Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಎಡೆಬಿಡದೆ ಕಾಡುವ ಕೆಮ್ಮಿಗೆ ಶುಂಠಿ-ಉಪ್ಪಿನ ಕಷಾಯ
ಹೊಟ್ಟೆ ಕೆಟ್ಟಿದ್ದಾಗ, ಹುಳಿತೇಗು, ಹೊಟ್ಟೆಯುರಿ, ಅಜೀರ್ಣ ಮೊದಲಾದ ಜೀರ್ಣಕ್ರಿಯೆಗೆ ಸಂಬಂಧಿಸಿದ ತೊಂದರೆ ಕಂಡುಬಂದಾಗ ಶುಂಠಿಯ ಕಷಾಯ ಅಥವಾ ಹಸಿಶುಂಠಿಯ ರಸ ಕುಡಿದು ಪರಿಹಾರ ಪಡೆದುಕೊಳ್ಳಬಹುದು. ಆದರೆ ಈ ಅದ್ಭುತ ಮಸಾಲೆವಸ್ತು ಅತ್ಯುತ್ತಮವಾದ ಕೆಮ್ಮು ನಿವಾರಕ ಎಂದು ನಿಮಗೆ ಗೊತ್ತಿತ್ತೇ?

ಹೌದು ಕೆಮ್ಮಿಗೆ ಔಷಧಿಯಾಗಿ ನಮ್ಮ ಹಿರಿಯಲು ಶುಂಠಿಯನ್ನು ನೂರಾರು ವರ್ಷಗಳಿಂದ ಬಳಸುತ್ತಾ ಬಂದಿದ್ದಾರೆ. ಹಸಿಶುಂಠಿ ಮತ್ತು ಕೊಂಚ ಉಪ್ಪನ್ನು ಬೆರೆಸಿ ಸೇವಿಸಬೇಕು. ಮುಂದಿನ ಬಾರಿ ಸತತವಾಗಿ ಕಾಡುವ ಕೆಮ್ಮು ಪ್ರಾರಂಭವಾದರೆ ಬೇರೆ ಔಷಧಿಗಳಿಗೆ ಶರಣಾಗುವ ಬದಲು ಈ ಮನೆಮದ್ದನ್ನು ಬಳಸಿ ಶೀಘ್ರವಾಗಿಯೇ ಕೆಮ್ಮಿನಿಂದ ಪಾರಾಗಬಹುದು. ಪ್ರಾಣ ಹಿಂಡುವ ಕೆಮ್ಮಿಗೆ ರಾಮಬಾಣವಾಗಿರುವ 10 ಸಿದ್ಧೌಷಧಗಳು
ಕೆಮ್ಮಿಗೆ ಕಾರಣವಾದ ಬ್ಯಾಕ್ಟೀರಿಯಾ ಮತ್ತು ವೈರಸ್ಸುಗಳನ್ನು ಶುಂಠಿಯಲ್ಲಿರುವ ಬ್ಯಾಕ್ಟೀರಿಯಾ ನಿವಾರಕ ಗುಣ ಸದೆಬಡಿಯುತ್ತದೆ. ಸಾಮಾನ್ಯವಾಗಿ ವೈರಸ್ಸುಗಳ ಧಾಳಿಯಿಂದ ನಮ್ಮ ದೇಹ ಅಂಟುಅಂಟಾದ ದ್ರವವನ್ನು ಗಂಟಲ ಒಳಭಾಗದಲ್ಲಿ ಸ್ರವಿಸುತ್ತದೆ. ಇದು ಬ್ಯಾಕ್ಟೀರಿಯಾಗಳನ್ನು ಅಂಟಿಸಿಕೊಂಡು ಕಫವಾಗುತ್ತದೆ.
ಈ ಕಫವನ್ನು ಹೊರಹಾಕುವ ಕ್ರಿಯೆಯೇ ಕೆಮ್ಮು. ಉಪ್ಪು ಬೆರೆಸಿದ ಶುಂಠಿಯ ರಸ ಈ ಕಫವನ್ನು ಸಡಿಲಗೊಳಿಸಿ ಸುಲಭವಾಗಿ ನಿವಾರಿಸಲು ನೆರವಾಗುತ್ತದೆ. ಕಫವೇ ಇಲ್ಲದ ಬಳಿಕ ಕೆಮ್ಮು ಎಲ್ಲಿಂದ? ಇದೇ ಈ ವಿಧಾನದ ಸಫಲತೆಯ ಗುಟ್ಟು. ಮಧ್ಯರಾತ್ರಿ ಕಾಡುವ ಕೆಮ್ಮು, ಏನು ಮಾಡಬೇಕು?
ಈ ಔಷಧೀಯ ಬಳಕೆಯ ವಿಧಾನ
*ಕೆಮ್ಮು ಕಡಿಮೆಯಾಗಲು ಅತ್ಯುತ್ತಮ ವಿಧಾನವೆಂದರೆ ಒಂದು ಚಿಕ್ಕ ತುಂಡು ಹಸಿಶುಂಠಿಯನ್ನು ಉಪ್ಪಿನೊಂದಿಗೆ ಜಗಿಯುವುದು. ಆದರೆ ಹಸಿಶುಂಠಿ ಕೊಂಚ ಖಾರವಾದುದರಿಂದ ಇದು ಎಲ್ಲರಿಗೂ ಸಾಧ್ಯವಾಗುವುದಿಲ್ಲ.
*ಇವರು ಹಸಿಶುಂಠಿಯನ್ನು ಕೊಂಚ ನೀರಿನಲ್ಲಿ ಕುದಿಸಿ ತಣಿಸಿ ಶೋಧಿಸಿದ ಬಳಿಕ ಚಿಟಿಕೆಯಷ್ಟು ಉಪ್ಪು ಸೇರಿಸಿ ಕುಡಿಯಬಹುದು.
ಇನ್ನೊಂದು ವಿಧಾನ:
*ಒಂದು ಚಿಕ್ಕ ತುಂಡು ಹಸಿಶುಂಠಿಯ ಸಿಪ್ಪೆ ಸುಲಿದು ಇದಕ್ಕೆ ಕೊಂಚ ಉಪ್ಪನ್ನು ಸಿಂಪಡಿಸಿ. ಈ ತುಂಡನ್ನು ಜಜ್ಜಿ ನಯವಾಗಿಸಿ ಒಂದು ಚಮಚದಲ್ಲಿ ಲೇಹ್ಯದಂತೆ ನೇರವಾಗಿ ನುಂಗಿಬಿಡುವುದು.
*ಸಾಧ್ಯವಾದರೆ ಕೊಂಚ ಅಗಿದು ರಸವನ್ನು ನುಂಗಬೇಕು. ಇದರ ಖಾರದಿಂದ ರಕ್ಷಣೆ ಪಡೆಯಲು ಈ ತುಂಡನ್ನು ಸೇವಿಸಿದ ಬಳಿಕ ಕೊಂಚ ಜೇನನ್ನು ನೆಕ್ಕುವ ಮೂಲಕ ಉರಿಯಿಂದ ತಪ್ಪಿಸಿಕೊಳ್ಳಬಹುದು. ಬೆಕ್ಕಸ ಬೆರಗಾಗಿಸುವ ಹಸಿ ಶುಂಠಿಯ ಕಾರುಬಾರು...!
ಶುಂಠಿಯ ಕಷಾಯ
*ಒಂದು ವೇಳೆ ಕೆಮ್ಮಿನೊಂದಿಗೆ ಉಸಿರಾಟದ ತೊಂದರೆಯೂ ಇದ್ದರೆ ಇದಕ್ಕೆ ಶುಂಠಿಯ ಕಷಾಯ ಉತ್ತಮ ಪರಿಹಾರವಾಗಿದೆ. *ಇದಕ್ಕಾಗಿ ಒಂದು ಲೋಟ ನೀರನ್ನು ಕುದಿಸಿ.ಇದಕ್ಕೆ ಕೊಂಚ ಹಸಿಶುಂಠಿಯ ತುಂಡುಗಳು, ಕೊಂಚವೇ ಕಾಳುಮೆಣಸು ಅಥವಾ ಕರಿಮೆಣಸು ಮತ್ತು ಕೊಂಚ ಉಪ್ಪು ಸೇರಿಸಿ ಕುದಿಸಿ.
*ಈ ನೀರು ಅರ್ಧಮಟ್ಟಕ್ಕೆ ಬರುವವರೆಗೂ ಕುದಿಸಿ ಬಳಿಕ ಉರಿ ಆರಿಸಬೇಕು. ನಂತರ ಉಗುರುಬೆಚ್ಚಗಾಗುವಷ್ಟು ತಣಿಸಿ ಸೋಸಿ ಈ ನೀರನ್ನು ಕುಡಿಯಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications




