Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
ಮುಂಜಾನೆ ಎದ್ದು ಶುಂಠಿ ನೀರು ಕುಡಿಯಿರಿ, ಆರೋಗ್ಯ ಪಡೆಯಿರಿ
ಆಹಾರದಲ್ಲಿಯೂ ಲೆಕ್ಕಾಚಾರವೇ? ಎಂಥಾ ಕಾಲ ಬಂತಪ್ಪಾ ಎಂದು ಅಚ್ಚರಿಗೊಳ್ಳಬೇಡಿ. ಇಂದು ಕೆಲವರು ತಮ್ಮ ಆಹಾರವನ್ನು ಕ್ಯಾಲೋರಿಗಳ ಲೆಕ್ಕದಲ್ಲಿ, ತೂಕದ ಲೆಕ್ಕದಲ್ಲಿ ಸೇವಿಸುತ್ತಾರೆ. ಇದು ಅಂತಹ ಲೆಕ್ಕವಲ್ಲ. ನಮ್ಮ ದೇಹದಲ್ಲಿ ಜೀರ್ಣಗೊಂಡ ಬಳಿಕ ತ್ಯಾಜ್ಯವನ್ನು ವಿಸರ್ಜಿಸುವ ಕ್ರಿಯೆಯನ್ನು ಇನ್ನಷ್ಟು ಉತ್ತಮಗೊಳಿಸುವ ಲೆಕ್ಕಾಚಾರ. ಶುಂಠಿಯ ಆರೋಗ್ಯಕರ ಗುಣಗಳ ಬಗ್ಗೆ ನಾವು ಅರಿತೇ ಇದ್ದೇವೆ. ಆದರೆ ಈ ಶುಂಠಿಯ ರಸವನ್ನು ಸೇವಿಸುವ ಮೂಲಕ ನಿಮ್ಮ ದಿನವನ್ನು ಪ್ರಾರಂಭಿಸಿದ್ದೀರಾ? ಶುಂಠಿ-ಅರಿಶಿನದ ಚಹಾ, ಕಣ ಕಣದಲ್ಲೂ ಆರೋಗ್ಯದ ಶಕ್ತಿ
ಜೀರ್ಣಕ್ರಿಯೆಯಲ್ಲಿ ಶುಂಠಿ ಅಪಾರವಾಗಿ ನೆರವಾಗುವ ಜೊತೆಗೇ ವಿಸರ್ಜನೆಯೂ ಸುಲಭವಾಗುವಂತೆ ಮಾಡುತ್ತದೆ. ವಿಶೇಷವಾಗಿ ವಿಷಕಾರಕ ತ್ಯಾಜ್ಯಗಳು ಹೆಚ್ಚಿದ್ದಾಗ ಇವನ್ನು ಹೊರಹಾಕಲು ಶುಂಠಿಯ ರಸ ಅತ್ಯುತ್ತಮವಾಗಿದೆ. ಇದನ್ನು ತಯಾರಿಸುವ ಬಗೆ ಹೇಗೆ? ತುಂಬಾ ಸುಲಭ. ಸುಮಾರು ಒಂದಿಂಚಿನ ಶುಂಠಿಯ ತುಂಡನ್ನು ಚಿಕ್ಕದಾಗಿ ಹೆಚ್ಚಿಕೊಳ್ಳಿ. ಬಿರುಬೇಸಿಗೆಯ ಧಗೆಯನ್ನು ತಂಪಾಗಿಸುವ ಶುಂಠಿ ಜ್ಯೂಸ್!
ಒಂದು ಚಿಕ್ಕ ಪಾತ್ರೆಯಲ್ಲಿ ಈ ತುಂಡುಗಳನ್ನು (ಅಥವಾ ಜಜ್ಜಿಯೂ ಹಾಕಬಹುದು) ಹಾಕಿ ಕುದಿಸಿ. ಕುದಿಯಲು ಪ್ರಾರಂಭವಾದೊಡನೆ ಉರಿಯನ್ನು ತೀರಾ ಚಿಕ್ಕದಾಗಿಸಿ ಇಪ್ಪತ್ತು ನಿಮಿಷ ಕುದಿಸಿ. ಬಳಿಕ ಉರಿ ಆರಿಸಿ ಐದರಿಂದ ಹತ್ತು ನಿಮಿಷ ತಣಿಯಲು ಬಿಡಿ. ಬಳಿಕ ಈ ನೀರನ್ನು ಸೋಸಿ ಲೋಟದಲ್ಲಿ ಸಂಗ್ರಹಿಸಿ. ಈ ನೀರನ್ನು ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಕುಡಿಯಿರಿ. ಬಳಿಕ ಸುಮಾರು ಮುಕ್ಕಾಲು ಗಂಟೆ ಏನನ್ನೂ ಸೇವಿಸದಿರಿ. ಈ ನೀರನ್ನು ಕುಡಿಯುವುದರಿಂದ ಇನ್ನೂ ಕೆಲವು ಪ್ರಯೋಜನಗಳಿವೆ, ಮುಂದೆ ಓದಿ....

ಪ್ರಯೋಜನ #1
ಒಂದು ವೇಳೆ ಚಿಕ್ಕ ಪುಟ್ಟ ಕಾಯಿಲೆ ಆವರಿಸಿದ್ದರೆ ಈ ನೀರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚುವಂತೆ ಮಾಡಿ ಶೀಘ್ರವೇ ಗುಣವಾಗಲು ನೆರವಾಗುತ್ತದೆ.

ಪ್ರಯೋಜನ #2
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮೂಲಕ ಹಲವು ವಿಧದ ರೋಗಗಳ ಮತ್ತು ಸೋಂಕುಗಳ ವಿರುದ್ಧ ರಕ್ಷಣೆ ಪಡೆಯಲು ನೆರವಾಗುತ್ತದೆ.

ಪ್ರಯೋಜನ #3
ಈ ನೀರು ರಕ್ತಪರಿಚಲನೆಯನ್ನು ಹೆಚ್ಚಿಸಲೂ ನೆರವಾಗುತ್ತದೆ. ರಕ್ತಪರಿಚಲನೆ ಉತ್ತಮವಿದ್ದಾಗ ಆರೋಗ್ಯವೂ ಉತ್ತಮಗೊಳ್ಳುತ್ತದೆ.

ಪ್ರಯೋಜನ#4
ಒಂದು ವೇಳೆ ಚಳಿಜ್ವರ ಅಥವಾ ಇನ್ನಾವುದೋ ಕಾರಣದಿಂದ ನಡುಗುತ್ತಿದ್ದರೆ ತಕ್ಷಣ ಒಂದು ಲೋಟ ಬಿಸಿಬಿಸಿಯಾದ ಶುಂಠಿನೀರನ್ನು ಕುಡಿದರೆ ತಕ್ಷಣವೇ ದೇಹದ ತಾಪಮಾನ ಏರಿ ನಡುಕ ಇಲ್ಲವಾಗುತ್ತದೆ.

ಪ್ರಯೋಜನ #5
ಈ ನೀರಿನ ಸೇವನೆಯಿಂದ ನರವ್ಯವಸ್ಥೆಯೂ ಉತ್ತಮಗೊಳ್ಳುತ್ತದೆ. ಪ್ರತಿದಿನ ಬೆಳಿಗ್ಗೆ ಪ್ರಥಮ ಆಹಾರವಾಗಿ ಸೇವಿಸಿದವರಲ್ಲಿ ನರವ್ಯವಸ್ಥೆ ಅತ್ಯುತ್ತಮವಾಗಿರುವುದು ಕಂಡುಬಂದಿದೆ. ವಿಶೇಷವಾಗಿ ನರಪ್ರಚೋದನೆಯ ಪ್ರತಿಕ್ರಿಯೆ ಉತ್ತಮಗೊಳ್ಳುವ ಮೂಲಕ ನಿತ್ಯದ ಚಟುವಟಿಕೆಯ ಜೊತೆಗೇ ಕ್ರೀಡೆಯಲ್ಲಿ ಚುರುಕುತನ ನೀಡಿದರೆ, ಕಲಿಯುವಿಕೆಯಲ್ಲಿ ಹೆಚ್ಚುವ ಏಕಾಗ್ರತೆ ಬುದ್ದಿವಂತಿಕೆಯನ್ನು ಹೆಚ್ಚಿಸುತ್ತದೆ.

ಪ್ರಯೋಜನ #6
ನಿತ್ಯವೂ ಒಂದು ಲೋಟ ಶುಂಠಿನೀರು ಕುಡಿಯುವ ಮೂಲಕ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ತನ್ಮೂಲಕ ಅಪಾಯವಾಯು, ಹೊಟ್ಟೆಯುಬ್ಬರಿಕೆ ಮೊದಲಾದ ತೊಂದರೆಗಳು ಇಲ್ಲವಾಗುತ್ತವೆ ಹಾಗೂ ಕರುಳುಗಳಲ್ಲಿದ್ದ ತ್ಯಾಜ್ಯ ಹೊರಹೋಗಿರುವ ಮೂಲಕ ಹೊಟ್ಟೆ ಖಾಲಿಯಾದಂತನ್ನಿಸುತ್ತದೆ.

ಪ್ರಯೋಜನ #7
ಒಂದು ವೇಳೆ ಹೊಟ್ಟೆಯಲ್ಲಿ ಗುಳುಗುಳು ಅನ್ನಿಸುತ್ತಿದ್ದರೆ ಒಂದು ಲೋಟ ಶುಂಠಿಯ ನೀರನ್ನು ಕುಡಿಯುವ ಮೂಲಕ ಇದನ್ನು ಕಡಿಮೆಗೊಳಿಸಬಹುದು.



Click it and Unblock the Notifications