Latest Updates
-
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ!
ಉಪ್ಪು ಬೆರೆಸಿದ ಬೆಚ್ಚನೆಯ ನೀರು, ಆಯಸ್ಸು ನೂರು!
ಉಪ್ಪು ತಿಂದ ಮೇಲೆ ನೀರು ಕುಡಿಯಬೇಕು ಎಂಬ ಗಾದೆಯನ್ನು ಪ್ರಾಯಶ್ಚಿತಕ್ಕೆ ಸಂವಾದಿಯಾಗಿ ಬಳಸುತ್ತೇವೆ. ಅದೇ ಉಪ್ಪಿಗಿಂತ ರುಚಿಯಿಲ್ಲ ಎಂಬ ಮಾತನ್ನು ಸಹ ನಾವು ಬಳಸಿಕೊಳ್ಳುತ್ತೇವೆ. ಋಣಕ್ಕೆ ಉಪ್ಪಿನ ಋಣ ಎಂದೇ ಕರೆಯುತ್ತೇವೆ. ಆ ಮಟ್ಟಿಗೆ ಒಳ್ಳೆಯ-ಕೆಟ್ಟ ಎಲ್ಲಾ ಆರೋಪವನ್ನು ಹೊರಿಸಿಬಿಡುತ್ತೇವೆ. ಇಂದು ಅದರ ಕುರಿತಾಗಿ ಇನ್ನೂ ಒಂದು ಒಳ್ಳೆಯ ವಿಚಾರವನ್ನು ತಿಳಿಸಿಕೊಡುತ್ತೇವೆ. ಸಂಸ್ಕರಿಸದ ಉಪ್ಪಿನಲ್ಲಿ ಸಮೃದ್ಧ ಪ್ರಮಾಣದಲ್ಲಿರುತ್ತದೆ.
ಇದರಲ್ಲಿ ಉಪಶಮಕಾರಿ ಗುಣಗಳು ಅಧಿಕ ಪ್ರಮಾಣದಲ್ಲಿರುತ್ತವೆ. ನಮ್ಮ ದಿನ ನಿತ್ಯದಲ್ಲಿ ಬಳಸುವ ಈ ಉಪ್ಪು ದಿನ ನಿತ್ಯದ ಆರೋಗ್ಯ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಸಹ ಬಳಸಲ್ಪಡುತ್ತದೆ. ಸ್ವಾಭಾವಿಕ ಉಪ್ಪು ನಮಗೆ ಒಳ್ಳೆಯದು ಎಂಬುದು ಎಲ್ಲರ ಅಭಿಪ್ರಾಯವಾಗಿದೆ. ಉಪ್ಪಿನಲ್ಲಿ ಸುಮಾರು 80 ಬಗೆಯ ಖನಿಜಾಂಶಗಳು ಇವೆಯೆಂಬುದು ತಜ್ಞರ ಅಭಿಪ್ರಾಯ.
ಆದ್ದರಿಂದ ಇದು ಜೀರ್ಣಕ್ರಿಯೆಗೆ, ಮೂಳೆಗಳಿಗೆ, ರೋಗ ನಿರೋಧಕ ಶಕ್ತಿಗೆ ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಹತೋಟಿಯಲ್ಲಿಡಲು ಒಳ್ಳೆಯದು ಎಂದು ಹೇಳಲಾಗುತ್ತದೆ. ಇದನ್ನು ಪ್ರಯತ್ನಿಸಲು ಒಂದು ಸಣ್ಣ ಜಗ್ ತೆಗೆದುಕೊಂಡು ಅದಕ್ಕೆ 3 ಚಮಚ ಸಂಸ್ಕರಿಸದ ಉಪ್ಪನ್ನು ಬೆರೆಸಿಕೊಳ್ಳಿ. ಆನಂತರ ಆ ಜಗ್ ಅನ್ನು ಪೂರ್ಣವಾಗಿ ನೀರಿನಿಂದ ತುಂಬಿಸಿ ಮುಚ್ಚಿಟ್ಟುಕೊಳ್ಳಿ, ಅಲ್ಲದೆ ಇಡೀ ದಿನ ಹಾಗೆಯೇ ಬಿಡಿ. ಉಪ್ಪು ನೀರು ಸ್ನಾನದ 10 ಅದ್ಭುತ ಆರೋಗ್ಯ ಪ್ರಯೋಜನಗಳು
ನಂತರ ಮರುದಿನ ಒಂದು ಲೋಟ ಬೆಚ್ಚಗಿನ ನೀರನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಈ ಉಪ್ಪು ನೀರಿನ ಮಿಶ್ರಣವನ್ನು ಬೆರೆಸಿಕೊಳ್ಳಿ. ಇದರಿಂದ ಯಾವುದೇ ಹಾನಿಯಾಗುವುದಿಲ್ಲ, ಆದರೂ ಈ ಉಪ್ಪು ನೀರಿನ ಮಿಶ್ರಣವನ್ನು ದಿನ ಬೆಳಗ್ಗೆ ಸೇವಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು. ಬನ್ನಿ ಇದರಿಂದ ಯಾವ ಯಾವ ಪ್ರಯೋಜನಗಳು ದೊರೆಯುತ್ತವೆ ಎಂಬುದನ್ನು ತಿಳಿದುಕೊಳ್ಳೋಣ...

ಜೀರ್ಣಕ್ರಿಯೆಯನ್ನು ಉದ್ದೀಪಿಸುತ್ತದೆ
ನೀವು ಉಪ್ಪು ನೀರಿನ ಮಿಶ್ರಣವನ್ನು ಸೇವಿಸಿದ ಮೇಲೆ ನಿಮ್ಮ ಲಾಲಾರಸದ ಗ್ರಂಥಿಗಳು ಉದ್ದೀಪನಗೊಳ್ಳುತ್ತವೆ ಮತ್ತು ನಿಮ್ಮ ಹೊಟ್ಟೆಯಲ್ಲಿರುವ ಆಮ್ಲಗಳು ಸಹ ಇದರಿಂದ ಬಿಡುಗಡೆಗೊಳ್ಳುತ್ತವೆ. ಇವು ಜೀರ್ಣಕ್ರಿಯೆಗೆ ಒಳ್ಳೆಯದು.

ತ್ವಚೆಗೆ ಒಳ್ಳೆಯದು
ಸ್ವಾಭಾವಿಕ ಉಪ್ಪಿನಲ್ಲಿರುವ ಖನಿಜಾಂಶಗಳು ತ್ವಚೆಗೆ ಸಹ ಒಳ್ಳೆಯದು. ಇದರಲ್ಲಿ ಗಂಧಕ, ಸತು, ಐಯೋಡಿನ್ ಮತ್ತು ಕ್ರೋಮಿಯಂ ಇರುತ್ತದೆ. ಇವು ಕೆಲವೊಂದು ತ್ವಚೆಯ ಸಮಸ್ಯೆಗಳನ್ನು ನಿವಾರಿಸಿ ನಿಮ್ಮ ತ್ವಚೆಯನ್ನು ಆರೋಗ್ಯಕರವಾಗಿ ಇರಿಸುತ್ತದೆ.

ಉರಿಯೂತವನ್ನು ನಿವಾರಿಸುತ್ತದೆ
ನಿಮ್ಮ ದೇಹಕ್ಕೆ ಅಗತ್ಯ ಪ್ರಮಾಣದ ಸೋಡಿಯಂ ಅನ್ನು ಈ ಉಪ್ಪು ನೀರಿನ ಮಿಶ್ರಣ ನೀಡುತ್ತದೆ. ಇದರಿಂದ ಉರಿಯೂತವನ್ನು ಉಂಟು ಮಾಡುವ ರೆನಿನ್ (ಕಿಣ್ವ) ಮತ್ತು ಅಲ್ಡೊಸ್ಟಿರೋನ್ (ಹಾರ್ಮೋನ್) ಹೆಚ್ಚಾಗುವುದನ್ನು ತಡೆಯುತ್ತದೆ. ಆದ್ದರಿಂದ ಬೆಳಗ್ಗೆ ಉಪ್ಪು ನೀರನ್ನು ಸೇವಿಸಿ ಉರಿಯೂತವನ್ನು ಹತೋಟಿಯಲ್ಲಿಟ್ಟುಕೊಳ್ಳಿ.

ಮೂಳೆಗಳು
ಉಪ್ಪು ನೀರು ನಿಮ್ಮ ಮೂಳೆಗಳಿಗೆ ಪರೋಕ್ಷವಾಗಿ ಸಹಾಯ ಮಾಡುತ್ತದೆ. ಸಾಮಾನ್ಯವಾಗಿ ಯಾವಾಗ ನಿಮ್ಮ ರಕ್ತವು ಅಸಿಡಿಕ್ ಆಗಿ ಪರಿವರ್ತನೆಯಾಗುತ್ತದೆಯೋ, ಆಗ ನಿಮ್ಮ ದೇಹವು ಮೂಳೆಗಳಲ್ಲಿರುವ ಕ್ಯಾಲ್ಸಿಯಂ ಅನ್ನು ಬಳಸಲು ಆರಂಭಿಸುತ್ತದೆ. ನಿಮ್ಮ ದೇಹದಲ್ಲಿರುವ ಆಲ್ಕಾಲೈಸ್ ಅನ್ನು ಉಪ್ಪು ನೀರು ತಟಸ್ಥಗೊಳಿಸುತ್ತದೆ ಮತ್ತು ನಿಮ್ಮ ಮೂಳೆಗಳನ್ನು ಸುರಕ್ಷಿತವಾಗಿ ಇರಿಸುತ್ತದೆ.

ನಿದ್ದೆ
ಉಪ್ಪಿನಲ್ಲಿರುವ ಕೆಲವೊಂದು ಖನಿಜಾಂಶಗಳು ನಿಮ್ಮ ನರವ್ಯೂಹಕ್ಕೆ ವಿಶ್ರಾಂತಿಯನ್ನು ನೀಡುತದೆ ಮತ್ತು ಒತ್ತಡಕಾರಿ ಹಾರ್ಮೋನ್ಗಳ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದ ನಿಮಗೆ ನೆಮ್ಮದಿಯಾಗಿ ನಿದ್ದೆ ಬರುತ್ತದೆ.

ನೀರನ್ನು ಪೂರೈಸುತ್ತದೆ
ನಿಮ್ಮ ದೇಹವು ನೀರಿನ ಅಂಶವನ್ನು ಸಮರ್ಥವಾಗಿ ಹೀರಿಕೊಳ್ಳುವ ಗುಣಗಳನ್ನು ಹೊಂದಿರುತ್ತದೆ. ನೀರನ್ನು ಸಮರ್ಪಕವಾಗಿ ಬಳಸಿದಾಗ ಇದರ ಪ್ರಯೋಜನ ನಿಮಗೆ ದೊರೆಯುತ್ತದೆ. ಕೆಲವರಿಗೆ ಮೂತ್ರ ವಿಸರ್ಜನೆ ಮಾಡುವಾಗ ಉರಿ ಕಂಡು ಬರುತ್ತದೆ. ಬೆಳಗ್ಗೆ ಉಪ್ಪು ನೀರನ್ನು ಸೇವಿಸುವುದರಿಂದ ದೇಹಕ್ಕೆ ನೀರಿನ ಅಂಶ ದೊರೆಯುತ್ತದೆ ಮತ್ತು ಮೂತ್ರ ವಿಸರ್ಜನೆ ಸರಾಗವಾಗಿ ನಡೆಯುತ್ತದೆ.

ಡಿಟಾಕ್ಸಿಫೈ ಮಾಡುತ್ತದೆ
ಹಲವಾರು ಖನಿಜಾಂಶಗಳು ಉಪ್ಪು ನೀರಿನಲ್ಲಿ ಇರುತ್ತವೆ. ಇವು ನಿಮ್ಮ ದೇಹವನ್ನು ಡಿಟಾಕ್ಸಿಫೈ ಅಂದರೆ ನಂಜು ನಿವಾರಕಗೊಳಿಸುತ್ತದೆ. ಇದು ಒಂದು ಉತ್ತಮ ಆಂಟಿ ಬ್ಯಾಕ್ಟೀರಿಯಾ ಏಜೆಂಟ್ ಆಗಿರುವ ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿರುವ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ.

ಇತರೆ ಪ್ರಯೋಜನಗಳು
ಉಪ್ಪು ನೀರು ನಿಮ್ಮ ದೇಹದ ಶಕ್ತಿಯ ಮಟ್ಟವನ್ನು ವರ್ಧಿಸುತ್ತದೆ, ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಸ್ಥಿರಗೊಳಿಸುತ್ತದೆ, ಸ್ನಾಯು ಸೆಳೆತವನ್ನು ನಿವಾರಿಸುತ್ತದೆ ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಸಹ ಸ್ಥಿರಗೊಳಿಸುತ್ತದೆ ಹಾಗು ನಿಮ್ಮ ದೇಹದ ತೂಕವನ್ನು ಇಳಿಸಲು ಸಹ ನೆರವಾಗುತ್ತದೆ.



Click it and Unblock the Notifications