Latest Updates
-
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ
ಬಿಸಿಬಿಸಿ ಅರಿಶಿನ ಹಾಲು-ಗಂಟಲು ಕೆರೆತ ಮಂಗಮಾಯ!
ಬಿಟ್ಟುಬಿಟ್ಟು ಬರುವ ಮಳೆ, ಆಗಾಗ ಬದಲಾಗುತ್ತಿರುವ ಹವಾಮಾನದಿಂದ ಹಲವಾರು ರೀತಿಯ ಅನಾರೋಗ್ಯಗಳು ನಮ್ಮನ್ನು ಕಾಡಲು ಆರಂಭಿಸುತ್ತದೆ. ಅದರಲ್ಲೂ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿದ್ದರೆ ಆಗ ಜ್ವರ, ಶೀತ, ನೆಗಡಿ, ಕೆಮ್ಮು ಬೇಗನೆ ಬಂದು ವಕ್ಕರಿಸಿಕೊಳ್ಳುತ್ತದೆ. ಜ್ವರ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದುಕೊಳ್ಳುವುದು ಸೂಕ್ತ.
ಆದರೆ ಗಂಟಲು ಕೆರೆತ ಸಮಸ್ಯೆ ಕಾಣಿಸಿಕೊಂಡರೆ ಆಗ ಮನೆ ಹಾಗೂ ಕಚೇರಿಯಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಗಂಟಲು ಕೆರೆತ ಕಾಣಿಸಿಕೊಂಡಾಗ ಮನೆಮದ್ದನ್ನು ಬಳಸಿದರೆ ಅದರಿಂದ ಮುಕ್ತಿ ಪಡೆಯಬಹುದು. ಅರಿಶಿನ ಹಾಕಿದ ಹಾಲನ್ನು ದಿನದಲ್ಲಿ 2-3 ಸಲ ಕುಡಿಯುವುದರಿಂದ ಗಂಟಲು ಕೆರೆತ ನಿವಾರಿಸಬಹುದು.

ಅರಿಶಿನದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಹಾಗೂ ಉರಿಯೂತ ಶಮನಕಾರಿ ಗುಣಗಳಿವೆ. ಇದು ಬ್ಯಾಕ್ಟೀರಿಯಾ ಬೆಳೆಯುವುದನ್ನು ತಡೆದು ಉರಿಯೂತವನ್ನು ಶಮನಗೊಳಿಸುತ್ತದೆ. ಇದರಿಂದ ಗಂಟಲಿನಲ್ಲಿನ ಕೆರೆತ ಕಡಿಮೆಯಾಗುತ್ತದೆ. ನುಂಗುವಾಗ ಉಂಟಾಗುವ ಬಿಸಿಯಾಗುವ ಅನುಭವ, ನೋವು, ಊತವನ್ನು ನಿಯಂತ್ರಿಸುತ್ತದೆ. ಶೀತ, ಗಂಟಲು ಕೆರೆತ ಸಮಸ್ಯೆಗೆ, ಜೀರಿಗೆ ಕಷಾಯ ಸಾಕು
ಗಂಟಲಿನಲ್ಲಿ ಅಂಟಿರುವಂತಹ ಲೋಳೆಯನ್ನು ಕಡಿಮೆ ಮಾಡಲು ನೀವು ಬಿಸಿಯಾಗಿರುವ ಅರಿಶಿನ ಹಾಲನ್ನು ಕುಡಿದರೆ ತುಂಬಾ ಒಳ್ಳೆಯದು. ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲದೆ ಅರಿಶಿನ ಹಾಕಿದ ಹಾಲು ದೇಹದ ಪ್ರತಿರೋಧಕ ವ್ಯವಸ್ಥೆಯನ್ನು ಸುಧಾರಿಸುವ ಕಾರಣದಿಂದ ಬೇಗನೆ ಚೇತರಿಸಿಕೊಳ್ಳಲು ನೆರವಾಗುತ್ತದೆ. ಗಂಟಲು ನೋವಿನ ಕಿರಿಕಿರಿಯೇ? ಹಾಗಾದರೆ ಇನ್ನು ಚಿಂತೆ ಬಿಡಿ!
ತಯಾರಿಸುವುದು ಹೇಗೆ?
*ಒಂದು ಕುಟ್ಟಾಣಿಯನ್ನು ತೆಗೆದುಕೊಂಡು ಅದಕ್ಕೆ ಸುಮಾರು 6-7 ಕರಿಮೆಣಸನ್ನು ಹಾಕಿ ಹುಡಿ ಮಾಡಿಕೊಳ್ಳಿ. ಈಗ ಒಂದು ಲೋಟ ಹಾಲನ್ನು ತೆಗೆದುಕೊಂಡು 5-10 ನಿಮಿಷ ಕುದಿಸಿ.
*ಹಾಲು ಕುದಿಯುತ್ತಿರುವಂತೆ ಅರ್ಧ ಚಮಚ ಅರಿಶಿನ ಮತ್ತು ಸ್ವಲ್ಪ ಹುಡಿ ಮಾಡಿದ ಕರಿಮೆಣಸಿನ ಹುಡಿಯನ್ನು ಹಾಕಿ.
*ಹಾಲಿಗೆ ಒಂದು ಚಮಚ ಸಕ್ಕರೆ ಹಾಕಿ ಸರಿಯಾಗಿ ಮಿಶ್ರಣ ಮಾಡಿ. ಬಳಿಕ ಗ್ಯಾಸ್ ಒಲೆ ಆಫ್ ಮಾಡಿ
*ಬಿಸಿಯಾಗಿರುವಾಗಲೇ ಈ ಮಿಶ್ರಣವನ್ನು ಕುಡಿಯಿರಿ.
*ಬೆಳಿಗ್ಗೆ ಉಪಹಾರ ಸೇವಿಸಿದ ಬಳಿಕ ಮತ್ತು ರಾತ್ರಿ ನಿದ್ರಿಸುವ ಮೊದಲು ಇದನ್ನು ಸೇವಿಸಿ. ಇದು ಗಂಟಲು ಕೆರೆತವನ್ನು ನಿವಾರಿಸುತ್ತದೆ. ಈ ಮನೆಮದ್ದನ್ನು ಪ್ರಯತ್ನಿಸಿ ಫಲಿತಾಂಶ ಸಿಕ್ಕಿದೆಯಾ ಎಂದು ನಮಗೆ ಹೇಳಿ. ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


