Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಬಿಸಿಬಿಸಿ ಅರಿಶಿನ ಹಾಲು-ಗಂಟಲು ಕೆರೆತ ಮಂಗಮಾಯ!
ಬಿಟ್ಟುಬಿಟ್ಟು ಬರುವ ಮಳೆ, ಆಗಾಗ ಬದಲಾಗುತ್ತಿರುವ ಹವಾಮಾನದಿಂದ ಹಲವಾರು ರೀತಿಯ ಅನಾರೋಗ್ಯಗಳು ನಮ್ಮನ್ನು ಕಾಡಲು ಆರಂಭಿಸುತ್ತದೆ. ಅದರಲ್ಲೂ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿದ್ದರೆ ಆಗ ಜ್ವರ, ಶೀತ, ನೆಗಡಿ, ಕೆಮ್ಮು ಬೇಗನೆ ಬಂದು ವಕ್ಕರಿಸಿಕೊಳ್ಳುತ್ತದೆ. ಜ್ವರ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದುಕೊಳ್ಳುವುದು ಸೂಕ್ತ.
ಆದರೆ ಗಂಟಲು ಕೆರೆತ ಸಮಸ್ಯೆ ಕಾಣಿಸಿಕೊಂಡರೆ ಆಗ ಮನೆ ಹಾಗೂ ಕಚೇರಿಯಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಗಂಟಲು ಕೆರೆತ ಕಾಣಿಸಿಕೊಂಡಾಗ ಮನೆಮದ್ದನ್ನು ಬಳಸಿದರೆ ಅದರಿಂದ ಮುಕ್ತಿ ಪಡೆಯಬಹುದು. ಅರಿಶಿನ ಹಾಕಿದ ಹಾಲನ್ನು ದಿನದಲ್ಲಿ 2-3 ಸಲ ಕುಡಿಯುವುದರಿಂದ ಗಂಟಲು ಕೆರೆತ ನಿವಾರಿಸಬಹುದು.

ಅರಿಶಿನದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಹಾಗೂ ಉರಿಯೂತ ಶಮನಕಾರಿ ಗುಣಗಳಿವೆ. ಇದು ಬ್ಯಾಕ್ಟೀರಿಯಾ ಬೆಳೆಯುವುದನ್ನು ತಡೆದು ಉರಿಯೂತವನ್ನು ಶಮನಗೊಳಿಸುತ್ತದೆ. ಇದರಿಂದ ಗಂಟಲಿನಲ್ಲಿನ ಕೆರೆತ ಕಡಿಮೆಯಾಗುತ್ತದೆ. ನುಂಗುವಾಗ ಉಂಟಾಗುವ ಬಿಸಿಯಾಗುವ ಅನುಭವ, ನೋವು, ಊತವನ್ನು ನಿಯಂತ್ರಿಸುತ್ತದೆ. ಶೀತ, ಗಂಟಲು ಕೆರೆತ ಸಮಸ್ಯೆಗೆ, ಜೀರಿಗೆ ಕಷಾಯ ಸಾಕು
ಗಂಟಲಿನಲ್ಲಿ ಅಂಟಿರುವಂತಹ ಲೋಳೆಯನ್ನು ಕಡಿಮೆ ಮಾಡಲು ನೀವು ಬಿಸಿಯಾಗಿರುವ ಅರಿಶಿನ ಹಾಲನ್ನು ಕುಡಿದರೆ ತುಂಬಾ ಒಳ್ಳೆಯದು. ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲದೆ ಅರಿಶಿನ ಹಾಕಿದ ಹಾಲು ದೇಹದ ಪ್ರತಿರೋಧಕ ವ್ಯವಸ್ಥೆಯನ್ನು ಸುಧಾರಿಸುವ ಕಾರಣದಿಂದ ಬೇಗನೆ ಚೇತರಿಸಿಕೊಳ್ಳಲು ನೆರವಾಗುತ್ತದೆ. ಗಂಟಲು ನೋವಿನ ಕಿರಿಕಿರಿಯೇ? ಹಾಗಾದರೆ ಇನ್ನು ಚಿಂತೆ ಬಿಡಿ!
ತಯಾರಿಸುವುದು ಹೇಗೆ?
*ಒಂದು ಕುಟ್ಟಾಣಿಯನ್ನು ತೆಗೆದುಕೊಂಡು ಅದಕ್ಕೆ ಸುಮಾರು 6-7 ಕರಿಮೆಣಸನ್ನು ಹಾಕಿ ಹುಡಿ ಮಾಡಿಕೊಳ್ಳಿ. ಈಗ ಒಂದು ಲೋಟ ಹಾಲನ್ನು ತೆಗೆದುಕೊಂಡು 5-10 ನಿಮಿಷ ಕುದಿಸಿ.
*ಹಾಲು ಕುದಿಯುತ್ತಿರುವಂತೆ ಅರ್ಧ ಚಮಚ ಅರಿಶಿನ ಮತ್ತು ಸ್ವಲ್ಪ ಹುಡಿ ಮಾಡಿದ ಕರಿಮೆಣಸಿನ ಹುಡಿಯನ್ನು ಹಾಕಿ.
*ಹಾಲಿಗೆ ಒಂದು ಚಮಚ ಸಕ್ಕರೆ ಹಾಕಿ ಸರಿಯಾಗಿ ಮಿಶ್ರಣ ಮಾಡಿ. ಬಳಿಕ ಗ್ಯಾಸ್ ಒಲೆ ಆಫ್ ಮಾಡಿ
*ಬಿಸಿಯಾಗಿರುವಾಗಲೇ ಈ ಮಿಶ್ರಣವನ್ನು ಕುಡಿಯಿರಿ.
*ಬೆಳಿಗ್ಗೆ ಉಪಹಾರ ಸೇವಿಸಿದ ಬಳಿಕ ಮತ್ತು ರಾತ್ರಿ ನಿದ್ರಿಸುವ ಮೊದಲು ಇದನ್ನು ಸೇವಿಸಿ. ಇದು ಗಂಟಲು ಕೆರೆತವನ್ನು ನಿವಾರಿಸುತ್ತದೆ. ಈ ಮನೆಮದ್ದನ್ನು ಪ್ರಯತ್ನಿಸಿ ಫಲಿತಾಂಶ ಸಿಕ್ಕಿದೆಯಾ ಎಂದು ನಮಗೆ ಹೇಳಿ. ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


