Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಮಲೇರಿಯಾ ರೋಗ ಗುಣಪಡಿಸುವ ಪವರ್ಫುಲ್ ಮನೆಮದ್ದು
ತಪ್ಪು ಮಾಡಿದವರನ್ನು ಕೊಪ್ಪಕ್ಕೆ ಹಾಕು ಎಂಬ ಮಾತಿಗೆ ನೂರು ವರ್ಷದ ಇತಿಹಾಸವಿದ್ದರೂ ಇದಕ್ಕೆ ಮುಖ್ಯ ಕಾರಣ ಅಂದು ಕೊಪ್ಪದಲ್ಲಿ ಬಾಧಿಸುತ್ತಿದ್ದ ಮಲೇರಿಯಾ ರೋಗವೇ ಕಾರಣ. ಇಂದು ಈ ರೋಗ ಎಲ್ಲೆಡೆ ಸಾಮಾನ್ಯವಾಗಿದ್ದು ಅನಾಫಿಲಿಸ್ ಸೊಳ್ಳೆಯ ಕಡಿತವೇ ಇದಕ್ಕೆ ಕಾರಣ ಎಂದು ಗೊತ್ತಾಗಿದೆ.
ಈ ಜ್ವರ ಬಂದ ಕೂಡಲೇ ಗುರುತಿಸಲ್ಪಟ್ಟರೆ ತಕ್ಷಣವೇ ಚಿಕಿತ್ಸೆ ಪ್ರಾರಂಭಿಸುವ ಮೂಲಕ ಉಲ್ಬಣಗೊಳ್ಳದಂತೆ ತಡೆದು ಶೀಘ್ರವೇ ಗುಣಮುಖರಾಗಬಹುದು. ವೈದ್ಯರು ನೀಡುವ ಚಿಕಿತ್ಸೆಯೊಂದಿಗೇ ಕೆಲವು ನೈಸರ್ಗಿಕ ಆಹಾರಗಳನ್ನೂ ವೈದ್ಯರ ಅನುಮತಿಯ ಮೇರೆಗೆ ಸೇವಿಸುವ ಮೂಲಕ ಗುಣಮುಖರಾಗುವ ಗತಿಯನ್ನು ಇನ್ನಷ್ಟು ತೀವ್ರವಾಗಿಸಬಹುದು.
ಸೊಳ್ಳೆಯ ಕಡಿತದಿಂದ ನಮ್ಮ ರಕ್ತಕ್ಕೆ ಆಗಮಿಸುವ ಪ್ಲಾಸ್ಮೋಡಿಯಂ ಎಂಬ ಅತಿಸೂಕ್ಷ್ಮ ವೈರಾಣುಗಳು ರಕ್ತದ ಕೆಂಪುಕಣಗಳು ಗುಂಪುಗೂಡುವಂತೆ ಮಾಡುತ್ತವೆ. ಪ್ರಥಮವಾಗಿ ಇದು ನಮ್ಮ ಯಕೃತ್ತನ್ನು ಬಾಧಿಸುತ್ತದೆ. ಕ್ರಮೇಣ ದೇಹದ ಇತರ ಭಾಗಗಳನ್ನೂ ಬಾಧಿಸುತ್ತಾ ಹೋಗುತ್ತದೆ. ಈ ವೈರಾಣುಗಳನ್ನು ನಿಗ್ರಹಿಸಲು ದೇಹ ತಾಪಮಾನವನ್ನು ವಿಪರೀತವಾಗಿ ಏರಿಸುತ್ತದೆ. ಈ ಹಂತಕ್ಕೇರುವ ಮುನ್ನ ಸೂಕ್ತ ವಿಧಾನಗಳನ್ನು ಅಳವಡಿಸಿಕೊಂಡರೆ ವೈರಾಣುಗಳ ವಿರುದ್ಧ ಹೋರಾಡಲು ಸಾಧ್ಯವಾಗುತ್ತದೆ. ಅತ್ಯಂತ ಅಪಾಯಕರ ಮಳೆಗಾಲದ 10 ಕಾಯಿಲೆಗಳು ಮಲೇರಿಯಾ ಜ್ವರದ ಲಕ್ಷಣಗಳು ಕಂಡು ಬಂದ ತಕ್ಷಣ ತುಳಸಿ ಎಲೆಗಳ ಮೊರೆ ಹೋಗುವ ಮೂಲಕ ನಿಸರ್ಗವೇ ಈ ವೈರಾಣುವಿನ ವಿರುದ್ಧ ಹೋರಾಡಲು ಶಕ್ತಿ ನೀಡುತ್ತದೆ. ಇದಕ್ಕಾಗಿ ಕೊಂಚ ತುಳಸಿ ಎಲೆಗಳನ್ನು ಕೊಂಚ ಕಾಳುಮೆಣಸಿನೊಂದಿಗೆ ಅರೆದು ಈ ಲೇಪನವನ್ನು ಹಾಗೇ ನುಂಗಿಬಿಡಬೇಕು. ಮುಂದಿನ ಸ್ಲೈಡ್ ಕ್ಲಿಕ್ ಮಾಡಿ ಇದರಿಂದ ದೇಹ ಬಿಸಿಯೇರುವುದರಿಂದ ತಪ್ಪುತ್ತದೆ ಹಾಗೂ ಮಲೇರಿಯಾ ವೈರಾಣುಗಳ ವಿರುದ್ದ ದೇಹ ಹೋರಾಡಲು ಹೆಚ್ಚಿನ ಶಕ್ತಿ ಲಭಿಸುತ್ತದೆ. ಅತಿ ಹೆಚ್ಚು ಜ್ವರ ಮಲೇರಿಯಾದ ಲಕ್ಷಣ. ಜ್ವರ ಸತತವಾಗಿ ಏರುತ್ತಾ ಹೋಗುತ್ತಿದ್ದರೆ ತಕ್ಷಣ ಕೊಂಚ ಉಗುರುಬೆಚ್ಚನೆಯ ನೀರಿಗೆ ಒಂದು ತಾಜಾ ಲಿಂಬೆಹಣ್ಣನ್ನು ಹಿಂಡಿ ರಸ ಬೆರೆಸಿ ರೋಗಿಗೆ ಕುಡಿಸಬೇಕು. ಮುಂದಿನ ಸ್ಲೈಡ್ ಕ್ಲಿಕ್ ಮಾಡಿ ಒಮ್ಮೆಲೇ ಸಾಧ್ಯವಾಗದಿದ್ದರೆ ಕೊಂಚ ಕೊಂಚವಾಗಿ ಕುಡಿಸುತ್ತಲೇ ಇದ್ದರೆ ಜ್ವರ ಶೀಘ್ರವಾಗಿ ಇಳಿಯುತ್ತದೆ. ಮಲೇರಿಯಾ ನಿಗ್ರಹಕ್ಕೆ ಇನ್ನೊಂದು ನೈಸರ್ಗಿಕ ಆಹಾರವೆಂದರೆ ಮೆಂತೆ. ಒಂದು ವೇಳೆ ಮಲೇರಿಯಾ ರೋಗ ಉಲ್ಬಣಗೊಂಡಿದ್ದು ರೋಗಿ ಸುಸ್ತಾಗಿದ್ದರೆ ಮೆಂತೆ ಕಾಳುಗಳು ಅತ್ಯುತ್ತಮವಾಗಿವೆ. ಮುಂದಿನ ಸ್ಲೈಡ್ ಕ್ಲಿಕ್ ಮಾಡಿ ಕೊಂಚ ಮೆಂತೆ ಕಾಳುಗಳನ್ನು ನೆನೆಸಿ ಹಾಗೇ ಅಥವಾ ಅರೆದು ಲೇಪನದ ರೂಪದಲ್ಲಿ ತಿನ್ನಿಸುವ ಮೂಲಕ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಹಾಗೂ ವೈರಾಣುಗಳ ವಿರುದ್ಧ ಹೋರಾಡಲು ಮತ್ತು ನಿಗ್ರಹಿಸಲು ಸಾಧ್ಯವಾಗುತ್ತದೆ. ಮಲೇರಿಯಾ ಉಲ್ಬಣಗೊಂಡು ವಾಕರಿಕೆ, ಸ್ನಾಯು ಸೆಳೆತ, ಅಜೀರ್ಣ, ಹಸಿವಿಲ್ಲದಿರುವುದು, ಸೆಡೆತ ಮೊದಲಾದ ತೊಂದರೆಗಳು ಎದುರಾದರೆ ತಕ್ಷಣ ದಾಲ್ಚಿನ್ನಿ ಅಥವಾ ಚೆಕ್ಕೆಯ ಪುಡಿಯನ್ನು ಬೆರೆಸಿದ ಹಾಲಿಲ್ಲದ ಟೀ ಸತತವಾಗಿ ರೋಗಿಗೆ ಕುಡಿಸುತ್ತಾ ಹೋಗಬೇಕು. ಇದರ ಉರಿಯೂತ ನಿವಾರಕ ಮತ್ತು ಸೆಳೆತ ನಿವಾರಕ ಗುಣ ಮಲೇರಿಯಾವನ್ನು ಶೀಘ್ರವೇ ಗುಣಪಡಿಸಲು ನೆರವಾಗುತ್ತವೆ.

ತುಳಸಿ ಎಲೆಗಳು

ತುಳಸಿ ಎಲೆಗಳು

ಲಿಂಬೆ ಬೆರೆಸಿದ ನೀರು

ಲಿಂಬೆ ಬೆರೆಸಿದ ನೀರು

ಮೆಂತೆ ಕಾಳುಗಳು

ಮೆಂತೆ ಕಾಳುಗಳು

ಚೆಕ್ಕೆ (ದಾಲ್ಚಿನ್ನಿ)

ಚೆಕ್ಕೆ (ದಾಲ್ಚಿನ್ನಿ)



Click it and Unblock the Notifications