Latest Updates
-
ಬಿಸಿಲ ಬೇಗೆಯಲ್ಲಿ ದಂಪತಿಗಳ ನಡುವೆ ಹೆಚ್ಚಿದ ಕಿರಿಕಿರಿ: ಸಂಬಂಧ ಹಾಳಾಗದಂತೆ ತಡೆಯಲು ಈ ಟಿಪ್ಸ್ ಪಾಲಿಸಿ -
ಬಿಸಿಗಾಳಿಯ ಆರ್ಭಟಕ್ಕೆ ಹೆದರಬೇಡಿ: ಎಸಿ ಇಲ್ಲದಿದ್ದರೂ ನಿಮ್ಮ ಮನೆಯನ್ನು ಐಸ್ನಂತೆ ತಂಪಾಗಿರಿಸುವ ಅದ್ಭುತ ಟ್ರಿಕ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ ತಡೆಯಲು ಈ ಆಹಾರಗಳೇ ನಿಮ್ಮ ಬೆಸ್ಟ್ ಫ್ರೆಂಡ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರವಿರಲಿ! -
ಬಿಸಿಲ ಬೇಗೆಯಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಸಣ್ಣ ಬದಲಾವಣೆಗಳನ್ನು ಮಿಸ್ ಮಾಡ್ಬೇಡಿ! -
ಬಾಡಿಗೆ ಮನೆಯಲ್ಲಿ ಬಿಸಿಲಿನ ಬೇಗೆಯಿಂದ ಪಾರಾಗುವುದು ಹೇಗೆ? ಕರೆಂಟ್ ಬಿಲ್ ಉಳಿಸುವ ಸೀಕ್ರೆಟ್ ಟಿಪ್ಸ್ ಇಲ್ಲಿದೆ! -
ಬಿಸಿಲ ಬೇಗೆಯಲ್ಲಿ ಮಧುಮೇಹಿಗಳ ಪರದಾಟ: ಸಕ್ಕರೆ ಮಟ್ಟ ಏರಿಕೆಯಾಗದಂತೆ ತಂಪಾಗಿರಲು ಈ ಪಾನೀಯಗಳೇ ಮದ್ದು! -
ಇಂದೇ ಮ್ಯೂಸಿಯಂಗೆ ಹೋಗಿ: ಉಚಿತ ಪ್ರವೇಶದ ಜೊತೆಗೆ ಫೋಟೋಶೂಟ್ಗೆ ಸಿಗಲಿದೆ ಸುವರ್ಣಾವಕಾಶ, ಮಿಸ್ ಮಾಡ್ಬೇಡಿ! -
ಶಾಖದ ಅಲೆ ಎಚ್ಚರಿಕೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ, ಇಲ್ಲಿದೆ ಸುರಕ್ಷಿತ ಮಾರ್ಗ! -
ಬಿಸಿಲಿನ ಬೇಗೆಯಲ್ಲೂ ಮದುವೆ ಸಂಭ್ರಮ ಮರೆಯಾಗದಿರಲಿ: ಅತಿಥಿಗಳಿಗಾಗಿ ಈ ಸಣ್ಣ ಬದಲಾವಣೆಗಳನ್ನು ಮಾಡಿ ನೋಡಿ!
ಮೆಂತೆ ಕಾಳು ನೆನೆಸಿದ ನೀರು- ಆಯಸ್ಸು ನೂರು!
ಒಂದು ಲೋಟ ನೀರಿಗೆ ಎರಡು ಚಮಚ ಮೆಂತೆ ಕಾಳುಗಳನ್ನು ಹಾಕಿ ರಾತ್ರಿಯಿಡಿ ನೆನೆಸಿಟ್ಟು, ಬೆಳಿಗ್ಗೆ ಇದನ್ನು ಸೋಸಿಕೊಂಡು ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ, ಆರೋಗ್ಯ ವೃದ್ಧಿಸುವುದು....
ಭಾರತೀಯ ಆಯುರ್ವೇದ ಔಷಧಿಯಲ್ಲಿ ಹಿಂದಿನಿಂದಲೂ ತನ್ನದೇ ಆದ ಸ್ಥಾನ ಪಡೆದುಕೊಂಡು ಬಂದಿರುವಂತಹ ಮೆಂತೆ ಕಾಳಿನಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇವೆ. ಇದು ಕಾಯಿಲೆಗಳನ್ನು ನಿವಾರಿಸುವುದು ಮಾತ್ರವಲ್ಲದೆ ಕೆಲವೊಂದು ರೋಗಗಳು ಬರದಂತೆ ತಡೆಯುವುದು.
ಹೌದು, ಮೆಂತೆ ಕಾಳು ನೆನೆಸಿದ ನೀರಿನ ಉಪಯೋಗವನ್ನು ಪಡೆದುಕೊಳ್ಳಬೇಕಾದರೆ ಈ ಲೇಖನವನ್ನು ಓದಬೇಕು. ಒಂದು ಲೋಟ ನೀರಿಗೆ ಎರಡು ಚಮಚ ಮೆಂತೆ ಕಾಳುಗಳನ್ನು ಹಾಕಿ ರಾತ್ರಿಯಿಡಿ ನೆನೆಸಿಡಬೇಕು. ಬೆಳಿಗ್ಗೆ ಇದನ್ನು ಸೋಸಿಕೊಂಡು ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.
ಇದರ ಲಾಭ ಪಡೆಯಬೇಕಾದರೆ ಒಂದು ತಿಂಗಳ ಕಾಲ ಹೀಗೆ ಮುಂದುವರೆಸಿ, ಆರೋಗ್ಯ ವೃದ್ಧಿಸಿಕೊಳ್ಳಿ.... ಬನ್ನಿ ಇದರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಫೋಟೋ ಕ್ಲಿಕ್ ಮಾಡಿ....

ತೂಕ ಕಳೆದುಕೊಳ್ಳಲು
ಮೆಂತೆ ನೆನಸಿದ ನೀರನ್ನು ಕುಡಿಯುವುದರಿಂದ ಮತ್ತು ನೆನೆಸಿದ ಮೆಂತೆಯನ್ನು ಸ್ವಲ್ಪ ತಿನ್ನುವುದರಿಂದ ಹಸಿವು ಕಡಿಮೆಯಾಗುವುದು. ಇದರಿಂದ ತೂಕ ಕಳೆದುಕೊಳ್ಳಲು ಸಹಕಾರಿ.

ಜೀರ್ಣಕ್ರಿಯೆ
ಮೆಂತೆ ನೀರಿನಲ್ಲಿರುವ ಉರಿಯೂತ ಶಮನಕಾರಿ ಗುಣವು ಜೀರ್ಣಕ್ರಿಯೆಯು ಸರಾಗವಾಗಲು ನೆರವಾಗುವುದು ಮತ್ತು ಹೊಟ್ಟೆ ಉರಿಯನ್ನು ಶಮಗೊಳಿಸುವುದು.

ರಕ್ತದೊತ್ತಡ ನಿಯಂತ್ರಿಸುವುದು
ಮೆಂತೆಯಲ್ಲಿ ಗ್ಲಾಕ್ಟೊಮನ್ನನ್ ಮತ್ತು ಪೊಟಾಶಿಯಂ ಇದೆ. ಇವೆರಡು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿ.

ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುವುದು
ಮೆಂತೆಯು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ತೆಗೆದುಹಾಕುವುದು ಎಂದು ಹಲವಾರು ಅಧ್ಯಯನಗಳು ಹೇಳಿವೆ. ಇದರೊಂದಿಗೆ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಇದು ಕಾಪಾಡುವುದು.

ಸಂಧಿವಾತ
ಆ್ಯಂಟಿಆಕ್ಸಿಡೆಂಟ್ ಹಾಗೂ ಉರಿಯೂತ ಶಮನಕಾರಿ ಗುಣವನ್ನು ಹೊಂದಿರುವ ಮೆಂತ್ಯೆಯು ಸಂಧಿವಾತದ ನೋವನ್ನು ನಿವಾರಿಸುವುದು.

ಕ್ಯಾನ್ಸರ್ ತಡೆಗಟ್ಟುವುದು
ಮೆಂತೆಯು ದೇಹದ ಅದರಲ್ಲೂ ಕರುಳಿನಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದುಹಾಕುವುದರಿಂದ ಕ್ಯಾನ್ಸರ್ ಬರದಂತೆ ತಡೆಯುವುದು.

ಮಧುಮೇಹ
ಮೆಂತೆಯಲ್ಲಿ ಗ್ಲಾಕ್ಟೊಮನ್ನನ್ ಎನ್ನುವ ಪ್ರಮುಖ ನಾರಿನಾಂಶವು ರಕ್ತವು ಸಕ್ಕರೆ ಅಂಶವು ಹೀರಿಕೊಳ್ಳುವುದನ್ನು ತಗ್ಗಿಸುವುದು. ಇದರಿಂದ ಮಧುಮೇಹ ತಡೆಯಬಹುದು.

ಕಿಡ್ನಿಯ ಕಲ್ಲು
ಖಾಲಿ ಹೊಟ್ಟೆಯಲ್ಲಿ ಒಂದು ತಿಂಗಳ ಕಾಲ ಮೆಂತೆ ನೆನೆಸಿದ ನೀರನ್ನು ಕುಡಿಯಿರಿ. ಇದು ಕಿಡ್ನಿಯಲ್ಲಿ ಕಲ್ಲನ್ನು ಹೊರಹಾಕಲು ನೆರವಾಗುವುದು.



Click it and Unblock the Notifications