Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಸ್ವಚ್ಛತೆ ಕಾಪಾಡಿದರೆ ರೋಗಬಾಧೆ ದೂರ ಬಲುದೂರ...
ನಮ್ಮ ದೈನಂದಿನ ಜೀವನದಲ್ಲಿ ಸ್ಛಚತೆ ತುಂಬಾ ಮುಖ್ಯ. ಕೇಂದ್ರ ಸರಕಾರ ಕೂಡ ಸ್ವಚ್ಛ ಭಾರತ ಅಭಿಯಾನವನ್ನು ಶುರು ಮಾಡಿದೆ. ಈ ಅಭಿಯಾನದ ಮೂಲಕ ಬಯಲಿನಲ್ಲಿ ಶೌಚ ಮಾಡಬಾರದು ಮತ್ತು ಪ್ರತಿಯೊಂದು ಮನೆಯಲ್ಲೂ ಶೌಚಾಲಯವಿರಬೇಕು ಮತ್ತು ಪ್ರತಿಯೊಂದು ಗ್ರಾಮವೂ ಸ್ವಚ್ಛವಾಗಿರಬೇಕು ಎನ್ನುವುದು ಉದ್ದೇಶವಾಗಿದೆ. ಆದರೆ ಎಷ್ಟು ಮಂದಿ ತಮ್ಮ ದೈನಂದಿನ ಜೀವನದಲ್ಲಿ ಸ್ವಚ್ಛತೆಯನ್ನು ಪಾಲಿಸುತ್ತಾರೆ.

ಸ್ವಚ್ಛತೆಯನ್ನು ಪಾಲಿಸಿದರೆ ಮುಂದಿನ ರೋಗರುಜಿನಗಳಿಂದ ದೂರವಿರಬಹುದು. ಬಾಲ್ಯದಿಂದಲೇ ಮಕ್ಕಳಿಗೆ ಸ್ವಚ್ಛತೆ ಬಗ್ಗೆ ಹೇಳಿಕೊಟ್ಟರೆ ಮುಂದಿನ ದಿನಗಳಲ್ಲಿ ಅವರು ಸ್ವಚ್ಛತೆಯನ್ನು ಅಳವಡಿಸಿಕೊಂಡು ಸೋಂಕು ಹಾಗೂ ರೋಗಗಳಿಂದ ದೂರವಿರಬಹುದು. ಹೆಚ್ಚಿನವರು ಹೊಸ ವರ್ಷಕ್ಕೆ ಧೂಮಪಾನ ತ್ಯಜಿಸುವುದು, ಆರೋಗ್ಯಕರವಾದ ಆಹಾರ ತಿನ್ನುವುದು, ಹಣ ಉಳಿಸುವುದು ಮೊದಲಾದವುಗಳ ಬಗ್ಗೆ ಪಣ ತೊಡುತ್ತಾರೆ. 'ಆರೋಗ್ಯವೇ ಭಾಗ್ಯ' ಎಂಬ ಅರಿವು ಎಂದೆಂದಿಗೂ ಇರಲಿ!
ಆದರೆ ನಾವು ಸ್ವಚ್ಛವಾಗಿದ್ದುಕೊಂಡು ನಮ್ಮ ಸುತ್ತಲೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎನ್ನುವ ಬಗ್ಗೆ ಯಾರೂ ಪಣ ತೊಡುವುದಿಲ್ಲ. ಹೊಸ ವರ್ಷಕ್ಕೆ ಸ್ವಚ್ಛತೆಯ ಬಗ್ಗೆ ಪಣ ತೊಟ್ಟರೆ ತುಂಬಾ ಒಳ್ಳೆಯದು.
*ಪ್ರತೀ ದಿನ ಎದ್ದಾಗ ಇಂದು ಏನು ಮಾಡಬೇಕೆಂದು ಯಾವತ್ತಾದರೂ ಕ್ರಿಯಾತ್ಮಕವಾಗಿ ಯೋಚನೆ ಮಾಡಿದ್ದೀರಾ? ಕೆಲವರ ಬೆಳಗ್ಗಿನ ಕ್ರಿಯೆಗಳು ತುಂಬಾ ನೀರವತೆಯಿಂದ ಕೂಡಿರುತ್ತದೆ. ಎದ್ದಕೂಡಲೇ ಶೌಚಾಲಯಕ್ಕೆ ಹೋಗುತ್ತಾರೆ. ಬ್ರಶ್ ತೆಗೆದುಕೊಂಡು ಹಲ್ಲುಜ್ಜುತ್ತಾರೆ. ಆದರೆ ಬೆಳಗ್ಗೆ ಹಲ್ಲುಉಜ್ಜಿದರೆ ಸಾಕಾಗದು. ರಾತ್ರಿ ಮಲಗುವ ಮುನ್ನ ಕೂಡ ಹಲ್ಲುಜ್ಜಬೇಕು.
*ನಾಲಗೆಯನ್ನು ಕೂಡ ಬ್ರಶ್ನಿಂದ ಉಜ್ಜಿಕೊಳ್ಳಿ. ಪ್ರತೀದಿನವೂ ಸ್ನಾನ ಮಾಡುವುದು ಸ್ವಚ್ಛತೆಯ ಮತ್ತೊಂದು ವಿಧಾನ. ಪ್ರತೀ ದಿನವೂ ವಾತಾವರಣವೂ ಕಲುಷಿತವಾಗುತ್ತಿರುತ್ತದೆ. ಧೂಳು, ಹೊಗೆಯೊಂದಿಗೆ ನಾವು ಪ್ರತಿ ದಿನವೂ ಹೋರಾಡುತ್ತಿರುತ್ತೇವೆ. ಇಂತಹ ಸಂದರ್ಭದಲ್ಲಿ ನಿತ್ಯವೂ ಸ್ನಾನ ಮಾಡುವುದು ಅತ್ಯಗತ್ಯ.
*ಇದು ದೇಹವನ್ನು ಮಾತ್ರ ಸ್ವಚ್ಛ ಮಾಡುವುದು ಮಾತ್ರವಲ್ಲದೆ ದೇಹದ ನೋವು ಹಾಗೂ ಒತ್ತಡವನ್ನು ದೂರ ಮಾಡುತ್ತದೆ. ನಿಯಮಿತವಾಗಿ ಉಗುರುಗಳನ್ನು ಕತ್ತರಿಸುತ್ತಾ ಇರಿ. ಉಗುರುಗಳು ಉದ್ದವಾಗಿದ್ದರೆ ಅದರಲ್ಲಿ ಬ್ಯಾಕ್ಟೀರಿಯಾಗಳು ವಾಸಮಾಡುವುದು. ಶೀನುವಾಗ ಮತ್ತು ಕೆಮ್ಮುವಾಗ ಮುಖ ಮುಚ್ಚಿಕೊಳ್ಳಿ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


