Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೊಳ್ಳೆ ಕಡಿತದ ಉರಿ ಶಮನಕ್ಕೆ ಒಂದು ಬಾಳೆಹಣ್ಣು ಸಾಕು!
ಕೆಲವರ ರಕ್ತ ಹೆಚ್ಚು ರುಚಿ ಎಂದೋ ಏನೋ, ಅವರನ್ನೇ ಹುಡುಕಿ ಸೊಳ್ಳೆಗಳು ಕಚ್ಚುತ್ತವೆ. ಇದರರ್ಥ ಇತರರನ್ನು ಕಚ್ಚುವುದಿಲ್ಲ ಎಂದಲ್ಲ, ಆದರೆ ಕೆಲವು ರಕ್ತದ ಗುಂಪಿನವರನ್ನು ಹೆಚ್ಚು ಕಚ್ಚುತ್ತವೆ. ಕಚ್ಚಿದ ಬಳಿಕ ಚರ್ಮದಲ್ಲಿ ಏಳುವ ದದ್ದು, ಇಲ್ಲಿ ಉಂಟಾಗುವ ಅಸಾಧ್ಯ ಉರಿ ಈ ಸೊಳ್ಳೆಗಳನ್ನೇ ನಿರ್ನಾಮ ಮಾಡುವ ಕುರಿತು ಮನದಲ್ಲಿ ಛಲ ಹುಟ್ಟಿಸುತ್ತವೆ. ಸೊಳ್ಳೆ ಕಡಿತದಿಂದ ಪಾರಾಗಬೇಕೆ?

ಆದರೆ ಹೆಚ್ಚಿನವರು ಈ ಆರಂಭಶೂರತ್ವವನ್ನು ಮೆರೆದು ಕೊಂಚ ಸಮಯದಲ್ಲಿಯೇ ಮರೆತು ಬಿಡುತ್ತಾರೆ. ಆದರೆ ಸೊಳ್ಳೆಗಳು ಮಕ್ಕಳಿಗೆ ಕಚ್ಚಿದರೆ ಉರಿ ತಾಳಲಾರದೇ ಅಳುವ ಮಕ್ಕಳನ್ನು ನೋಡಿದಾಗ ಮಾತ್ರ ಕರುಳು ಚುರ್ರೆನ್ನದಿರುವುದಿಲ್ಲ. ಸೊಳ್ಳೆಗಳನ್ನು ಓಡಿಸಲೆಂದು ಹಿಂದೆ ಮಾಸ್ಕ್ವಿಟೋ ಕಾಯಿಲ್ ಎಂಬ ಹೊಗೆಬತ್ತಿಗಳು ಬಹಳವಾಗಿ ಪ್ರಚಲಿತವಿದ್ದವು. ಸೊಳ್ಳೆ ಕಡಿತಗಳಿಂದ ಪಾರಾಗಲು ಕೆಲ ಸಲಹೆಗಳು
ಕ್ರಮೇಣ ಇವುಗಳ ಸ್ಥಾನವನ್ನು ಮೆಷೀನುಗಳೂ, ದ್ರವಗಳನ್ನು ಆವಿಯಾಗಿಸುವ ಉಪಕರಣಗಳೂ ಆಕ್ರಮಿಸಿವೆ. ಸೊಳ್ಳೆಗಳನ್ನು ನಿಗ್ರಹಿಸುವುದು ಅಷ್ಟು ಸುಲಭವಲ್ಲ. ಇದಕ್ಕೆ ಊರಿಗೇ ಊರೇ ಜೊತೆಯಾಗಬೇಕಾಗುತ್ತದೆ. ಸದ್ಯಕ್ಕೆ ಅಂತಹ ಯಾವುದೇ ಪ್ರಯತ್ನ ಇಲ್ಲದಿದ್ದರೆ ನಿಮ್ಮ ಮನೆಗೆ ಸೊಳ್ಳೆಗಳು ಪ್ರವೇಶಿಸದಂತೆ ಎಚ್ಚರಿಕೆ ವಹಿಸುವುದೇ ಅನಿವಾರ್ಯ ಮಾರ್ಗ.
ಆದರೂ ಒಂದು ವೇಳೆ ಸೊಳ್ಳೆ ಕಚ್ಚಿಯೇ ಬಿಟ್ಟಿದ್ದರೆ ಇದರ ಉರಿ ಮತ್ತು ದದ್ದುಗಳನ್ನು ಶಮನಗೊಳಿಸಲು ಕೆಲವಾರು ವಿಧಾನಗಳಿವೆ. ಈ ಅಸಾಧ್ಯ ಉರಿಯನ್ನು ತಕ್ಷಣವೇ ಕಡಿಮೆಗೊಳಿಸಲು ಏನೂ ಸಿಗದಿದ್ದರೆ ಬಾಳೆಹಣ್ಣೇ ಸಾಕು. ಬಾಳೆಹಣ್ಣಿನ ತಿರುಳು ಮಾತ್ರವಲ್ಲ, ಸಿಪ್ಪೆಯ ಒಳಭಾಗವೂ ಈ ಉರಿಯನ್ನು ಶಮನಗೊಳಿಸಲು ಸಶಕ್ತವಾಗಿವೆ. ಸಿಪ್ಪೆಯ ಮೇಲೆ ಚುಕ್ಕೆ ಬಿದ್ದ ಬಾಳೆಹಣ್ಣಿನ ಅದ್ಭುತ ಪವರ್....
ಸೊಳ್ಳೆ ಕಚ್ಚಿದ ಕಡೆ ಚೆನ್ನಾಗಿ ಹಣ್ಣಾದ ಬಾಳೆಹಣ್ಣಿನ ತಿರುಳನ್ನು ಕೊಂಚವಾಗಿ ಸಂಗ್ರಹಿಸಿ ತೆಳುವಾಗಿ ಹಚ್ಚಿ ವೃತ್ತಾಕಾರದಲ್ಲಿ ಮಸಾಜ್ ಮಾಡಿ. ಇದರಿಂದ ತಕ್ಷಣವೇ ಉರಿ ಕಡಿಮೆಯಾಗಿ ದದ್ದುಗಳು ನಿಧಾನವಾಗಿ ಇಳಿಯುತ್ತವೆ.
ಇನ್ನೊಂದು ವಿಧಾನವೆಂದರೆ ಸೊಳ್ಳೆ ಕಚ್ಚಿದ ಜಾಗವನ್ನು ಮೊದಲು ಸ್ವಚ್ಛಗೊಳಿಸಿ ಬಳಿಕ ಬಾಳೆಸಿಪ್ಪೆಯ ಒಳಭಾಗ ಆವರಿಸುವಂತೆ ಈ ಭಾಗದ ಮೇಲಿರಿಸಿ ಸುಮಾರು ಐದರಿಂದ ಹತ್ತು ನಿಮಿಷದ ಬಳಿಕ ತೆಗೆಯಿರಿ. ಬಾಳೆ ಹಣ್ಣಿನ ಸಿಪ್ಪೆಯ 10 ಅದ್ಭುತ ಪ್ರಯೋಜನಗಳು
ಈ ನಡುವೆ ಬಾಳೆಸಿಪ್ಪೆಯನ್ನು ಕೊಂಚ ನಯವಾಗಿ ಸ್ವಲ್ಪ ಒತ್ತಡದೊಂದಿಗೆ ಉಜ್ಜುತ್ತಾ ಇರಬೇಕು. ಈ ವಿಧಾನದಿಂದ ಎಷ್ಟೇ ದೊಡ್ಡ ಕಡಿತವಾಗಿದ್ದರೂ ಶೀಘ್ರವೇ ಉರಿ ಕಡಿಮೆಯಾಗಿ ದದ್ದು ಇಳಿಯುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


