Latest Updates
-
ಮಳೆಗಾಲದ ಜಾರುವ ರಸ್ತೆಗಳಲ್ಲಿ ನಡೆಯುವಾಗ ಎಚ್ಚರ: ಸುರಕ್ಷಿತವಾಗಿರಲು 8 ನಿಮಿಷಗಳ ಈ ವ್ಯಾಯಾಮ ಮಾಡಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು 45 ನಿಮಿಷದಲ್ಲಿ ಟ್ಯಾಕ್ಸ್ ಫೈಲ್ ಮಾಡುವುದು ಹೇಗೆ? -
ಪ್ರವಾಹದ ನೀರು ಮನೆಯೊಳಗೆ ನುಗ್ಗಿದೆಯೇ? ಆಸ್ತಿ ಮತ್ತು ಆರೋಗ್ಯ ರಕ್ಷಣೆಗೆ ತಕ್ಷಣ ಮಾಡಬೇಕಾದ ಕೆಲಸಗಳಿವು -
ಬೆಂಗಳೂರಿನಲ್ಲಿ ಮೊಟ್ಟೆ ಬೆಲೆ ಏರಿಕೆ: ಬಜೆಟ್ ಉಳಿಸಲು ಇಲ್ಲಿದೆ ಬೆಸ್ಟ್ ಪ್ರೋಟೀನ್ ಆಯ್ಕೆಗಳು! -
ಇನ್ಸ್ಟಾಗ್ರಾಮ್ ಡೌನ್: ಆತಂಕ ಬೇಡ, ನಿಮ್ಮ ಅಕೌಂಟ್ ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ಮಳೆ ರಜೆ ದಿನ ಮನೆಯಲ್ಲೇ ಫಿಟ್ ಆಗಿರಲು 12 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ವಿಶ್ವ ಐವಿಎಫ್ ದಿನ: ಪೋಷಕರಾಗುವ ಕನಸಿಗೆ ದಂಪತಿಗಳು ಮಾಡಬೇಕಾದ ಸಿದ್ಧತೆಗಳೇನು? -
ಮುಂಬೈ-ಥಾಣೆ ಮಳೆ ಅಲರ್ಟ್: ನಿಮ್ಮ ಮನೆಗೆ ನೀರು ನುಗ್ಗದಂತೆ ತಡೆಯಲು ಈ 20 ನಿಮಿಷದ ಟಿಪ್ಸ್ ಫಾಲೋ ಮಾಡಿ -
ಮಕ್ಕಳ ಟಿಫಿನ್ ಬಾಕ್ಸ್ನಲ್ಲಿ ಅಡಗಿದೆ ಅಪಾಯ? ಪೋಷಕರು ಮರೆಯದೆ ಪಾಲಿಸಬೇಕಾದ ಸುರಕ್ಷತಾ ಸೂತ್ರಗಳು -
ರಾಮಾಯಣದಲ್ಲಿ ರಾವಣನಾಗಿ ಯಶ್: ಸ್ಯಾನ್ ಡಿಯಾಗೋ ಕಾಮಿಕ್-ಕಾನ್ನಲ್ಲಿ ಅಬ್ಬರಿಸಲು ಸಜ್ಜಾದ ರಾಕಿಂಗ್ ಸ್ಟಾರ್!
ಬಿಸಿಬಿಸಿ ಅರಿಶಿನ ಹಾಲು-ಗಂಟಲು ಕೆರೆತ ಮಂಗಮಾಯ!
ಬಿಟ್ಟುಬಿಟ್ಟು ಬರುವ ಮಳೆ, ಆಗಾಗ ಬದಲಾಗುತ್ತಿರುವ ಹವಾಮಾನದಿಂದ ಹಲವಾರು ರೀತಿಯ ಅನಾರೋಗ್ಯಗಳು ನಮ್ಮನ್ನು ಕಾಡಲು ಆರಂಭಿಸುತ್ತದೆ. ಅದರಲ್ಲೂ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿದ್ದರೆ ಆಗ ಜ್ವರ, ಶೀತ, ನೆಗಡಿ, ಕೆಮ್ಮು ಬೇಗನೆ ಬಂದು ವಕ್ಕರಿಸಿಕೊಳ್ಳುತ್ತದೆ. ಜ್ವರ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದುಕೊಳ್ಳುವುದು ಸೂಕ್ತ.
ಆದರೆ ಗಂಟಲು ಕೆರೆತ ಸಮಸ್ಯೆ ಕಾಣಿಸಿಕೊಂಡರೆ ಆಗ ಮನೆ ಹಾಗೂ ಕಚೇರಿಯಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಗಂಟಲು ಕೆರೆತ ಕಾಣಿಸಿಕೊಂಡಾಗ ಮನೆಮದ್ದನ್ನು ಬಳಸಿದರೆ ಅದರಿಂದ ಮುಕ್ತಿ ಪಡೆಯಬಹುದು. ಅರಿಶಿನ ಹಾಕಿದ ಹಾಲನ್ನು ದಿನದಲ್ಲಿ 2-3 ಸಲ ಕುಡಿಯುವುದರಿಂದ ಗಂಟಲು ಕೆರೆತ ನಿವಾರಿಸಬಹುದು.

ಅರಿಶಿನದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಹಾಗೂ ಉರಿಯೂತ ಶಮನಕಾರಿ ಗುಣಗಳಿವೆ. ಇದು ಬ್ಯಾಕ್ಟೀರಿಯಾ ಬೆಳೆಯುವುದನ್ನು ತಡೆದು ಉರಿಯೂತವನ್ನು ಶಮನಗೊಳಿಸುತ್ತದೆ. ಇದರಿಂದ ಗಂಟಲಿನಲ್ಲಿನ ಕೆರೆತ ಕಡಿಮೆಯಾಗುತ್ತದೆ. ನುಂಗುವಾಗ ಉಂಟಾಗುವ ಬಿಸಿಯಾಗುವ ಅನುಭವ, ನೋವು, ಊತವನ್ನು ನಿಯಂತ್ರಿಸುತ್ತದೆ. ಶೀತ, ಗಂಟಲು ಕೆರೆತ ಸಮಸ್ಯೆಗೆ, ಜೀರಿಗೆ ಕಷಾಯ ಸಾಕು
ಗಂಟಲಿನಲ್ಲಿ ಅಂಟಿರುವಂತಹ ಲೋಳೆಯನ್ನು ಕಡಿಮೆ ಮಾಡಲು ನೀವು ಬಿಸಿಯಾಗಿರುವ ಅರಿಶಿನ ಹಾಲನ್ನು ಕುಡಿದರೆ ತುಂಬಾ ಒಳ್ಳೆಯದು. ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲದೆ ಅರಿಶಿನ ಹಾಕಿದ ಹಾಲು ದೇಹದ ಪ್ರತಿರೋಧಕ ವ್ಯವಸ್ಥೆಯನ್ನು ಸುಧಾರಿಸುವ ಕಾರಣದಿಂದ ಬೇಗನೆ ಚೇತರಿಸಿಕೊಳ್ಳಲು ನೆರವಾಗುತ್ತದೆ. ಗಂಟಲು ನೋವಿನ ಕಿರಿಕಿರಿಯೇ? ಹಾಗಾದರೆ ಇನ್ನು ಚಿಂತೆ ಬಿಡಿ!
ತಯಾರಿಸುವುದು ಹೇಗೆ?
*ಒಂದು ಕುಟ್ಟಾಣಿಯನ್ನು ತೆಗೆದುಕೊಂಡು ಅದಕ್ಕೆ ಸುಮಾರು 6-7 ಕರಿಮೆಣಸನ್ನು ಹಾಕಿ ಹುಡಿ ಮಾಡಿಕೊಳ್ಳಿ. ಈಗ ಒಂದು ಲೋಟ ಹಾಲನ್ನು ತೆಗೆದುಕೊಂಡು 5-10 ನಿಮಿಷ ಕುದಿಸಿ.
*ಹಾಲು ಕುದಿಯುತ್ತಿರುವಂತೆ ಅರ್ಧ ಚಮಚ ಅರಿಶಿನ ಮತ್ತು ಸ್ವಲ್ಪ ಹುಡಿ ಮಾಡಿದ ಕರಿಮೆಣಸಿನ ಹುಡಿಯನ್ನು ಹಾಕಿ.
*ಹಾಲಿಗೆ ಒಂದು ಚಮಚ ಸಕ್ಕರೆ ಹಾಕಿ ಸರಿಯಾಗಿ ಮಿಶ್ರಣ ಮಾಡಿ. ಬಳಿಕ ಗ್ಯಾಸ್ ಒಲೆ ಆಫ್ ಮಾಡಿ
*ಬಿಸಿಯಾಗಿರುವಾಗಲೇ ಈ ಮಿಶ್ರಣವನ್ನು ಕುಡಿಯಿರಿ.
*ಬೆಳಿಗ್ಗೆ ಉಪಹಾರ ಸೇವಿಸಿದ ಬಳಿಕ ಮತ್ತು ರಾತ್ರಿ ನಿದ್ರಿಸುವ ಮೊದಲು ಇದನ್ನು ಸೇವಿಸಿ. ಇದು ಗಂಟಲು ಕೆರೆತವನ್ನು ನಿವಾರಿಸುತ್ತದೆ. ಈ ಮನೆಮದ್ದನ್ನು ಪ್ರಯತ್ನಿಸಿ ಫಲಿತಾಂಶ ಸಿಕ್ಕಿದೆಯಾ ಎಂದು ನಮಗೆ ಹೇಳಿ. ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


