Latest Updates
-
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ
ವಾಂತಿ, ಭೇದಿ, ಅಜೀರ್ಣ, ಸಮಸ್ಯೆಗೆ ಸೂಪರ್ ಮನೆಮದ್ದು
ಹೊಟ್ಟೆಯಲ್ಲಿ ತಳಮಳ ಶುರುವಾದರೆ ಬೇರೆ ಏನೂ ಬೇಡ ಎನ್ನುವಂತಾಗುತ್ತದೆ. ತಿನ್ನುವುದರಿಂದ ತುಂಬಾ ದೂರ ಉಳಿದುಬಿಡುತ್ತೇವೆ. ಹೊಟ್ಟೆಯಲ್ಲಿ ತಳಮಳ ಮತ್ತು ಭೇದಿ ಕಾಣಿಸಿಕೊಂಡಾಗ ದೇಹದಲ್ಲಿ ನೀರಿನಾಂಶವು ಕಡಿಮೆಯಾಗಿ ನಿಶ್ಯಕ್ತಿ ಕಾಡುತ್ತದೆ. ಈ ಸಮಯದಲ್ಲಿ ಸರಿಯಾಗಿ ಆಹಾರ ಸೇವನೆ ಮಾಡದೆ ಇರುವುದೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದೆ. ಅಜೀರ್ಣ ಸಮಸ್ಯೆಯೇ? ಇಲ್ಲಿದೆ ಸರಳ ಆಯುರ್ವೇದ ಔಷಧಿ
ಆಹಾರ ಸೇವನೆ ಮಾಡದೆ ಇದ್ದಾಗ ಮತ್ತಷ್ಟು ಸಮಸ್ಯೆ ಕಾಡಲು ಆರಂಭಿಸುತ್ತದೆ. ಹೊಟ್ಟೆ ಸರಿ ಇಲ್ಲದೆ ಇರುವಾಗ ಏನಾದರೂ ತಿನ್ನದೆ ಇದ್ದಾಗ ವಿದ್ಯುದ್ವಿಚ್ಛೇದ್ಯ ಸಮತೋಲನಕ್ಕೆ ತೊಂದರೆ ಉಂಟಾಗುತ್ತದೆ. ಇದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವುದರಲ್ಲಿ ಸಂಶಯವೇ ಇಲ್ಲ. ಹೊಟ್ಟೆಯ ಗ್ಯಾಸ್ ಕಡಿಮೆ ಮಾಡಲು 7 ಉಪಾಯ
ಹೊಟ್ಟೆ ಸರಿ ಇಲ್ಲದೆ ಇರುವಾಗ ಘನ ಆಹಾರ ಸೇವನೆ ಮಾಡಬಾರದು. ಇದರಿಂದ ಸಮಸ್ಯೆಯಾಗುತ್ತದೆ. ಆದರೆ ದ್ರವ ಆಹಾರ ಸೇವನೆ ಮಾಡಿದರೆ ಯಾವುದೇ ತೊಂದರೆಯಿಲ್ಲ. ಇಲ್ಲಿ ಪಟ್ಟಿ ಮಾಡಲಾಗಿರುವ ಐದು ಪಾನೀಯಗಳನ್ನು ಸೇವನೆ ಮಾಡುವುದರಿಂದ ನಿರ್ಜಲೀಕರಣದಿಂದ ಮುಕ್ತಿ ಪಡೆದು ಹೊಟ್ಟೆಯ ಸಮಸ್ಯೆಯೂ ಕಡಿಮೆಯಾಗುವುದು.....

ಸಕ್ಕರೆ ಹಾಗೂ ಉಪ್ಪಿನ ನೀರು
ಇದನ್ನು ಹಿಂದಿನ ಕಾಲದಿಂದಲೂ ಬಳಸಿಕೊಂಡು ಬರಲಾಗುತ್ತಿದೆ. ಸಕ್ಕರೆ ಹಾಗೂ ಸ್ವಲ್ಪ ಉಪ್ಪು ಬೆರೆಸಿರುವ ನೀರನ್ನು ಕುಡಿದರೆ ದೇಹದಲ್ಲಿ ನೀರಿನಾಂಶವು ಸರಿಯಾಗಿರುತ್ತದೆ ಮತ್ತು ವಾಂತಿ, ಭೇದಿಯಿಂದ ಉಂಟಾಗಿರುವ ನಿಶ್ಯಕ್ತಿಯಿಂದ ಪಾರಾಗಬಹುದು.

ಮಜ್ಜಿಗೆ

ಎಳನೀರು

ಕೋಕಂ ಜ್ಯೂಸ್
ಒಂದು ಲೋಟ ನೀರಿಗೆ ಒಂದು ಚಮಚ ಕೋಕಮ್ ಜ್ಯೂಸ್, ಸ್ವಲ್ಪ ಸಕ್ಕರೆ ಹಾಗೂ ಉಪ್ಪನ್ನು ಹಾಕಿ ಬೆರೆಸಿಕೊಳ್ಳಿ. ಇದರಲ್ಲಿ ಉರಿಯೂತ ಶಮನಕಾರಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣ ಹೊಂದಿರುವ ಗಾರ್ಸಿನೊಲ್ ಇರುವುದರಿಂದ ಹೊಟ್ಟೆ ಸರಿಯಿಲ್ಲದಾಗ ಇದನ್ನು ಕುಡಿಯಿರಿ. ಕೋಕಂ ಶರಬತ್ತು- ಸ್ವಲ್ಪ ಹುಳಿ, ದುಪ್ಪಟ್ಟು ಸಿಹಿ..



Click it and Unblock the Notifications









