Latest Updates
-
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ!
ಬೆಳ್ಳಂಬೆಳಗ್ಗೆ ತುಳಸಿ ಎಲೆ ಜಗಿಯಿರಿ, ಆರೋಗ್ಯ ಪಡೆಯಿರಿ
ಆರೋಗ್ಯವೇ ಮಹಾಭಾಗ್ಯ, ರೋಗ ನಿರೋಧಕ ಶಕ್ತಿಯನ್ನು ಸರಿಯಾಗಿ ಇರಿಸಿಕೊಂಡರೆ ಆರೋಗ್ಯ ಎಂಬುದು ನಮ್ಮ ಸ್ವತ್ತಾಗಿರುತ್ತದೆ. ಪದೇ ಪದೇ ಕಾಯಿಲೆ ಬೀಳುವುದರಿಂದ ನಮ್ಮ ದೇಹವು ಬಳಲುತ್ತದೆ ಮತ್ತು ಅದಕ್ಕಾಗಿ ಮಾಡುವ ಖರ್ಚಿನಿಂದಾಗಿ ನಾವು ಆರ್ಥಿಕವಾಗಿ ನಷ್ಟ ಹೊಂದುತ್ತೇವೆ. ಜೊತೆಗೆ ಮಾನಸಿಕವಾಗಿ ಸಹ ಕುಗ್ಗಿ ಹೋಗುವಂತೆ ಮಾಡುತ್ತದೆ ಈ ಕಾಯಿಲೆಗಳು.

ಆದ್ದರಿಂದ ಕಾಯಿಲೆ ಬೀಳದಂತೆ ನಮ್ಮನ್ನು ನಾವು ಕಾಪಾಡಿಕೊಳ್ಳಲು ಇರುವ ಒಂದೇ ಒಂದು ಮಾರ್ಗ ಪರಿಹಾರವಲ್ಲ, ಕಾಯಿಲೆಯೇ ಬರದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಒಂದು ಮಾರ್ಗ ಈ ನಿಟ್ಟಿನಲ್ಲಿ ನಿಮಗೆ ಸಹಾಯಕ್ಕೆ ಬರುತ್ತದೆ. ಇದಕ್ಕಾಗಿ ಹಲವಾರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉಪಾಯಗಳು ನಿಮಗಾಗಿ ದೊರೆಯುತ್ತವೆ. ಅದರಲ್ಲಿ ಬೆಳಗ್ಗೆ ಎದ್ದ ಕೂಡಲೆ, ಬೆಚ್ಚಗಿನ ನೀರು, ನಿಂಬೆ ಮತ್ತು ಜೇನು ತುಪ್ಪ ಬೆರೆಸಿರುವ ರಸವನ್ನು ಸೇವಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ.
ಇದರಲ್ಲಿ ಹಲವಾರು ಆರೋಗ್ಯಕಾರಿ ಪ್ರಯೋಜನಗಳು ಅಡಗಿರುವುದು ಈಗಾಗಲೇ ದೃಢಪಟ್ಟಿದೆ. ಆದರೆ ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ. ಅದಕ್ಕಾಗಿ ಈ ರಸದ ಜಾಗದಲ್ಲಿ ತುಳಸಿ ಎಲೆಗಳನ್ನು ಸೇವಿಸುವುದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಸ್ವಾಭಾವಿಕವಾಗಿ ಹೆಚ್ಚಿಸುತ್ತವೆ ಎಂದು ತಿಳಿದುಬಂದಿದೆ. ಹಿಂದೂ ಧರ್ಮದ ಪವಿತ್ರ ಗಿಡ, ಮನೆಯಂಗಳದ ತುಳಸಿ
ತುಳಸಿಯು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಒಂದು ಉದ್ದೀಪಕವಾಗಿ ಕೆಲಸ ಮಾಡುತ್ತದೆ. ಇದರಲ್ಲಿರುವ ಒಂದು ರಾಸಾಯನಿಕವು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ಕಾಪಾಡುವ ಗುಣವನ್ನು ಹೊಂದಿರುತ್ತದೆ. ಇದು ಕೇವಲ ಅಪಾಯಕಾರಿ ಕಾಯಿಲೆಗಳನ್ನು ಉಂಟು ಮಾಡುವ ಬ್ಯಾಕ್ಟೀರಿಯಾ, ವೈರಸ್ಗಳ ವಿರುದ್ಧ ಹೋರಾಡುವುದರ ಜೊತೆಗೆ ಆರೋಗ್ಯಕರವಾದ ರೋಗ ನಿರೋಧಕ ಕೋಶಗಳ ಉತ್ಪಾದನೆಗೆ ಸಹಕರಿಸುತ್ತದೆ. ಅಲ್ಲದೆ ಇದರಲ್ಲಿರುವ ಆಂಟಿ ಆಕ್ಸಿಡೆಂಟ್ಗಳು ಸಹ ಅಧಿಕ ಪ್ರಮಾಣದಲ್ಲಿ ಇರುತ್ತವೆ. ಇವು ಆರೋಗ್ಯಕಾರಿ ಕೋಶಗಳನ್ನು ವಿಷಕಾರಿ ಕಣಗಳಿಂದ ಕಾಪಾಡುತ್ತದೆ ಮತ್ತು ಇದು ಅಧಿಕ ಆಕ್ಸಿಡೇಶನ್ನಿಂದ ಹಾನಿಯಾಗುವಿಕೆಯನ್ನು ತಪ್ಪಿಸುತ್ತದೆ. ಗಿಡಮೂಲಿಕೆಗಳ ರಾಣಿ 'ತುಳಸಿ'-ಆರೋಗ್ಯದ ಸಂಜೀವಿನಿ
ಬಳಸುವುದು ಹೇಗೆ?
ಬೆಳ್ಳಂಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮೂರು ನಾಲ್ಕು ತುಳಸಿ ಎಲೆಗಳನ್ನು ಅಗಿದು ನುಂಗಿ. ಈ ಎಲೆಗಳನ್ನು ನುಂಗುವ ಮೊದಲು ಅವುಗಳನ್ನು ನೀರಿನಲ್ಲಿ ಚೆನ್ನಾಗಿ ತೊಳೆಯಿರಿ. ಅವುಗಳನ್ನು ನುಂಗಿದ ನಂತರ ಒಂದು ಅಥವಾ ಎರಡು ಲೋಟ ನೀರನ್ನು ಕುಡಿಯಿರಿ. ಇದನ್ನು ಸೇವಿಸಿದ ಮೇಲೆ 30 ನಿಮಿಷ ಏನನ್ನು ಸೇವಿಸಬೇಡಿ. ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇದನ್ನು ಒಂದು ತಿಂಗಳಿನವರೆಗೆ ಪುನರಾವರ್ತಿಸಿ. ಬಹುಶಃ ಇದನ್ನು ಸಹ ನೀವು ಓದಲು ಇಷ್ಟಪಡಬಹುದು. ನಿಮ್ಮ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ 12 ಸೂಪರ್ ಫುಡ್ಗಳು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

