Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸ್ವಚ್ಛತೆ ಕಾಪಾಡಿದರೆ ರೋಗಬಾಧೆ ದೂರ ಬಲುದೂರ...
ನಮ್ಮ ದೈನಂದಿನ ಜೀವನದಲ್ಲಿ ಸ್ಛಚತೆ ತುಂಬಾ ಮುಖ್ಯ. ಕೇಂದ್ರ ಸರಕಾರ ಕೂಡ ಸ್ವಚ್ಛ ಭಾರತ ಅಭಿಯಾನವನ್ನು ಶುರು ಮಾಡಿದೆ. ಈ ಅಭಿಯಾನದ ಮೂಲಕ ಬಯಲಿನಲ್ಲಿ ಶೌಚ ಮಾಡಬಾರದು ಮತ್ತು ಪ್ರತಿಯೊಂದು ಮನೆಯಲ್ಲೂ ಶೌಚಾಲಯವಿರಬೇಕು ಮತ್ತು ಪ್ರತಿಯೊಂದು ಗ್ರಾಮವೂ ಸ್ವಚ್ಛವಾಗಿರಬೇಕು ಎನ್ನುವುದು ಉದ್ದೇಶವಾಗಿದೆ. ಆದರೆ ಎಷ್ಟು ಮಂದಿ ತಮ್ಮ ದೈನಂದಿನ ಜೀವನದಲ್ಲಿ ಸ್ವಚ್ಛತೆಯನ್ನು ಪಾಲಿಸುತ್ತಾರೆ.

ಸ್ವಚ್ಛತೆಯನ್ನು ಪಾಲಿಸಿದರೆ ಮುಂದಿನ ರೋಗರುಜಿನಗಳಿಂದ ದೂರವಿರಬಹುದು. ಬಾಲ್ಯದಿಂದಲೇ ಮಕ್ಕಳಿಗೆ ಸ್ವಚ್ಛತೆ ಬಗ್ಗೆ ಹೇಳಿಕೊಟ್ಟರೆ ಮುಂದಿನ ದಿನಗಳಲ್ಲಿ ಅವರು ಸ್ವಚ್ಛತೆಯನ್ನು ಅಳವಡಿಸಿಕೊಂಡು ಸೋಂಕು ಹಾಗೂ ರೋಗಗಳಿಂದ ದೂರವಿರಬಹುದು. ಹೆಚ್ಚಿನವರು ಹೊಸ ವರ್ಷಕ್ಕೆ ಧೂಮಪಾನ ತ್ಯಜಿಸುವುದು, ಆರೋಗ್ಯಕರವಾದ ಆಹಾರ ತಿನ್ನುವುದು, ಹಣ ಉಳಿಸುವುದು ಮೊದಲಾದವುಗಳ ಬಗ್ಗೆ ಪಣ ತೊಡುತ್ತಾರೆ. 'ಆರೋಗ್ಯವೇ ಭಾಗ್ಯ' ಎಂಬ ಅರಿವು ಎಂದೆಂದಿಗೂ ಇರಲಿ!
ಆದರೆ ನಾವು ಸ್ವಚ್ಛವಾಗಿದ್ದುಕೊಂಡು ನಮ್ಮ ಸುತ್ತಲೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎನ್ನುವ ಬಗ್ಗೆ ಯಾರೂ ಪಣ ತೊಡುವುದಿಲ್ಲ. ಹೊಸ ವರ್ಷಕ್ಕೆ ಸ್ವಚ್ಛತೆಯ ಬಗ್ಗೆ ಪಣ ತೊಟ್ಟರೆ ತುಂಬಾ ಒಳ್ಳೆಯದು.
*ಪ್ರತೀ ದಿನ ಎದ್ದಾಗ ಇಂದು ಏನು ಮಾಡಬೇಕೆಂದು ಯಾವತ್ತಾದರೂ ಕ್ರಿಯಾತ್ಮಕವಾಗಿ ಯೋಚನೆ ಮಾಡಿದ್ದೀರಾ? ಕೆಲವರ ಬೆಳಗ್ಗಿನ ಕ್ರಿಯೆಗಳು ತುಂಬಾ ನೀರವತೆಯಿಂದ ಕೂಡಿರುತ್ತದೆ. ಎದ್ದಕೂಡಲೇ ಶೌಚಾಲಯಕ್ಕೆ ಹೋಗುತ್ತಾರೆ. ಬ್ರಶ್ ತೆಗೆದುಕೊಂಡು ಹಲ್ಲುಜ್ಜುತ್ತಾರೆ. ಆದರೆ ಬೆಳಗ್ಗೆ ಹಲ್ಲುಉಜ್ಜಿದರೆ ಸಾಕಾಗದು. ರಾತ್ರಿ ಮಲಗುವ ಮುನ್ನ ಕೂಡ ಹಲ್ಲುಜ್ಜಬೇಕು.
*ನಾಲಗೆಯನ್ನು ಕೂಡ ಬ್ರಶ್ನಿಂದ ಉಜ್ಜಿಕೊಳ್ಳಿ. ಪ್ರತೀದಿನವೂ ಸ್ನಾನ ಮಾಡುವುದು ಸ್ವಚ್ಛತೆಯ ಮತ್ತೊಂದು ವಿಧಾನ. ಪ್ರತೀ ದಿನವೂ ವಾತಾವರಣವೂ ಕಲುಷಿತವಾಗುತ್ತಿರುತ್ತದೆ. ಧೂಳು, ಹೊಗೆಯೊಂದಿಗೆ ನಾವು ಪ್ರತಿ ದಿನವೂ ಹೋರಾಡುತ್ತಿರುತ್ತೇವೆ. ಇಂತಹ ಸಂದರ್ಭದಲ್ಲಿ ನಿತ್ಯವೂ ಸ್ನಾನ ಮಾಡುವುದು ಅತ್ಯಗತ್ಯ.
*ಇದು ದೇಹವನ್ನು ಮಾತ್ರ ಸ್ವಚ್ಛ ಮಾಡುವುದು ಮಾತ್ರವಲ್ಲದೆ ದೇಹದ ನೋವು ಹಾಗೂ ಒತ್ತಡವನ್ನು ದೂರ ಮಾಡುತ್ತದೆ. ನಿಯಮಿತವಾಗಿ ಉಗುರುಗಳನ್ನು ಕತ್ತರಿಸುತ್ತಾ ಇರಿ. ಉಗುರುಗಳು ಉದ್ದವಾಗಿದ್ದರೆ ಅದರಲ್ಲಿ ಬ್ಯಾಕ್ಟೀರಿಯಾಗಳು ವಾಸಮಾಡುವುದು. ಶೀನುವಾಗ ಮತ್ತು ಕೆಮ್ಮುವಾಗ ಮುಖ ಮುಚ್ಚಿಕೊಳ್ಳಿ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications













