Latest Updates
-
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ! -
ಮಳೆಗಾಲದಲ್ಲಿ ಮನೆ ಹಾಳಾಗದಂತೆ ತಡೆಯುವುದು ಹೇಗೆ? ತೇವಾಂಶ ಮತ್ತು ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
'ಹೆಲ್ದಿ' ಆಹಾರದ ಹೆಸರಿನಲ್ಲಿ ಮೋಸ ಹೋಗ್ತಿದ್ದೀರಾ? FSSAI ಹೊಸ ನಿಯಮದ ಅಸಲಿಯತ್ತು ಇಲ್ಲಿದೆ! -
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ!
ಶೀತ, ಗಂಟಲು ಕೆರೆತ ಸಮಸ್ಯೆಗೆ, ಜೀರಿಗೆ ಕಷಾಯ ಸಾಕು
ಸಾಸಿವೆ, ಮೆಣಸು, ಜೀರಿಗೆ, ಧನಿಯಾ, ಚಕ್ಕೆ, ಲವಂಗ, ಏಲಕ್ಕಿ ಈ ಮಸಾಲೆ ಪದಾರ್ಥಗಳಿಲ್ಲದ ಯಾವುದಾದರು ಭಾರತೀಯ ಅಡುಗೆ ಮನೆಯುಂಟೆ? ಇವುಗಳೆಲ್ಲವು ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು ಎಂಬಂತಹ ಗುಣಗಳನ್ನು ತಮ್ಮಲ್ಲಿ ಹೊಂದಿವೆ. ಒಂದೆರಡು ಚಿಟಿಕೆಯಷ್ಟು ಇವುಗಳನ್ನು ಆಹಾರದಲ್ಲಿ ಬೆರೆಸಿದರು ಸಾಕು ಆ ಆಹಾರದ ರುಚಿಯು ಹೆಚ್ಚಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಅದರಲ್ಲಿಯೂ ಜೀರಿಗೆ
ಈ ಮಸಾಲೆ ಪದಾರ್ಥಗಳಲ್ಲಿಯೇ ಅತ್ಯಂತ ವಿಶಿಷ್ಟ ಸ್ಥಾನವಿದೆ. ಜೀರಿಗೆ ರಸ, ಜೀರಿಗೆ ಕಷಾಯ, ಜೀರಿಗೆ ಚಿತ್ರಾನ್ನ, ಜೀರಿಗೆ ನೀರು, ಜೀರಾ ರೈಸ್ ಇತ್ಯಾದಿ ವಿಶೇಷ ಅಡುಗೆಗಳು ಇದರಿಂದ ತಯಾರಾಗುತ್ತವೆ. ಇದಕ್ಕೆ ಕಾರಣ ಜೀರಿಗೆಯಲ್ಲಿ ಸಿಕ್ಕುವ ವಿಶಿಷ್ಟವಾದ ರುಚಿಯೇ ಆಗಿರುತ್ತದೆ. ಇದರಲ್ಲಿ ರುಚಿಯ ಜೊತೆಗೆ ಆರೋಗ್ಯಕರ ಅಂಶಗಳು ಸಹ ಇವೆ.
ಹೌದು, ಇಂತಹ ಜೀರಿಗೆಯನ್ನು ಕೆಲವೊಂದು ಸಂದರ್ಭಗಳಲ್ಲಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದಲು ಸಹ ಬಳಸಲಾಗುತ್ತದೆ. ಅದರಲ್ಲಿ ಶೀತ ಮತ್ತು ಗಂಟಲ ಕೆರೆತ ಹಾಗು ಗಂಟಲು ನೋವಿನಿಂದ ಉಪಶಮನವನ್ನು ಪಡೆಯಲು ಇದನ್ನು ಬಳಸಲಾಗುತ್ತದೆ ಹಾಗಾದರೆ ಯಾವ ಒಂದು ಅಂಶಗಳ ಮೂಲಕ ಜೀರಿಗೆಯು ಈ ಸಮಸ್ಯೆಗಳನ್ನು ನಿವಾರಿಸುತ್ತದೆ ಎಂಬ ಕುತೂಹಲ ನಿಮಗಿದೆಯಲ್ಲವೇ?
ಹೌದು ಜೀರಿಗೆಯಲ್ಲಿ ಉರಿಯೂತ, ಶಿಲೀಂಧ್ರ ನಿವಾರಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಅಂಶಗಳು ಇವೆ. ಇದರ ಜೊತೆಗೆ ವಿಟಮಿನ್ ಸಿ, ವಿಟಮಿನ್ ಎ ಮತ್ತು ಕಬ್ಬಿಣಾಂಶ ಸಹ ಜೀರಿಗೆಯಲ್ಲಿದ್ದು, ಇದು ನಿಮಗೆ ರೋಗ ನಿರೋಧಕ ಶಕ್ತಿಯನ್ನು ಒದಗಿಸುತ್ತದೆ. ಹೀಗೆ ಇದು ನಿಮ್ಮ ಮೇಲೆ ದಾಳಿ ಮಾಡುವ ಇನ್ಫೆಕ್ಷನ್ಗಳ ಮೇಲೆ ಹೊರಾಡುತ್ತದೆ. ಒಂದು ವೇಳೆ ನಿಮಗೆ ಶೀತವಿದ್ದಲ್ಲಿ, ಈ ಕೆಳಗೆ ಸೂಚಿಸಿರುವ ಪರಿಹಾರಗಳನ್ನು ಬಳಸಬಹುದು

ಸಿದ್ಧಗೊಳಿಸುವ ವಿಧಾನ
*ಎರಡು ಕಪ್ ನೀರಿನಲ್ಲಿ ಒಂದು ಟೇಬಲ್ ಚಮಚ ಜೀರಿಗೆಯನ್ನು ಹಾಕಿಕೊಂಡು ಕುದಿಸಿ.
*ಇದಕ್ಕೆ ಒಂದು ಸಣ್ಣ ತುಂಡು ಶುಂಠಿಯನ್ನು ಹಾಕಿ ಬೇಯಿಸಿ, ಇನ್ನೂ ಒಳ್ಳೆಯದು.
*ಇದು ಬೆಂದ ಮೇಲೆ ಜೀರಿಗೆ ಮತ್ತು ಶುಂಠಿಯ ಎಲ್ಲಾ ಅಂಶಗಳು ಈ ನೀರಿನಲ್ಲಿ ಸೇರಿಸಿಕೊಳ್ಳುತ್ತವೆ. ಇದನ್ನು ಶೋಧಿಸಿಕೊಳ್ಳಿ.
*ಹೀಗೆ ಶೋಧಿಸಿದ ನೀರನ್ನು ನಿಮಗೆ ಶೀತ ಮತ್ತು ಗಂಟಲು ನೋವಿನ ಸಮಸ್ಯೆ ಬಂದಾಗೆಲ್ಲ ಸೇವಿಸಿ.
ಇದನ್ನು ತಯಾರಿಸುವುದು ಸುಲಭ. ಇದು ಕೇವಲ ಶೀತಕ್ಕಷ್ಟೇ ಅಲ್ಲದೆ, ನಿಮ್ಮ ಜೀರ್ಣಕ್ರಿಯೆ, ವಿಸರ್ಜನಾ ಪ್ರಕ್ರಿಯೆ ಸರಾಗವಾಗಿ ಸಾಗುತ್ತದೆ ಮತ್ತು ಇದು ನಿಮ್ಮ ದೇಹದಿಂದ ಟಾಕ್ಸಿನ್ಗಳನ್ನು ಹೊರ ಹಾಕಲು ಸಹ ಸಹಾಯ ಮಾಡುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications