Latest Updates
-
ಅಬ್ಬಬ್ಬಾ ಎಂಥಾ ರುಚಿ ಈ ಈರುಳ್ಳಿ ಮಂಚೂರಿಯನ್: ನೀವೂ ಕೂಡ ಟ್ರೈ ಮಾಡಿ -
ಮಾರ್ಚ್ನಲ್ಲಿ ಕಾಳಸರ್ಪ ಯೋಗ: ಈ ರಾಶಿಯವರಿಗೆ ಯೋಗದಿಂದ ಇದೆ ದೊಡ್ಡ ಲಾಭ! -
ದೇಹದಲ್ಲಿ ರಕ್ತ ಕಡಿಮೆ ಆಗಿದ್ರೆ ಈ ಎಳ್ಳುಂಡೆ ಮಾಡಿ: ತಿಂಗಳ ಕಾಲ ಇಟ್ಟು ಸವಿಯಬಹುದು! -
ಕರ್ನಾಟಕ ಬಜೆಟ್ 2026: ಆರೋಗ್ಯ ವಲಯಕ್ಕೆ ಬಂಪರ್, ಹೊಸ ಯೋಜನೆಗಳೇನು ನೋಡಿ! -
ನಾಳೆ ಸೂರ್ಯ-ಬುಧ ಸಂಯೋಗ: ಬುಧಾದಿತ್ಯ ಯೋಗದಿಂದ ಈ ರಾಶಿಯವರ ಬದುಕಲ್ಲಿ ಬೆಳಕು! -
ತೂಕ ಇಳಿಸಲು ಪೇಪರ್ ಅಷ್ಟು ತೆಳುವಾದ ರಾಗಿ ದೋಸೆ ಮಾಡಿ! -
ಜೀವನದಲ್ಲಿ ಮಹತ್ವದ ಬದಲಾವಣೆ, ವೈವಾಹಿಕ ಯೋಗ! ಕೊಂಚ ಒತ್ತಡ, ತಾಳ್ಮೆ ಇರಲಿ -
March 06 Horoscope: ಸಾಲ ನೀಡುವಾಗ ಹತ್ತು ಬಾರಿ ಆಲೋಚಿಸಿ! -
ಮೈದಾ, ಮೊಟ್ಟೆ ಎರಡೂ ಬೇಡ! ಈ ಹೊಸ ರುಚಿಯ ಕೇಕ್ ಮಾಡಿ ನೋಡಿ.. ಶುಗರ್ ಇರುವವರು ತಿನ್ನಬಹುದು -
ಉದ್ದು ಬೇಡ 1 ಕಪ್ ರವೆ ಇದ್ರೆ ಥಟ್ ಅಂತ ವಡೆ ಮಾಡಿಕೊಳ್ಳಿ: ಬ್ರೇಕ್ಫಾಸ್ಟ್ಗೆ ಇದು ಬೆಸ್ಟ್ ರೆಸಿಪಿ!
ಊಟದ ನಂತರ ಸ್ನಾನ, ತೊಂದರೆಗೆ ಆಹ್ವಾನ!
ಸಾಮಾನ್ಯವಾಗಿ ಕೆಲವೊಂದು ಸಂದರ್ಭಗಳಲ್ಲಿ ಊಟದ ಅಥವಾ ಅಹಾರ ಸೇವಿಸಿದ ನಂತರ ಸ್ನಾನ ಮಾಡಬೇಕಾದ ಪ್ರಸಂಗಗಳು ಎದುರಾಗುತ್ತದೆ. ಇದೊಂದು ಸಾಮಾನ್ಯ ವಿಷಯವಾಗಿದ್ದು, ಇದನ್ನು ಅನುಸರಿಸುವುದರಿಂದ ಯಾವುದೇ ತೊಂದರೆಯಿಲ್ಲ ಎಂದು ಅನೇಕರು ಭಾವಿಸಿದ್ದಾರೆ. ಕೆಲವರು ಇದನ್ನೇ ರೂಢಿಸಿಕೊಂಡಿರುತ್ತಾರೆ. ಇದರ ಪರಿಣಾಮಗಳ ಬಗ್ಗೆ ಹೆಚ್ಚು ಯೋಚಿಸದೆ ತಮಗಿಷ್ಟ ಬಂದಂತಹ ಕ್ರಮಗಳನ್ನು ಅನುಸರಿಸುತ್ತಿರುತ್ತಾರೆ.
ಊಟದ ನಂತರ ಸ್ನಾನ ಮಾಡಬಹುದೇ ಅಥವಾ ಬೇಡವೇ ಎಂಬುದು ಸಾಕಷ್ಟು ಜನರಿಗೆ ಅರಿವಿಲ್ಲ. ಇದರ ಬಗ್ಗೆ ಯಾರೂ ಅಷ್ಟಾಗಿ ಕಾಳಜಿ ವಹಿಸಿಲ್ಲ. ಇದೊಂದು ಸಹಜ ಪ್ರಕ್ರಿಯೆಯೆಂದು ಹೆಚ್ಚಿನವರು ಆಲಕ್ಷಕ್ಕೊಳಗಾಗುತ್ತಾರೆ. ಆದರೆ ಅಚ್ಚರಿಯ ಸಂಗತಿಯೆಂದರೆ, ಆಹಾರ ಸೇವಿಸಿದ ನಂತರ ಸ್ನಾನ ಮಾಡುವುದು ನಿಮ್ಮ ಆರೋಗ್ಯದ ದೃಷ್ಟಿಯಿಂದ ಹೆಚ್ಚು ಅಪಾಯಕಾರಿ.

ಹೌದು, ಇದಕ್ಕೆ ಅನೇಕ ಕಾರಣಗಳಿವೆ. ಕೆಲವರು ಈ ವಿಷಯವನ್ನು ನಂಬದೇ ಇದ್ದರೂ ಇದು ಸತ್ಯವೇ ಸರಿ. ಈ ನಿಟ್ಟಿನಲ್ಲಿ ಇದರ ಕಾರಣಗಳ ಬಗ್ಗೆ ನಿಮಗಾಗಿ ಈ ಲೇಖನದಲ್ಲಿ ವಿವರವಾಗಿ ನೀಡಲಾಗಿದೆ. ಮುಂದೆ ಓದಿ...
ಊಟದ ನಂತರ ಸ್ನಾನ ಮಾಡುವಿಕೆಯಿಂದ ರಕ್ತನಾಳಗಳು ಹಿಗ್ಗಿ, ಚರ್ಮಕ್ಕೆ ರಕ್ತ ಸಂಚಾರ ಹೆಚ್ಚುತ್ತದೆ. ಅರ್ಥಾತ್, ತಂಪಾದ ನೀರಿಗೆ ನಿಮ್ಮ ದೇಹವು ಪ್ರತಿಕ್ರಯಿಸಿ ರಾಸಾಯನಿಕ ಅಂಶವೊಂದು ನಿಮ್ಮ ದೇಹದಲ್ಲಿ ಉತ್ಪತ್ತಿಯಾಗುತ್ತದೆ. ಈ ರಾಸಾಯನಿಕ ಅಂಶವು ರಕ್ತ ನಾಳಗಳನ್ನು ಹಿಗ್ಗಿಸಿ ರಕ್ತವು ನರಗಳಿಗೆ ಮತ್ತು ಸಣ್ಣ ನರಗಳಿಗೆ ರಭಸದಿಂದ ಸಂಚರಿಸುವಂತೆ ಮಾಡುತ್ತದೆ.
ರಕ್ತ ಸಂಚಲನವು ಚರ್ಮದ ಒಳಗೆ ಹೆಚ್ಚುವುದು ಕ್ರಮವಾಗಿದ್ದು, ಅಧಿಕ ರಕ್ತ ಸಂಚಲನ ಉಂಟು ಮಾಡುವುದು ಪ್ರತಿಕ್ರಿಯೆಯಾಗಿದೆ. ಸ್ನಾನದ ಪ್ರಕ್ರಿಯೆಯಿಂದ ನಿಮ್ಮ ಚರ್ಮಕ್ಕೆ ಹೆಚ್ಚು ರಕ್ತವು ಸಂಚಲನಗೊಳ್ಳುತ್ತದೆ. ತಂಪನ್ನು ನಿಯಂತ್ರಿಸಲು ಅಧಿಕ ರಕ್ತವು ಚಲನೆಗೊಂಡು, ನಂತರ ಈ ಅಧಿಕ ರಕ್ತವು ನಿಮ್ಮ ಚರ್ಮದಲ್ಲಿ ಹಾಗೆಯೇ ಉಳಿಯಲು ಕಾರಣವಾಗುತ್ತದೆ. ಇದು ನಿಮಗೆ ಬೆಚ್ಚನೆಯ ಅನುಭವ ನೀಡುತ್ತದೆ.
ಆದರೂ ಸಹ, ಈ ಪ್ರತಿಕ್ರಿಯೆಯಿಂದ ನಿಮಗೆ ಜೀರ್ಣ ಕ್ರಿಯೆಗೆ ಅವಶ್ಯಕವಿರುವ ರಕ್ತವು ಚರ್ಮಕ್ಕೆ ತೆರೆಳುವುದರಿಂದ, ಸೇವಿಸಿದ ಆಹಾರ ಜೀರ್ಣವಾಗದೇ ಹೆಚ್ಚು ಕಾಲ ನಿಮ್ಮ ಹೊಟ್ಟೆಯಲ್ಲಿಯೇ ಅದೇ ಸ್ಥಿತಿಯಲ್ಲಿಯೇ ಇರುವಂತೆ ಮಾಡುತ್ತದೆ. ಇದರಿಂದ ನಿಮಗೆ ಜೀರ್ಣಕ್ರಿಯೆಯು ವಿಳಂಬವಾಗಿ ಅಡ್ಡಪರಿಣಾಮಗಳನ್ನು ಉಂಟುಮಾಡುತ್ತದೆ.
ಇದರ ಹೊರತಾಗಿ, ಜೀರ್ಣಕ್ರಿಯೆಗೆ ಹೆಚ್ಚಿನ ಪ್ರಮಾಣದ ರಕ್ತದ ಅವಶ್ಯಕತೆಯಿದ್ದು, ನೀವು ಬೆಚ್ಚನೆಯ ನೀರನ್ನು ಸ್ನಾನಕ್ಕೆ ಬಳಸಿದರೂ ಸಹ ನಿಮ್ಮ ದೇಹವನ್ನು ತಂಪುಗೊಳಿಸಲು ರಕ್ತದಿಂದ ಶಾಖವನ್ನು ಚರ್ಮಕ್ಕೆ ನೀಡುತ್ತದೆ. ಇದೊಂದು ಸಹಜ ಪ್ರಕ್ರಿಯೆಯಾಗಿದ್ದರೂ ಸಹ ಇದು ನಿಮ್ಮ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಉಂಟುಮಾಡುವುದರಿಂದ ಊಟದ ನಂತರ ಸ್ನಾನ ಮಾಡುವ ಅಭ್ಯಾಸವನ್ನು ಅನುಸರಿಸದಿರಿ. ಇಲ್ಲದಿದ್ದರೆ ಅಪಾಯ ಖಚಿತ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications













