Latest Updates
-
ದೇವಶಯನಿ ಏಕಾದಶಿ: ದಂಪತಿಗಳ ಬಾಂಧವ್ಯ ಹೆಚ್ಚಿಸಲು ಈ ಉಪವಾಸದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ತೇವಾಂಶ: ನಿಮ್ಮ ದುಬಾರಿ ಸೀರೆ ಮತ್ತು ಶೂಗಳನ್ನು ಬೂಸ್ಟ್ನಿಂದ ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಸಾಕು! -
ಅಹಮದಾಬಾದ್ ಮಳೆ: ಪ್ರವಾಹದ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಮಾರ್ಗಸೂಚಿಗಳನ್ನು ಅನುಸರಿಸಿ -
ಕಾಮನ್ವೆಲ್ತ್ ಗೇಮ್ಸ್ 2026: 3ನೇ ದಿನ ಭಾರತದ ಆಟಗಾರರ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ! -
ಮಳೆಗಾಲದ ಜಾರುವ ರಸ್ತೆಗಳಲ್ಲಿ ನಡೆಯುವಾಗ ಎಚ್ಚರ: ಸುರಕ್ಷಿತವಾಗಿರಲು 8 ನಿಮಿಷಗಳ ಈ ವ್ಯಾಯಾಮ ಮಾಡಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು 45 ನಿಮಿಷದಲ್ಲಿ ಟ್ಯಾಕ್ಸ್ ಫೈಲ್ ಮಾಡುವುದು ಹೇಗೆ? -
ಪ್ರವಾಹದ ನೀರು ಮನೆಯೊಳಗೆ ನುಗ್ಗಿದೆಯೇ? ಆಸ್ತಿ ಮತ್ತು ಆರೋಗ್ಯ ರಕ್ಷಣೆಗೆ ತಕ್ಷಣ ಮಾಡಬೇಕಾದ ಕೆಲಸಗಳಿವು -
ಬೆಂಗಳೂರಿನಲ್ಲಿ ಮೊಟ್ಟೆ ಬೆಲೆ ಏರಿಕೆ: ಬಜೆಟ್ ಉಳಿಸಲು ಇಲ್ಲಿದೆ ಬೆಸ್ಟ್ ಪ್ರೋಟೀನ್ ಆಯ್ಕೆಗಳು! -
ಇನ್ಸ್ಟಾಗ್ರಾಮ್ ಡೌನ್: ಆತಂಕ ಬೇಡ, ನಿಮ್ಮ ಅಕೌಂಟ್ ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ಮಳೆ ರಜೆ ದಿನ ಮನೆಯಲ್ಲೇ ಫಿಟ್ ಆಗಿರಲು 12 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ!
ಮೆಂತೆ ಕಾಳು ನೆನೆಸಿದ ನೀರು- ಆಯಸ್ಸು ನೂರು!
ಒಂದು ಲೋಟ ನೀರಿಗೆ ಎರಡು ಚಮಚ ಮೆಂತೆ ಕಾಳುಗಳನ್ನು ಹಾಕಿ ರಾತ್ರಿಯಿಡಿ ನೆನೆಸಿಟ್ಟು, ಬೆಳಿಗ್ಗೆ ಇದನ್ನು ಸೋಸಿಕೊಂಡು ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ, ಆರೋಗ್ಯ ವೃದ್ಧಿಸುವುದು....
ಭಾರತೀಯ ಆಯುರ್ವೇದ ಔಷಧಿಯಲ್ಲಿ ಹಿಂದಿನಿಂದಲೂ ತನ್ನದೇ ಆದ ಸ್ಥಾನ ಪಡೆದುಕೊಂಡು ಬಂದಿರುವಂತಹ ಮೆಂತೆ ಕಾಳಿನಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇವೆ. ಇದು ಕಾಯಿಲೆಗಳನ್ನು ನಿವಾರಿಸುವುದು ಮಾತ್ರವಲ್ಲದೆ ಕೆಲವೊಂದು ರೋಗಗಳು ಬರದಂತೆ ತಡೆಯುವುದು.
ಹೌದು, ಮೆಂತೆ ಕಾಳು ನೆನೆಸಿದ ನೀರಿನ ಉಪಯೋಗವನ್ನು ಪಡೆದುಕೊಳ್ಳಬೇಕಾದರೆ ಈ ಲೇಖನವನ್ನು ಓದಬೇಕು. ಒಂದು ಲೋಟ ನೀರಿಗೆ ಎರಡು ಚಮಚ ಮೆಂತೆ ಕಾಳುಗಳನ್ನು ಹಾಕಿ ರಾತ್ರಿಯಿಡಿ ನೆನೆಸಿಡಬೇಕು. ಬೆಳಿಗ್ಗೆ ಇದನ್ನು ಸೋಸಿಕೊಂಡು ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.
ಇದರ ಲಾಭ ಪಡೆಯಬೇಕಾದರೆ ಒಂದು ತಿಂಗಳ ಕಾಲ ಹೀಗೆ ಮುಂದುವರೆಸಿ, ಆರೋಗ್ಯ ವೃದ್ಧಿಸಿಕೊಳ್ಳಿ.... ಬನ್ನಿ ಇದರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಫೋಟೋ ಕ್ಲಿಕ್ ಮಾಡಿ....

ತೂಕ ಕಳೆದುಕೊಳ್ಳಲು
ಮೆಂತೆ ನೆನಸಿದ ನೀರನ್ನು ಕುಡಿಯುವುದರಿಂದ ಮತ್ತು ನೆನೆಸಿದ ಮೆಂತೆಯನ್ನು ಸ್ವಲ್ಪ ತಿನ್ನುವುದರಿಂದ ಹಸಿವು ಕಡಿಮೆಯಾಗುವುದು. ಇದರಿಂದ ತೂಕ ಕಳೆದುಕೊಳ್ಳಲು ಸಹಕಾರಿ.

ಜೀರ್ಣಕ್ರಿಯೆ
ಮೆಂತೆ ನೀರಿನಲ್ಲಿರುವ ಉರಿಯೂತ ಶಮನಕಾರಿ ಗುಣವು ಜೀರ್ಣಕ್ರಿಯೆಯು ಸರಾಗವಾಗಲು ನೆರವಾಗುವುದು ಮತ್ತು ಹೊಟ್ಟೆ ಉರಿಯನ್ನು ಶಮಗೊಳಿಸುವುದು.

ರಕ್ತದೊತ್ತಡ ನಿಯಂತ್ರಿಸುವುದು
ಮೆಂತೆಯಲ್ಲಿ ಗ್ಲಾಕ್ಟೊಮನ್ನನ್ ಮತ್ತು ಪೊಟಾಶಿಯಂ ಇದೆ. ಇವೆರಡು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿ.

ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುವುದು
ಮೆಂತೆಯು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ತೆಗೆದುಹಾಕುವುದು ಎಂದು ಹಲವಾರು ಅಧ್ಯಯನಗಳು ಹೇಳಿವೆ. ಇದರೊಂದಿಗೆ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಇದು ಕಾಪಾಡುವುದು.

ಸಂಧಿವಾತ
ಆ್ಯಂಟಿಆಕ್ಸಿಡೆಂಟ್ ಹಾಗೂ ಉರಿಯೂತ ಶಮನಕಾರಿ ಗುಣವನ್ನು ಹೊಂದಿರುವ ಮೆಂತ್ಯೆಯು ಸಂಧಿವಾತದ ನೋವನ್ನು ನಿವಾರಿಸುವುದು.

ಕ್ಯಾನ್ಸರ್ ತಡೆಗಟ್ಟುವುದು
ಮೆಂತೆಯು ದೇಹದ ಅದರಲ್ಲೂ ಕರುಳಿನಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದುಹಾಕುವುದರಿಂದ ಕ್ಯಾನ್ಸರ್ ಬರದಂತೆ ತಡೆಯುವುದು.

ಮಧುಮೇಹ
ಮೆಂತೆಯಲ್ಲಿ ಗ್ಲಾಕ್ಟೊಮನ್ನನ್ ಎನ್ನುವ ಪ್ರಮುಖ ನಾರಿನಾಂಶವು ರಕ್ತವು ಸಕ್ಕರೆ ಅಂಶವು ಹೀರಿಕೊಳ್ಳುವುದನ್ನು ತಗ್ಗಿಸುವುದು. ಇದರಿಂದ ಮಧುಮೇಹ ತಡೆಯಬಹುದು.

ಕಿಡ್ನಿಯ ಕಲ್ಲು
ಖಾಲಿ ಹೊಟ್ಟೆಯಲ್ಲಿ ಒಂದು ತಿಂಗಳ ಕಾಲ ಮೆಂತೆ ನೆನೆಸಿದ ನೀರನ್ನು ಕುಡಿಯಿರಿ. ಇದು ಕಿಡ್ನಿಯಲ್ಲಿ ಕಲ್ಲನ್ನು ಹೊರಹಾಕಲು ನೆರವಾಗುವುದು.



Click it and Unblock the Notifications