Just In
- 1 hr ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 2 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 2 hrs ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- 3 hrs ago ಏಪ್ರಿಲ್ 24 ದಿನ ಭವಿಷ್ಯ: ಬುಧವಾರದ ಈ ದಿನ ನಿಮ್ಮ ರಾಶಿಫಲ ಹೇಗಿದೆ?
Don't Miss
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೆಂತೆ ಕಾಳು ನೆನೆಸಿದ ನೀರು- ಆಯಸ್ಸು ನೂರು!
ಒಂದು ಲೋಟ ನೀರಿಗೆ ಎರಡು ಚಮಚ ಮೆಂತೆ ಕಾಳುಗಳನ್ನು ಹಾಕಿ ರಾತ್ರಿಯಿಡಿ ನೆನೆಸಿಟ್ಟು, ಬೆಳಿಗ್ಗೆ ಇದನ್ನು ಸೋಸಿಕೊಂಡು ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ, ಆರೋಗ್ಯ ವೃದ್ಧಿಸುವುದು....
ಭಾರತೀಯ ಆಯುರ್ವೇದ ಔಷಧಿಯಲ್ಲಿ ಹಿಂದಿನಿಂದಲೂ ತನ್ನದೇ ಆದ ಸ್ಥಾನ ಪಡೆದುಕೊಂಡು ಬಂದಿರುವಂತಹ ಮೆಂತೆ ಕಾಳಿನಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇವೆ. ಇದು ಕಾಯಿಲೆಗಳನ್ನು ನಿವಾರಿಸುವುದು ಮಾತ್ರವಲ್ಲದೆ ಕೆಲವೊಂದು ರೋಗಗಳು ಬರದಂತೆ ತಡೆಯುವುದು.
ಹೌದು, ಮೆಂತೆ ಕಾಳು ನೆನೆಸಿದ ನೀರಿನ ಉಪಯೋಗವನ್ನು ಪಡೆದುಕೊಳ್ಳಬೇಕಾದರೆ ಈ ಲೇಖನವನ್ನು ಓದಬೇಕು. ಒಂದು ಲೋಟ ನೀರಿಗೆ ಎರಡು ಚಮಚ ಮೆಂತೆ ಕಾಳುಗಳನ್ನು ಹಾಕಿ ರಾತ್ರಿಯಿಡಿ ನೆನೆಸಿಡಬೇಕು. ಬೆಳಿಗ್ಗೆ ಇದನ್ನು ಸೋಸಿಕೊಂಡು ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.
ಇದರ ಲಾಭ ಪಡೆಯಬೇಕಾದರೆ ಒಂದು ತಿಂಗಳ ಕಾಲ ಹೀಗೆ ಮುಂದುವರೆಸಿ, ಆರೋಗ್ಯ ವೃದ್ಧಿಸಿಕೊಳ್ಳಿ.... ಬನ್ನಿ ಇದರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಫೋಟೋ ಕ್ಲಿಕ್ ಮಾಡಿ....
ತೂಕ ಕಳೆದುಕೊಳ್ಳಲು
ಮೆಂತೆ ನೆನಸಿದ ನೀರನ್ನು ಕುಡಿಯುವುದರಿಂದ ಮತ್ತು ನೆನೆಸಿದ ಮೆಂತೆಯನ್ನು ಸ್ವಲ್ಪ ತಿನ್ನುವುದರಿಂದ ಹಸಿವು ಕಡಿಮೆಯಾಗುವುದು. ಇದರಿಂದ ತೂಕ ಕಳೆದುಕೊಳ್ಳಲು ಸಹಕಾರಿ.
ಜೀರ್ಣಕ್ರಿಯೆ
ಮೆಂತೆ ನೀರಿನಲ್ಲಿರುವ ಉರಿಯೂತ ಶಮನಕಾರಿ ಗುಣವು ಜೀರ್ಣಕ್ರಿಯೆಯು ಸರಾಗವಾಗಲು ನೆರವಾಗುವುದು ಮತ್ತು ಹೊಟ್ಟೆ ಉರಿಯನ್ನು ಶಮಗೊಳಿಸುವುದು.
ರಕ್ತದೊತ್ತಡ ನಿಯಂತ್ರಿಸುವುದು
ಮೆಂತೆಯಲ್ಲಿ ಗ್ಲಾಕ್ಟೊಮನ್ನನ್ ಮತ್ತು ಪೊಟಾಶಿಯಂ ಇದೆ. ಇವೆರಡು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿ.
ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುವುದು
ಮೆಂತೆಯು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ತೆಗೆದುಹಾಕುವುದು ಎಂದು ಹಲವಾರು ಅಧ್ಯಯನಗಳು ಹೇಳಿವೆ. ಇದರೊಂದಿಗೆ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಇದು ಕಾಪಾಡುವುದು.
ಸಂಧಿವಾತ
ಆ್ಯಂಟಿಆಕ್ಸಿಡೆಂಟ್ ಹಾಗೂ ಉರಿಯೂತ ಶಮನಕಾರಿ ಗುಣವನ್ನು ಹೊಂದಿರುವ ಮೆಂತ್ಯೆಯು ಸಂಧಿವಾತದ ನೋವನ್ನು ನಿವಾರಿಸುವುದು.
ಕ್ಯಾನ್ಸರ್ ತಡೆಗಟ್ಟುವುದು
ಮೆಂತೆಯು ದೇಹದ ಅದರಲ್ಲೂ ಕರುಳಿನಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದುಹಾಕುವುದರಿಂದ ಕ್ಯಾನ್ಸರ್ ಬರದಂತೆ ತಡೆಯುವುದು.
ಮಧುಮೇಹ
ಮೆಂತೆಯಲ್ಲಿ ಗ್ಲಾಕ್ಟೊಮನ್ನನ್ ಎನ್ನುವ ಪ್ರಮುಖ ನಾರಿನಾಂಶವು ರಕ್ತವು ಸಕ್ಕರೆ ಅಂಶವು ಹೀರಿಕೊಳ್ಳುವುದನ್ನು ತಗ್ಗಿಸುವುದು. ಇದರಿಂದ ಮಧುಮೇಹ ತಡೆಯಬಹುದು.
ಕಿಡ್ನಿಯ ಕಲ್ಲು
ಖಾಲಿ ಹೊಟ್ಟೆಯಲ್ಲಿ ಒಂದು ತಿಂಗಳ ಕಾಲ ಮೆಂತೆ ನೆನೆಸಿದ ನೀರನ್ನು ಕುಡಿಯಿರಿ. ಇದು ಕಿಡ್ನಿಯಲ್ಲಿ ಕಲ್ಲನ್ನು ಹೊರಹಾಕಲು ನೆರವಾಗುವುದು.