Latest Updates
-
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್
ವಾಂತಿ, ಭೇದಿ, ಅಜೀರ್ಣ, ಸಮಸ್ಯೆಗೆ ಸೂಪರ್ ಮನೆಮದ್ದು
ಹೊಟ್ಟೆಯಲ್ಲಿ ತಳಮಳ ಶುರುವಾದರೆ ಬೇರೆ ಏನೂ ಬೇಡ ಎನ್ನುವಂತಾಗುತ್ತದೆ. ತಿನ್ನುವುದರಿಂದ ತುಂಬಾ ದೂರ ಉಳಿದುಬಿಡುತ್ತೇವೆ. ಹೊಟ್ಟೆಯಲ್ಲಿ ತಳಮಳ ಮತ್ತು ಭೇದಿ ಕಾಣಿಸಿಕೊಂಡಾಗ ದೇಹದಲ್ಲಿ ನೀರಿನಾಂಶವು ಕಡಿಮೆಯಾಗಿ ನಿಶ್ಯಕ್ತಿ ಕಾಡುತ್ತದೆ. ಈ ಸಮಯದಲ್ಲಿ ಸರಿಯಾಗಿ ಆಹಾರ ಸೇವನೆ ಮಾಡದೆ ಇರುವುದೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದೆ. ಅಜೀರ್ಣ ಸಮಸ್ಯೆಯೇ? ಇಲ್ಲಿದೆ ಸರಳ ಆಯುರ್ವೇದ ಔಷಧಿ
ಆಹಾರ ಸೇವನೆ ಮಾಡದೆ ಇದ್ದಾಗ ಮತ್ತಷ್ಟು ಸಮಸ್ಯೆ ಕಾಡಲು ಆರಂಭಿಸುತ್ತದೆ. ಹೊಟ್ಟೆ ಸರಿ ಇಲ್ಲದೆ ಇರುವಾಗ ಏನಾದರೂ ತಿನ್ನದೆ ಇದ್ದಾಗ ವಿದ್ಯುದ್ವಿಚ್ಛೇದ್ಯ ಸಮತೋಲನಕ್ಕೆ ತೊಂದರೆ ಉಂಟಾಗುತ್ತದೆ. ಇದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವುದರಲ್ಲಿ ಸಂಶಯವೇ ಇಲ್ಲ. ಹೊಟ್ಟೆಯ ಗ್ಯಾಸ್ ಕಡಿಮೆ ಮಾಡಲು 7 ಉಪಾಯ
ಹೊಟ್ಟೆ ಸರಿ ಇಲ್ಲದೆ ಇರುವಾಗ ಘನ ಆಹಾರ ಸೇವನೆ ಮಾಡಬಾರದು. ಇದರಿಂದ ಸಮಸ್ಯೆಯಾಗುತ್ತದೆ. ಆದರೆ ದ್ರವ ಆಹಾರ ಸೇವನೆ ಮಾಡಿದರೆ ಯಾವುದೇ ತೊಂದರೆಯಿಲ್ಲ. ಇಲ್ಲಿ ಪಟ್ಟಿ ಮಾಡಲಾಗಿರುವ ಐದು ಪಾನೀಯಗಳನ್ನು ಸೇವನೆ ಮಾಡುವುದರಿಂದ ನಿರ್ಜಲೀಕರಣದಿಂದ ಮುಕ್ತಿ ಪಡೆದು ಹೊಟ್ಟೆಯ ಸಮಸ್ಯೆಯೂ ಕಡಿಮೆಯಾಗುವುದು.....

ಸಕ್ಕರೆ ಹಾಗೂ ಉಪ್ಪಿನ ನೀರು
ಇದನ್ನು ಹಿಂದಿನ ಕಾಲದಿಂದಲೂ ಬಳಸಿಕೊಂಡು ಬರಲಾಗುತ್ತಿದೆ. ಸಕ್ಕರೆ ಹಾಗೂ ಸ್ವಲ್ಪ ಉಪ್ಪು ಬೆರೆಸಿರುವ ನೀರನ್ನು ಕುಡಿದರೆ ದೇಹದಲ್ಲಿ ನೀರಿನಾಂಶವು ಸರಿಯಾಗಿರುತ್ತದೆ ಮತ್ತು ವಾಂತಿ, ಭೇದಿಯಿಂದ ಉಂಟಾಗಿರುವ ನಿಶ್ಯಕ್ತಿಯಿಂದ ಪಾರಾಗಬಹುದು.

ಮಜ್ಜಿಗೆ

ಎಳನೀರು

ಕೋಕಂ ಜ್ಯೂಸ್
ಒಂದು ಲೋಟ ನೀರಿಗೆ ಒಂದು ಚಮಚ ಕೋಕಮ್ ಜ್ಯೂಸ್, ಸ್ವಲ್ಪ ಸಕ್ಕರೆ ಹಾಗೂ ಉಪ್ಪನ್ನು ಹಾಕಿ ಬೆರೆಸಿಕೊಳ್ಳಿ. ಇದರಲ್ಲಿ ಉರಿಯೂತ ಶಮನಕಾರಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣ ಹೊಂದಿರುವ ಗಾರ್ಸಿನೊಲ್ ಇರುವುದರಿಂದ ಹೊಟ್ಟೆ ಸರಿಯಿಲ್ಲದಾಗ ಇದನ್ನು ಕುಡಿಯಿರಿ. ಕೋಕಂ ಶರಬತ್ತು- ಸ್ವಲ್ಪ ಹುಳಿ, ದುಪ್ಪಟ್ಟು ಸಿಹಿ..



Click it and Unblock the Notifications