Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೆಂತೆ ಕಾಳು ನೆನೆಸಿದ ನೀರು- ಆಯಸ್ಸು ನೂರು!
ಒಂದು ಲೋಟ ನೀರಿಗೆ ಎರಡು ಚಮಚ ಮೆಂತೆ ಕಾಳುಗಳನ್ನು ಹಾಕಿ ರಾತ್ರಿಯಿಡಿ ನೆನೆಸಿಟ್ಟು, ಬೆಳಿಗ್ಗೆ ಇದನ್ನು ಸೋಸಿಕೊಂಡು ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ, ಆರೋಗ್ಯ ವೃದ್ಧಿಸುವುದು....
ಭಾರತೀಯ ಆಯುರ್ವೇದ ಔಷಧಿಯಲ್ಲಿ ಹಿಂದಿನಿಂದಲೂ ತನ್ನದೇ ಆದ ಸ್ಥಾನ ಪಡೆದುಕೊಂಡು ಬಂದಿರುವಂತಹ ಮೆಂತೆ ಕಾಳಿನಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇವೆ. ಇದು ಕಾಯಿಲೆಗಳನ್ನು ನಿವಾರಿಸುವುದು ಮಾತ್ರವಲ್ಲದೆ ಕೆಲವೊಂದು ರೋಗಗಳು ಬರದಂತೆ ತಡೆಯುವುದು.
ಹೌದು, ಮೆಂತೆ ಕಾಳು ನೆನೆಸಿದ ನೀರಿನ ಉಪಯೋಗವನ್ನು ಪಡೆದುಕೊಳ್ಳಬೇಕಾದರೆ ಈ ಲೇಖನವನ್ನು ಓದಬೇಕು. ಒಂದು ಲೋಟ ನೀರಿಗೆ ಎರಡು ಚಮಚ ಮೆಂತೆ ಕಾಳುಗಳನ್ನು ಹಾಕಿ ರಾತ್ರಿಯಿಡಿ ನೆನೆಸಿಡಬೇಕು. ಬೆಳಿಗ್ಗೆ ಇದನ್ನು ಸೋಸಿಕೊಂಡು ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.
ಇದರ ಲಾಭ ಪಡೆಯಬೇಕಾದರೆ ಒಂದು ತಿಂಗಳ ಕಾಲ ಹೀಗೆ ಮುಂದುವರೆಸಿ, ಆರೋಗ್ಯ ವೃದ್ಧಿಸಿಕೊಳ್ಳಿ.... ಬನ್ನಿ ಇದರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಫೋಟೋ ಕ್ಲಿಕ್ ಮಾಡಿ....

ತೂಕ ಕಳೆದುಕೊಳ್ಳಲು
ಮೆಂತೆ ನೆನಸಿದ ನೀರನ್ನು ಕುಡಿಯುವುದರಿಂದ ಮತ್ತು ನೆನೆಸಿದ ಮೆಂತೆಯನ್ನು ಸ್ವಲ್ಪ ತಿನ್ನುವುದರಿಂದ ಹಸಿವು ಕಡಿಮೆಯಾಗುವುದು. ಇದರಿಂದ ತೂಕ ಕಳೆದುಕೊಳ್ಳಲು ಸಹಕಾರಿ.

ಜೀರ್ಣಕ್ರಿಯೆ
ಮೆಂತೆ ನೀರಿನಲ್ಲಿರುವ ಉರಿಯೂತ ಶಮನಕಾರಿ ಗುಣವು ಜೀರ್ಣಕ್ರಿಯೆಯು ಸರಾಗವಾಗಲು ನೆರವಾಗುವುದು ಮತ್ತು ಹೊಟ್ಟೆ ಉರಿಯನ್ನು ಶಮಗೊಳಿಸುವುದು.

ರಕ್ತದೊತ್ತಡ ನಿಯಂತ್ರಿಸುವುದು
ಮೆಂತೆಯಲ್ಲಿ ಗ್ಲಾಕ್ಟೊಮನ್ನನ್ ಮತ್ತು ಪೊಟಾಶಿಯಂ ಇದೆ. ಇವೆರಡು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿ.

ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುವುದು
ಮೆಂತೆಯು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ತೆಗೆದುಹಾಕುವುದು ಎಂದು ಹಲವಾರು ಅಧ್ಯಯನಗಳು ಹೇಳಿವೆ. ಇದರೊಂದಿಗೆ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಇದು ಕಾಪಾಡುವುದು.

ಸಂಧಿವಾತ
ಆ್ಯಂಟಿಆಕ್ಸಿಡೆಂಟ್ ಹಾಗೂ ಉರಿಯೂತ ಶಮನಕಾರಿ ಗುಣವನ್ನು ಹೊಂದಿರುವ ಮೆಂತ್ಯೆಯು ಸಂಧಿವಾತದ ನೋವನ್ನು ನಿವಾರಿಸುವುದು.

ಕ್ಯಾನ್ಸರ್ ತಡೆಗಟ್ಟುವುದು
ಮೆಂತೆಯು ದೇಹದ ಅದರಲ್ಲೂ ಕರುಳಿನಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದುಹಾಕುವುದರಿಂದ ಕ್ಯಾನ್ಸರ್ ಬರದಂತೆ ತಡೆಯುವುದು.

ಮಧುಮೇಹ
ಮೆಂತೆಯಲ್ಲಿ ಗ್ಲಾಕ್ಟೊಮನ್ನನ್ ಎನ್ನುವ ಪ್ರಮುಖ ನಾರಿನಾಂಶವು ರಕ್ತವು ಸಕ್ಕರೆ ಅಂಶವು ಹೀರಿಕೊಳ್ಳುವುದನ್ನು ತಗ್ಗಿಸುವುದು. ಇದರಿಂದ ಮಧುಮೇಹ ತಡೆಯಬಹುದು.

ಕಿಡ್ನಿಯ ಕಲ್ಲು
ಖಾಲಿ ಹೊಟ್ಟೆಯಲ್ಲಿ ಒಂದು ತಿಂಗಳ ಕಾಲ ಮೆಂತೆ ನೆನೆಸಿದ ನೀರನ್ನು ಕುಡಿಯಿರಿ. ಇದು ಕಿಡ್ನಿಯಲ್ಲಿ ಕಲ್ಲನ್ನು ಹೊರಹಾಕಲು ನೆರವಾಗುವುದು.



Click it and Unblock the Notifications