Latest Updates
-
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು!
ಬಿಸಿಬಿಸಿ ಅರಿಶಿನ ಹಾಲು-ಗಂಟಲು ಕೆರೆತ ಮಂಗಮಾಯ!
ಬಿಟ್ಟುಬಿಟ್ಟು ಬರುವ ಮಳೆ, ಆಗಾಗ ಬದಲಾಗುತ್ತಿರುವ ಹವಾಮಾನದಿಂದ ಹಲವಾರು ರೀತಿಯ ಅನಾರೋಗ್ಯಗಳು ನಮ್ಮನ್ನು ಕಾಡಲು ಆರಂಭಿಸುತ್ತದೆ. ಅದರಲ್ಲೂ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿದ್ದರೆ ಆಗ ಜ್ವರ, ಶೀತ, ನೆಗಡಿ, ಕೆಮ್ಮು ಬೇಗನೆ ಬಂದು ವಕ್ಕರಿಸಿಕೊಳ್ಳುತ್ತದೆ. ಜ್ವರ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದುಕೊಳ್ಳುವುದು ಸೂಕ್ತ.
ಆದರೆ ಗಂಟಲು ಕೆರೆತ ಸಮಸ್ಯೆ ಕಾಣಿಸಿಕೊಂಡರೆ ಆಗ ಮನೆ ಹಾಗೂ ಕಚೇರಿಯಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಗಂಟಲು ಕೆರೆತ ಕಾಣಿಸಿಕೊಂಡಾಗ ಮನೆಮದ್ದನ್ನು ಬಳಸಿದರೆ ಅದರಿಂದ ಮುಕ್ತಿ ಪಡೆಯಬಹುದು. ಅರಿಶಿನ ಹಾಕಿದ ಹಾಲನ್ನು ದಿನದಲ್ಲಿ 2-3 ಸಲ ಕುಡಿಯುವುದರಿಂದ ಗಂಟಲು ಕೆರೆತ ನಿವಾರಿಸಬಹುದು.

ಅರಿಶಿನದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಹಾಗೂ ಉರಿಯೂತ ಶಮನಕಾರಿ ಗುಣಗಳಿವೆ. ಇದು ಬ್ಯಾಕ್ಟೀರಿಯಾ ಬೆಳೆಯುವುದನ್ನು ತಡೆದು ಉರಿಯೂತವನ್ನು ಶಮನಗೊಳಿಸುತ್ತದೆ. ಇದರಿಂದ ಗಂಟಲಿನಲ್ಲಿನ ಕೆರೆತ ಕಡಿಮೆಯಾಗುತ್ತದೆ. ನುಂಗುವಾಗ ಉಂಟಾಗುವ ಬಿಸಿಯಾಗುವ ಅನುಭವ, ನೋವು, ಊತವನ್ನು ನಿಯಂತ್ರಿಸುತ್ತದೆ. ಶೀತ, ಗಂಟಲು ಕೆರೆತ ಸಮಸ್ಯೆಗೆ, ಜೀರಿಗೆ ಕಷಾಯ ಸಾಕು
ಗಂಟಲಿನಲ್ಲಿ ಅಂಟಿರುವಂತಹ ಲೋಳೆಯನ್ನು ಕಡಿಮೆ ಮಾಡಲು ನೀವು ಬಿಸಿಯಾಗಿರುವ ಅರಿಶಿನ ಹಾಲನ್ನು ಕುಡಿದರೆ ತುಂಬಾ ಒಳ್ಳೆಯದು. ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲದೆ ಅರಿಶಿನ ಹಾಕಿದ ಹಾಲು ದೇಹದ ಪ್ರತಿರೋಧಕ ವ್ಯವಸ್ಥೆಯನ್ನು ಸುಧಾರಿಸುವ ಕಾರಣದಿಂದ ಬೇಗನೆ ಚೇತರಿಸಿಕೊಳ್ಳಲು ನೆರವಾಗುತ್ತದೆ. ಗಂಟಲು ನೋವಿನ ಕಿರಿಕಿರಿಯೇ? ಹಾಗಾದರೆ ಇನ್ನು ಚಿಂತೆ ಬಿಡಿ!
ತಯಾರಿಸುವುದು ಹೇಗೆ?
*ಒಂದು ಕುಟ್ಟಾಣಿಯನ್ನು ತೆಗೆದುಕೊಂಡು ಅದಕ್ಕೆ ಸುಮಾರು 6-7 ಕರಿಮೆಣಸನ್ನು ಹಾಕಿ ಹುಡಿ ಮಾಡಿಕೊಳ್ಳಿ. ಈಗ ಒಂದು ಲೋಟ ಹಾಲನ್ನು ತೆಗೆದುಕೊಂಡು 5-10 ನಿಮಿಷ ಕುದಿಸಿ.
*ಹಾಲು ಕುದಿಯುತ್ತಿರುವಂತೆ ಅರ್ಧ ಚಮಚ ಅರಿಶಿನ ಮತ್ತು ಸ್ವಲ್ಪ ಹುಡಿ ಮಾಡಿದ ಕರಿಮೆಣಸಿನ ಹುಡಿಯನ್ನು ಹಾಕಿ.
*ಹಾಲಿಗೆ ಒಂದು ಚಮಚ ಸಕ್ಕರೆ ಹಾಕಿ ಸರಿಯಾಗಿ ಮಿಶ್ರಣ ಮಾಡಿ. ಬಳಿಕ ಗ್ಯಾಸ್ ಒಲೆ ಆಫ್ ಮಾಡಿ
*ಬಿಸಿಯಾಗಿರುವಾಗಲೇ ಈ ಮಿಶ್ರಣವನ್ನು ಕುಡಿಯಿರಿ.
*ಬೆಳಿಗ್ಗೆ ಉಪಹಾರ ಸೇವಿಸಿದ ಬಳಿಕ ಮತ್ತು ರಾತ್ರಿ ನಿದ್ರಿಸುವ ಮೊದಲು ಇದನ್ನು ಸೇವಿಸಿ. ಇದು ಗಂಟಲು ಕೆರೆತವನ್ನು ನಿವಾರಿಸುತ್ತದೆ. ಈ ಮನೆಮದ್ದನ್ನು ಪ್ರಯತ್ನಿಸಿ ಫಲಿತಾಂಶ ಸಿಕ್ಕಿದೆಯಾ ಎಂದು ನಮಗೆ ಹೇಳಿ. ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


