Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮುಂಜಾನೆ ಎದ್ದು ಶುಂಠಿ ನೀರು ಕುಡಿಯಿರಿ, ಆರೋಗ್ಯ ಪಡೆಯಿರಿ
ಆಹಾರದಲ್ಲಿಯೂ ಲೆಕ್ಕಾಚಾರವೇ? ಎಂಥಾ ಕಾಲ ಬಂತಪ್ಪಾ ಎಂದು ಅಚ್ಚರಿಗೊಳ್ಳಬೇಡಿ. ಇಂದು ಕೆಲವರು ತಮ್ಮ ಆಹಾರವನ್ನು ಕ್ಯಾಲೋರಿಗಳ ಲೆಕ್ಕದಲ್ಲಿ, ತೂಕದ ಲೆಕ್ಕದಲ್ಲಿ ಸೇವಿಸುತ್ತಾರೆ. ಇದು ಅಂತಹ ಲೆಕ್ಕವಲ್ಲ. ನಮ್ಮ ದೇಹದಲ್ಲಿ ಜೀರ್ಣಗೊಂಡ ಬಳಿಕ ತ್ಯಾಜ್ಯವನ್ನು ವಿಸರ್ಜಿಸುವ ಕ್ರಿಯೆಯನ್ನು ಇನ್ನಷ್ಟು ಉತ್ತಮಗೊಳಿಸುವ ಲೆಕ್ಕಾಚಾರ. ಶುಂಠಿಯ ಆರೋಗ್ಯಕರ ಗುಣಗಳ ಬಗ್ಗೆ ನಾವು ಅರಿತೇ ಇದ್ದೇವೆ. ಆದರೆ ಈ ಶುಂಠಿಯ ರಸವನ್ನು ಸೇವಿಸುವ ಮೂಲಕ ನಿಮ್ಮ ದಿನವನ್ನು ಪ್ರಾರಂಭಿಸಿದ್ದೀರಾ? ಶುಂಠಿ-ಅರಿಶಿನದ ಚಹಾ, ಕಣ ಕಣದಲ್ಲೂ ಆರೋಗ್ಯದ ಶಕ್ತಿ
ಜೀರ್ಣಕ್ರಿಯೆಯಲ್ಲಿ ಶುಂಠಿ ಅಪಾರವಾಗಿ ನೆರವಾಗುವ ಜೊತೆಗೇ ವಿಸರ್ಜನೆಯೂ ಸುಲಭವಾಗುವಂತೆ ಮಾಡುತ್ತದೆ. ವಿಶೇಷವಾಗಿ ವಿಷಕಾರಕ ತ್ಯಾಜ್ಯಗಳು ಹೆಚ್ಚಿದ್ದಾಗ ಇವನ್ನು ಹೊರಹಾಕಲು ಶುಂಠಿಯ ರಸ ಅತ್ಯುತ್ತಮವಾಗಿದೆ. ಇದನ್ನು ತಯಾರಿಸುವ ಬಗೆ ಹೇಗೆ? ತುಂಬಾ ಸುಲಭ. ಸುಮಾರು ಒಂದಿಂಚಿನ ಶುಂಠಿಯ ತುಂಡನ್ನು ಚಿಕ್ಕದಾಗಿ ಹೆಚ್ಚಿಕೊಳ್ಳಿ. ಬಿರುಬೇಸಿಗೆಯ ಧಗೆಯನ್ನು ತಂಪಾಗಿಸುವ ಶುಂಠಿ ಜ್ಯೂಸ್!
ಒಂದು ಚಿಕ್ಕ ಪಾತ್ರೆಯಲ್ಲಿ ಈ ತುಂಡುಗಳನ್ನು (ಅಥವಾ ಜಜ್ಜಿಯೂ ಹಾಕಬಹುದು) ಹಾಕಿ ಕುದಿಸಿ. ಕುದಿಯಲು ಪ್ರಾರಂಭವಾದೊಡನೆ ಉರಿಯನ್ನು ತೀರಾ ಚಿಕ್ಕದಾಗಿಸಿ ಇಪ್ಪತ್ತು ನಿಮಿಷ ಕುದಿಸಿ. ಬಳಿಕ ಉರಿ ಆರಿಸಿ ಐದರಿಂದ ಹತ್ತು ನಿಮಿಷ ತಣಿಯಲು ಬಿಡಿ. ಬಳಿಕ ಈ ನೀರನ್ನು ಸೋಸಿ ಲೋಟದಲ್ಲಿ ಸಂಗ್ರಹಿಸಿ. ಈ ನೀರನ್ನು ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಕುಡಿಯಿರಿ. ಬಳಿಕ ಸುಮಾರು ಮುಕ್ಕಾಲು ಗಂಟೆ ಏನನ್ನೂ ಸೇವಿಸದಿರಿ. ಈ ನೀರನ್ನು ಕುಡಿಯುವುದರಿಂದ ಇನ್ನೂ ಕೆಲವು ಪ್ರಯೋಜನಗಳಿವೆ, ಮುಂದೆ ಓದಿ....

ಪ್ರಯೋಜನ #1
ಒಂದು ವೇಳೆ ಚಿಕ್ಕ ಪುಟ್ಟ ಕಾಯಿಲೆ ಆವರಿಸಿದ್ದರೆ ಈ ನೀರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚುವಂತೆ ಮಾಡಿ ಶೀಘ್ರವೇ ಗುಣವಾಗಲು ನೆರವಾಗುತ್ತದೆ.

ಪ್ರಯೋಜನ #2
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮೂಲಕ ಹಲವು ವಿಧದ ರೋಗಗಳ ಮತ್ತು ಸೋಂಕುಗಳ ವಿರುದ್ಧ ರಕ್ಷಣೆ ಪಡೆಯಲು ನೆರವಾಗುತ್ತದೆ.

ಪ್ರಯೋಜನ #3
ಈ ನೀರು ರಕ್ತಪರಿಚಲನೆಯನ್ನು ಹೆಚ್ಚಿಸಲೂ ನೆರವಾಗುತ್ತದೆ. ರಕ್ತಪರಿಚಲನೆ ಉತ್ತಮವಿದ್ದಾಗ ಆರೋಗ್ಯವೂ ಉತ್ತಮಗೊಳ್ಳುತ್ತದೆ.

ಪ್ರಯೋಜನ#4
ಒಂದು ವೇಳೆ ಚಳಿಜ್ವರ ಅಥವಾ ಇನ್ನಾವುದೋ ಕಾರಣದಿಂದ ನಡುಗುತ್ತಿದ್ದರೆ ತಕ್ಷಣ ಒಂದು ಲೋಟ ಬಿಸಿಬಿಸಿಯಾದ ಶುಂಠಿನೀರನ್ನು ಕುಡಿದರೆ ತಕ್ಷಣವೇ ದೇಹದ ತಾಪಮಾನ ಏರಿ ನಡುಕ ಇಲ್ಲವಾಗುತ್ತದೆ.

ಪ್ರಯೋಜನ #5
ಈ ನೀರಿನ ಸೇವನೆಯಿಂದ ನರವ್ಯವಸ್ಥೆಯೂ ಉತ್ತಮಗೊಳ್ಳುತ್ತದೆ. ಪ್ರತಿದಿನ ಬೆಳಿಗ್ಗೆ ಪ್ರಥಮ ಆಹಾರವಾಗಿ ಸೇವಿಸಿದವರಲ್ಲಿ ನರವ್ಯವಸ್ಥೆ ಅತ್ಯುತ್ತಮವಾಗಿರುವುದು ಕಂಡುಬಂದಿದೆ. ವಿಶೇಷವಾಗಿ ನರಪ್ರಚೋದನೆಯ ಪ್ರತಿಕ್ರಿಯೆ ಉತ್ತಮಗೊಳ್ಳುವ ಮೂಲಕ ನಿತ್ಯದ ಚಟುವಟಿಕೆಯ ಜೊತೆಗೇ ಕ್ರೀಡೆಯಲ್ಲಿ ಚುರುಕುತನ ನೀಡಿದರೆ, ಕಲಿಯುವಿಕೆಯಲ್ಲಿ ಹೆಚ್ಚುವ ಏಕಾಗ್ರತೆ ಬುದ್ದಿವಂತಿಕೆಯನ್ನು ಹೆಚ್ಚಿಸುತ್ತದೆ.

ಪ್ರಯೋಜನ #6
ನಿತ್ಯವೂ ಒಂದು ಲೋಟ ಶುಂಠಿನೀರು ಕುಡಿಯುವ ಮೂಲಕ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ತನ್ಮೂಲಕ ಅಪಾಯವಾಯು, ಹೊಟ್ಟೆಯುಬ್ಬರಿಕೆ ಮೊದಲಾದ ತೊಂದರೆಗಳು ಇಲ್ಲವಾಗುತ್ತವೆ ಹಾಗೂ ಕರುಳುಗಳಲ್ಲಿದ್ದ ತ್ಯಾಜ್ಯ ಹೊರಹೋಗಿರುವ ಮೂಲಕ ಹೊಟ್ಟೆ ಖಾಲಿಯಾದಂತನ್ನಿಸುತ್ತದೆ.

ಪ್ರಯೋಜನ #7
ಒಂದು ವೇಳೆ ಹೊಟ್ಟೆಯಲ್ಲಿ ಗುಳುಗುಳು ಅನ್ನಿಸುತ್ತಿದ್ದರೆ ಒಂದು ಲೋಟ ಶುಂಠಿಯ ನೀರನ್ನು ಕುಡಿಯುವ ಮೂಲಕ ಇದನ್ನು ಕಡಿಮೆಗೊಳಿಸಬಹುದು.



Click it and Unblock the Notifications