Latest Updates
-
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್!
ಇದು ಕೆಮ್ಮಿನ ಔಷಧ- ಒಂದೇ ದಿನದಲ್ಲಿ ಕೆಮ್ಮು ಮಂಗಮಾಯ!
ಮನೆಯಲ್ಲಿಯೇ ತಯಾರಿಸಿಟ್ಟುಕೊಳ್ಳಬಹುದಾದ ಕೆಮ್ಮಿನ ಸಿರಪ್ಗಳು (ಕೆಮ್ಮಿನ ಕಷಾಯ) ಅನೇಕವಿದ್ದು ಅವುಗಳ ಬಳಕೆಯು ಸುರಕ್ಷಿತವಾಗಿರುತ್ತವೆ.....
ನಿಮಗೆ ಕೆಮ್ಮು ಸತತವಾಗಿ ಕಾಡುತ್ತಿದೆಯೇ? ಹಲವಾರು ಔಷಧಿ, ಕೆಮ್ಮಿನ ಸಿರಪ್ಗಳನ್ನು ಕುಡಿದ ಬಳಿಕವೂ ಕೆಮ್ಮು ಪೂರ್ಣವಾಗಿ ನಿವಾರಣೆಯಾಗುತ್ತಿಲ್ಲವೇ? ಹಾಗಾದರೆ ನೀವು ಕಡೆಯದಾಗಿ ಪ್ರಯತ್ನಿಸಬಹುದಾದ ಒಂದು ಮನೆಮದ್ದಿದೆ. ಕಡೆಯದಾದ ಎಂಬ ಪದವನ್ನು ಬಳಸಲು ಕಾರಣವೇನೆಂದರೆ ಎಂತಹ ಹಳೆಯ ಕೆಮ್ಮಿದ್ದರೂ ಈ ವಿಧಾನದಿಂದ ಕಡಿಮೆಯಾಗುವುದು ಖಂಡಿತ.
ಸಾಮಾನ್ಯವಾದ ಕೆಮ್ಮಿಗೆ ಇದು ತಕ್ಷಣವೇ ಪರಿಹಾರ ನೀಡುತ್ತದೆ. ಇದರ ಧನಾತ್ಮಕ ಅಂಶವೆಂದರೆ ಇದನ್ನು ತಯಾರಿಸಲು ಕೇವಲ ನೈಸರ್ಗಿಕ ಸಾಮಾಗ್ರಿಗಳನ್ನೇ ಬಳಸಲಾಗಿದೆ. ಅಷ್ಟೇ ಅಲ್ಲ, ಇದರ ಸೇವನೆಯಿಂದ ಯಾವುದೇ ಅಡ್ಡಪರಿಣಾಮವೂ ಇಲ್ಲ.
ಕಿರಿಯರಿಂದ ವೃದ್ಧರವರೆಗೆ ಎಲ್ಲರೂ ಸುರಕ್ಷಿತವಾಗಿ ಸೇವಿಸಬಹುದಾದ ಈ ಔಷಧಿ ತಯಾರಿಸಲು ಸುಲಭವೂ ಆಗಿದೆ. ಬನ್ನಿ, ಈ ಅದ್ಭುತ ಸಿರಪ್ ಹೇಗೆ ತಯಾರಿಸಬಹುದು ಎಂಬುದನ್ನು ನೋಡೋಣ...

ಹಸಿಶುಂಠಿ
ಒಂದು ಇಂಚಿನಷ್ಟು ದೊಡ್ಡ ಹಸಿಶುಂಠಿಯ ಸಿಪ್ಪೆ ಸುಲಿದು ಚಿಕ್ಕ ಚಿಕ್ಕ ತುಂಡುಗಳನ್ನಾಗಿಸಿ ಕೆಮ್ಮು ನೆಗಡಿಗೆ ರಾಮಬಾಣ ಒಣ ಶುಂಠಿ ಕಷಾಯ.

ಲಿಂಬೆಹಣ್ಣುಗಳ ರಸ
ಎರಡು ಲಿಂಬೆಹಣ್ಣುಗಳ ರಸವನ್ನು ಹಿಂಡಿ ಒಂದು ಲೋಟದಲ್ಲಿ ಪ್ರತ್ಯೇಕವಾಗಿಡಿ. ಇನ್ನು ಎರಡೂ ಲಿಂಬೆಗಳ ಸಿಪ್ಪೆಗಳನ್ನು ಚಿಕ್ಕದಾಗಿ ತುರಿಯಿರಿ.

ಎರಡು ಲೋಟ ನೀರು
ಒಂದು ಚಿಕ್ಕ ಪಾತ್ರೆಯಲ್ಲಿ ಎರಡು ಲೋಟ ನೀರು ಹಾಕಿ ಇದರಲ್ಲಿ ಶುಂಠಿ ಮತ್ತು ಲಿಂಬೆಸಿಪ್ಪೆಯ ತುರಿಯನ್ನು ಸೇರಿಸಿ ಕುದಿಸಿ.

ಐದಾರು ನಿಮಿಷ ಕುದಿಸಿದ ನಂತರ
ಸುಮಾರು ಐದಾರು ನಿಮಿಷ ಮಧ್ಯಮ ಉರಿಯಲ್ಲಿ ಕುದಿದ ಬಳಿಕ ಉರಿ ಆರಿಸಿ ತಣಿಯಲು ಬಿಡಿ.

ಲೋಟದಲ್ಲಿ ಸಂಗ್ರಹಿಸಿ
ಬಳಿಕ ಈ ನೀರನ್ನು ಸೋಸಿ ಒಂದು ಲೋಟದಲ್ಲಿ ಸಂಗ್ರಹಿಸಿ

ಅರ್ಧ ಕಪ್ ಜೇನು
ಇನ್ನೊಂದು ಚಿಕ್ಕ ಪಾತ್ರೆಯಲ್ಲಿ ಎರಡು ಮೂರು ಟೇಬಲ್ ಚಮಚ ಜೇನನ್ನು ಸುರಿದು ಕೊಂಚವೇ ಬಿಸಿಮಾಡಿ.

ಇನ್ನು ಲಿಂಬೆರಸವನ್ನು ಸೇರಿಸಿ
ಜೇನು ಬಿಸಿಯಾಗುತ್ತಿದ್ದಂತೆಯೇ ಕುದಿಸಿ ತಣಿಸಿದ್ದ ನೀರನ್ನು ಇದಕ್ಕೆ ಬೆರೆಸಿ. ಈ ನೀರು ಕೊಂಚ ಬಿಸಿಯಾಗುತ್ತಿದ್ದಂತೆಯೇ ಪ್ರತ್ಯೇಕವಾಗಿರಿಸಿದ್ದ ಲಿಂಬೆರಸವನ್ನು ಸೇರಿಸಿ ಚಮಚದಲ್ಲಿ ಕಲಕುತ್ತಾ ಇನ್ನಷ್ಟು ಬಿಸಿಮಾಡಿ.

ಉರಿ ಆರಿಸಿ ತಣಿಯಲು ಬಿಡಿ
ಇನ್ನೇನು ಕುದಿಯಲಿದೆ ಎನ್ನುವಾಗ ಉರಿ ಆರಿಸಿ ತಣಿಯಲು ಬಿಡಿ.

ಸಿರಪ್ ರೆಡಿ!
ಈ ಸಿರಪ್ ಅನ್ನು ಗಾಳಿಯಾಡದ ಬಾಟಲಿಯಲ್ಲಿ ಸಂಗ್ರಹಿಸಿ ಮುಚ್ಚಳ ಮುಚ್ಚಿ. ಈ ಸಿರಪ್ ಅನ್ನು ಮಕ್ಕಳು ದಿನಕ್ಕೆ ಒಂದರಿಂದ ಎರಡು ಚಮಚ, ಹಿರಿಯರು ದಿನಕ್ಕೆ ಎರಡರಿಂದ ನಾಲ್ಕು ಚಮಚ ಸೇವಿಸಿದರೆ ಕೆಮ್ಮು ತಕ್ಷಣ ಕಡಿಮೆಯಾಗುತ್ತದೆ. ಈ ಸಿರಪ್ ಅನ್ನು ಫ್ರಿಜ್ಜಿನಲ್ಲಿಯೂ ಇಡಬಹುದು ಅಥವಾ ತಣ್ಣನೆಯ ಸ್ಥಳದಲ್ಲಿಯೂ ಸಂಗ್ರಹಿಸಿಡಬಹುದು.



Click it and Unblock the Notifications