Latest Updates
-
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು!
ಆತಂಕವನ್ನು ನಿಯಂತ್ರಿಸಲು ನಿತ್ಯದ 'ಆಹಾರ ಪಥ್ಯ' ಹೀಗಿರಲಿ....
ಕಾಲ ಬದಲಾಗುತ್ತಿರುವಂತೆ ಮನುಷ್ಯನ ಹಿತಿಮಿತಿಗಳು ಕೂಡ ಬದಲಾಗುತ್ತಾ ಹೋಗುತ್ತದೆ. ಅದರಲ್ಲೂ ಈ ಸ್ಮಾರ್ಟ್ ಫೋನ್ ಯುಗದಲ್ಲಿ ಉಸಿರಾಡಲು ಸಮಯವಿಲ್ಲದಂತೆ ಕೆಲಸ ಮಾಡಬೇಕಾದ ಒತ್ತಡವಿದೆ. ಕಚೇರಿ, ಮನೆ ಹೀಗೆ ಪ್ರತಿಯೊಂದು ಕಡೆಯೂ ಒತ್ತಡವೇ ಇರುವ ಕಾರಣದಿಂದಾಗಿ ಮನುಷ್ಯ ಹಲವಾರು ರೀತಿಯ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುತ್ತಾನೆ.
ಇದರಲ್ಲಿ ಆತಂಕವು ಒಂದಾಗಿದೆ. ವ್ಯಕ್ತಿಯೊಬ್ಬನಲ್ಲಿ ಆತಂಕವು ಯಾವ ರೀತಿ ಹಾಗೂ ಯಾವ ಸಮಯದಲ್ಲಿ ಬರಬಹುದು ಎಂದು ಹೇಳಲು ಸಾಧ್ಯವಾಗುವುದಿಲ್ಲ. ಅತಿಯಾದ ಒತ್ತಡದಿಂದಾಗಿ ಹೆಚ್ಚಾಗಿ ಆತಂಕವು ಉಂಟಾಗುತ್ತದೆ. ಆದರೆ ಒತ್ತಡವನ್ನು ಕಡಿಮೆ ಮಾಡಿಕೊಂಡು ಆರಾಮವಾಗಿರಲು ಹಲವಾರು ರೀತಿಯ ಉಪಾಯಗಳಿವೆ.

ಕೆಲವೊಂದು ಸಲ ಪರಿಸ್ಥಿತಿಯು ಕೈತಪ್ಪಿ ಹೋಗುತ್ತಿದೆಯಲ್ಲಾ ಎನ್ನುವ ಒತ್ತಡವು ನಮ್ಮಲ್ಲಿ ಮತ್ತಷ್ಟು ಆತಂಕವನ್ನು ಉಂಟು ಮಾಡುತ್ತದೆ. ಇದರಿಂದಾಗಿ ದೇಹ ಮತ್ತು ಮೆದುಳಿನ ಮೇಲೆ ಮತ್ತಷ್ಟು ಒತ್ತಡ ಬೀಳುವುದು. ಆತಂಕಕ್ಕೆ ಒಳಗಾಗಿರುವ ರೋಗಿಗಳಲ್ಲಿ ಗುಣಪಡಿಸಲು ಹಲವಾರು ರೀತಿಯ ವಿಧಾನಗಳಿವೆ.
ವಿಶೇಷ ತಜ್ಞರು ಈ ನಿಟ್ಟಿನಲ್ಲಿ ನೆರವಾಗಬಲ್ಲರು. ಇದರಲ್ಲಿ ಪರಿಣತಿಯನ್ನು ಪಡೆದುಕೊಂಡಿರುವವರು ಇದರ ಲಕ್ಷಣಗಳನ್ನು ತಿಳಿದುಕೊಂಡು ಚಿಕಿತ್ಸೆ ನೀಡುತ್ತಾರೆ. ಕೆಲವೊಂದು ಸಲ ಆತಂಕ ನಿವಾರಣೆಗೆ ನೈಸರ್ಗಿಕವಾದ ಆಹಾರ ಪದಾರ್ಥಗಳನ್ನು ಸೇವಿಸಲು ಕೂಡ ಶಿಫಾರಸ್ಸು ಮಾಡುತ್ತಾರೆ. ಆತಂಕವನ್ನು ಪರಿಹರಿಸುವ ಸ್ವಾಭಾವಿಕ ಮಾರ್ಗಗಳು
ಹೌದು, ಆಹಾರ ಪಥ್ಯದ ಕಡೆ ಗಮನಹರಿಸಿಕೊಂಡರೆ ಆತಂಕವನ್ನು ನಿವಾರಿಸಬಹುದಾಗಿದೆ. ಹಲವಾರು ರೀತಿಯ ಆಹಾರಗಳು ಆತಂಕವನ್ನು ನಿವಾರಿಸುವಲ್ಲಿ ಸಮರ್ಥವಾಗಿದೆ, ಎಂಬುದನ್ನು ಸಂಶೋಧನೆಯೊಂದರಲ್ಲಿ ಸಾಬೀತುಪಡಿಸಲಾಗಿದೆ.
ಕೆಲವೊಮ್ಮೆ ಯಾವುದಾದರೂ ಸಮಸ್ಯೆಗೆ ಸಿಲುಕಿ, ನಾವು ಆಳವಾಗಿ ಯೋಚಿಸಲು ಪ್ರಾರಂಭಿಸುತ್ತೇವೆ, ಆದರೆ ಕೂಡಲೇ ಇದರಿಂದ ಹೊರಬಂದು, ಏನಾದರು ತಿನ್ನುವುದರ ಕಡೆಗೆ ಮನಸ್ಸು ಮಾಡಿ, ಏಕೆಂದರೆ ಊಟ-ತಿಂಡಿಯು ನಿಮ್ಮ ಮನಸ್ಸನ್ನು ವಿಶ್ರಾಂತಿ ಸ್ಥಿತಿಗೆ ತಂದು, ಆತಂಕವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಆತಂಕದ ಸಮಸ್ಯೆಯಿಂದ ಬಳಲುವವರು, ತಾವು ಆತಂಕಕ್ಕೆ ಒಳಗಾದಾಗ ಏನಾದರು ತಿಂಡಿಯನ್ನು ತಿನ್ನುವುದು ಉತ್ತಮ. ಆತಂಕ ಅಥವಾ ಉದ್ವಿಗ್ನತೆಯನ್ನು ನಿಯಂತ್ರಿಸುವುದು ಹೇಗೆ?
ಅದರಲ್ಲೂ ಕೆಲವೊಂದು ಸೂಪರ್ ಫುಡ್ಗಳು ಆತಂಕವನ್ನು ಕಡಿಮೆ ಮಾಡುವ ಆಹಾರ ಪದಾರ್ಥಗಳಾಗಿ ಗುರುತಿಸಲ್ಪಟ್ಟಿವೆ. ಗ್ರೀನ್ ಟೀ, ಚಕ್ಕೆ ಮತ್ತು ಬಾಸಿಲ್ ಈ ಪಟ್ಟಿಯಲ್ಲಿ ಸೇರಿದವುಗಳಾಗಿವೆ. ಇದರ ಜೊತೆಗೆ ಬೆಳಗಿನ ಉಪಾಹಾರವನ್ನು ನೀವು ಹೆಚ್ಚಾಗಿ ಸೇವಿಸಿದಲ್ಲಿ, ದಿನಪೂರ್ತಿ ಚೈತನ್ಯಯುತವಾಗಿ ಇರಬಹುದು ಮತ್ತು ಆತಂಕವನ್ನು ನಿಭಾಯಿಸಬಹುದು.
ಬೆರ್ರಿ ಹಣ್ಣುಗಳು ಆ್ಯಂಟಿಆಕ್ಸಿಡೆಂಟ್ ಮತ್ತು ಪೈಥೋನ್ಯೂಟ್ರಿಯಂಟ್ಸ್ಗಳಿಂದ ಸಮೃದ್ಧವಾಗಿದ್ದು, ಇದು ಆತಂಕವನ್ನು ನಿವಾರಿಸುವುದು. ವಿಟಮಿನ್ ಗಳಿಂದ ಸಮೃದ್ಧವಾಗಿರುವಂತಹ ಈ ಹಣ್ಣುಗಳನ್ನು ತಿಂದರೆ ಮನಸ್ಸು ತುಂಬಾ ಶಾಂತವಾಗಿರುತ್ತದೆ.
ಬಾದಾಮಿಯಲ್ಲಿ ಕಬ್ಬಿನ ಮತ್ತು ಸತು ಹೇರಳವಾಗಿದೆ. ಇದು ಮೆದುಳನ್ನು ಶಾಂತವಾಗಿರಿಸಿ ಭಾವನೆಗಳನ್ನು ಸಮತೋಲನದಲ್ಲಿಡುತ್ತದೆ. ಅಷ್ಟೇ ಅಲ್ಲದೆ ಕಲೆವೊಮ್ಮೆ ಆತಂಕಕ್ಕೆ ಕಾರಣವಾಗುವಂತಹ ಕೊರ್ಟಿಸೊಲ್ ಹಾರ್ಮೋನು ಮಟ್ಟವನ್ನು ಕಡಿಮೆ ಮಾಡುವಲ್ಲಿ ಚಾಕಲೇಟು ತುಂಬಾ ಪರಿಣಾಮಕಾರಿಯಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications













