Latest Updates
-
ಡೇಟಿಂಗ್ ಆ್ಯಪ್ ಬಳಕೆದಾರರೇ ಎಚ್ಚರ: ಈ ಕೆಫೆಗಳೇ ನಿಮ್ಮ ಜೇಬಿಗೆ ಕತ್ತರಿ! -
ದೆಹಲಿ-ಎನ್ಸಿಆರ್ ಬಿರುಗಾಳಿ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಹೀಗೆ ಮಾಡಿ -
AJIO ಮಿಡ್ನೈಟ್ ಮೇನಿಯಾ: ಸ್ನೀಕರ್ಸ್ ಮೇಲೆ ಭರ್ಜರಿ ಆಫರ್ ಪಡೆಯೋದು ಹೇಗೆ? -
ಹವಾಮಾನ ಇಲಾಖೆ ಎಚ್ಚರಿಕೆ: ಬಿರುಗಾಳಿ ಮಳೆಯಲ್ಲಿ ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ಸಂಬಂಧಗಳ ಆತಂಕ ಕಾಡ್ತಿದೆಯಾ? ನೆಮ್ಮದಿ ನೀಡುವ ಉಚಿತ ಸಹಾಯವಾಣಿಗಳು -
IMD ಮಳೆ ಮುನ್ಸೂಚನೆ: ಬಾಲ್ಕನಿ ಸುರಕ್ಷತೆಗೆ ಈ ಕ್ರಮಗಳನ್ನು ಪಾಲಿಸಿ -
ಆರೋಗ್ಯಕರ ಆಹಾರ ಪದ್ಧತಿ: ಬೇಸಿಗೆಯಲ್ಲಿ ಲವಲವಿಕೆಯಿಂದ ಇರಲು ಹೀಗೆ ಮಾಡಿ -
ಅನುಷ್ಕಾ ಶರ್ಮಾ ಸ್ಟೇಡಿಯಂ-ಕೋರ್ ಲುಕ್: ಕ್ರಿಕೆಟ್ ಸೀಸನ್ನ ಹೊಸ ಕ್ರೇಜ್ -
ಇಂದಿನ ರಾಶಿ ಭವಿಷ್ಯ: ನಿಮ್ಮ ಜೀವನದಲ್ಲಿ ಕಾದಿದೆ ಅಚ್ಚರಿಯ ಬದಲಾವಣೆ! -
ಅಹಮದಾಬಾದ್ ದೋಸೆ ಹಿಟ್ಟಿನ ಆತಂಕ: ನಿಮ್ಮ ಮಕ್ಕಳ ಆರೋಗ್ಯಕ್ಕೆ ಈ ಎಚ್ಚರಿಕೆ ಅಗತ್ಯ!
ಬೆಳ್ಳಂಬೆಳಗ್ಗೆ ತುಳಸಿ ಎಲೆ ಜಗಿಯಿರಿ, ಆರೋಗ್ಯ ಪಡೆಯಿರಿ
ಆರೋಗ್ಯವೇ ಮಹಾಭಾಗ್ಯ, ರೋಗ ನಿರೋಧಕ ಶಕ್ತಿಯನ್ನು ಸರಿಯಾಗಿ ಇರಿಸಿಕೊಂಡರೆ ಆರೋಗ್ಯ ಎಂಬುದು ನಮ್ಮ ಸ್ವತ್ತಾಗಿರುತ್ತದೆ. ಪದೇ ಪದೇ ಕಾಯಿಲೆ ಬೀಳುವುದರಿಂದ ನಮ್ಮ ದೇಹವು ಬಳಲುತ್ತದೆ ಮತ್ತು ಅದಕ್ಕಾಗಿ ಮಾಡುವ ಖರ್ಚಿನಿಂದಾಗಿ ನಾವು ಆರ್ಥಿಕವಾಗಿ ನಷ್ಟ ಹೊಂದುತ್ತೇವೆ. ಜೊತೆಗೆ ಮಾನಸಿಕವಾಗಿ ಸಹ ಕುಗ್ಗಿ ಹೋಗುವಂತೆ ಮಾಡುತ್ತದೆ ಈ ಕಾಯಿಲೆಗಳು.

ಆದ್ದರಿಂದ ಕಾಯಿಲೆ ಬೀಳದಂತೆ ನಮ್ಮನ್ನು ನಾವು ಕಾಪಾಡಿಕೊಳ್ಳಲು ಇರುವ ಒಂದೇ ಒಂದು ಮಾರ್ಗ ಪರಿಹಾರವಲ್ಲ, ಕಾಯಿಲೆಯೇ ಬರದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಒಂದು ಮಾರ್ಗ ಈ ನಿಟ್ಟಿನಲ್ಲಿ ನಿಮಗೆ ಸಹಾಯಕ್ಕೆ ಬರುತ್ತದೆ. ಇದಕ್ಕಾಗಿ ಹಲವಾರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉಪಾಯಗಳು ನಿಮಗಾಗಿ ದೊರೆಯುತ್ತವೆ. ಅದರಲ್ಲಿ ಬೆಳಗ್ಗೆ ಎದ್ದ ಕೂಡಲೆ, ಬೆಚ್ಚಗಿನ ನೀರು, ನಿಂಬೆ ಮತ್ತು ಜೇನು ತುಪ್ಪ ಬೆರೆಸಿರುವ ರಸವನ್ನು ಸೇವಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ.
ಇದರಲ್ಲಿ ಹಲವಾರು ಆರೋಗ್ಯಕಾರಿ ಪ್ರಯೋಜನಗಳು ಅಡಗಿರುವುದು ಈಗಾಗಲೇ ದೃಢಪಟ್ಟಿದೆ. ಆದರೆ ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ. ಅದಕ್ಕಾಗಿ ಈ ರಸದ ಜಾಗದಲ್ಲಿ ತುಳಸಿ ಎಲೆಗಳನ್ನು ಸೇವಿಸುವುದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಸ್ವಾಭಾವಿಕವಾಗಿ ಹೆಚ್ಚಿಸುತ್ತವೆ ಎಂದು ತಿಳಿದುಬಂದಿದೆ. ಹಿಂದೂ ಧರ್ಮದ ಪವಿತ್ರ ಗಿಡ, ಮನೆಯಂಗಳದ ತುಳಸಿ
ತುಳಸಿಯು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಒಂದು ಉದ್ದೀಪಕವಾಗಿ ಕೆಲಸ ಮಾಡುತ್ತದೆ. ಇದರಲ್ಲಿರುವ ಒಂದು ರಾಸಾಯನಿಕವು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ಕಾಪಾಡುವ ಗುಣವನ್ನು ಹೊಂದಿರುತ್ತದೆ. ಇದು ಕೇವಲ ಅಪಾಯಕಾರಿ ಕಾಯಿಲೆಗಳನ್ನು ಉಂಟು ಮಾಡುವ ಬ್ಯಾಕ್ಟೀರಿಯಾ, ವೈರಸ್ಗಳ ವಿರುದ್ಧ ಹೋರಾಡುವುದರ ಜೊತೆಗೆ ಆರೋಗ್ಯಕರವಾದ ರೋಗ ನಿರೋಧಕ ಕೋಶಗಳ ಉತ್ಪಾದನೆಗೆ ಸಹಕರಿಸುತ್ತದೆ. ಅಲ್ಲದೆ ಇದರಲ್ಲಿರುವ ಆಂಟಿ ಆಕ್ಸಿಡೆಂಟ್ಗಳು ಸಹ ಅಧಿಕ ಪ್ರಮಾಣದಲ್ಲಿ ಇರುತ್ತವೆ. ಇವು ಆರೋಗ್ಯಕಾರಿ ಕೋಶಗಳನ್ನು ವಿಷಕಾರಿ ಕಣಗಳಿಂದ ಕಾಪಾಡುತ್ತದೆ ಮತ್ತು ಇದು ಅಧಿಕ ಆಕ್ಸಿಡೇಶನ್ನಿಂದ ಹಾನಿಯಾಗುವಿಕೆಯನ್ನು ತಪ್ಪಿಸುತ್ತದೆ. ಗಿಡಮೂಲಿಕೆಗಳ ರಾಣಿ 'ತುಳಸಿ'-ಆರೋಗ್ಯದ ಸಂಜೀವಿನಿ
ಬಳಸುವುದು ಹೇಗೆ?
ಬೆಳ್ಳಂಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮೂರು ನಾಲ್ಕು ತುಳಸಿ ಎಲೆಗಳನ್ನು ಅಗಿದು ನುಂಗಿ. ಈ ಎಲೆಗಳನ್ನು ನುಂಗುವ ಮೊದಲು ಅವುಗಳನ್ನು ನೀರಿನಲ್ಲಿ ಚೆನ್ನಾಗಿ ತೊಳೆಯಿರಿ. ಅವುಗಳನ್ನು ನುಂಗಿದ ನಂತರ ಒಂದು ಅಥವಾ ಎರಡು ಲೋಟ ನೀರನ್ನು ಕುಡಿಯಿರಿ. ಇದನ್ನು ಸೇವಿಸಿದ ಮೇಲೆ 30 ನಿಮಿಷ ಏನನ್ನು ಸೇವಿಸಬೇಡಿ. ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇದನ್ನು ಒಂದು ತಿಂಗಳಿನವರೆಗೆ ಪುನರಾವರ್ತಿಸಿ. ಬಹುಶಃ ಇದನ್ನು ಸಹ ನೀವು ಓದಲು ಇಷ್ಟಪಡಬಹುದು. ನಿಮ್ಮ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ 12 ಸೂಪರ್ ಫುಡ್ಗಳು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications










