Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಕೆಮ್ಮು , ಶೀತಕ್ಕೆ ಅರಿಶಿನ-ಕರಿಮೆಣಸಿನ ಬಿಸಿ ಬಿಸಿ ಹಾಲು!
ಬಿಸಿಹಾಲಿಗೆ ಅರಿಶಿನ ಹಾಗೂ ಕರಿಮೆಣಸಿನ ಹುಡಿಯನ್ನು ಹಾಕಿ ಕುಡಿಯುವುದರಿಂದ ಕೆಮ್ಮು ಹಾಗೂ ಶೀತವನ್ನು ನಿವಾರಣೆ ಮಾಡಬಹುದು
ಚಳಿಗಾಲ ಆರಂಭವಾಗುತ್ತಿರುವಂತೆ ಶೀತ, ಕೆಮ್ಮು ಸಾಮಾನ್ಯವಾಗಿ ಪ್ರತಿಯೊಬ್ಬರನ್ನು ಕಾಡಲು ಆರಂಭಿಸುತ್ತದೆ. ಒಂದೆರಡು ದಿನದಲ್ಲಿ ಇದು ಕಡಿಮೆಯಾಗದೆ ಇದ್ದರೆ ನಾವು ವೈದ್ಯರನ್ನು ಭೇಟಿಯಾಗುತ್ತೇವೆ. ಆದರೆ ಮನೆಯಲ್ಲಿ ಮಾಡುವಂತಹ ಕೆಲವೊಂದು ಮದ್ದುಗಳು ಇಂತಹ ಸಾಮಾನ್ಯ ಕೆಮ್ಮು ಹಾಗೂ ಶೀತವನ್ನು ಗುಣಪಡಿಸುವುದು. ಬಿಸಿಹಾಲಿಗೆ ಅರಿಶಿನ ಹಾಗೂ ಕರಿಮೆಣಸಿನ ಹುಡಿಯನ್ನು ಹಾಕಿ ಕುಡಿಯುವುದರಿಂದ ಕೆಮ್ಮು ಹಾಗೂ ಶೀತವನ್ನು ನಿವಾರಣೆ ಮಾಡಬಹುದು ಎಂದು ನಾವೆಲ್ಲರೂ ಕೇಳಿದ್ದೇವೆ. 9 ಭಯಂಕರ ಕಾಯಿಲೆಗೆ ಮನೆಮದ್ದು ಈ ಕರಿಮೆಣಸು!

ಆದರೆ ಇದು ನಿಜವಾಗಿಯೂ ಒಳ್ಳೆಯ ಔಷಧಿಯೇ? ಅಥವಾ ಕೇವಲ ಕಟ್ಟುಕತೆಯೇ ಎನ್ನುವ ಪ್ರಶ್ನೆ ಸಹಜ. ಯಾಕೆಂದರೆ ಕೆಲವು ಮಂದಿ ಹಲವಾರು ಮನೆಮದ್ದುಗಳನ್ನು ಪ್ರಯೋಗಿಸಿ ಅದರಿಂದ ಪರಿಣಾಮ ಕಾಣದೆ ಕಂಗೆಟ್ಟು ಅದರ ಸಹವಾಸವೇ ಬೇಡ ಅಂದುಕೊಂಡಿದ್ದಾರೆ.
ಬಿಸಿ ಹಾಲಿಗೆ ಅರಿಶಿನ ಹಾಗೂ ಕರಿಮೆಣಸಿನ ಹುಡಿಯನ್ನು ಹಾಕಿ ಕುಡಿಯುವುದರಿಂದ ಕೆಮ್ಮು ಹಾಗೂ ಶೀತ ಕಡಿಮೆಯಾಗುತ್ತದೆ ಎನ್ನಲಾಗುತ್ತದೆ. ಇದರ ಬಗ್ಗೆ ನಾವು ತಿಳಿದುಕೊಳ್ಳುವ. ಹಾಲು-ಅರಿಶಿನದ ಜೋಡಿ ಮಾಡಲಿದೆ ಕಮಾಲಿನ ಮೋಡಿ!
ಮನೆಮದ್ದನ್ನು ತಯಾರಿಸುವ ಹಾಗೂ ಬಳಸುವ ವಿಧಾನ
ಕೆಮ್ಮು ಹಾಗೂ ಶೀತಕ್ಕೆ ಪರಿಹಾರ ನೀಡುವಂತಹ ಈ ಮನೆಮದ್ದನ್ನು ತಯಾರಿಸಲು ಒಂದು ಲೋಟ ಹಾಲಿಗೆ ಅರ್ಧ ಚಮಚ ಕರಿಮೆಣಸಿನ ಹುಡಿ ಮತ್ತು ಎರಡು ಚಮಚ ಅರಿಶಿನವನ್ನು ಹಾಕಿ ಸರಿಯಾಗಿ ಕಳಸಿಕೊಳ್ಳಿ. ಈ ಮದ್ದನ್ನು ದಿನದಲ್ಲಿ ಎರಡು ಸಲ ಕುಡಿದರೆ ಪರಿಹಾರ ಕಾಣಬಹುದು. ಜ್ವರ ಶೀತಕ್ಕೆ ಸಿದ್ಧೌಷಧ-ಬೆಳ್ಳುಳ್ಳಿ ಕರಿಮೆಣಸು ರಸಂ
ಮನೆಮದ್ದು ಯಾವ ರೀತಿ ಕೆಲಸ ಮಾಡುವುದು?
ಬಿಸಿ ಹಾಲು, ಕರಿಮೆಣಸಿನ ಹುಡಿ ಮತ್ತು ಅರಿಶಿನದ ಮಿಶ್ರಣವು ಗಂಟಲನ್ನು ಶಮನಗೊಳಿಸಿ ಕೆಮ್ಮು ಹಾಗೂ ಶೀತದ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ ಎಂದು ಹಲವಾರು ಅಧ್ಯಯನಗಳು ಹೇಳಿವೆ. ಬಿಸಿ ಹಾಲು ಗಂಟಲಿನಲ್ಲಿರುವಂತಹ ಕಫವನ್ನು ದೂರ ಮಾಡುತ್ತದೆ. ಇದರಿಂದ ಕೆಮ್ಮು ಹಾಗೂ ಗಂಟಲಿನಲ್ಲಿ ಉಂಟಾಗುವಂತಹ ಕಿರಿಕಿರಿ ಕಡಿಮೆಯಾಗಿ ಪರಿಹಾರ ಸಿಗುತ್ತದೆ.
ಅರಿಶಿನ ಮತ್ತು ಕರಿಮೆಣಸಿನಲ್ಲಿ ಉರಿಯೂತ ಶಮನಕಾರಿ ಹಾಗೂ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಇರುವ ಕಾರಣದಿಂದ ಬ್ಯಾಕ್ಟೀರಿಯಾದಿಂದ ಆಗುವಂತಹ ಸೋಂಕವನ್ನು ನಿವಾರಣೆ ಮಾಡುತ್ತದೆ. ಇದರಿಂದ ಸಾಮಾನ್ಯ ಶೀತ ಹಾಗೂ ಕೆಮ್ಮನ್ನು ಶಮನ ಮಾಡುತ್ತದೆ.
ಮುಂದಿನ ಸಲ ನಿಮಗೆ ಕೆಮ್ಮು ಹಾಗೂ ಶೀತ ಕಾಣಿಸಿಕೊಂಡರೆ ಅರಿಶಿನ, ಕರಿಮೆಣಸಿನ ಹುಡಿ ಹಾಕಿ ಬಿಸಿ ಹಾಲು ಕುಡಿಯಿರಿ. ಇದು ಖಂಡಿತವಾಗಿಯೂ ನಿಮ್ಮ ಶೀತ ಹಾಗೂ ಕೆಮ್ಮನ್ನು ನಿವಾರಿಸುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications




