Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ತೂಕ ಇಳಿಸಿಕೊಳ್ಳಬೇಕೇ? ಬೆಳಿಗ್ಗೆದ್ದ ತಕ್ಷಣ ಈ ಜ್ಯೂಸ್ ಕುಡಿಯಿರಿ
ಅತೀಯಾದ ದೇಹದ ತೂಕ ಹಲವಾರು ಆರೋಗ್ಯ ಸಂಬಂಧಿ ತೊಂದರೆಗಳಿಗೆ ಕಾರಣವಾಗುತ್ತದೆ. ಅಷ್ಟೇ ಅಲ್ಲ, ವ್ಯಕ್ತಿಯ ಸೌಂದರ್ಯವನ್ನೂ, ಆತ್ಮವಿಶ್ವಾಸವನ್ನೂ ಬಾಧಿಸಬಲ್ಲುದು. ತೂಕ ಹೆಚ್ಚುತ್ತಿದ್ದಂತೆಯೇ ಹೃದಯ ಸಂಬಂಧಿ ಕಾಯಿಲೆಗಳು, ರಕ್ತದೊತ್ತಡ, ಸಂಧಿವಾತ, ಕೊಲೆಸ್ಟ್ರಾಲ್ ಮೊದಲಾದ ತೊಂದರೆಗಳೂ ಬೇಡದ ಅತಿಥಿಯಂತೆ ದೇಹದಲ್ಲಿ ಸ್ಥಾನ ಪಡೆದುಕೊಳ್ಳುತ್ತವೆ. ತೂಕ ಇಳಿಸಿಕೊಳ್ಳಲು ಒಂದು ಚಮಚದಷ್ಟು ಜೇನು ಸಾಕು!
ಈ ಎಲ್ಲಾ ತೊಂದರೆಗಳಿಗೆ ಕಡಿವಾಣ ಹಾಕಬೇಕೆಂದರೆ ಮೊತ್ತ ಮೊದಲು ದೇಹದ ತೂಕ ಹೆಚ್ಚಾಗಲು ಕಾರಣವಾಗಿರುವ ಸ್ಥೂಲಕಾಯದಿಂದ ಹೊರಬರಲು ಗಟ್ಟಿಮನಸ್ಸು ಮಾಡಬೇಕು. ಉಳಿದಂತೆ ಕೊಂಚ ವ್ಯಾಯಮ, ಕೊಂಚ ಆಹಾರದಲ್ಲಿ ಕಟ್ಟುನಿಟ್ಟು ಅನುಸರಿಸಿದರೆ ಸಾಕು.
ನಿಮ್ಮ ಪ್ರಯತ್ನಗಳು ಮಾತ್ರ ಸತತವಾಗಿರಬೇಕು ಹಾಗೂ ಯಾವುದೇ ಕಾರಣಕ್ಕೂ ತೂಕ ಹೆಚ್ಚಿಸುವ ಆಹಾರಗಳತ್ತ ಒಲವು ತೋರಬಾರದು. ತೂಕವನ್ನು ಇಳಿಸುವಲ್ಲಿ ಬೆಳಗ್ಗಿನ ಪ್ರಥಮ ಆಹಾರ ಅಪಾರವಾದ ಪ್ರಭಾವ ಬೀರುತ್ತದೆ.

ಒಂದು ವೇಳೆ ನೀವು ಇಂದಿಗೂ ನಿಮ್ಮ ಪ್ರಥಮ ಆಹಾರವಾಗಿ ಹೆಚ್ಚಿನ ಕೊಬ್ಬು ಇರುವ ಆಹಾರಗಳನ್ನು ಸೇವಿಸುತ್ತಿದ್ದರೆ ಈಗ ಇದನ್ನು ಬದಲಿಸಲು ಸಕಾಲವಾಗಿದೆ. ಕೆಳಗಿನ ಸುಲಭ ವಿಧಾನದ ಆಹಾರವನ್ನು ಸೇವಿಸುವ ಮೂಲಕ ಕೆಲವೇ ದಿನಗಳಲ್ಲಿ ತೂಕ ಇಳಿಕೆಯ ಕ್ರಮದತ್ತ ಸಾಗುವುದನ್ನು ಕಾಣಬಹುದು. ಊಟ ಕಡಿಮೆ ಮಾಡಿದರೆ, ತೂಕ ಕಡಿಮೆಯಾಗುವುದಿಲ್ಲ!
ಅಗತ್ಯವಿರುವ ಸಾಮಾಗ್ರಿಗಳು:
*ಲಿಂಬೆಹಣ್ಣಿನ ರಸ- ಎರಡು ಚಿಕ್ಕ ಚಮಚ
*ಸೇಬಿನ ಶಿರ್ಕಾ (apple cider vinegar)-ಎರಡು ದೊಡ್ಡ ಚಮಚ
*ಜೇನು-ಎರಡು ದೊಡ್ಡ ಚಮಚ
*ಹಸಿಶುಂಠಿ-ಸುಮಾರು ಒಂದು ಇಂಚು (ರಸ ಎರಡು ಚಿಕ್ಕ ಚಮಚ ಬರುವಷ್ಟು)
ವಿಧಾನ:
* ಶುಂಠಿಯನ್ನು ತುರಿದು ಮಿಕ್ಸಿಯಲ್ಲಿ ಕಡೆದು ರಸ ಹಿಂಡಿ ತೆಗೆಯಿರಿ
* ಒಂದು ಬೋಗುಣಿಯಲ್ಲಿ ಎರಡು ಕಪ್ ಉಗುರುಬೆಚ್ಚನೆಯ ನೀರು ಸುರಿಯಿರಿ
* ಇದಕ್ಕೆ ಮೇಲಿನ ಎಲ್ಲಾ ಪರಿಕರಗಳನ್ನು ಸೇರಿಸಿ ಚೆನ್ನಾಗಿ ಕಲಕಿ.
* ಈ ಜ್ಯೂಸ್ ಅನ್ನು ಬೆಳಿಗ್ಗೆದ್ದ ಬಳಿಕ ಪ್ರಥಮ ಆಹಾರವಾಗಿ ನಿತ್ಯವೂ ಸೇವಿಸುತ್ತಾ ಬನ್ನಿ. ಬಳಿಕ ಮುಕ್ಕಾಲು ಗಂಟೆ ಏನನ್ನೂ ಸೇವಿಸಬಾರದು. ಬಳಿಕ ಅಲ್ಪ ಉಪಾಹಾರ ಸೇವಿಸಿ. ಕೆಲವೇ ದಿನಗಳಲ್ಲಿ ಉತ್ತಮ ಪರಿಹಾರ ಕಂಡುಬರುತ್ತದೆ. ಶುಂಠಿ ಜಜ್ಜಿ ಹಾಕಿದ ಬಿಸಿ ನೀರು ಕುಡಿದರೆ-ತೂಕ ಇಳಿಕೆ...
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
