Latest Updates
-
ಫ್ಯಾಶನ್ ರೆವಲ್ಯೂಷನ್ ಡೇ: ಬಟ್ಟೆಯನ್ನು ಉಲ್ಟಾ ಧರಿಸಿ ಫೋಟೋ ಹಾಕುತ್ತಿರುವುದೇಕೆ? ಈ ಟ್ರೆಂಡ್ ಹಿಂದಿದೆ ದೊಡ್ಡ ಕಥೆ! -
ಬಿಸಿಲ ಅಲೆ: ಸುಡುವ ಬಿಸಿಲಿನಲ್ಲಿ ವ್ಯಾಯಾಮ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಉತ್ತರ ಭಾರತದ ಬಿಸಿಲ ಬೇಗೆ: ಮದುವೆ ಶಾಸ್ತ್ರಗಳೆಲ್ಲಾ ಈಗ ಸೂರ್ಯ ಮುಳುಗಿದ ಮೇಲೆ! -
ಬಿಸಿಗಾಳಿಯ ಆರ್ಭಟ: ನಿಮ್ಮ ಮನೆಯನ್ನು ಫ್ರಿಡ್ಜ್ನಂತೆ ತಂಪಾಗಿಡಲು ಇಲ್ಲಿವೆ ಅದ್ಭುತ ದೇಸಿ ಟಿಪ್ಸ್! -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ಹೊಡೆತದಿಂದ ಪಾರಾಗಲು ಮನೆಯಲ್ಲೇ ತಯಾರಿಸಿ ಈ ಜೀವ ರಕ್ಷಕ ಪಾನೀಯ! -
ಬಿಸಿಗಾಳಿಯ ಆರ್ಭಟ: ಸುಡುವ ಬಿಸಿಲಿನಿಂದ ಪಾರಾಗಲು ನೀವು ಮಾಡಲೇಬೇಕಾದ ಬದಲಾವಣೆಗಳೇನು? -
ಬಿಸಿಗಾಳಿಯ ಆರ್ಭಟ: ನಿಮ್ಮ ಬೆಳಗಿನ ವ್ಯಾಯಾಮದ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು!
ಕೆಮ್ಮು , ಶೀತಕ್ಕೆ ಅರಿಶಿನ-ಕರಿಮೆಣಸಿನ ಬಿಸಿ ಬಿಸಿ ಹಾಲು!
ಬಿಸಿಹಾಲಿಗೆ ಅರಿಶಿನ ಹಾಗೂ ಕರಿಮೆಣಸಿನ ಹುಡಿಯನ್ನು ಹಾಕಿ ಕುಡಿಯುವುದರಿಂದ ಕೆಮ್ಮು ಹಾಗೂ ಶೀತವನ್ನು ನಿವಾರಣೆ ಮಾಡಬಹುದು
ಚಳಿಗಾಲ ಆರಂಭವಾಗುತ್ತಿರುವಂತೆ ಶೀತ, ಕೆಮ್ಮು ಸಾಮಾನ್ಯವಾಗಿ ಪ್ರತಿಯೊಬ್ಬರನ್ನು ಕಾಡಲು ಆರಂಭಿಸುತ್ತದೆ. ಒಂದೆರಡು ದಿನದಲ್ಲಿ ಇದು ಕಡಿಮೆಯಾಗದೆ ಇದ್ದರೆ ನಾವು ವೈದ್ಯರನ್ನು ಭೇಟಿಯಾಗುತ್ತೇವೆ. ಆದರೆ ಮನೆಯಲ್ಲಿ ಮಾಡುವಂತಹ ಕೆಲವೊಂದು ಮದ್ದುಗಳು ಇಂತಹ ಸಾಮಾನ್ಯ ಕೆಮ್ಮು ಹಾಗೂ ಶೀತವನ್ನು ಗುಣಪಡಿಸುವುದು. ಬಿಸಿಹಾಲಿಗೆ ಅರಿಶಿನ ಹಾಗೂ ಕರಿಮೆಣಸಿನ ಹುಡಿಯನ್ನು ಹಾಕಿ ಕುಡಿಯುವುದರಿಂದ ಕೆಮ್ಮು ಹಾಗೂ ಶೀತವನ್ನು ನಿವಾರಣೆ ಮಾಡಬಹುದು ಎಂದು ನಾವೆಲ್ಲರೂ ಕೇಳಿದ್ದೇವೆ. 9 ಭಯಂಕರ ಕಾಯಿಲೆಗೆ ಮನೆಮದ್ದು ಈ ಕರಿಮೆಣಸು!

ಆದರೆ ಇದು ನಿಜವಾಗಿಯೂ ಒಳ್ಳೆಯ ಔಷಧಿಯೇ? ಅಥವಾ ಕೇವಲ ಕಟ್ಟುಕತೆಯೇ ಎನ್ನುವ ಪ್ರಶ್ನೆ ಸಹಜ. ಯಾಕೆಂದರೆ ಕೆಲವು ಮಂದಿ ಹಲವಾರು ಮನೆಮದ್ದುಗಳನ್ನು ಪ್ರಯೋಗಿಸಿ ಅದರಿಂದ ಪರಿಣಾಮ ಕಾಣದೆ ಕಂಗೆಟ್ಟು ಅದರ ಸಹವಾಸವೇ ಬೇಡ ಅಂದುಕೊಂಡಿದ್ದಾರೆ.
ಬಿಸಿ ಹಾಲಿಗೆ ಅರಿಶಿನ ಹಾಗೂ ಕರಿಮೆಣಸಿನ ಹುಡಿಯನ್ನು ಹಾಕಿ ಕುಡಿಯುವುದರಿಂದ ಕೆಮ್ಮು ಹಾಗೂ ಶೀತ ಕಡಿಮೆಯಾಗುತ್ತದೆ ಎನ್ನಲಾಗುತ್ತದೆ. ಇದರ ಬಗ್ಗೆ ನಾವು ತಿಳಿದುಕೊಳ್ಳುವ. ಹಾಲು-ಅರಿಶಿನದ ಜೋಡಿ ಮಾಡಲಿದೆ ಕಮಾಲಿನ ಮೋಡಿ!
ಮನೆಮದ್ದನ್ನು ತಯಾರಿಸುವ ಹಾಗೂ ಬಳಸುವ ವಿಧಾನ
ಕೆಮ್ಮು ಹಾಗೂ ಶೀತಕ್ಕೆ ಪರಿಹಾರ ನೀಡುವಂತಹ ಈ ಮನೆಮದ್ದನ್ನು ತಯಾರಿಸಲು ಒಂದು ಲೋಟ ಹಾಲಿಗೆ ಅರ್ಧ ಚಮಚ ಕರಿಮೆಣಸಿನ ಹುಡಿ ಮತ್ತು ಎರಡು ಚಮಚ ಅರಿಶಿನವನ್ನು ಹಾಕಿ ಸರಿಯಾಗಿ ಕಳಸಿಕೊಳ್ಳಿ. ಈ ಮದ್ದನ್ನು ದಿನದಲ್ಲಿ ಎರಡು ಸಲ ಕುಡಿದರೆ ಪರಿಹಾರ ಕಾಣಬಹುದು. ಜ್ವರ ಶೀತಕ್ಕೆ ಸಿದ್ಧೌಷಧ-ಬೆಳ್ಳುಳ್ಳಿ ಕರಿಮೆಣಸು ರಸಂ
ಮನೆಮದ್ದು ಯಾವ ರೀತಿ ಕೆಲಸ ಮಾಡುವುದು?
ಬಿಸಿ ಹಾಲು, ಕರಿಮೆಣಸಿನ ಹುಡಿ ಮತ್ತು ಅರಿಶಿನದ ಮಿಶ್ರಣವು ಗಂಟಲನ್ನು ಶಮನಗೊಳಿಸಿ ಕೆಮ್ಮು ಹಾಗೂ ಶೀತದ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ ಎಂದು ಹಲವಾರು ಅಧ್ಯಯನಗಳು ಹೇಳಿವೆ. ಬಿಸಿ ಹಾಲು ಗಂಟಲಿನಲ್ಲಿರುವಂತಹ ಕಫವನ್ನು ದೂರ ಮಾಡುತ್ತದೆ. ಇದರಿಂದ ಕೆಮ್ಮು ಹಾಗೂ ಗಂಟಲಿನಲ್ಲಿ ಉಂಟಾಗುವಂತಹ ಕಿರಿಕಿರಿ ಕಡಿಮೆಯಾಗಿ ಪರಿಹಾರ ಸಿಗುತ್ತದೆ.
ಅರಿಶಿನ ಮತ್ತು ಕರಿಮೆಣಸಿನಲ್ಲಿ ಉರಿಯೂತ ಶಮನಕಾರಿ ಹಾಗೂ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಇರುವ ಕಾರಣದಿಂದ ಬ್ಯಾಕ್ಟೀರಿಯಾದಿಂದ ಆಗುವಂತಹ ಸೋಂಕವನ್ನು ನಿವಾರಣೆ ಮಾಡುತ್ತದೆ. ಇದರಿಂದ ಸಾಮಾನ್ಯ ಶೀತ ಹಾಗೂ ಕೆಮ್ಮನ್ನು ಶಮನ ಮಾಡುತ್ತದೆ.
ಮುಂದಿನ ಸಲ ನಿಮಗೆ ಕೆಮ್ಮು ಹಾಗೂ ಶೀತ ಕಾಣಿಸಿಕೊಂಡರೆ ಅರಿಶಿನ, ಕರಿಮೆಣಸಿನ ಹುಡಿ ಹಾಕಿ ಬಿಸಿ ಹಾಲು ಕುಡಿಯಿರಿ. ಇದು ಖಂಡಿತವಾಗಿಯೂ ನಿಮ್ಮ ಶೀತ ಹಾಗೂ ಕೆಮ್ಮನ್ನು ನಿವಾರಿಸುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications



