Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಕಿಡ್ನಿಯ ಆರೋಗ್ಯಕ್ಕೆ ಸರಳ ಜ್ಯೂಸ್-ನೀವೂ ಒಮ್ಮೆ ಪ್ರಯತ್ನಿಸಿ
ಕಾರ್ಯನಿಮಿತ್ತ ಹೊರಗೆ ಹೋಗುವವರೆಲ್ಲರಿಗೂ ಹೊರಗಿನ ಊಟ ಮತ್ತು ಪೇಯಗಳನ್ನು ಅನಿವಾರ್ಯವಾಗಿ ಸೇವಿಸಬೇಕಾಗಿ ಬರುತ್ತದೆ. ಒಂದು ವೇಳೆ ನೀವೂ ಹೊರಗಿನ ಆಹಾರ ಪಾನೀಯಗಳನ್ನು ಅನಿವಾರ್ಯವಾಗಿ ಸೇವಿಸಬೇಕಾಗಿ ಬಂದು ನಿಮ್ಮ ಅರೋಗ್ಯದ ಬಗ್ಗೆ ಕಾಳಜಿಯನ್ನೂ ಹೊಂದಿದ್ದರೆ ಮೊದಲಿಗೆ ನಿಮ್ಮ ಕಾಳಜಿ ನಿಮ್ಮ ಮೂತ್ರಪಿಂಡಗಳ ಬಗ್ಗೆ ಇರಬೇಕು.
ಏಕೆಂದರೆ ಹೊರಗಿನ ಪಾನೀಯಗಳಲ್ಲಿರುವ ಕಲ್ಮಶಗಳನ್ನು ಸ್ವಚ್ಛಗೊಳಿಸುತ್ತಾ ಮೂತ್ರಪಿಂಡಗಳಲ್ಲಿ ಹೆಚ್ಚಿನ ವಿಷಕಾರಿ ವಸ್ತುಗಳು ಸಂಗ್ರಹವಾಗಿರುತ್ತವೆ. ವಿಶೇಷವಾಗಿ ನೀರಿನಲ್ಲಿ ಕರಗಿರುವ ಲವಣಗಳು. ಈ ಲವಣಗಳನ್ನು ಶೋಧಿಸಿದ ಬಳಿಕ ಮೂತ್ರಪಿಂಡಗಳಲ್ಲಿ ಉಳಿದುಕೊಳ್ಳುವ ಲವಣಗಳ ಸಾಂದ್ರತೆ ಹೆಚ್ಚುತ್ತಾ ಕಲ್ಲಿನ ರೂಪ ಪಡೆಯುತ್ತವೆ.

ಈ ಕಲ್ಲುಗಳು ನಿಧಾನವಾಗಿ ದೊಡ್ಡದಾಗುತ್ತಾ ಕಡೆಗೊಂದು ದಿನ ಅಪಾರ ನೋವು ನೀಡುತ್ತವೆ. ಅಲ್ಲದೇ ಕಲ್ಮಶಗಳು ಹೆಚ್ಚು ಹೆಚ್ಚು ಆಮ್ಲೀಯವಾಗುತ್ತಾ ಹೋದಂತೆ ಮೂತ್ರವೂ ಹೆಚ್ಚು ಹಳದಿಯಾಗುತ್ತದೆ. ಆದ್ದರಿಂದ ಮೂತ್ರಪಿಂಡಗಳಲ್ಲಿ ಸಂಗ್ರಹವಾಗಿದ್ದ ಕಲ್ಮಶಗಳನ್ನು ಕಾಲಕಾಲಕ್ಕೆ ನಿವಾರಿಸಿ ಸ್ವಚ್ಛಗೊಳಿಸುತ್ತಾ ಇರಬೇಕು.
ಮೂತ್ರಪಿಂಡಗಳನ್ನು ಸ್ವಚ್ಛಗೊಳಿಸಲು ಔಷಧಿಗಳೇನೂ ಬೇಕಾಗಿಲ್ಲ. ಇದಕ್ಕೆ ನೈಸರ್ಗಿಕ ಸಾಮಾಗ್ರಿಗಳೇ ಸಾಕು. ಈ ಕೆಲಸವನ್ನು ಸಮರ್ಥವಾಗಿ ಮಾಡಬಲ್ಲ ಕೆಲವು ಮನೆಮದ್ದುಗಳಿವೆ. ಬನ್ನಿ ಇಂತಹ ಒಂದು ಪ್ರಬಲ ಮತ್ತು ಸಮರ್ಥವಾದ ವಿಧಾನವನ್ನು ನೋಡೋಣ:
ಅಗತ್ಯವಿರುವ ಸಾಮಾಗ್ರಿಗಳು:
* ಕ್ರ್ಯಾನ್ಬೆರಿ ಹಣ್ಣಿನ ರಸ: ½ ಕಪ್
* ಲಿಂಬೆ ರಸ - ½ ಕಪ್
ತಯಾರಿಸುವ ವಿಧಾನ
* ಮೊದಲು ಒಂದು ಕಪ್ನಲ್ಲಿ ಮೇಲಿನ ಎರಡೂ ರಸಗಳನ್ನು ಸೇರಿಸಿ ಚೆನ್ನಾಗಿ ಕಲಕಿ ಮಿಶ್ರಣ ಮಾಡಿ.
* ಈ ಪೇಯ ಕೊಂಚ ಹುಳಿಯಾಗಿರುತ್ತದೆ. ಆದರೆ ಇದಕ್ಕೆ ಉಪ್ಪು ಸಕ್ಕರೆ ಏನನ್ನೂ ಸೇರಿಸಬೇಡಿ.
* ಈ ಪೇಯವನ್ನು ಪ್ರತಿದಿನ ರಾತ್ರಿ ಊಟ ಮಾಡಿದ ಬಳಿಕ ಈ ಪೇಯವನ್ನು ಸೇವಿಸಿ.
* ಉತ್ತಮ ಪರಿಣಾಮಕ್ಕಾಗಿ ಕೊಂಚ ನಡೆದಾಡಿ ಬಂದು ಎಷ್ಟು ಸಾಧ್ಯವೋ ಅಷ್ಟೂ ಹೆಚ್ಚು ನೀರು ಕುಡಿದು ಮಲಗಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


