Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಎಡೆಬಿಡದೆ ಕಾಡುವ ಕೆಮ್ಮಿಗೆ ಶುಂಠಿ-ಉಪ್ಪಿನ ಕಷಾಯ
ಹೊಟ್ಟೆ ಕೆಟ್ಟಿದ್ದಾಗ, ಹುಳಿತೇಗು, ಹೊಟ್ಟೆಯುರಿ, ಅಜೀರ್ಣ ಮೊದಲಾದ ಜೀರ್ಣಕ್ರಿಯೆಗೆ ಸಂಬಂಧಿಸಿದ ತೊಂದರೆ ಕಂಡುಬಂದಾಗ ಶುಂಠಿಯ ಕಷಾಯ ಅಥವಾ ಹಸಿಶುಂಠಿಯ ರಸ ಕುಡಿದು ಪರಿಹಾರ ಪಡೆದುಕೊಳ್ಳಬಹುದು. ಆದರೆ ಈ ಅದ್ಭುತ ಮಸಾಲೆವಸ್ತು ಅತ್ಯುತ್ತಮವಾದ ಕೆಮ್ಮು ನಿವಾರಕ ಎಂದು ನಿಮಗೆ ಗೊತ್ತಿತ್ತೇ?

ಹೌದು ಕೆಮ್ಮಿಗೆ ಔಷಧಿಯಾಗಿ ನಮ್ಮ ಹಿರಿಯಲು ಶುಂಠಿಯನ್ನು ನೂರಾರು ವರ್ಷಗಳಿಂದ ಬಳಸುತ್ತಾ ಬಂದಿದ್ದಾರೆ. ಹಸಿಶುಂಠಿ ಮತ್ತು ಕೊಂಚ ಉಪ್ಪನ್ನು ಬೆರೆಸಿ ಸೇವಿಸಬೇಕು. ಮುಂದಿನ ಬಾರಿ ಸತತವಾಗಿ ಕಾಡುವ ಕೆಮ್ಮು ಪ್ರಾರಂಭವಾದರೆ ಬೇರೆ ಔಷಧಿಗಳಿಗೆ ಶರಣಾಗುವ ಬದಲು ಈ ಮನೆಮದ್ದನ್ನು ಬಳಸಿ ಶೀಘ್ರವಾಗಿಯೇ ಕೆಮ್ಮಿನಿಂದ ಪಾರಾಗಬಹುದು. ಪ್ರಾಣ ಹಿಂಡುವ ಕೆಮ್ಮಿಗೆ ರಾಮಬಾಣವಾಗಿರುವ 10 ಸಿದ್ಧೌಷಧಗಳು
ಕೆಮ್ಮಿಗೆ ಕಾರಣವಾದ ಬ್ಯಾಕ್ಟೀರಿಯಾ ಮತ್ತು ವೈರಸ್ಸುಗಳನ್ನು ಶುಂಠಿಯಲ್ಲಿರುವ ಬ್ಯಾಕ್ಟೀರಿಯಾ ನಿವಾರಕ ಗುಣ ಸದೆಬಡಿಯುತ್ತದೆ. ಸಾಮಾನ್ಯವಾಗಿ ವೈರಸ್ಸುಗಳ ಧಾಳಿಯಿಂದ ನಮ್ಮ ದೇಹ ಅಂಟುಅಂಟಾದ ದ್ರವವನ್ನು ಗಂಟಲ ಒಳಭಾಗದಲ್ಲಿ ಸ್ರವಿಸುತ್ತದೆ. ಇದು ಬ್ಯಾಕ್ಟೀರಿಯಾಗಳನ್ನು ಅಂಟಿಸಿಕೊಂಡು ಕಫವಾಗುತ್ತದೆ.
ಈ ಕಫವನ್ನು ಹೊರಹಾಕುವ ಕ್ರಿಯೆಯೇ ಕೆಮ್ಮು. ಉಪ್ಪು ಬೆರೆಸಿದ ಶುಂಠಿಯ ರಸ ಈ ಕಫವನ್ನು ಸಡಿಲಗೊಳಿಸಿ ಸುಲಭವಾಗಿ ನಿವಾರಿಸಲು ನೆರವಾಗುತ್ತದೆ. ಕಫವೇ ಇಲ್ಲದ ಬಳಿಕ ಕೆಮ್ಮು ಎಲ್ಲಿಂದ? ಇದೇ ಈ ವಿಧಾನದ ಸಫಲತೆಯ ಗುಟ್ಟು. ಮಧ್ಯರಾತ್ರಿ ಕಾಡುವ ಕೆಮ್ಮು, ಏನು ಮಾಡಬೇಕು?
ಈ ಔಷಧೀಯ ಬಳಕೆಯ ವಿಧಾನ
*ಕೆಮ್ಮು ಕಡಿಮೆಯಾಗಲು ಅತ್ಯುತ್ತಮ ವಿಧಾನವೆಂದರೆ ಒಂದು ಚಿಕ್ಕ ತುಂಡು ಹಸಿಶುಂಠಿಯನ್ನು ಉಪ್ಪಿನೊಂದಿಗೆ ಜಗಿಯುವುದು. ಆದರೆ ಹಸಿಶುಂಠಿ ಕೊಂಚ ಖಾರವಾದುದರಿಂದ ಇದು ಎಲ್ಲರಿಗೂ ಸಾಧ್ಯವಾಗುವುದಿಲ್ಲ.
*ಇವರು ಹಸಿಶುಂಠಿಯನ್ನು ಕೊಂಚ ನೀರಿನಲ್ಲಿ ಕುದಿಸಿ ತಣಿಸಿ ಶೋಧಿಸಿದ ಬಳಿಕ ಚಿಟಿಕೆಯಷ್ಟು ಉಪ್ಪು ಸೇರಿಸಿ ಕುಡಿಯಬಹುದು.
ಇನ್ನೊಂದು ವಿಧಾನ:
*ಒಂದು ಚಿಕ್ಕ ತುಂಡು ಹಸಿಶುಂಠಿಯ ಸಿಪ್ಪೆ ಸುಲಿದು ಇದಕ್ಕೆ ಕೊಂಚ ಉಪ್ಪನ್ನು ಸಿಂಪಡಿಸಿ. ಈ ತುಂಡನ್ನು ಜಜ್ಜಿ ನಯವಾಗಿಸಿ ಒಂದು ಚಮಚದಲ್ಲಿ ಲೇಹ್ಯದಂತೆ ನೇರವಾಗಿ ನುಂಗಿಬಿಡುವುದು.
*ಸಾಧ್ಯವಾದರೆ ಕೊಂಚ ಅಗಿದು ರಸವನ್ನು ನುಂಗಬೇಕು. ಇದರ ಖಾರದಿಂದ ರಕ್ಷಣೆ ಪಡೆಯಲು ಈ ತುಂಡನ್ನು ಸೇವಿಸಿದ ಬಳಿಕ ಕೊಂಚ ಜೇನನ್ನು ನೆಕ್ಕುವ ಮೂಲಕ ಉರಿಯಿಂದ ತಪ್ಪಿಸಿಕೊಳ್ಳಬಹುದು. ಬೆಕ್ಕಸ ಬೆರಗಾಗಿಸುವ ಹಸಿ ಶುಂಠಿಯ ಕಾರುಬಾರು...!
ಶುಂಠಿಯ ಕಷಾಯ
*ಒಂದು ವೇಳೆ ಕೆಮ್ಮಿನೊಂದಿಗೆ ಉಸಿರಾಟದ ತೊಂದರೆಯೂ ಇದ್ದರೆ ಇದಕ್ಕೆ ಶುಂಠಿಯ ಕಷಾಯ ಉತ್ತಮ ಪರಿಹಾರವಾಗಿದೆ. *ಇದಕ್ಕಾಗಿ ಒಂದು ಲೋಟ ನೀರನ್ನು ಕುದಿಸಿ.ಇದಕ್ಕೆ ಕೊಂಚ ಹಸಿಶುಂಠಿಯ ತುಂಡುಗಳು, ಕೊಂಚವೇ ಕಾಳುಮೆಣಸು ಅಥವಾ ಕರಿಮೆಣಸು ಮತ್ತು ಕೊಂಚ ಉಪ್ಪು ಸೇರಿಸಿ ಕುದಿಸಿ.
*ಈ ನೀರು ಅರ್ಧಮಟ್ಟಕ್ಕೆ ಬರುವವರೆಗೂ ಕುದಿಸಿ ಬಳಿಕ ಉರಿ ಆರಿಸಬೇಕು. ನಂತರ ಉಗುರುಬೆಚ್ಚಗಾಗುವಷ್ಟು ತಣಿಸಿ ಸೋಸಿ ಈ ನೀರನ್ನು ಕುಡಿಯಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications




