Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಅಜೀರ್ಣ ಸಮಸ್ಯೆಯೇ? ಇಲ್ಲಿದೆ ಸರಳ ಆಯುರ್ವೇದ ಔಷಧಿ
ಏನಪ್ಪಾ ಅಜೀರ್ಣಕ್ಕೆ ಏನಾದರೂ ಮದ್ದು ಇದೆಯಾ ಎಂದು ಕೇಳುವವರು ಈಗ ಹೆಚ್ಚಾಗುತ್ತಾ ಇದ್ದಾರೆ. ದಿನನಿತ್ಯದ ಕೆಲಸ ಹಾಗೂ ಆಹಾರವನ್ನು ಸರಿಯಾದ ಸಮಯದಲ್ಲಿ ಸೇವನೆ ಮಾಡದೆ ಇರುವುದು ಅಜೀರ್ಣದಂತಹ ಹಲವಾರು ಸಮಸ್ಯೆಗಳನ್ನು ಉಂಟುಮಾಡುತ್ತದೆ. ಅಜೀರ್ಣ ಸಮಸ್ಯೆ ಉಂಟಾಗದಿರಲು ಟಿಪ್ಸ್
ಅಜೀರ್ಣ ಅಥವಾ ಹೊಟ್ಟೆ ಉಬ್ಬರ ಕಾಣಿಸಿಕೊಂಡಾಗ ಒಂದು ಚಮಚ ಜೀರಿಗೆ ಅಥವಾ ಪುದೀನಾ ಎಲೆಯನ್ನು ಜಗಿದರೆ ಸಮಸ್ಯೆ ನಿವಾರಣೆಯಾಗುತ್ತದೆ. ಅಜೀರ್ಣದ ಸಮಸ್ಯೆ ಕಾಣಿಸಿಕೊಳ್ಳುವವರು ಇಲ್ಲಿ ಕೊಟ್ಟಿರುವ ಕೆಲವೊಂದು ಆಹಾರಗಳನ್ನು ತಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳುವ ಮೂಲಕ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದಾಗಿದೆ.

ಹಸಿ ಪಪ್ಪಾಯಿ
ಹಸಿ ಪಪ್ಪಾಯಿ ಸಲಾಡ್(ಸಾಸಿವೆ, ಅರಶಿನ ಮತ್ತು ಉಪ್ಪು ಬೆರೆಸಿ ಕರಿದ ಪಪ್ಪಾಯಿ) ಸೇವನೆ ಮಾಡಬೇಕು. ಪಪ್ಪಾಯಿಯನ್ನು ತುರಿದುಕೊಂಡು ಪರಾಟ ಅಥವಾ ದೋಸೆಗೆ ಹಾಕಬಹುದು. ಇದರಿಂದ ಜೀರ್ಣಕ್ರಿಯೆ ಹೆಚ್ಚಾಗುತ್ತದೆ.ಸುಗಮ ಜೀರ್ಣಕ್ರಿಯೆಗೆ ಹಸಿ ಪಪ್ಪಾಯಿ ಹಣ್ಣು ಉಪಯುಕ್ತ

ಹಸಿ ಪಪ್ಪಾಯಿ
ಇದರಲ್ಲಿ ಪಪೈನ್ ಮತ್ತು ಚ್ಯಮೊಪಪೈನ್ ಎನ್ನುವ ಕಿಣ್ವಗಳು ಕರುಳಿನ ಕ್ರಿಯೆಯನ್ನು ಸರಾಗವಾಗಿಸುತ್ತದೆ ಮತ್ತು ಕರುಳಿನಲ್ಲಿರುವ ಹಾನಿಕಾರಕ ವಿಷಕಾರಿ ಅಂಶಗಳನ್ನು ಹೊರಗೆ ಹಾಕುತ್ತದೆ.

ಶುಂಠಿ

ಶುಂಠಿ

ಸಿಟ್ರಸ್ ಹಣ್ಣುಗಳು
ಸಿಟ್ರಸ್ ಹಣ್ಣುಗಳನ್ನು ತಿಂದರೆ ಆಸಿಡಿಟಿ ಉಂಟಾಗುತ್ತದೆ ಎನ್ನುವಂತಹ ನಂಬಿಕೆ ಹಿಂದಿನಿಂದಲೂ ಇದೆ. ಆದರೆ ಊಟಕ್ಕೆ ಮೊದಲು ಸಿಟ್ರಸ್ ಹೊಂದಿರುವ ಹಣ್ಣುಗಳನ್ನು ತಿನ್ನುವುದರಿಂದ ಮತ್ತು ಅದರ ಜ್ಯೂಸ್ ಕುಡಿಯುವುದರಿಂದ ಜೀರ್ಣಕ್ರಿಯೆಯು ಸುಗಮವಾಗುತ್ತದೆ. ಆ್ಯಂಟಿಆಕ್ಸಿಡೆಂಟ್ ಹೊಂದಿರುವ ಸಿಟ್ರಸ್ ಹಣ್ಣುಗಳು ಹಾನಿಕಾರಕ ವಿಷಕಾರಿ ಅಂಶಗಳನ್ನು ಜೀರ್ಣಕ್ರಿಯೆ ವ್ಯವಸ್ಥೆಯಿಂದ ತೆಗೆದುಹಾಕಲು ನೆರವಾಗುತ್ತದೆ. ಇಷ್ಟು ಮಾತ್ರವಲ್ಲದೆ ಪೋಷಕಾಂಶವನ್ನು ಹೀರಿಕೊಳ್ಳಲು ಸಹಕರಿಸುತ್ತದೆ.

ಮೊಸರು
ಮೊಸರನ್ನು ತಿನ್ನುವುದರಿಂದ ಅದು ಜೀರ್ಣ ಕ್ರಿಯೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಮತ್ತು ಅಜೀರ್ಣದ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ಪ್ರತಿ ದಿನ ಮೊಸರು ಸೇವಿಸಿದರೆ ಖಂಡಿತ ಮೋಸವಿಲ್ಲ

ಮೊಸರು
ಇದರಲ್ಲಿರುವ ಕಿಣ್ವಗಳು ಮತ್ತು ಒಳ್ಳೆಯ ಬ್ಯಾಕ್ಟೀರಿಯಾ ಹೊಟ್ಟೆಯನ್ನು ಸರಾಗವಾಗಿರಿಸಿ ಜೀರ್ಣಕ್ರಿಯೆಯನ್ನು ಸುಗಮವಾಗಿಸುತ್ತದೆ. ಪ್ರತೀ ದಿನ ಮೊಸರಾನ್ನ ಅಥವಾ ಒಂದು ಕಪ್ ಮೊಸರನ್ನು ಸೇವಿಸಿ.



Click it and Unblock the Notifications