನ್ನು ಜಜ್ಜಿ ಚೆನ್ನಾಗಿ ಮಿಶ್ರಗೊಳಿಸಿ, ನಿಮ್ಮ ನೆತ್ತಿಗೆ ಈ ಮಿಶ್ರಣದಿ೦ದ ಮಾಲೀಸು ಮಾಡಿಕೊಂದರೆ, ಕೂದಲು ಆರೋಗ್ಯದಿಂದ ಕೂಡಿರುತ್ತದೆ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications



