Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ಕೆಮ್ಮು ಶೀತವಿದ್ದಾಗ ಸಿಟ್ರಸ್ ಹಣ್ಣುಗಳ ಸೇವನೆ ಸುರಕ್ಷಿತವೇ?
ಶೀತ ಕೆಮ್ಮು ಹೆಚ್ಚು ಕಡಿಮೆ ಸಾಮಾನ್ಯವಾಗಿ ಜನರನ್ನು ಕಾಡುವ ರೋಗವಾಗಿದೆ. ಶೀತದ ವಸ್ತುಗಳನ್ನು ಈ ಸಮಯದಲ್ಲಿ ಸೇವಿಸುವುದರಿಂದ ಇದು ಅತಿಯಾಗುತ್ತದೆ ಎಂಬ ಭಯವೂ ಇರುವುದರಿಂದ ಜನ ಆದಷ್ಟು ತಂಪಿನ ವಸ್ತುಗಳ ಸೇವನೆ ಮಾಡುವುದಿಲ್ಲ ಅಂತೆಯೇ ಧೂಳು ಮತ್ತು ಪ್ರದೂಷಿತ ವಾತಾವರಣ ಕೂಡ ಶೀತ ಇಲ್ಲವೇ ಕೆಮ್ಮನ್ನು ಅತಿಯಾಗಿಸುತ್ತದೆ. ರಾತ್ರಿಯ ಹೊತ್ತು ಕೆಮ್ಮು ಬರಲು ಕಾರಣಗಳೇನು?
ಆದರೆ ಇದರ ಜೊತೆಗೆ ಥಳುಕು ಹಾಕಿಕೊಂಡಿರುವ ಊಹಪೋಹವೆಂದರೆ ಸಿಟ್ರಸ್ ಹಣ್ಣುಗಳನ್ನು ಸೇವಿಸುವುದರಿಂದ ಕೂಡ ಕೆಮ್ಮು ಶೀತ ತೀವ್ರವಾಗುತ್ತದೆ ಎಂದಾಗಿದೆ. ಇದು ಜನರ ಮೌಢ್ಯವೇ ಅಥವಾ ನಿಜಕ್ಕೂ ಇಂತಹ ಸಂಗತಿ ಒಂದಿದೆಯೇ ಎಂಬುದು ಆ ದೇವರೇ ಬಲ್ಲ. ಅದಾಗ್ಯೂ ಯಾವುದೇ ವೈಜ್ಞಾನಿಕ ಅನ್ವೇಷಣೆಗಳು ಈ ಮಾತನ್ನು ದೃಢೀಕರಿಸಿಲ್ಲ. ತೀವ್ರ ಶೀತ ಕೆಮ್ಮಿರುವಾಗ ಸಿಟ್ರಸ್ ಹಣ್ಣುಗಳನ್ನು ಸೇವಿಸಬಾರದು ಎಂಬುದನ್ನು ಖಾತ್ರಿಪಡಿಸಲು ಯಾವುದೇ ಮಾಹಿತಿಗಳಿಲ್ಲ. ಶೀತ, ಕೆಮ್ಮು, ಜ್ವರಕ್ಕೆಲ್ಲಾ ರಾಮಬಾಣ- ಬಿಸಿ ಬಿಸಿಯಾದ ಸೂಪ್!
ಆದರೂ ಜನರು ಇದನ್ನು ಪಾಲಿಸಿಕೊಂಡು ಬರುತ್ತಾರೆ. ಸಿಟ್ರಸ್ ಹಣ್ಣುಗಳನ್ನು ಪಟ್ಟಿ ಮಾಡುತ್ತಾ ಹೋದರೆ ಲಿಂಬೆ, ಕಿತ್ತಳೆ, ದ್ರಾಕ್ಷಿ ಇದರಲ್ಲಿ ಪ್ರಮುಖವಾಗಿರುವಂತಹದ್ದು. ಅಂತೆಯೇ ವಿಟಮಿನ್ ಸಿ ಅಂಶಗಳನ್ನೊಳಗೊಂಡಿರುವ ಸೇಬು, ಸ್ಟ್ರಾಬೆರ್ರಿ, ಬ್ಲ್ಯೂಬೆರ್ರಿ ಮುಂತಾದವುಗಳೂ ಇವೆ. ದಿನಕ್ಕೊಂದು ಸೇಬು ತಿನ್ನಿ ವೈದ್ಯರನ್ನು ದೂರವಿಡಿ ಎಂಬ ಮಾತೇ ಇದ್ದು ಈ ಹಣ್ಣುಗಳು ಹೇಗೆ ಕೆಮ್ಮನ್ನು ತೀವ್ರವಾಗಿಸುತ್ತದೆ ಅಲ್ಲವೇ? ಹಾಗಿದ್ದರೆ ಇಂದಿನ ಲೇಖನದಲ್ಲಿ ಈ ಹಣ್ಣುಗಳ ಸೇವನೆಯನ್ನು ಮಾಡಬೇಕೇ ಬೇಡವೇ ಎಂಬುದನ್ನು ನಾವು ಕೆಲವೊಂದು ಮಾಹಿತಿಗಳ ಮೂಲಕ ತಿಳಿದುಕೊಳ್ಳೋಣ...

ದ್ರವದ ಮೂಲ
ಕೆಮ್ಮು ಮತ್ತು ಶೀತದ ಸಂದರ್ಭದಲ್ಲಿ, ನಿಮ್ಮ ದೇಹಕ್ಕೆ ಸಾಕಷ್ಟು ನೀರು ಬೇಕು. ನೀವು ಯಾವಾಗಲೂ ನೀರು ಕುಡಿಯುತ್ತಲೇ ಇರಲು ಸಾಧ್ಯವಿಲ್ಲ ಅಲ್ಲವೇ? ಈ ಹಣ್ಣುಗಳಲ್ಲಿ ಹೇರಳವಾಗಿ ನೀರಿನ ಅಂಶವಿದ್ದು ಇದು ಕೆಮ್ಮು ಮತ್ತು ಶೀತದ ಸಂದರ್ಭದಲ್ಲಿ ದೇಹಕ್ಕೆ ಸಾಕಷ್ಟು ನೀರಿನ ಪೂರೈಕೆಯನ್ನು ಮಾಡುತ್ತದೆ.ಅಂತೆಯೇ ನಾಲಗೆಗೆ ರುಚಿಯನ್ನೂ ನೀಡುತ್ತವೆ.

ನ್ಯೂಟ್ರೀನ್ಗಳ ಮೂಲ
ಲಿಂಬೆ, ಕಿತ್ತಳೆ, ದ್ರಾಕ್ಷಿ ಇತರೆ ಹಣ್ಣುಗಳು ವಿಟಮಿನ್ ಬಿ, ಸಿ ಮತ್ತು ಇತರೆ ಮಿನರಲ್ಗಳಾದ ಪೊಟ್ಯಾಶಿಯಮ್, ಫೈಬರ್, ಕಾರ್ಬೋಹೈಡ್ರೇಟ್ಸ್ ಮುಂತಾದವುಗಳನ್ನು ಒಳಗೊಂಡಿರುತ್ತವೆ. ವೈರಲ್ ದಾಳಿಯ ವಿರುದ್ಧ ನಿಮ್ಮ ದೇಹ ಹೋರಾಡುತ್ತಿರುವಾಗ ಇವುಗಳು ನಿಮಗೆ ಅತ್ಯವಶ್ಯಕವಾಗಿರುತ್ತವೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಕೆಮ್ಮು ಇರುವಾಗ ಸಿಟ್ರಸ್ ಹಣ್ಣುಗಳನ್ನು ಸೇವಿಸಿದಾಗ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ವಿಟಮಿನ್ ಅಂಶಗಳು ಇದರಲ್ಲಿ ಹೇರಳವಾಗಿದ್ದು ಇದರಲ್ಲಿರುವ ಮಿನರಲ್ಗಳು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಬ್ಯಾಕ್ಟೀರಿಯಾ ಮತ್ತು ವೈರಲ್ ದಾಳಿಯ ವಿರುದ್ಧ ಹೋರಾಡಲು ಉತ್ತೇಜನವನ್ನು ನೀಡುತ್ತದೆ. ಈ ಹಣ್ಣುಗಳಲ್ಲಿರುವ ನಾರಿನಂಶ ಯಾವುದೇ ರೋಗದ ವಿರುದ್ಧ ಹೋರಾಡುವ ಶಕ್ತಿಯನ್ನು ನಿಮಗೆ ಒದಗಿಸುತ್ತದೆ.

ಶ್ವಾಸಕೋಶವನ್ನು ನಿರಾಳಗೊಳಿಸುತ್ತದೆ
ನಿಮ್ಮ ಕೆಮ್ಮಿನ ಹಿಂದೆ ಶ್ವಾಸಕೋಶದ ಸಮಸ್ಯೆ ಇದ್ದಲ್ಲಿ, ಒಂದು ಸಿಟ್ರಸ್ ಹಣ್ಣು ನಿಮಗೆ ಸಹಕಾರಿಯಾಗಿದೆ. ಅದುವೇ ದ್ರಾಕ್ಷಿ. ದ್ರಾಕ್ಷಿಯನ್ನು ಕೆಮ್ಮಿರುವಾಗ ಸೇವಿಸಬಾರದು ಎನ್ನುವುದು ಸುಳ್ಳಾಗಿದೆ. ನೀವು ದ್ರಾಕ್ಷಿ ಅಥವಾ ಅದರ ರಸವನ್ನು ಸೇವಿಸಿದಾಗ ಶ್ವಾಸಕೋಶದಲ್ಲಿ ಕಟ್ಟುವಿಕೆ ನಿರಾಳವಾಗಿ ಕೆಮ್ಮು ಉಂಟಾಗುವುದಿಲ್ಲ.

ನೋಯುತ್ತಿರುವ ಗಂಟಲು
ಕೆಮ್ಮಿನ ತೀವ್ರ ಲಕ್ಷಣ ಎಂದೆನಿಸಿರುವ ನೋಯುತ್ತಿರುವ ಗಂಟಲನ್ನು ಗುಣಪಡಿಸಲು ಈ ಹಣ್ಣುಗಳು ಸಮರ್ಥವಾಗಿವೆ. ಲಿಂಬೆ ಜ್ಯೂಸ್ ಅನ್ನು ಜೇನಿನೊಂದಿಗೆ ಅಥವಾ ಸ್ವಲ್ಪ ಕಿತ್ತಳೆ ರಸವನ್ನು ಸೇವಿಸಿದಾಗ ನಿಮಗೆ ಕೊಂಚ ಆರಾಮ ಎಂದೆನಿಸುತ್ತದೆ.

ಫ್ರುಟ್ ಸಲಾಡ್ ಬೌಲ್
ನಿಮ್ಮ ಕುಟುಂಬದಲ್ಲಿ ನೀವು ಅಥವಾ ನಿಮ್ಮಲ್ಲಿ ಯಾರಾದರೂ ಕೆಮ್ಮಿನಿಂದ ಬಳಲುತ್ತಿದ್ದೀರಿ ಎಂದಾದಲ್ಲಿ ಲಿಂಬೆ, ಕಿತ್ತಳೆ, ಪೈನಾಪಲ್ ಮತ್ತು ದ್ರಾಕ್ಷಿ ಇರುವ ರುಚಿಕರವಾದ ಫ್ರುಟ್ ಸಲಾಡ್ ತಯಾರಿಸಿಕೊಳ್ಳಿ. ಇದಕ್ಕೆ ಸ್ವಲ್ಪ ಉಪ್ಪು ಹಾಕಿ ಸ್ವಲ್ಪ ಲಿಂಬೆ ರಸವನ್ನು ಹಿಂಡಿಕೊಳ್ಳಿ ಮತ್ತು ನಿಮ್ಮ ಕೆಮ್ಮಿಗೆ ಇದು ಹೇಗೆ ಸಹಕಾರಿಯಾಗಿದೆ ಎಂಬುದನ್ನು ನಿಮಗೇ ಕಂಡುಕೊಳ್ಳಬಹುದಾಗಿದೆ.



Click it and Unblock the Notifications