Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಇನ್ನು ಸಣ್ಣ-ಪುಟ್ಟ ಕಾಯಿಲೆಗಳಿಗೆ ವೈದ್ಯರ ಬಳಿ ಹೋಗಬೇಡಿ!
ಮನೆಮದ್ದುಗಳು ಹಿಂದಿನಿಂದಲೂ ಹಲವಾರು ರೀತಿಯ ಕಾಯಿಲೆಗಳನ್ನು ನಿವಾರಣೆ ಮಾಡಲು ಬಳಸಿಕೊಂಡು ಬರಲಾಗುತ್ತಿದೆ. ಆದರೆ ಇಂದಿನ ದಿನಗಳಲ್ಲಿ ಮನೆಮದ್ದು ಎಂದರೆ ಕೆಲವರಿಗೆ ನಿರ್ಲಕ್ಷ್ಯ ಧೋರಣೆ. ಮನೆಮದ್ದು ಬಳಸಿಕೊಂಡು ನಮ್ಮ ಹಿರಿಯರು ತುಂಬಾ ಆರೋಗ್ಯವಾಗಿದ್ದರು ಮತ್ತು ಇಂದಿಗೂ ಅವರು ನಮಗಿಂತ ತುಂಬಾ ಆರೋಗ್ಯವಾಗಿದ್ದಾರೆ.
ಹಿಂದಿನವರು ಆಸ್ಪತ್ರೆಗಳಿಗೆ ಹೋಗಿರುವುದೇ ಕಡಿಮೆ. ಯಾಕೆಂದರೆ ಮನೆಯಲ್ಲಿಯೇ ಸಿಗುವಂತಹ ಮನೆಮದ್ದನ್ನುಬಳಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳುತ್ತಾ ಇದ್ದರು. ಎದೆಯುರಿ, ಕೆಮ್ಮು, ಜ್ವರ ಮತ್ತು ಕಫದಂತಹ ಸಮಸ್ಯೆಗಳಿಗೆ ಮನೆಮದ್ದು ತುಂಬಾ ಪರಿಣಾಮಕಾರಿ..... ಮುಂದೆ ಓದಿ....

ಬಿಕ್ಕಳಿಗೆ ಬರುತ್ತಾ ಇದ್ದರೆ
ನಿಮಗೆ ಬಿಕ್ಕಳಿಗೆ ಬರುತ್ತಾ ಇದ್ದರೆ ಎರಡು ಚಮಚ ಸಕ್ಕರೆ ಬಾಯಿಗೆ ಹಾಕಿ ಅದನ್ನು ಗಬಗಬನೆ ನುಂಗಬೇಕು. ಒಣ ಸಕ್ಕರೆಯ ಹರಳುಗಳು ಧ್ವನಿಫಲಕದ ನರಗಳಲ್ಲಿ ಉಂಟಾಗುವ ಕಿರಿಕಿರಿಯನ್ನು ಕಡಿಮೆ ಮಾಡುವುದು. ಬಿಕ್ಕಳಿಕೆಯನ್ನು ತಕ್ಷಣ ನಿಲ್ಲಿಸಲು ಟಿಪ್ಸ್

ಗಂಟಲು ಕರೆತ
ಗಂಟಲು ಕರೆತವಿದ್ದರೆ ನಿಮಗೆ ಬೆಳ್ಳುಳ್ಳಿಯು ತುಂಬಾ ನೆರವಿಗೆ ಬರಲಿದೆ. ಬೆಳ್ಳುಳ್ಳಿಯಲ್ಲಿ ಉರಿಯೂತ ಶಮನಕಾರಿ ಗುಣಗಳು ಇವೆ. ಇದು ಗಂಟಲಿನಲ್ಲಿ ನೋವು ಹಾಗೂ ಕಿರಕಿರಿ ಉಂಟು ಮಾಡುವ ಬ್ಯಾಕ್ಟೀರಿಯಾವನ್ನು ನಿವಾರಣೆ ಮಾಡುವುದು. ಆರರಿಂದ ಏಳು ಬೆಳ್ಳುಳ್ಳಿಯ ಎಸಲುಗಳನ್ನು ಜಜ್ಜಿಕೊಂಡು ಸ್ವಲ್ಪ ಬಿಸಿ ನೀರಿಗೆ ಹಾಕಿ ಅದರಿಂದ ದಿನದಲ್ಲಿ ಎರಡು ಸಲ ಬಾಯಿ ಮುಕ್ಕಳಿಸಿಕೊಳ್ಳಿ.ಇನ್ನು ಶೀತ, ಗಂಟಲು ಕೆರೆತಕ್ಕೆ ಗುಡ್ ಬೈ ಹೇಳಿ!

ಎದೆಯುರಿ
ಎದೆಯುರಿಗೆ ನಾಲ್ಕೈದು ತುಳಸಿ ಎಲೆಗಳನ್ನು ಬಾಯಿಗೆ ಹಾಕಿಕೊಂಡು ಜಗಿಯಿರಿ. ಎರಡೇ ನಿಮಿಷದಲ್ಲಿ ನಿಮಗೆ ಪರಿಹಾರ ಸಿಗುವುದು. ಭಾರತದಲ್ಲಿ ತುಂಬಾ ಪವಿತ್ರವೆಂದು ನಂಬಲಾಗಿರುವ ತುಳಸಿಯು ಪವಾಡವನ್ನೇ ಮಾಡಲಿದೆ. ಇದು ಜೀರ್ಣಕ್ರಿಯೆಯ ಸಮಸ್ಯೆನ್ನು ಬೇಗನೆ ನಿವಾರಿಸಲಿದೆ.

ತುಟಿಗಳು ಒಡೆಯುವ ಸಮಸ್ಯೆ
ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ತುಟಿಗಳು ಒಡೆಯುವ ಸಮಸ್ಯೆಯನ್ನು ನಿವಾರಣೆ ಮಾಡಬೇಕಾದರೆ ನೀವು ಈಗಾಗಲೇ ಹಲವಾರು ಮಲಾಮ್ಗಳನ್ನು ಬಳಸಿರಬಹುದು. ಇದರಿಂದ ಯಾವುದೇ ಪ್ರಯೋಜವಾಗಿರಲಿಕ್ಕಿಲ್ಲ.

ತುಟಿಗಳು ಒಡೆಯುವ ಸಮಸ್ಯೆ
ಆದರೆ ಆಲಿವ್ ಎಣ್ಣೆಯನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ. ಇದು ಒಡೆದ ತುಟಿಗಳಿಗೆ ತುಂಬಾ ಒಳ್ಳೆಯದು. ಬೆಣ್ಣೆ ಹಚ್ಚಿಕೊಂಡರೂ ಒಡೆದ ತುಟಿಗಳಿಗೆ ಪರಿಹಾರ ಸಿಗುವುದು. ತುಟಿಗಳು ಒಡೆಯದಂತೆ ಸಣ್ಣ ಮಕ್ಕಳ ತುಟಿಗಳಿಗೆ ಇಂದಿಗೂ ಬೆಣ್ಣೆ ಹಚ್ಚುತ್ತಾರೆ.



Click it and Unblock the Notifications
