Just In
Don't Miss
- News ‘ಹೇಳಿ ಸಿದ್ದರಾಮಯ್ಯನವರೇ , ಹಿಂದುಳಿದ ವರ್ಗದ ಮೇಲೆ ನಿಮಗ್ಯಾಕೆ ಈ ಆಕ್ರೋಶ?’
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೊಳ್ಳೆ ಕಡಿತದ ಉರಿ ಶಮನಕ್ಕೆ ಒಂದು ಬಾಳೆಹಣ್ಣು ಸಾಕು!
ಕೆಲವರ ರಕ್ತ ಹೆಚ್ಚು ರುಚಿ ಎಂದೋ ಏನೋ, ಅವರನ್ನೇ ಹುಡುಕಿ ಸೊಳ್ಳೆಗಳು ಕಚ್ಚುತ್ತವೆ. ಇದರರ್ಥ ಇತರರನ್ನು ಕಚ್ಚುವುದಿಲ್ಲ ಎಂದಲ್ಲ, ಆದರೆ ಕೆಲವು ರಕ್ತದ ಗುಂಪಿನವರನ್ನು ಹೆಚ್ಚು ಕಚ್ಚುತ್ತವೆ. ಕಚ್ಚಿದ ಬಳಿಕ ಚರ್ಮದಲ್ಲಿ ಏಳುವ ದದ್ದು, ಇಲ್ಲಿ ಉಂಟಾಗುವ ಅಸಾಧ್ಯ ಉರಿ ಈ ಸೊಳ್ಳೆಗಳನ್ನೇ ನಿರ್ನಾಮ ಮಾಡುವ ಕುರಿತು ಮನದಲ್ಲಿ ಛಲ ಹುಟ್ಟಿಸುತ್ತವೆ. ಸೊಳ್ಳೆ ಕಡಿತದಿಂದ ಪಾರಾಗಬೇಕೆ?
ಆದರೆ ಹೆಚ್ಚಿನವರು ಈ ಆರಂಭಶೂರತ್ವವನ್ನು ಮೆರೆದು ಕೊಂಚ ಸಮಯದಲ್ಲಿಯೇ ಮರೆತು ಬಿಡುತ್ತಾರೆ. ಆದರೆ ಸೊಳ್ಳೆಗಳು ಮಕ್ಕಳಿಗೆ ಕಚ್ಚಿದರೆ ಉರಿ ತಾಳಲಾರದೇ ಅಳುವ ಮಕ್ಕಳನ್ನು ನೋಡಿದಾಗ ಮಾತ್ರ ಕರುಳು ಚುರ್ರೆನ್ನದಿರುವುದಿಲ್ಲ. ಸೊಳ್ಳೆಗಳನ್ನು ಓಡಿಸಲೆಂದು ಹಿಂದೆ ಮಾಸ್ಕ್ವಿಟೋ ಕಾಯಿಲ್ ಎಂಬ ಹೊಗೆಬತ್ತಿಗಳು ಬಹಳವಾಗಿ ಪ್ರಚಲಿತವಿದ್ದವು. ಸೊಳ್ಳೆ ಕಡಿತಗಳಿಂದ ಪಾರಾಗಲು ಕೆಲ ಸಲಹೆಗಳು
ಕ್ರಮೇಣ ಇವುಗಳ ಸ್ಥಾನವನ್ನು ಮೆಷೀನುಗಳೂ, ದ್ರವಗಳನ್ನು ಆವಿಯಾಗಿಸುವ ಉಪಕರಣಗಳೂ ಆಕ್ರಮಿಸಿವೆ. ಸೊಳ್ಳೆಗಳನ್ನು ನಿಗ್ರಹಿಸುವುದು ಅಷ್ಟು ಸುಲಭವಲ್ಲ. ಇದಕ್ಕೆ ಊರಿಗೇ ಊರೇ ಜೊತೆಯಾಗಬೇಕಾಗುತ್ತದೆ. ಸದ್ಯಕ್ಕೆ ಅಂತಹ ಯಾವುದೇ ಪ್ರಯತ್ನ ಇಲ್ಲದಿದ್ದರೆ ನಿಮ್ಮ ಮನೆಗೆ ಸೊಳ್ಳೆಗಳು ಪ್ರವೇಶಿಸದಂತೆ ಎಚ್ಚರಿಕೆ ವಹಿಸುವುದೇ ಅನಿವಾರ್ಯ ಮಾರ್ಗ.
ಆದರೂ ಒಂದು ವೇಳೆ ಸೊಳ್ಳೆ ಕಚ್ಚಿಯೇ ಬಿಟ್ಟಿದ್ದರೆ ಇದರ ಉರಿ ಮತ್ತು ದದ್ದುಗಳನ್ನು ಶಮನಗೊಳಿಸಲು ಕೆಲವಾರು ವಿಧಾನಗಳಿವೆ. ಈ ಅಸಾಧ್ಯ ಉರಿಯನ್ನು ತಕ್ಷಣವೇ ಕಡಿಮೆಗೊಳಿಸಲು ಏನೂ ಸಿಗದಿದ್ದರೆ ಬಾಳೆಹಣ್ಣೇ ಸಾಕು. ಬಾಳೆಹಣ್ಣಿನ ತಿರುಳು ಮಾತ್ರವಲ್ಲ, ಸಿಪ್ಪೆಯ ಒಳಭಾಗವೂ ಈ ಉರಿಯನ್ನು ಶಮನಗೊಳಿಸಲು ಸಶಕ್ತವಾಗಿವೆ. ಸಿಪ್ಪೆಯ ಮೇಲೆ ಚುಕ್ಕೆ ಬಿದ್ದ ಬಾಳೆಹಣ್ಣಿನ ಅದ್ಭುತ ಪವರ್....
ಸೊಳ್ಳೆ ಕಚ್ಚಿದ ಕಡೆ ಚೆನ್ನಾಗಿ ಹಣ್ಣಾದ ಬಾಳೆಹಣ್ಣಿನ ತಿರುಳನ್ನು ಕೊಂಚವಾಗಿ ಸಂಗ್ರಹಿಸಿ ತೆಳುವಾಗಿ ಹಚ್ಚಿ ವೃತ್ತಾಕಾರದಲ್ಲಿ ಮಸಾಜ್ ಮಾಡಿ. ಇದರಿಂದ ತಕ್ಷಣವೇ ಉರಿ ಕಡಿಮೆಯಾಗಿ ದದ್ದುಗಳು ನಿಧಾನವಾಗಿ ಇಳಿಯುತ್ತವೆ.
ಇನ್ನೊಂದು ವಿಧಾನವೆಂದರೆ ಸೊಳ್ಳೆ ಕಚ್ಚಿದ ಜಾಗವನ್ನು ಮೊದಲು ಸ್ವಚ್ಛಗೊಳಿಸಿ ಬಳಿಕ ಬಾಳೆಸಿಪ್ಪೆಯ ಒಳಭಾಗ ಆವರಿಸುವಂತೆ ಈ ಭಾಗದ ಮೇಲಿರಿಸಿ ಸುಮಾರು ಐದರಿಂದ ಹತ್ತು ನಿಮಿಷದ ಬಳಿಕ ತೆಗೆಯಿರಿ. ಬಾಳೆ ಹಣ್ಣಿನ ಸಿಪ್ಪೆಯ 10 ಅದ್ಭುತ ಪ್ರಯೋಜನಗಳು
ಈ ನಡುವೆ ಬಾಳೆಸಿಪ್ಪೆಯನ್ನು ಕೊಂಚ ನಯವಾಗಿ ಸ್ವಲ್ಪ ಒತ್ತಡದೊಂದಿಗೆ ಉಜ್ಜುತ್ತಾ ಇರಬೇಕು. ಈ ವಿಧಾನದಿಂದ ಎಷ್ಟೇ ದೊಡ್ಡ ಕಡಿತವಾಗಿದ್ದರೂ ಶೀಘ್ರವೇ ಉರಿ ಕಡಿಮೆಯಾಗಿ ದದ್ದು ಇಳಿಯುತ್ತದೆ.