Latest Updates
-
ಬಿಸಿಲ ಧಗೆಯಲ್ಲಿ ಮದುವೆ ಸಮಾರಂಭಗಳ ಸಂಕಟ: ಅತಿಥಿಗಳಿಗೂ ನಿಮಗೂ ಆರಾಮ ನೀಡುವ ಸೀಕ್ರೆಟ್ ಟಿಪ್ಸ್ ಇಲ್ಲಿದೆ! -
ಬಿಸಿಲ ಬೇಗೆಯಿಂದ ಮನೆ ತತ್ತರ: ಎಸಿ ಇಲ್ಲದೆಯೇ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಸರಳ ಉಪಾಯಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮಗಳನ್ನು ಪಾಲಿಸಿ, ಆರೋಗ್ಯವಾಗಿರಿ! -
ಕಾನ್ ರೆಡ್ ಕಾರ್ಪೆಟ್ ಮೇಲೆ ದಿಶಾ ಮದನ್ ಅಬ್ಬರ: ಹಳೆಯ ಸೀರೆಯಿಂದ ಸೃಷ್ಟಿಯಾದ ಈ ಫ್ಯಾಷನ್ ಮ್ಯಾಜಿಕ್ ನೋಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಜೀವಕ್ಕೆ ಅಪಾಯವಾಗದಂತೆ ತಡೆಯಲು ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಬಿಸಿಲ ಬೇಗೆಯಲ್ಲಿ ದಂಪತಿಗಳ ನಡುವೆ ಹೆಚ್ಚಿದ ಕಿರಿಕಿರಿ: ಸಂಬಂಧ ಹಾಳಾಗದಂತೆ ತಡೆಯಲು ಈ ಟಿಪ್ಸ್ ಪಾಲಿಸಿ -
ಬಿಸಿಗಾಳಿಯ ಆರ್ಭಟಕ್ಕೆ ಹೆದರಬೇಡಿ: ಎಸಿ ಇಲ್ಲದಿದ್ದರೂ ನಿಮ್ಮ ಮನೆಯನ್ನು ಐಸ್ನಂತೆ ತಂಪಾಗಿರಿಸುವ ಅದ್ಭುತ ಟ್ರಿಕ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ ತಡೆಯಲು ಈ ಆಹಾರಗಳೇ ನಿಮ್ಮ ಬೆಸ್ಟ್ ಫ್ರೆಂಡ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರವಿರಲಿ! -
ಬಿಸಿಲ ಬೇಗೆಯಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಸಣ್ಣ ಬದಲಾವಣೆಗಳನ್ನು ಮಿಸ್ ಮಾಡ್ಬೇಡಿ!
ಆರೋಗ್ಯ ಟಿಪ್ಸ್: ಭೇದಿಯ ಬಾಧೆಗೆ ಫಲಪ್ರದ ಮನೆಮದ್ದುಗಳು
ಭೇದಿ ಸಮಸ್ಯೆ ಇರುವಂತಹ ವ್ಯಕ್ತಿಗೆ ಚಿಕಿತ್ಸೆ ನೀಡುವ ವೇಳೆ ಕಾಡುವ ಚಿಂತೆ ಎಂದರೆ ಅದು ನಿರ್ಜಲೀಕರಣ ವಾಗುವುದು. ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದೆ ಇದ್ದರೆ ಆಗ ಭೇದಿಯಿಂದಾಗಿ ದೇಹದಿಂದ ಹೊರಹೋದ ದ್ರವ ಮತ್ತು ಉಪ್ಪಿನಾಂಶವು ಗಂಭೀರವಾದ ಸಮಸ್ಯೆ ಉಂಟು ಮಾಡಬಹುದು. ತುಂಬಾ ಗಂಭೀರ ಪರಿಸ್ಥಿತಿಯಲ್ಲಿ ರೋಗಿಗೆ ಡ್ರಿಪ್ಸ್ ನಲ್ಲಿ ಇಡಬೇಕಾಗಬಹುದು.
ನೈಸರ್ಗಿಕ ಚಿಕಿತ್ಸಾ ಕ್ರಮದ ಪ್ರಕಾರ ನೀರಿಗೆ ಉಪ್ಪು, ಒಂದು ಚಮಚ ಗ್ಲೂಕೋಸ್ ಮತ್ತು ಲಿಂಬೆ ಹಾಕಿರುವಂತಹ ಬಿಸಿ ನೀರನ್ನು ಕುಡಿಸಬೇಕು. ಆಹಾರ ಸೇವನೆ ಬಳಿಕ ವಾಂತಿ ಮಾಡುತ್ತಲಿದ್ದರೆ ಆಗ ಈ ಪಾನೀಯವು ತುಟಿಗಳಲ್ಲಿ ತೇವಾಂಶವನ್ನು ಕಾಪಾಡುವುದು. ನೀರಿನ ಬದಲು ಗಂಜಿ ನೀರನ್ನು ನೀಡಿ. ಮೂರು ದಿನಕ್ಕಿಂತ ಹೆಚ್ಚು ಕಾಲ ಭೇದಿ ಕಾಡುತ್ತಿದ್ದರೆ ಆಗ ವೈದ್ಯರನ್ನು ಭೇಟಿಯಾಗುವುದು ಅನಿವಾರ್ಯ. ಇಲ್ಲಿ ಸೂಚಿಸಲಾಗಿರುವ ಕೆಲವೊಂದು ಮನೆಮದ್ದುಗಳನ್ನು ನೀವು ಪ್ರಯತ್ನಿಸಿ ನೋಡಬಹುದು...

ಅರ್ಧ ಚಮಚ ಅರಿಶಿನ!
ಅರಿಶಿನದಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣಗಳು ಇದ್ದು, ಇದು ಬ್ಯಾಕ್ಟೀರಿಯಾಗಳನ್ನು ಕೊಲ್ಲುವುದು. ಒಂದು ಲೋಟ ನೀರಿಗೆ ಅರ್ಧ ಚಮಚ ಅರಿಶಿನ ಹಾಕಿ ಕುಡಿಯಿರಿ. ದಿನದಲ್ಲಿ ಎರಡು ಸಲ ಇದನ್ನು ಕುಡಿಯಬೇಕು.

ಶುಂಠಿ
ಶುಂಠಿಯಲ್ಲಿ ಶಮನಕಾರಿ ಗುಣಗಳಿದ್ದು, ಇದು ಜೀರ್ಣಾಂಗ ವ್ಯವಸ್ಥೆಯನ್ನು ಸರಿಪಡಿಸುವುದು. ಒಂದು ತುಂಡು ಶುಂಠಿಯನ್ನು ನೀರಿನಲ್ಲಿ ಬಿಸಿ ಮಾಡಿ ಆ ನೀರನ್ನು ಕುಡಿಯಿರಿ.

ಆಪಲ್ ಸೀಡರ್ ವಿನೇಗರ್
ಭೇದಿಗೆ ಕಾರಣವಾಗಿರುವ ಬ್ಯಾಕ್ಟೀರಿಯಾಗಳನ್ನು ಕೊಲ್ಲುವ ಗುಣ ಆಪಲ್ ಸೀಡರ್ ವಿನೇಗರ್ ನಲ್ಲಿದೆ. ಒಂದು ಚಮಚ ಆ್ಯಪಲ್ ಸೀಡರ್ ವಿನೇಗರ್ ನ್ನು ಒಂದು ಲೋಟ ಬಿಸಿ ನೀರಿಗೆ ಹಾಕಿ. ಇದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಕುಡಿದರೆ ಭೇದಿ ನಿವಾರಣೆಯಾಗುವುದು. ದಿನಕ್ಕೆ ಎರಡು ಸಲ ಇದನ್ನು ಕುಡಿಯಿರಿ.

ಮೊಸರು
ಮೊಸರು ಹೊಟ್ಟೆಯಲ್ಲಿ ಒಳ್ಳೆಯ ಬ್ಯಾಕ್ಟೀರಿಯಾ ಶೇಖರಣೆ ಮಾಡುತ್ತದೆ. ಭೇದಿ ಸಮಸ್ಯೆ ಇದ್ದಾಗ ನೀವು ದಿನಕ್ಕೆ ಎರಡು ಸಲ ಮೊಸರು ತಿನ್ನಿ.

ದಾಳಿಂಬೆ ಜ್ಯೂಸ್
ದಾಳಿಂಬೆಯಲ್ಲಿ ಆ್ಯಂಟಿ ಫಂಗಲ್ ಮತ್ತು ಆ್ಯಂಟಿ ಬ್ಯಾಕ್ಟೀರಿಯಾ ಗುಣಗಳು ಇದೆ. ಇದು ಕೆಟ್ಟ ಬ್ಯಾಕ್ಟೀರಿಯಾಗಳ ನಿವಾರಣೆ ಮಾಡುತ್ತದೆ. ಇದು ಭೇದಿಗೆ ಒಳ್ಳೆಯ ಮನೆಮದ್ದು. ಇದರ ಜ್ಯೂಸ್ ನ್ನು ಒಂದು ಲೋಟ ಕುಡಿಯಿರಿ.



Click it and Unblock the Notifications