Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಎಡೆಬಿಡದೆ ಕಾಡುವ ಕೆಮ್ಮಿಗೆ ಶುಂಠಿ-ಉಪ್ಪಿನ ಕಷಾಯ
ಹೊಟ್ಟೆ ಕೆಟ್ಟಿದ್ದಾಗ, ಹುಳಿತೇಗು, ಹೊಟ್ಟೆಯುರಿ, ಅಜೀರ್ಣ ಮೊದಲಾದ ಜೀರ್ಣಕ್ರಿಯೆಗೆ ಸಂಬಂಧಿಸಿದ ತೊಂದರೆ ಕಂಡುಬಂದಾಗ ಶುಂಠಿಯ ಕಷಾಯ ಅಥವಾ ಹಸಿಶುಂಠಿಯ ರಸ ಕುಡಿದು ಪರಿಹಾರ ಪಡೆದುಕೊಳ್ಳಬಹುದು. ಆದರೆ ಈ ಅದ್ಭುತ ಮಸಾಲೆವಸ್ತು ಅತ್ಯುತ್ತಮವಾದ ಕೆಮ್ಮು ನಿವಾರಕ ಎಂದು ನಿಮಗೆ ಗೊತ್ತಿತ್ತೇ?

ಹೌದು ಕೆಮ್ಮಿಗೆ ಔಷಧಿಯಾಗಿ ನಮ್ಮ ಹಿರಿಯಲು ಶುಂಠಿಯನ್ನು ನೂರಾರು ವರ್ಷಗಳಿಂದ ಬಳಸುತ್ತಾ ಬಂದಿದ್ದಾರೆ. ಹಸಿಶುಂಠಿ ಮತ್ತು ಕೊಂಚ ಉಪ್ಪನ್ನು ಬೆರೆಸಿ ಸೇವಿಸಬೇಕು. ಮುಂದಿನ ಬಾರಿ ಸತತವಾಗಿ ಕಾಡುವ ಕೆಮ್ಮು ಪ್ರಾರಂಭವಾದರೆ ಬೇರೆ ಔಷಧಿಗಳಿಗೆ ಶರಣಾಗುವ ಬದಲು ಈ ಮನೆಮದ್ದನ್ನು ಬಳಸಿ ಶೀಘ್ರವಾಗಿಯೇ ಕೆಮ್ಮಿನಿಂದ ಪಾರಾಗಬಹುದು. ಪ್ರಾಣ ಹಿಂಡುವ ಕೆಮ್ಮಿಗೆ ರಾಮಬಾಣವಾಗಿರುವ 10 ಸಿದ್ಧೌಷಧಗಳು
ಕೆಮ್ಮಿಗೆ ಕಾರಣವಾದ ಬ್ಯಾಕ್ಟೀರಿಯಾ ಮತ್ತು ವೈರಸ್ಸುಗಳನ್ನು ಶುಂಠಿಯಲ್ಲಿರುವ ಬ್ಯಾಕ್ಟೀರಿಯಾ ನಿವಾರಕ ಗುಣ ಸದೆಬಡಿಯುತ್ತದೆ. ಸಾಮಾನ್ಯವಾಗಿ ವೈರಸ್ಸುಗಳ ಧಾಳಿಯಿಂದ ನಮ್ಮ ದೇಹ ಅಂಟುಅಂಟಾದ ದ್ರವವನ್ನು ಗಂಟಲ ಒಳಭಾಗದಲ್ಲಿ ಸ್ರವಿಸುತ್ತದೆ. ಇದು ಬ್ಯಾಕ್ಟೀರಿಯಾಗಳನ್ನು ಅಂಟಿಸಿಕೊಂಡು ಕಫವಾಗುತ್ತದೆ.
ಈ ಕಫವನ್ನು ಹೊರಹಾಕುವ ಕ್ರಿಯೆಯೇ ಕೆಮ್ಮು. ಉಪ್ಪು ಬೆರೆಸಿದ ಶುಂಠಿಯ ರಸ ಈ ಕಫವನ್ನು ಸಡಿಲಗೊಳಿಸಿ ಸುಲಭವಾಗಿ ನಿವಾರಿಸಲು ನೆರವಾಗುತ್ತದೆ. ಕಫವೇ ಇಲ್ಲದ ಬಳಿಕ ಕೆಮ್ಮು ಎಲ್ಲಿಂದ? ಇದೇ ಈ ವಿಧಾನದ ಸಫಲತೆಯ ಗುಟ್ಟು. ಮಧ್ಯರಾತ್ರಿ ಕಾಡುವ ಕೆಮ್ಮು, ಏನು ಮಾಡಬೇಕು?
ಈ ಔಷಧೀಯ ಬಳಕೆಯ ವಿಧಾನ
*ಕೆಮ್ಮು ಕಡಿಮೆಯಾಗಲು ಅತ್ಯುತ್ತಮ ವಿಧಾನವೆಂದರೆ ಒಂದು ಚಿಕ್ಕ ತುಂಡು ಹಸಿಶುಂಠಿಯನ್ನು ಉಪ್ಪಿನೊಂದಿಗೆ ಜಗಿಯುವುದು. ಆದರೆ ಹಸಿಶುಂಠಿ ಕೊಂಚ ಖಾರವಾದುದರಿಂದ ಇದು ಎಲ್ಲರಿಗೂ ಸಾಧ್ಯವಾಗುವುದಿಲ್ಲ.
*ಇವರು ಹಸಿಶುಂಠಿಯನ್ನು ಕೊಂಚ ನೀರಿನಲ್ಲಿ ಕುದಿಸಿ ತಣಿಸಿ ಶೋಧಿಸಿದ ಬಳಿಕ ಚಿಟಿಕೆಯಷ್ಟು ಉಪ್ಪು ಸೇರಿಸಿ ಕುಡಿಯಬಹುದು.
ಇನ್ನೊಂದು ವಿಧಾನ:
*ಒಂದು ಚಿಕ್ಕ ತುಂಡು ಹಸಿಶುಂಠಿಯ ಸಿಪ್ಪೆ ಸುಲಿದು ಇದಕ್ಕೆ ಕೊಂಚ ಉಪ್ಪನ್ನು ಸಿಂಪಡಿಸಿ. ಈ ತುಂಡನ್ನು ಜಜ್ಜಿ ನಯವಾಗಿಸಿ ಒಂದು ಚಮಚದಲ್ಲಿ ಲೇಹ್ಯದಂತೆ ನೇರವಾಗಿ ನುಂಗಿಬಿಡುವುದು.
*ಸಾಧ್ಯವಾದರೆ ಕೊಂಚ ಅಗಿದು ರಸವನ್ನು ನುಂಗಬೇಕು. ಇದರ ಖಾರದಿಂದ ರಕ್ಷಣೆ ಪಡೆಯಲು ಈ ತುಂಡನ್ನು ಸೇವಿಸಿದ ಬಳಿಕ ಕೊಂಚ ಜೇನನ್ನು ನೆಕ್ಕುವ ಮೂಲಕ ಉರಿಯಿಂದ ತಪ್ಪಿಸಿಕೊಳ್ಳಬಹುದು. ಬೆಕ್ಕಸ ಬೆರಗಾಗಿಸುವ ಹಸಿ ಶುಂಠಿಯ ಕಾರುಬಾರು...!
ಶುಂಠಿಯ ಕಷಾಯ
*ಒಂದು ವೇಳೆ ಕೆಮ್ಮಿನೊಂದಿಗೆ ಉಸಿರಾಟದ ತೊಂದರೆಯೂ ಇದ್ದರೆ ಇದಕ್ಕೆ ಶುಂಠಿಯ ಕಷಾಯ ಉತ್ತಮ ಪರಿಹಾರವಾಗಿದೆ. *ಇದಕ್ಕಾಗಿ ಒಂದು ಲೋಟ ನೀರನ್ನು ಕುದಿಸಿ.ಇದಕ್ಕೆ ಕೊಂಚ ಹಸಿಶುಂಠಿಯ ತುಂಡುಗಳು, ಕೊಂಚವೇ ಕಾಳುಮೆಣಸು ಅಥವಾ ಕರಿಮೆಣಸು ಮತ್ತು ಕೊಂಚ ಉಪ್ಪು ಸೇರಿಸಿ ಕುದಿಸಿ.
*ಈ ನೀರು ಅರ್ಧಮಟ್ಟಕ್ಕೆ ಬರುವವರೆಗೂ ಕುದಿಸಿ ಬಳಿಕ ಉರಿ ಆರಿಸಬೇಕು. ನಂತರ ಉಗುರುಬೆಚ್ಚಗಾಗುವಷ್ಟು ತಣಿಸಿ ಸೋಸಿ ಈ ನೀರನ್ನು ಕುಡಿಯಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications




