Latest Updates
-
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ!
ಅದ್ಭುತ ಆರೋಗ್ಯ ಗುಣ ಹೊಂದಿರುವ ಹಣ್ಣಿನ ಸಿಪ್ಪೆಗಳು
ಕೆಲ ಹಣ್ಣುಗಳಲ್ಲಿ ತಿರುಳಿನಲ್ಲಿ ಇರುವುದಕ್ಕಿಂತ ಅದರ ಸಿಪ್ಪೆಯಲ್ಲಿ ಅಧಿಕ ಪೋಷಕಾಂಶವಿರುತ್ತದೆ. ಅದರಲ್ಲೂ ಇಂತಹ ಹಣ್ಣುಗಳನ್ನು ಹೆಚ್ಚಿನವರು ಸಿಪ್ಪೆ ತೆಗೆದು ತಿನ್ನುತ್ತಾರೆ, ಅದರ ಬದಲು ಸಿಪ್ಪೆ ಸಹಿತ ತಿಂದರೆ ಹೆಚ್ಚಿನ ಲಾಭ ದೊರೆಯುತ್ತದೆ
ಹಣ್ಣುಗಳನ್ನು ತಿನ್ನುವುದರಿಂದ ಪಡೆಯುವ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ. ಆದರೆ ಕೆಲವು ಹಣ್ಣುಗಳ ಸಿಪ್ಪೆಗಳನ್ನು ನಾವು ತಿನ್ನಲು ಸಾಧ್ಯವಾದರೂ ತಿನ್ನದೇ ಸಿಪ್ಪೆ ಸುಲಿದು ಎಸೆಯುತ್ತೇವೆ. ವಾಸ್ತವದಲ್ಲಿ ಈ ಸಿಪ್ಪೆಗಳಲ್ಲಿಯೂ ಹಲವಾರು ಆರೋಗ್ಯಕಾರಿ ಗುಣಗಳಿವೆ. ಅಷ್ಟಕ್ಕೂ ಹಣ್ಣಿನಲ್ಲಿ ತಿರುಳು ತುಂಬುವ ಮುನ್ನ ಸಿಪ್ಪೆಯೇ ರೂಪುಗೊಂಡಿದ್ದು ಹೆಚ್ಚಿನ ಪೋಷಕಾಂಶಗಳನ್ನೂ ನಾರನ್ನೂ ಒಳಗೊಂಡಿರುತ್ತದೆ. ಹಣ್ಣು ಮಾತ್ರವಲ್ಲ, ಅದರ ಸಿಪ್ಪೆಯೂ ಆರೋಗ್ಯದ ಕೀಲಿ ಕೈ
ಈ ನಾರು ಇರುವ ಗುಣದಿಂದಲೇ ಹೆಚ್ಚಿನವರು ಇದನ್ನು ನಿವಾರಿಸಿ ಒಳಗಿನ ತಿರುಳನ್ನು ಮಾತ್ರವೇ ತಿನ್ನುತ್ತಾರೆ. ಈ ನಾರು ಒಳಗಿನ ತಿರುಳಿನಷ್ಟು ರುಚಿಯಾಗಿರದೇ ಇರುವುದೂ ಇನ್ನೊಂದು ಕಾರಣ. ಆದರೆ ಈ ಸಿಪ್ಪೆಗಳಲ್ಲಿಯೂ ನಾರಿನ ಹೊರತಾಗಿ ಇನ್ನೂ ಹಲವಾರು ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಪೂರಕವಾಗಿವೆ. ಬನ್ನಿ, ಕೆಲವು ಹಣ್ಣುಗಳ ಸಿಪ್ಪೆಗಳನ್ನು ಎಸೆಯುವ ಬದಲು ಹೇಗೆ ಉಪಯೋಗಿಸಿಕೊಳ್ಳಬಹುದು ಎಂಬುದನ್ನು ನೋಡೋಣ...

ಕಿತ್ತಳೆ ಸಿಪ್ಪೆ
ಕಿತ್ತಳೆ ರಸದಲ್ಲಿರುವಂತೆಯೇ ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿಯೂ ಉತ್ತಮ ಪ್ರಮಾನದ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳಿವೆ. ಇವು ವಿಶೇಷವಾಗಿ ದೇಹದಲ್ಲಿರುವ ಹೆಚ್ಚುವರಿ ಕೊಬ್ಬನ್ನು ದಹಿಸಲು ನೆರವಾಗುತ್ತವೆ. ಅಲ್ಲದೇ ಇದರಲ್ಲಿರುವ ನಾರು ಮಲಬದ್ಧತೆಗೆ ಸೂಕ್ತ ಉತ್ತರವಾಗಿದೆ.ಕೆಲವು ಶ್ವಾಸಕೋಶ ಸಂಬಂಧಿ ತೊಂದರೆಗಳಿಗೂ ಕಿತ್ತಳೆ ಸಿಪ್ಪೆಯ ಸೇವನೆ ಉತ್ತಮ ಪರಿಹಾರ ಒದಗಿಸುತ್ತದೆ. ಈ ಸಿಪ್ಪೆಯನ್ನು ನೇರವಾಗಿ ಸೇವಿಸಲು ಸಾಧ್ಯವಿಲ್ಲ. ಆದ್ದರಿಂದ ಇದನ್ನು ಚಿಕ್ಕದಾಗಿ ಹೆಚ್ಚಿ ಬೇಯಿಸಿ ಇತರ ಖಾದ್ಯಗಳ ರೂಪದಲ್ಲಿ ಸೇವಿಸಬಹುದು. ಸರ್ವ ವಿಧದಲ್ಲೂ ಪ್ರಯೋಜನಕಾರಿಯಾಗಿರುವ ಕಿತ್ತಳೆ ಸಿಪ್ಪೆ

ಬಾಳೆಹಣ್ಣಿನ ಸಿಪ್ಪೆ
ಬಾಳೆಹಣ್ಣಿನ ಸಿಪ್ಪೆ ಎಂದಾಕ್ಷಣ ಇದರ ಮೇಲೆ ಕಾಲಿಟ್ಟು ಜಾರಿ ಬಿದ್ದ ಜಾಣರೇ ನೆನಪಾಗುತ್ತಾರೆ. ಆದರೆ ಈ ಸಿಪ್ಪೆಯ ಒಳಭಾಗದಿಂದ ಹಲ್ಲುಗಳನ್ನು ಉಜ್ಜಿಕೊಂಡರೆ ಯಾವುದೇ ಟೂಥ್ ಪೇಸ್ಟ್ಗೆ ಕಡಿಮೆಯಿಲ್ಲದಂತೆ ಸ್ವಚ್ಛಗೊಳಿಸಲು ಸಾಧ್ಯವಾಗುತ್ತದೆ.

ಬಾಳೆಹಣ್ಣಿನ ಸಿಪ್ಪೆ
ಅಲ್ಲದೇ ಸುಟ್ಟ ಚರ್ಮ, ಚಿಕ್ಕ ಪುಟ್ಟ ಗಾಯ, ತರಚುಗಾಯ ಮೊದಲಾದವುಗಳಿಗೆ ಬಾಳೆಹಣ್ಣಿನ ಸಿಪ್ಪೆಯ ಒಳಭಾಗದಿಂದ ಉಜ್ಜಿಕೊಂಡಾಗ ತಕ್ಷಣವೇ ಪರಿಹಾರ ಪಡೆಯಬಹುದು. ಅಲ್ಲದೇ ಹೊಟ್ಟೆಯಲ್ಲಿ ಆಮ್ಲೀಯತೆ ಉಂಟಾಗಿದ್ದರೆ ಬಾಳೆಸಿಪ್ಪೆಯ ಚಿಕ್ಕ ತುಂಡೊಂದನ್ನು ಚಿಕ್ಕದಾಗಿ ಕತ್ತರಿಸಿ ನೀರಿನೊಂದಿಗೆ ಸೇವಿಸಿದರೆ ಕಡಿಮೆಯಾಗುತ್ತದೆ. ಬಾಳೆಹಣ್ಣಿನ ಸಿಪ್ಪೆಯ ಚಮತ್ಕಾರಿಕ ಪ್ರಯೋಜನ ಅರಿಯಿರಿ!

ದಾಳಿಂಬೆ ಸಿಪ್ಪೆ
ದಾಳಿಂಬೆ ಸಿಪ್ಪೆಯಲ್ಲಿಯೂ ಕೆಲವಾರು ವಿಟಮಿನ್ ಮತ್ತು ಪೋಷಕಾಂಶಗಳಿವೆ. ಇವು ಗಂಟಲಬೇನೆಯನ್ನು ತಕ್ಷಣ ಕಡಿಮೆಗೊಳಿಸಲು ಕ್ಷಮತೆ ಹೊಂದಿದೆ. ಅಲ್ಲದೇ ಮೂಳೆಗಳು ಗಟ್ಟಿಯಾಗಲು ನೆರವಾಗುತ್ತದೆ.

ದಾಳಿಂಬೆ ಸಿಪ್ಪೆ

ಕಲ್ಲಂಗಡಿ ಸಿಪ್ಪೆ

ಸೇಬಿನ ಸಿಪ್ಪೆ
ಸೇಬಿನ ಸಿಪ್ಪೆಯಲ್ಲಿ ಉತ್ತಮ ಪ್ರಮಾಣದ ಕರಗದ ನಾರು ಇದೆ. ಇದು ಮಲಬದ್ದತೆಯಾಗದಂತೆ ತಡೆಯುವ ಶಕ್ತಿ ಹೊಂದಿದೆ. ಅಲ್ಲದೇ ಈ ಸಿಪ್ಪೆಯನ್ನು ಸೇವಿಸುವ ಮೂಲಕ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಹಾಗೂ ಕೆಲವು ಬಗೆಯ ಕ್ಯಾನ್ಸರ್ ಗಳನ್ನೂ ತಡೆಯಲು ಸಾಧ್ಯವಾಗುತ್ತದೆ.

ಸೇಬಿನ ಸಿಪ್ಪೆ

ಪಪ್ಪಾಯಿ ಹಣ್ಣಿನ ಸಿಪ್ಪೆ
ತಿನ್ನಲು ಅತ್ಯಂತ ಕಹಿಯಾಗಿರುವ ಪೊಪ್ಪಾಯಿ ಸಿಪ್ಪೆಯಲ್ಲಿ ನಮ್ಮ ಕರುಳುಗಳನ್ನು ಒಳಗಿನಿಂದ ಸ್ವಚ್ಛಗೊಳಿಸುವ ಕೆಲವು ರಾಸಾಯನಿಕಗಳಿವೆ. ಒಂದು ವೇಳೆ ಅಜೀರ್ಣ, ಮಲಬದ್ಧತೆ ಮೊದಲಾದ ತೊಂದರೆಗಳು ಎದುರಾದರೆ ಪಪ್ಪಾಯಿಯ ಸಿಪ್ಪೆಯನ್ನು ನುಣ್ಣಗೆ ಅರೆದು ಮಜ್ಜಿಗೆಯೊಂದಿಗೆ ಬೆರೆಸಿ ಒಂದು ಲೋಟ ಕುಡಿದರೆ ಮರುದಿನ ಹೊಟ್ಟೆ ಶುದ್ಧೀಕರಣವಾಗುತ್ತದೆ. ದೇವತೆಗಳ ಹಣ್ಣು-ಪಪ್ಪಾಯಿ ಹಣ್ಣಿನಲ್ಲಿದೆ ಸೌಂದರ್ಯದ ಶಕ್ತಿ



Click it and Unblock the Notifications