Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮುಟ್ಟಿನ ಅವಧಿಯಲ್ಲಿ ಅಧಿಕ ರಕ್ತಸ್ರಾವಕ್ಕೆ ಆಯುರ್ವೇದ ಚಿಕಿತ್ಸೆ
ತಿಂಗಳಿನ ಮುಟ್ಟಿನ ಸಮಯದಲ್ಲಿ ಉಂಟಾಗುವ ಅಧಿಕ ರಕ್ತಸ್ರಾವಕ್ಕೆ ಮೆನೊರಾಗಿಯಾ ಎಂಬುದಾಗಿ ಕರೆಯುತ್ತಾರೆ. ಈ ರಕ್ತಸ್ರಾವವು ಏಳು ದಿನಗಳಿಗಿಂತ ಹೆಚ್ಚು ಉಂಟಾದಲ್ಲಿ, ಸುಸ್ತು, ಆಯಾಸ, ತಲೆನೋವು ನಿಶ್ಯಕ್ತಿ ಮತ್ತು ಅಧಿಕ ಪ್ರಮಾಣದ ನೋವು ಕಾಣಿಸಿಕೊಳ್ಳುತ್ತದೆ. ಆಯುರ್ವೇದದಲ್ಲಿ ಅಧಿಕ ರಕ್ತಸ್ರಾವ ಉಂಟಾಗುವುದಕ್ಕೆ ರಕ್ತ ಪ್ರದ್ರ ಎಂಬ ಹೆಸರಿದೆ.

ದೇಹದಲ್ಲಿರುವ ಹಾರ್ಮೋನುಗಳು ನಿಯಂತ್ರಣವನ್ನು ಹೊಂದಿಲ್ಲದೇ ಇದ್ದಾಗ, ಅಥವಾ ಪಿತ್ತ ದೋಷ ನಿಯಂತ್ರಣ ತಪ್ಪಿದಾಗ ಈ ರೀತಿ ಸಂಭವಿಸುತ್ತದೆ. ಸಾಮಾನ್ಯವಾಗಿ ಪಿತ್ತದಲ್ಲಿ ವೈಪರೀತ್ಯ ಉಂಟಾಗುವುದಕ್ಕೆ ಹಲವಾರು ಕಾರಣಗಳಿವೆ. ಅತಿಯಾದ ಉಪವಾಸ, ಹೆಚ್ಚಿನ ಒತ್ತಡ, ಖಾರದ ಮಸಾಲೆ ಪದಾರ್ಥಗಳನ್ನು ಹೆಚ್ಚು ಸೇವಿಸುವುದು ಮತ್ತು ಅಧಿಕವಾಗಿ ದೇಹವನ್ನು ದಂಡಿಸುವುದು, ಹೀಗೆ ಇವೆಲ್ಲಾವು ಪರೋಕ್ಷವಾಗಿ ಕಾರಣವಾಗಿ ಬಿಡುತ್ತದೆ. ಮುಟ್ಟಿನಲ್ಲಿ ಅತಿಯಾಗಿ ರಕ್ತಸ್ರಾವವಾಗುತ್ತಿದೆಯೇ?
ಋತುಚಕ್ರದಲ್ಲಿ ಉಂಟಾಗುವ ಅಧಿಕ ರಕ್ತಸ್ರಾವವನ್ನು ನಿರ್ಬಂಧಿಸಲು ಆಯುರ್ವೇದವು ಹಲವಾರು ಮನೆಮದ್ದುಗಳನ್ನು ತಿಳಿಸಿದೆ. ಅಧಿಕ ರಕ್ತಸ್ರಾವವನ್ನು ಪರಿಹರಿಸಲು ನೆರವಾಗಿರುವ ಕೆಲವೊಂದು ಔಷಧಗಳನ್ನು ಇಲ್ಲಿ ನೀಡಿದ್ದು ಗಮನ ಹರಿಸಿ
ನೆಲ್ಲಿಕಾಯಿ
ಹೆಚ್ಚು ಶಕ್ತಿದಾಯಕವಾಗಿರುವ ಈ ಗಿಡಮೂಲಿಕೆಯು ಹಲವಾರು ರೋಗಗಳನ್ನು ಉಪಚರಿವುದರಲ್ಲಿ ಎತ್ತಿದ ಕೈ. ಅನಾದಿ ಕಾಲದಿಂದಲೂ ಇದು ಚಿಕಿತ್ಸಕವಾಗಿ ನೆರವನ್ನು ಉಂಟುಮಾಡುತ್ತಿದೆ. ಅದರಲ್ಲೂ ಮೆನೊರಾಗಿಯಾವನ್ನು ಆರೈಕೆ ಮಾಡಲು ಇದು ಹೆಚ್ಚು ಪ್ರಭಾವಕಾರಿಯಾದುದು.
ನೆಲ್ಲಿಕಾಯಿ ಜ್ಯೂಸ್ ಮಾಡುವ ವಿಧಾನ
*ಎರಡು ದೊಡ್ಡ ಗಾತ್ರದ ಅಥವಾ ನಾಲ್ಕು ಚಿಕ್ಕಗಾತ್ರದ ನೆಲ್ಲಿಕಾಯಿಗಳನ್ನು ಚಿಕ್ಕದಾಗಿ ಕತ್ತರಿಸಿ ಬೀಜವನ್ನು ನಿವಾರಿಸಿ. *ಬ್ಲೆಂಡರ್ನಲ್ಲಿ ಕೊಂಚ ನೀರಿನೊಂದಿಗೆ ತಿರುಳನ್ನು ಸೇರಿಸಿ ಅರೆಯಿರಿ.
*ಈ ನೀರನ್ನು ತೆಳ್ಳನೆಯ ಮಸ್ಲಿನ್ ಬಟ್ಟೆ ಅಥವಾ ಸೋಸುಕ ಬಳಸಿ ನೀರು ಸಂಗ್ರಹಿಸಿ.
*ಈ ನೀರಿಗೆ ಕೊಂಚ ಕಪ್ಪು ಉಪ್ಪು ಅಥವಾ ಕಲ್ಲುಪ್ಪು ಸೇರಿಸಿ ಕುಡಿಯಬಹುದು. ರುಚಿ ಇಷ್ಟವಾಗದಿದ್ದರೆ ಕೊಂಚ ಜೇನನ್ನು ಸೇರಿಸಿ ಕುಡಿಯಬಹುದು. ಮಧುಮೇಹಿಗಳಿಗೆ ಜೇನು ಸಲ್ಲದು. ಆದ್ದರಿಂದ ಮಧುಮೇಹಿಗಳು
*ಉಪ್ಪು, ಜೇನು ಸೇರಿಸದ ರಸ ಕುಡಿಯುವುದು ಉತ್ತಮ. ನೆಲ್ಲಿಕಾಯಿ ಜ್ಯೂಸ್ ಕುಡಿದರೆ ಆರೋಗ್ಯಕ್ಕೆ 14 ಲಾಭ
ಶುಂಠಿ ತುಂಡನ್ನು ಜಜ್ಜಿ ಮಾಡಿದ ಕಷಾಯ
ಒಂದೆರಡು ಶುಂಠಿಯ ತುಂಡನ್ನು ಜಜ್ಜಿ ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ. ಕೆಲವು ನಿಮಿಷಗಳವರೆಗೆ ಹಾಗೆಯೇ ಕಾಯಿಸಿದ ನಂತರ ಅದರ ಡಿಕಾಕ್ಷನ್ ತೆಗೆದುಕೊಳ್ಳಿ ಆರಿಸಿ ಕುಡಿಯಿರಿ. ಹಾಗೆಯೇ ಕುಡಿಯಲು ಸಾಧ್ಯವಾಗಿಲ್ಲ ಅಂದ್ರೆ ಜೇನುತುಪ್ಪ ಇಲ್ಲ ಸಕ್ಕರೆ ಅಥವಾ ಬೆಲ್ಲ ಸೇರಿಸಿಯೂ ಸೇವಿಸ್ಬಹುದು. ಮುಟ್ಟಿನ ದಿನಗಳಲ್ಲಿ ನಿಮ್ಮನ್ನ ಅತಿಯಾಗಿ ಕಾಡುವ ರಕ್ತಸ್ರಾವ ಸಮಸ್ಯೆಗೆ ಇದು ಕೂಡ ಉತ್ತಮ ರೀತಿಯಲ್ಲಿ ಪರಿಹಾರ ನೀಡಬಲ್ಲದು.
ಲಿಂಬು-ಮೊಸಂಬಿ ಹಣ್ಣಿನ ಜ್ಯೂಸ್
ಎರಡು ಟೇಬಲ್ ಸ್ಪೂನ್ ಜೀರಿಗೆ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications



